AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮಾದಪ್ಪನ ಸನ್ನಿಧಿಯಲ್ಲಿ ಹೆಚ್ಚಾಯ್ತು ಗಾಂಜಾ ಘಾಟು: ಎಲ್ಲೆಂದರಲ್ಲಿ ಬಿದ್ದಿವೆ ಮದ್ಯದ ಪೌಚ್

ಏಳು ಮಲೆಯ ಒಡೆಯ ‘ಮುದ್ದು ಮಾಯ್ಕಾರ’ ಭಕ್ತರ ಆರಾಧ್ಯ ದೈವ ಮಲೆ ಮಹದೇಶ್ವರನ ಸನ್ನಿಧಿಯಲ್ಲಿ ಗಾಂಜಾ ಘಮಲು ಹೆಚ್ಚಾಗಿದೆ. ಪ್ರಾಧಿಕಾರದ ನಡೆಗೆ ಭಕ್ತರಿಂದ ಆಕ್ಷೇಪ ವ್ಯಕ್ತವಾಗಿದೆ. ಗಾಂಜಾ ಘಾಟು, ಮದ್ಯಪಾನ ಹೆಚ್ಚಾಗಿದೆ ಎಂಬ ಆರೋಪ ಕೇಳಿಬಂದಿದೆ. ಎಲ್ಲೆಂದರಲ್ಲಿ ಗಾಂಜಾ ತ್ಯಾಜ್ಯದ ಜತೆಗೆ, ಎಲ್ಲೆಂದರಲ್ಲಿ ಮದ್ಯದ ಪೌಚ್ ಬಿದ್ದಿರುವುದು ಕಾಣಿಸಿರುವುದು ಭಕ್ತರ ಆಕ್ರೋಶಕ್ಕೆ ಕಾರಣವಾಗಿದೆ.

ಮಾದಪ್ಪನ ಸನ್ನಿಧಿಯಲ್ಲಿ ಹೆಚ್ಚಾಯ್ತು ಗಾಂಜಾ ಘಾಟು: ಎಲ್ಲೆಂದರಲ್ಲಿ ಬಿದ್ದಿವೆ ಮದ್ಯದ ಪೌಚ್
ಮಾದಪ್ಪನ ಸನ್ನಿಧಿಯಲ್ಲಿ ಹೆಚ್ಚಾಯ್ತು ಗಾಂಜಾ ಘಾಟು: ಎಲ್ಲೆಂದರಲ್ಲಿ ಬಿದ್ದಿದೆ ಮದ್ಯದ ಪೌಚ್
ಸೂರಜ್ ಪ್ರಸಾದ್ ಎಸ್.ಎನ್
| Edited By: |

Updated on:Jun 23, 2025 | 10:14 AM

Share

ಚಾಮರಾಜನಗರ, ಜೂನ್ 23: ಮಾದಪ್ಫನ ಬೆಟ್ಟದಲ್ಲಿ ಗಾಂಜಾ ಘಮಲು ಹೆಚ್ಚಾಗಿದೆ. ಪವಿತ್ರ ಕ್ಷೇತ್ರ ಮಲೆ ಮಹದೇಶ್ವರ ಬೆಟ್ಟವನ್ನು (Male Mahadeshwara Hills) ಅಕ್ರಮಗಳ ತಾಣವಾಗಿ ಕೆಲ ಕಿಡಿಗೇಡಿಗಳು ಪರಿವರ್ತಿಸುತ್ತಿದ್ದಾರೆ. ಮಲೆ ಮಹದೇಶ್ವರ ಬೆಟ್ಟದ ಬಸ್ ನಿಲ್ದಾಣದ ಹಿಂಭಾಗದ ಖಾಲಿ ಜಾಗ ಗಾಂಜಾ ಅಡ್ಡೆಯಾಗಿ ಬದಲಾವಣೆಯಾಗಿದೆ. ಯಾರಿಗೂ ತಿಳಿಯದ ಹಾಗೆ ಗಾಂಜಾ ಸೇದಲೂ ಯುವಕರು ಬಳಸಿಕೊಳ್ಳುತ್ತಿದ್ದಾರೆ. ಇಷ್ಟೆಲ್ಲ ಆದರೂ ಪ್ರಾಧಿಕಾರ ಅಥವಾ ಅಬಕಾರಿ ಇಲಾಖೆ ಆಗಲೀ ತಲೆ ಕೆಡಿಸಿಕೊಂಡಿಲ್ಲ.

ಸಿದ್ದರಾಮಯ್ಯ ಖಡಕ್ ಸೂಚನೆಗೂ ಇಲ್ಲ ಕಿಮ್ಮತ್ತು!

ಗಾಂಜಾ ಅಷ್ಟೇ ಅಲ್ಲದೆ ಮದ್ಯದ ಪೌಚ್​ಗಳು ಎಲ್ಲೆಂದರಲ್ಲಿ ಬಿದ್ದಿವೆ. ಮದ್ಯ ಮುಕ್ತ ಮಹದೇಶ್ವರ ಬೆಟ್ಟಕ್ಕೆ ಸೂಚನೆ ನೀಡಿದ್ದ ಸಿಎಂ ಸಿದ್ಧರಾಮಯ್ಯ,ಕ್ಯಾಬಿನೆಟ್ ಮೀಟಿಂಗ್​ನಲ್ಲಿಯೂ ಪ್ರಾಧಿಕಾರದ ಕಾರ್ಯದರ್ಶಿಗೆ ಖಡಕ್ ಎಚ್ಚರಿಕೆ ಕೊಟ್ಟಿದ್ದರು. ಆದರೂ ಸಮಸ್ಯೆ ಬಗೆಹರಿದಿಲ್ಲ. ಪ್ರಾಧಿಕಾರದ ಅಧಿಕಾರಿಗಳ ಶಾಮೀಲಿಂದಲೇ ಮದ್ಯ ಸಾಗಾಟ ನಡೆಯುತ್ತಿದೆ ಎಂದು ಸಾರ್ವಜನಿಕರು ಆರೋಪಿಸಿದ್ದಾರೆ.

ಮಲೆ ಮಹದೇಶ್ವರ ಬೆಟ್ಟ ಪಾವಿತ್ರ್ಯ ಕಾಪಾಡುವಲ್ಲಿ ಪ್ರಾಧಿಕಾರದ ಕಾರ್ಯದರ್ಶಿ ರಘು ಕೂಡ ಸಂಪೂರ್ಣ ವಿಫಲರಾಗಿದ್ದಾರೆ. ಪ್ರಾಧಿಕಾರ ಕಾಟಾಚಾರಕ್ಕೆ ಆಡಳಿತ ನಿರ್ವಹಣೆ ಮಾಡುತ್ತಿದೆ ಎಂದು ಸಾರ್ವಜನಿಕರು ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಇದನ್ನೂ ಓದಿ
Image
ಸರ್ಕಾರಿ ಬಸ್ ಚಾಲಕರಿಂದ ಅಪಘಾತ ಹೆಚ್ಚಳ: 4 ನಿಗಮಗಳಿಗೆ ಖಡಕ್ ವಾರ್ನಿಂಗ್
Image
ಮಂಡ್ಯ: ಮಾನಸಿಕ ಅಸ್ವಸ್ಥ ತಾಯಿಯನ್ನು ಬೀದಿಯಲ್ಲಿ ಬಿಟ್ಟು ಹೋದ ಮಗ
Image
ಪ್ರತಿದಿನ ಬೆಂಗಳೂರಿನಲ್ಲಿ 2500 ಹೊಸ ವಾಹನ ನೋಂದಣಿ!
Image
ಮಲೆ ಮಹದೇಶ್ವರ ಬೆಟ್ಟ ಇನ್ಮುಂದೆ ಪಾನ ಮುಕ್ತ: ಸಿಎಂ ಸಿದ್ದರಾಮಯ್ಯ ಘೋಷಣೆ

ಮಲೆ ಮಹದೇಶ್ವರ ಬೆಟ್ಟ ಇನ್ಮುಂದೆ ಪಾನ ಮುಕ್ತ ಎಂದು ಘೋಷಿಸಿದ್ದ ಸಿಎಂ

ಮುಖ್ಯಮಂತ್ರಿಗಳ ಅಧ್ಯಕ್ಷತೆಯಲ್ಲಿ ಏಪ್ರಿಲ್ 24 ರಂದು ಶ್ರೀ ಮಲೆ ಮಹದೇಶ್ವರಸ್ವಾಮಿ ಕ್ಷೇತ್ರ ಅಭಿವೃದ್ಧಿ ಪ್ರಾಧಿಕಾರದ ಸಭೆ ನಡೆದಿತ್ತು. ಸಭೆಯ ನಂತರ ಮಾತನಾಡಿದ್ದ ಸಿಎಂ ಸಿದ್ದರಾಮಯ್ಯ, ಮಲೆ ಮಹದೇಶ್ವರ ಬೆಟ್ಟ ಇನ್ಮುಂದೆ ಪಾನ ಮುಕ್ತ ಎಂದು ಘೋಷಣೆ ಮಾಡಿದ್ದರು. ಈ ಬಗ್ಗೆ ಜಿಲ್ಲಾ ಮಟ್ಟದ ಅಧಿಕಾರಿಗಳಿಗೆ ಮತ್ತು ಪ್ರಾಧಿಕಾರದ ಅಧಿಕಾರಿಗಳಿಗೆ ಸಿಎಂ ಸಿದ್ದರಾಮಯ್ಯ ಮಹತ್ವದ ಸೂಚನೆ ಕೂಡ ಕೊಟ್ಟಿದ್ದರು. ಅದಾಗಿ ಒಂದು ತಿಂಗಳು ಆಗಿದೆಯಷ್ಟೆ, ಇದೀಗ ಬೆಟ್ಟದಲ್ಲಿ ಎಲ್ಲೆಂದರಲ್ಲಿ ಮದ್ಯದ ಪೌಚ್ ಕಾಣಿಸುತ್ತಿದೆ.

ಇದನ್ನೂ ಓದಿ: ಮಲೆ ಮಹದೇಶ್ವರ ಬೆಟ್ಟ ಇನ್ಮುಂದೆ ಪಾನ ಮುಕ್ತ: ಸಿಎಂ ಸಿದ್ದರಾಮಯ್ಯ ಘೋಷಣೆ

ಒಟ್ಟಿನಲ್ಲಿ ಮಾದಪ್ಪನ ಬೆಟ್ಟವನ್ನು ಪ್ಲಾಸ್ಟಿಕ್ ಮುಕ್ತ ಮಾಡುವ ಕೆಲಸದಲ್ಲಿ ಪ್ರಾಧಿಕಾರ ಬ್ಯುಸಿಯಾಗಿದೆ. ಆ ಭರದಲ್ಲಿ ಮದ್ಯ ಮುಕ್ತ, ಗಾಂಜಾ ಮುಕ್ತ ಮಾಡಲೂ ವಿಫಲವಾಗಿದೆ ಎಂಬ ಚರ್ಚೆ ನಡೆಯುತ್ತಿದೆ. ಇನ್ನು ಮುಂದೆಯಾದರೂ ಜಾಗದ ಪಾವಿತ್ರ್ಯತೆ ಕಾಪಾಡಲಿ ಎಂದು ಭಕ್ತರು ಆಗ್ರಹಿಸಿದ್ದಾರೆ.

ಕರ್ನಾಟಕದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 10:14 am, Mon, 23 June 25

ಬಿಗ್ ಬಾಸ್ ಮನೆಯೊಳಗೆ ಗಿಲ್ಲಿಗೆ ಬಂತ ಕೊರೊನಾ? ಮೂಡಿದೆ ಅನುಮಾನ
ಬಿಗ್ ಬಾಸ್ ಮನೆಯೊಳಗೆ ಗಿಲ್ಲಿಗೆ ಬಂತ ಕೊರೊನಾ? ಮೂಡಿದೆ ಅನುಮಾನ
ರಣರೋಚಕ ಘಟ್ಟದಲ್ಲಿ ಆಸ್ಟ್ರೇಲಿಯಾ vs ಇಂಗ್ಲೆಂಡ್ ಟೆಸ್ಟ್ ಪಂದ್ಯ
ರಣರೋಚಕ ಘಟ್ಟದಲ್ಲಿ ಆಸ್ಟ್ರೇಲಿಯಾ vs ಇಂಗ್ಲೆಂಡ್ ಟೆಸ್ಟ್ ಪಂದ್ಯ
ಯಾವುದೇ ಕಾರ್ಯಗಳಲ್ಲಿ ಶಂಕುಸ್ಥಾಪನೆ ಮಾಡುವುದು ಯಾಕೆ?
ಯಾವುದೇ ಕಾರ್ಯಗಳಲ್ಲಿ ಶಂಕುಸ್ಥಾಪನೆ ಮಾಡುವುದು ಯಾಕೆ?
ಇಂದು ಈ ರಾಶಿಯವರಿಗೆ ಖರ್ಚು ಜಾಸ್ತಿ
ಇಂದು ಈ ರಾಶಿಯವರಿಗೆ ಖರ್ಚು ಜಾಸ್ತಿ
ಡಿಕೆ ಶಿವಕುಮಾರ್​ ಹಾಗೂ ಕೆಎನ್​​ ರಾಜಣ್ಣ ಭೇಟಿ: ಕುತೂಹಲ ಮೂಡಿಸಿದ ನಾಯಕರ ನಡ
ಡಿಕೆ ಶಿವಕುಮಾರ್​ ಹಾಗೂ ಕೆಎನ್​​ ರಾಜಣ್ಣ ಭೇಟಿ: ಕುತೂಹಲ ಮೂಡಿಸಿದ ನಾಯಕರ ನಡ
ವಿಶಾಖಪಟ್ಟಣದಲ್ಲಿ ರಸ್ತೆ ಕಾಮಗಾರಿ ವೇಳೆ ಶ್ರೀರಾಮನ ಪ್ರಾಚೀನ ವಿಗ್ರಹ ಪತ್ತೆ
ವಿಶಾಖಪಟ್ಟಣದಲ್ಲಿ ರಸ್ತೆ ಕಾಮಗಾರಿ ವೇಳೆ ಶ್ರೀರಾಮನ ಪ್ರಾಚೀನ ವಿಗ್ರಹ ಪತ್ತೆ
ಊಟಿಯಲ್ಲಿ ದಾಖಲೆಯ ಚಳಿ; ಪ್ರವಾಸಿಗರನ್ನು ಸೆಳೆಯುತ್ತಿವೆ ಹಿಮಾವೃತ ಹೂಗಳು
ಊಟಿಯಲ್ಲಿ ದಾಖಲೆಯ ಚಳಿ; ಪ್ರವಾಸಿಗರನ್ನು ಸೆಳೆಯುತ್ತಿವೆ ಹಿಮಾವೃತ ಹೂಗಳು
ಚಿಕ್ಕಬಳ್ಳಾಪುರದಲ್ಲಿ ಕಾರು-ಸ್ಕೂಟಿ ನಡುವೆ ಭೀಕರ ಅಪಘಾತ
ಚಿಕ್ಕಬಳ್ಳಾಪುರದಲ್ಲಿ ಕಾರು-ಸ್ಕೂಟಿ ನಡುವೆ ಭೀಕರ ಅಪಘಾತ
‘45’ ಸಿನಿಮಾದ ಕತೆ ಹುಟ್ಟಿದ್ದೇಗೆ? ಭಾವುಕ ಕ್ಷಣ ವಿವರಿಸಿದ ಅರ್ಜುನ್ ಜನ್ಯ
‘45’ ಸಿನಿಮಾದ ಕತೆ ಹುಟ್ಟಿದ್ದೇಗೆ? ಭಾವುಕ ಕ್ಷಣ ವಿವರಿಸಿದ ಅರ್ಜುನ್ ಜನ್ಯ
ಗಣಪತಿ ಪ್ರಸಾದ ಬೆನ್ನಲ್ಲೇ ನಾಗಾಸಾಧುಗಳಿಂದ ಡಿಕೆ ಶಿವಕುಮಾರ್​ಗೆ ಆಶೀರ್ವಾದ
ಗಣಪತಿ ಪ್ರಸಾದ ಬೆನ್ನಲ್ಲೇ ನಾಗಾಸಾಧುಗಳಿಂದ ಡಿಕೆ ಶಿವಕುಮಾರ್​ಗೆ ಆಶೀರ್ವಾದ