AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಂಗಳೂರಿಗೂ ಕಾಲಿಟ್ಟ ಗಾಂಜಾ ಚಾಕೊಲೇಟ್ ಮಾರಾಟ ಜಾಲ; ಓರ್ವ ಆರೋಪಿ ಬಂಧನ

ಉತ್ತರ ಪ್ರದೇಶದಿಂದ ಗಾಂಜಾ ಚಾಕೊಲೇಟ್ ತಂದು ಬೆಂಗಳೂರಿನಲ್ಲಿ ಮಾರಾಟಕ್ಕೆ ಯತ್ನಿಸಿದ್ದರು. ಈ ಕುರಿತು ಮಾಹಿತಿ ಸಿಗುತ್ತಿದ್ದಂತೆ ಸ್ಥಳಕ್ಕೆ ಹೋದ ಆರ್​​ಎಂಸಿ ಯಾರ್ಡ್ ಪೊಲೀಸರು ಓರ್ವ ಆರೋಪಿ ಶಮೀಮ್ ಅಖ್ತರ್ ಎಂಬುವವರನ್ನು ಬಂಧಿಸಿದ್ದಾರೆ. ಜೊತೆಗೆ 6 ಲಕ್ಷ ಮೌಲ್ಯದ ಗಾಂಜಾ ಚಾಕೊಲೇಟ್​ನ್ನು ಜಪ್ತಿ ಮಾಡಿದ್ದಾರೆ.

ಬೆಂಗಳೂರಿಗೂ ಕಾಲಿಟ್ಟ ಗಾಂಜಾ ಚಾಕೊಲೇಟ್ ಮಾರಾಟ ಜಾಲ; ಓರ್ವ ಆರೋಪಿ ಬಂಧನ
ಬೆಂಗಳೂರಿನಲ್ಲಿ ಗಾಂಜಾ ಚಾಕೋಲೇಟ್​ ಮಾರಾಟ ಮಾಡುತ್ತಿದ್ದ ಆರೋಪಿ ಬಂಧನ
Jagadisha B
| Edited By: |

Updated on: Aug 24, 2023 | 2:59 PM

Share

ಬೆಂಗಳೂರು, ಆ.24: ರಾಜ್ಯದಲ್ಲಿ ಮಾದಕ ವಸ್ತು ಪ್ರಕರಣಗಳ ತಡೆಗೆ ಪೊಲೀಸರು ಹರಸಾಹಸ ಪಡುತ್ತಿದ್ದಾರೆ. ಅದರಂತೆ ಮಾಲು ಸಮೇತ ಅನೇಕ ಆರೋಪಿಗಳನ್ನು ಸೆರೆಹಿಡಿದು ಜೈಲಿಗಟ್ಟಿದ್ದಾರೆ. ಹೌದು, ಜುಲೈ 21ರಂದು ಮಂಗಳೂರಿ (Mangalore) ನಲ್ಲಿ ಮಾದಕವಸ್ತು ಮಿಶ್ರಿತ ಚಾಕೊಲೇಟ್​(Chocolate) ಮಾರಾಟ ಮಾಡುತ್ತಿದ್ದ ಇಬ್ಬರನ್ನು ಪೊಲೀಸರು ಬಂಧಿಸಿದ್ದರು. ಬಳಿಕ ಆಗಸ್ಟ್​ 2 ರಂದು ಗಾಂಜಾ ಚಾಕೋಲೆಟ್ ಮಾರಾಟ ಮಾಡುವ ಗ್ಯಾಂಗ್​ ರಾಯಚೂರಿನಲ್ಲಿ ಪತ್ತೆಯಾಗಿದ್ದು, ಇಬ್ಬರನ್ನು ಅರೆಸ್ಟ್​ ಮಾಡಿದ್ದರು. ಇದೀಗ ಬೆಂಗಳೂರಿಗೂ(Bengaluru) ಗಾಂಜಾ ಚಾಕೊಲೇಟ್ ಮಾರಾಟ ಜಾಲ ಕಾಲಿಟ್ಟಿದೆ.

ಉತ್ತರ ಪ್ರದೇಶದಿಂದ ತಂದು ಬೆಂಗಳೂರಿನಲ್ಲಿ ಮಾರಾಟಕ್ಕೆ ಯತ್ನ

ಹೌದು, ಉತ್ತರ ಪ್ರದೇಶದಿಂದ ತಂದು ಬೆಂಗಳೂರಿನಲ್ಲಿ ಮಾರಾಟಕ್ಕೆ ಯತ್ನಿಸಿದ್ದರು. ಈ ಕುರಿತು ಮಾಹಿತಿ ಸಿಗುತ್ತಿದ್ದಂತೆ ಸ್ಥಳಕ್ಕೆ ಹೋದ ಪೊಲೀಸರು ಆರ್​​ಎಂಸಿ ಯಾರ್ಡ್ ಪೊಲೀಸರು ಓರ್ವ ಆರೋಪಿ ಶಮೀಮ್ ಅಖ್ತರ್ ಎಂಬುವವರನ್ನು ಬಂಧಿಸಿದ್ದಾರೆ. ಜೊತೆಗೆ 6 ಲಕ್ಷ ಮೌಲ್ಯದ ಚಾಕೊಲೇಟ್​ನ್ನು ಜಪ್ತಿ ಮಾಡಿದ್ದಾರೆ. ಇನ್ನು ತನಿಖೆ ವೇಳೆ ‘ಮಹಾಕಾಲ್, ಆನಂದ್, ಚಾರ್​ಮಿನಾರ್ ಹೆಸರಲ್ಲಿ ಗಾಂಜಾ ಚಾಕೊಲೇಟ್​ನ್ನು ಮಾರಾಟ ಮಾಡಲಾಗುತ್ತಿರುವುದು ಬೆಳಕಿಗೆ ಬಂದಿದೆ. ಆರೋಪಿ ಶಮೀಮ್​ನಿಂದ ಚಾಕೊಲೇಟ್ ಪಡೆಯುತ್ತಿದ್ದ ಸಂಜಯ್, ಗೋವಿಂದ ಮತ್ತು ವಿನೋದ್​ಗಾಗಿ ಪೊಲೀಸರು ಹುಡುಕಾಟ ನಡೆಸಿದ್ದಾರೆ.

ಇದನ್ನೂ ಓದಿ:ಮಂಗಳೂರು: ಗಾಂಜಾ ಮತ್ತಲ್ಲಿ ಸಾರ್ವಜನಿಕರಿಗೆ ಕಿರ್ಪಾನ್ ತೋರಿಸಿ ಹೆದರಿಸುತ್ತಿದ್ದ ಯುವಕನನ್ನು ಪೊಲೀಸರು ವಶಕ್ಕೆ ಪಡೆದ ರೀತಿ ರೋಚಕ!

ಇತ್ತೀಚೆಗೆ ಹೆಚ್ಚಾಗಿ ಬೆಳಕಿಗೆ ಬರುತ್ತಿದೆ ಮಾದಸಕ ವಸ್ತು ಪ್ರಕರಣಗಳು

ಇತ್ತೀಚೆಗೆ ಇಂತಹ ಪ್ರಕರಣಗಳು ಕಂಡು ಬರುತ್ತಿದ್ದು, ಈ ದಂಧೆಕೋರರು ವಿದ್ಯಾರ್ಥಿಗಳು, ಕೂಲಿ ಕಾರ್ಮಿಕರನ್ನೇ ಹೆಚ್ಚಾಗಿ ಟಾರ್ಗೆಟ್ ಮಾಡುತ್ತಿದ್ದಾರೆ. ಇದನ್ನು ಮಕ್ಕಳು ತಿನ್ನುವ ಚಾಕೋಲೆಟ್ ಮಾದರಿಯಲ್ಲಿಯೇ ಗಾಂಜಾವನ್ನು ಬಳಸಿ ಚಾಕೋಲೆಟ್ ರೆಡಿ ಮಾಡಿದ್ದರು. ಜೊತೆಗೆ ಪ್ರತಿ ಚಾಕೋಲೆಟ್​ಗೆ 50ರಿಂದ60 ರೂಪಾಯಿಗೆ ಮಾರಾಟ ಮಾಡುತ್ತಿದ್ದರು. ಇನ್ನು ಬೆಂಗಳೂರು ಸೇರಿ ಒಟ್ಟಿನಲ್ಲಿ ರಾಜ್ಯದ ಮೂರು ಕಡೆ ಇಂತಹ ಪ್ರಕರಣಗಳು ಬೆಳಕಿಗೆ ಬಂದಂತಾಗಿದೆ.

ಮತ್ತಷ್ಟು ಅಪರಾಧ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್