AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಂಗಳೂರಿಗೂ ಕಾಲಿಟ್ಟ ಗಾಂಜಾ ಚಾಕೊಲೇಟ್ ಮಾರಾಟ ಜಾಲ; ಓರ್ವ ಆರೋಪಿ ಬಂಧನ

ಉತ್ತರ ಪ್ರದೇಶದಿಂದ ಗಾಂಜಾ ಚಾಕೊಲೇಟ್ ತಂದು ಬೆಂಗಳೂರಿನಲ್ಲಿ ಮಾರಾಟಕ್ಕೆ ಯತ್ನಿಸಿದ್ದರು. ಈ ಕುರಿತು ಮಾಹಿತಿ ಸಿಗುತ್ತಿದ್ದಂತೆ ಸ್ಥಳಕ್ಕೆ ಹೋದ ಆರ್​​ಎಂಸಿ ಯಾರ್ಡ್ ಪೊಲೀಸರು ಓರ್ವ ಆರೋಪಿ ಶಮೀಮ್ ಅಖ್ತರ್ ಎಂಬುವವರನ್ನು ಬಂಧಿಸಿದ್ದಾರೆ. ಜೊತೆಗೆ 6 ಲಕ್ಷ ಮೌಲ್ಯದ ಗಾಂಜಾ ಚಾಕೊಲೇಟ್​ನ್ನು ಜಪ್ತಿ ಮಾಡಿದ್ದಾರೆ.

ಬೆಂಗಳೂರಿಗೂ ಕಾಲಿಟ್ಟ ಗಾಂಜಾ ಚಾಕೊಲೇಟ್ ಮಾರಾಟ ಜಾಲ; ಓರ್ವ ಆರೋಪಿ ಬಂಧನ
ಬೆಂಗಳೂರಿನಲ್ಲಿ ಗಾಂಜಾ ಚಾಕೋಲೇಟ್​ ಮಾರಾಟ ಮಾಡುತ್ತಿದ್ದ ಆರೋಪಿ ಬಂಧನ
Jagadisha B
| Edited By: |

Updated on: Aug 24, 2023 | 2:59 PM

Share

ಬೆಂಗಳೂರು, ಆ.24: ರಾಜ್ಯದಲ್ಲಿ ಮಾದಕ ವಸ್ತು ಪ್ರಕರಣಗಳ ತಡೆಗೆ ಪೊಲೀಸರು ಹರಸಾಹಸ ಪಡುತ್ತಿದ್ದಾರೆ. ಅದರಂತೆ ಮಾಲು ಸಮೇತ ಅನೇಕ ಆರೋಪಿಗಳನ್ನು ಸೆರೆಹಿಡಿದು ಜೈಲಿಗಟ್ಟಿದ್ದಾರೆ. ಹೌದು, ಜುಲೈ 21ರಂದು ಮಂಗಳೂರಿ (Mangalore) ನಲ್ಲಿ ಮಾದಕವಸ್ತು ಮಿಶ್ರಿತ ಚಾಕೊಲೇಟ್​(Chocolate) ಮಾರಾಟ ಮಾಡುತ್ತಿದ್ದ ಇಬ್ಬರನ್ನು ಪೊಲೀಸರು ಬಂಧಿಸಿದ್ದರು. ಬಳಿಕ ಆಗಸ್ಟ್​ 2 ರಂದು ಗಾಂಜಾ ಚಾಕೋಲೆಟ್ ಮಾರಾಟ ಮಾಡುವ ಗ್ಯಾಂಗ್​ ರಾಯಚೂರಿನಲ್ಲಿ ಪತ್ತೆಯಾಗಿದ್ದು, ಇಬ್ಬರನ್ನು ಅರೆಸ್ಟ್​ ಮಾಡಿದ್ದರು. ಇದೀಗ ಬೆಂಗಳೂರಿಗೂ(Bengaluru) ಗಾಂಜಾ ಚಾಕೊಲೇಟ್ ಮಾರಾಟ ಜಾಲ ಕಾಲಿಟ್ಟಿದೆ.

ಉತ್ತರ ಪ್ರದೇಶದಿಂದ ತಂದು ಬೆಂಗಳೂರಿನಲ್ಲಿ ಮಾರಾಟಕ್ಕೆ ಯತ್ನ

ಹೌದು, ಉತ್ತರ ಪ್ರದೇಶದಿಂದ ತಂದು ಬೆಂಗಳೂರಿನಲ್ಲಿ ಮಾರಾಟಕ್ಕೆ ಯತ್ನಿಸಿದ್ದರು. ಈ ಕುರಿತು ಮಾಹಿತಿ ಸಿಗುತ್ತಿದ್ದಂತೆ ಸ್ಥಳಕ್ಕೆ ಹೋದ ಪೊಲೀಸರು ಆರ್​​ಎಂಸಿ ಯಾರ್ಡ್ ಪೊಲೀಸರು ಓರ್ವ ಆರೋಪಿ ಶಮೀಮ್ ಅಖ್ತರ್ ಎಂಬುವವರನ್ನು ಬಂಧಿಸಿದ್ದಾರೆ. ಜೊತೆಗೆ 6 ಲಕ್ಷ ಮೌಲ್ಯದ ಚಾಕೊಲೇಟ್​ನ್ನು ಜಪ್ತಿ ಮಾಡಿದ್ದಾರೆ. ಇನ್ನು ತನಿಖೆ ವೇಳೆ ‘ಮಹಾಕಾಲ್, ಆನಂದ್, ಚಾರ್​ಮಿನಾರ್ ಹೆಸರಲ್ಲಿ ಗಾಂಜಾ ಚಾಕೊಲೇಟ್​ನ್ನು ಮಾರಾಟ ಮಾಡಲಾಗುತ್ತಿರುವುದು ಬೆಳಕಿಗೆ ಬಂದಿದೆ. ಆರೋಪಿ ಶಮೀಮ್​ನಿಂದ ಚಾಕೊಲೇಟ್ ಪಡೆಯುತ್ತಿದ್ದ ಸಂಜಯ್, ಗೋವಿಂದ ಮತ್ತು ವಿನೋದ್​ಗಾಗಿ ಪೊಲೀಸರು ಹುಡುಕಾಟ ನಡೆಸಿದ್ದಾರೆ.

ಇದನ್ನೂ ಓದಿ:ಮಂಗಳೂರು: ಗಾಂಜಾ ಮತ್ತಲ್ಲಿ ಸಾರ್ವಜನಿಕರಿಗೆ ಕಿರ್ಪಾನ್ ತೋರಿಸಿ ಹೆದರಿಸುತ್ತಿದ್ದ ಯುವಕನನ್ನು ಪೊಲೀಸರು ವಶಕ್ಕೆ ಪಡೆದ ರೀತಿ ರೋಚಕ!

ಇತ್ತೀಚೆಗೆ ಹೆಚ್ಚಾಗಿ ಬೆಳಕಿಗೆ ಬರುತ್ತಿದೆ ಮಾದಸಕ ವಸ್ತು ಪ್ರಕರಣಗಳು

ಇತ್ತೀಚೆಗೆ ಇಂತಹ ಪ್ರಕರಣಗಳು ಕಂಡು ಬರುತ್ತಿದ್ದು, ಈ ದಂಧೆಕೋರರು ವಿದ್ಯಾರ್ಥಿಗಳು, ಕೂಲಿ ಕಾರ್ಮಿಕರನ್ನೇ ಹೆಚ್ಚಾಗಿ ಟಾರ್ಗೆಟ್ ಮಾಡುತ್ತಿದ್ದಾರೆ. ಇದನ್ನು ಮಕ್ಕಳು ತಿನ್ನುವ ಚಾಕೋಲೆಟ್ ಮಾದರಿಯಲ್ಲಿಯೇ ಗಾಂಜಾವನ್ನು ಬಳಸಿ ಚಾಕೋಲೆಟ್ ರೆಡಿ ಮಾಡಿದ್ದರು. ಜೊತೆಗೆ ಪ್ರತಿ ಚಾಕೋಲೆಟ್​ಗೆ 50ರಿಂದ60 ರೂಪಾಯಿಗೆ ಮಾರಾಟ ಮಾಡುತ್ತಿದ್ದರು. ಇನ್ನು ಬೆಂಗಳೂರು ಸೇರಿ ಒಟ್ಟಿನಲ್ಲಿ ರಾಜ್ಯದ ಮೂರು ಕಡೆ ಇಂತಹ ಪ್ರಕರಣಗಳು ಬೆಳಕಿಗೆ ಬಂದಂತಾಗಿದೆ.

ಮತ್ತಷ್ಟು ಅಪರಾಧ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
ನೀವು ಮಾಡುವ ಒಂದು ಸಣ್ಣ ತಪ್ಪಿನಿಂದ ದೊಡ್ಡ ಅಪಘಾತವೇ ಸಂಭವಿಸಬಹುದು ಎಚ್ಚರ
ನೀವು ಮಾಡುವ ಒಂದು ಸಣ್ಣ ತಪ್ಪಿನಿಂದ ದೊಡ್ಡ ಅಪಘಾತವೇ ಸಂಭವಿಸಬಹುದು ಎಚ್ಚರ
ಯುಗಾದಿ- ರಂಜಾನ್ ಹಬ್ಬಕ್ಕೂ ಮುನ್ನವೇ ಅಡುಗೆ ಎಣ್ಣೆ ಬೆಲೆ ಭಾರೀ ಏರಿಕೆ
ಯುಗಾದಿ- ರಂಜಾನ್ ಹಬ್ಬಕ್ಕೂ ಮುನ್ನವೇ ಅಡುಗೆ ಎಣ್ಣೆ ಬೆಲೆ ಭಾರೀ ಏರಿಕೆ
ಶಿಲ್ಲಾಂಗ್-ಸಿಲ್ಚಾರ್ ಕಾರಿಡಾರ್​​ಗೆ ಪ್ರಧಾನಿ ಮೋದಿ ಶಿಲಾನ್ಯಾಸ
ಶಿಲ್ಲಾಂಗ್-ಸಿಲ್ಚಾರ್ ಕಾರಿಡಾರ್​​ಗೆ ಪ್ರಧಾನಿ ಮೋದಿ ಶಿಲಾನ್ಯಾಸ
ನಟ ಗುರು ನಂದನ್ ವಿಲ್ಲಾ ತೋಟಕ್ಕೆ ನುಗ್ಗಿದ ಆನೆ; ಮುಂದೇನಾಯ್ತು?
ನಟ ಗುರು ನಂದನ್ ವಿಲ್ಲಾ ತೋಟಕ್ಕೆ ನುಗ್ಗಿದ ಆನೆ; ಮುಂದೇನಾಯ್ತು?
ಎಲ್​ಪಿಜಿ ಗ್ಯಾಸ್ ಹಾಹಾಕಾರ;ವೀಕೆಂಡ್​ನಲ್ಲಿಯೂ ಬಂದ್ ಆದ ಹೋಟೆಲ್ಸ್ !
ಎಲ್​ಪಿಜಿ ಗ್ಯಾಸ್ ಹಾಹಾಕಾರ;ವೀಕೆಂಡ್​ನಲ್ಲಿಯೂ ಬಂದ್ ಆದ ಹೋಟೆಲ್ಸ್ !
ಗಂಡು ಮಕ್ಕಳಿಲ್ಲದಿದ್ದರೇನು? ಅಂತ್ಯಕ್ರಿಯೆ ನಡೆಸಿದ ಇಬ್ಬರು ಹೆಣ್ಣು ಮಕ್ಕಳು!
ಗಂಡು ಮಕ್ಕಳಿಲ್ಲದಿದ್ದರೇನು? ಅಂತ್ಯಕ್ರಿಯೆ ನಡೆಸಿದ ಇಬ್ಬರು ಹೆಣ್ಣು ಮಕ್ಕಳು!
1700 ರೂ. ಬೆಲೆಯ ಸಿಲಿಂಡರ್ 5000 ರೂ. ಗೆ ಮಾರಾಟ!
1700 ರೂ. ಬೆಲೆಯ ಸಿಲಿಂಡರ್ 5000 ರೂ. ಗೆ ಮಾರಾಟ!
ಶ್ರೀ ಗಂಧದ ಗುಡಿ ಧಾರಾವಾಹಿ ಬಿಟ್ಟಿದ್ದೇಕೆ? ವಿಡಿಯೋ ಮೂಲಕ ವಿವರಿಸಿದ ಸಂಜನಾ
ಶ್ರೀ ಗಂಧದ ಗುಡಿ ಧಾರಾವಾಹಿ ಬಿಟ್ಟಿದ್ದೇಕೆ? ವಿಡಿಯೋ ಮೂಲಕ ವಿವರಿಸಿದ ಸಂಜನಾ
ಸಿಕ್ಕಸಿಕ್ಕ ವಾಹನಗಳಿಗೆ ಡಿಕ್ಕಿ ಹೊಡೆದ ಯುವಕರಿಗೆ ಹಿಗ್ಗಾಮುಗ್ಗಾ ಥಳಿಸಿದ ಜನ
ಸಿಕ್ಕಸಿಕ್ಕ ವಾಹನಗಳಿಗೆ ಡಿಕ್ಕಿ ಹೊಡೆದ ಯುವಕರಿಗೆ ಹಿಗ್ಗಾಮುಗ್ಗಾ ಥಳಿಸಿದ ಜನ
ಒಂದು ನಿಮಿಷದಲ್ಲಿ 15 ಕೋಟಿ ರೂ. ಮೌಲ್ಯದ ಆಭರಣಗಳ ಕದ್ದ ದರೋಡೆಕೋರರು
ಒಂದು ನಿಮಿಷದಲ್ಲಿ 15 ಕೋಟಿ ರೂ. ಮೌಲ್ಯದ ಆಭರಣಗಳ ಕದ್ದ ದರೋಡೆಕೋರರು