AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಂಗಳೂರಿಗೂ ಕಾಲಿಟ್ಟ ಗಾಂಜಾ ಚಾಕೊಲೇಟ್ ಮಾರಾಟ ಜಾಲ; ಓರ್ವ ಆರೋಪಿ ಬಂಧನ

ಉತ್ತರ ಪ್ರದೇಶದಿಂದ ಗಾಂಜಾ ಚಾಕೊಲೇಟ್ ತಂದು ಬೆಂಗಳೂರಿನಲ್ಲಿ ಮಾರಾಟಕ್ಕೆ ಯತ್ನಿಸಿದ್ದರು. ಈ ಕುರಿತು ಮಾಹಿತಿ ಸಿಗುತ್ತಿದ್ದಂತೆ ಸ್ಥಳಕ್ಕೆ ಹೋದ ಆರ್​​ಎಂಸಿ ಯಾರ್ಡ್ ಪೊಲೀಸರು ಓರ್ವ ಆರೋಪಿ ಶಮೀಮ್ ಅಖ್ತರ್ ಎಂಬುವವರನ್ನು ಬಂಧಿಸಿದ್ದಾರೆ. ಜೊತೆಗೆ 6 ಲಕ್ಷ ಮೌಲ್ಯದ ಗಾಂಜಾ ಚಾಕೊಲೇಟ್​ನ್ನು ಜಪ್ತಿ ಮಾಡಿದ್ದಾರೆ.

ಬೆಂಗಳೂರಿಗೂ ಕಾಲಿಟ್ಟ ಗಾಂಜಾ ಚಾಕೊಲೇಟ್ ಮಾರಾಟ ಜಾಲ; ಓರ್ವ ಆರೋಪಿ ಬಂಧನ
ಬೆಂಗಳೂರಿನಲ್ಲಿ ಗಾಂಜಾ ಚಾಕೋಲೇಟ್​ ಮಾರಾಟ ಮಾಡುತ್ತಿದ್ದ ಆರೋಪಿ ಬಂಧನ
Jagadisha B
| Edited By: |

Updated on: Aug 24, 2023 | 2:59 PM

Share

ಬೆಂಗಳೂರು, ಆ.24: ರಾಜ್ಯದಲ್ಲಿ ಮಾದಕ ವಸ್ತು ಪ್ರಕರಣಗಳ ತಡೆಗೆ ಪೊಲೀಸರು ಹರಸಾಹಸ ಪಡುತ್ತಿದ್ದಾರೆ. ಅದರಂತೆ ಮಾಲು ಸಮೇತ ಅನೇಕ ಆರೋಪಿಗಳನ್ನು ಸೆರೆಹಿಡಿದು ಜೈಲಿಗಟ್ಟಿದ್ದಾರೆ. ಹೌದು, ಜುಲೈ 21ರಂದು ಮಂಗಳೂರಿ (Mangalore) ನಲ್ಲಿ ಮಾದಕವಸ್ತು ಮಿಶ್ರಿತ ಚಾಕೊಲೇಟ್​(Chocolate) ಮಾರಾಟ ಮಾಡುತ್ತಿದ್ದ ಇಬ್ಬರನ್ನು ಪೊಲೀಸರು ಬಂಧಿಸಿದ್ದರು. ಬಳಿಕ ಆಗಸ್ಟ್​ 2 ರಂದು ಗಾಂಜಾ ಚಾಕೋಲೆಟ್ ಮಾರಾಟ ಮಾಡುವ ಗ್ಯಾಂಗ್​ ರಾಯಚೂರಿನಲ್ಲಿ ಪತ್ತೆಯಾಗಿದ್ದು, ಇಬ್ಬರನ್ನು ಅರೆಸ್ಟ್​ ಮಾಡಿದ್ದರು. ಇದೀಗ ಬೆಂಗಳೂರಿಗೂ(Bengaluru) ಗಾಂಜಾ ಚಾಕೊಲೇಟ್ ಮಾರಾಟ ಜಾಲ ಕಾಲಿಟ್ಟಿದೆ.

ಉತ್ತರ ಪ್ರದೇಶದಿಂದ ತಂದು ಬೆಂಗಳೂರಿನಲ್ಲಿ ಮಾರಾಟಕ್ಕೆ ಯತ್ನ

ಹೌದು, ಉತ್ತರ ಪ್ರದೇಶದಿಂದ ತಂದು ಬೆಂಗಳೂರಿನಲ್ಲಿ ಮಾರಾಟಕ್ಕೆ ಯತ್ನಿಸಿದ್ದರು. ಈ ಕುರಿತು ಮಾಹಿತಿ ಸಿಗುತ್ತಿದ್ದಂತೆ ಸ್ಥಳಕ್ಕೆ ಹೋದ ಪೊಲೀಸರು ಆರ್​​ಎಂಸಿ ಯಾರ್ಡ್ ಪೊಲೀಸರು ಓರ್ವ ಆರೋಪಿ ಶಮೀಮ್ ಅಖ್ತರ್ ಎಂಬುವವರನ್ನು ಬಂಧಿಸಿದ್ದಾರೆ. ಜೊತೆಗೆ 6 ಲಕ್ಷ ಮೌಲ್ಯದ ಚಾಕೊಲೇಟ್​ನ್ನು ಜಪ್ತಿ ಮಾಡಿದ್ದಾರೆ. ಇನ್ನು ತನಿಖೆ ವೇಳೆ ‘ಮಹಾಕಾಲ್, ಆನಂದ್, ಚಾರ್​ಮಿನಾರ್ ಹೆಸರಲ್ಲಿ ಗಾಂಜಾ ಚಾಕೊಲೇಟ್​ನ್ನು ಮಾರಾಟ ಮಾಡಲಾಗುತ್ತಿರುವುದು ಬೆಳಕಿಗೆ ಬಂದಿದೆ. ಆರೋಪಿ ಶಮೀಮ್​ನಿಂದ ಚಾಕೊಲೇಟ್ ಪಡೆಯುತ್ತಿದ್ದ ಸಂಜಯ್, ಗೋವಿಂದ ಮತ್ತು ವಿನೋದ್​ಗಾಗಿ ಪೊಲೀಸರು ಹುಡುಕಾಟ ನಡೆಸಿದ್ದಾರೆ.

ಇದನ್ನೂ ಓದಿ:ಮಂಗಳೂರು: ಗಾಂಜಾ ಮತ್ತಲ್ಲಿ ಸಾರ್ವಜನಿಕರಿಗೆ ಕಿರ್ಪಾನ್ ತೋರಿಸಿ ಹೆದರಿಸುತ್ತಿದ್ದ ಯುವಕನನ್ನು ಪೊಲೀಸರು ವಶಕ್ಕೆ ಪಡೆದ ರೀತಿ ರೋಚಕ!

ಇತ್ತೀಚೆಗೆ ಹೆಚ್ಚಾಗಿ ಬೆಳಕಿಗೆ ಬರುತ್ತಿದೆ ಮಾದಸಕ ವಸ್ತು ಪ್ರಕರಣಗಳು

ಇತ್ತೀಚೆಗೆ ಇಂತಹ ಪ್ರಕರಣಗಳು ಕಂಡು ಬರುತ್ತಿದ್ದು, ಈ ದಂಧೆಕೋರರು ವಿದ್ಯಾರ್ಥಿಗಳು, ಕೂಲಿ ಕಾರ್ಮಿಕರನ್ನೇ ಹೆಚ್ಚಾಗಿ ಟಾರ್ಗೆಟ್ ಮಾಡುತ್ತಿದ್ದಾರೆ. ಇದನ್ನು ಮಕ್ಕಳು ತಿನ್ನುವ ಚಾಕೋಲೆಟ್ ಮಾದರಿಯಲ್ಲಿಯೇ ಗಾಂಜಾವನ್ನು ಬಳಸಿ ಚಾಕೋಲೆಟ್ ರೆಡಿ ಮಾಡಿದ್ದರು. ಜೊತೆಗೆ ಪ್ರತಿ ಚಾಕೋಲೆಟ್​ಗೆ 50ರಿಂದ60 ರೂಪಾಯಿಗೆ ಮಾರಾಟ ಮಾಡುತ್ತಿದ್ದರು. ಇನ್ನು ಬೆಂಗಳೂರು ಸೇರಿ ಒಟ್ಟಿನಲ್ಲಿ ರಾಜ್ಯದ ಮೂರು ಕಡೆ ಇಂತಹ ಪ್ರಕರಣಗಳು ಬೆಳಕಿಗೆ ಬಂದಂತಾಗಿದೆ.

ಮತ್ತಷ್ಟು ಅಪರಾಧ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
ಗ್ಯಾಂಗ್ಸ್ ಆಫ್ ಯುಕೆ: ಎರಡನೇ ಇನ್ನಿಂಗ್ಸ್ ನಿರೀಕ್ಷೆಯಲ್ಲಿ ಒರಟ ಪ್ರಶಾಂತ್
ಗ್ಯಾಂಗ್ಸ್ ಆಫ್ ಯುಕೆ: ಎರಡನೇ ಇನ್ನಿಂಗ್ಸ್ ನಿರೀಕ್ಷೆಯಲ್ಲಿ ಒರಟ ಪ್ರಶಾಂತ್
6,6,6,6,6.. ಪಂಜಾಬ್ ವಿರುದ್ಧ ಅಬ್ಬರಿಸಿದ ಆಯುಷ್ ಮ್ಹಾತ್ರೆ
6,6,6,6,6.. ಪಂಜಾಬ್ ವಿರುದ್ಧ ಅಬ್ಬರಿಸಿದ ಆಯುಷ್ ಮ್ಹಾತ್ರೆ
ರಂಗೇರಿದ ಚುನಾವಣಾ ಅಖಾಡ; ಪುದುಚೇರಿಯಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ರಂಗೇರಿದ ಚುನಾವಣಾ ಅಖಾಡ; ಪುದುಚೇರಿಯಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಅಧಿಕಾರಿ ಮೇಲೆ ಪಾಲಿಕೆ ಸದಸ್ಯನಿಂದ ಹಲ್ಲೆ: ಕಮಿಷನರ್ ಶಾಕಿಂಗ್‌ ರಿಯಾಕ್ಷನ್‌
ಅಧಿಕಾರಿ ಮೇಲೆ ಪಾಲಿಕೆ ಸದಸ್ಯನಿಂದ ಹಲ್ಲೆ: ಕಮಿಷನರ್ ಶಾಕಿಂಗ್‌ ರಿಯಾಕ್ಷನ್‌
ಜೈಪುರದಲ್ಲಿ ಬಿರುಗಾಳಿ ಸಹಿತ ಭಾರೀ ಮಳೆ, ಜನಜೀವನ ಅಸ್ತವ್ಯಸ್ತ
ಜೈಪುರದಲ್ಲಿ ಬಿರುಗಾಳಿ ಸಹಿತ ಭಾರೀ ಮಳೆ, ಜನಜೀವನ ಅಸ್ತವ್ಯಸ್ತ
ಹಳೇ ಸೇಡು ತೀರಿಸಿಲು ದಾವಣಗೆರೆಯಲ್ಲಿ ಷಡ್ಯಂತ್ರ ನಡೆದಿದೆ ಎಂದ ಶ್ರೀರಾಮುಲು
ಹಳೇ ಸೇಡು ತೀರಿಸಿಲು ದಾವಣಗೆರೆಯಲ್ಲಿ ಷಡ್ಯಂತ್ರ ನಡೆದಿದೆ ಎಂದ ಶ್ರೀರಾಮುಲು
ಹಬ್ಬಳ್ಳಿ ಲವ್ ಜಿಹಾದ್​​​ಗೆ ಸ್ಫೋಟಕ ಟ್ವಿಸ್ಟ್:ಜಿಮ್ ಟ್ರೈನರ್​​ನ ಕಾಮಕಾಂಡ
ಹಬ್ಬಳ್ಳಿ ಲವ್ ಜಿಹಾದ್​​​ಗೆ ಸ್ಫೋಟಕ ಟ್ವಿಸ್ಟ್:ಜಿಮ್ ಟ್ರೈನರ್​​ನ ಕಾಮಕಾಂಡ
ವೇದಿಕೆ ಮೇಲೆ ವಾಂತಿ: ಸಂತೋಷ್ ಹೆಗ್ಡೆ ಆರೋಗ್ಯದ ಬಗ್ಗೆ ಖಾದರ್ ಮಾಹಿತಿ
ವೇದಿಕೆ ಮೇಲೆ ವಾಂತಿ: ಸಂತೋಷ್ ಹೆಗ್ಡೆ ಆರೋಗ್ಯದ ಬಗ್ಗೆ ಖಾದರ್ ಮಾಹಿತಿ
ಶಿರಸಿ ಬಳಿ ಎರಡು ಬಸ್​​ಗಳ ನಡುವೆ ಭೀಕರ ಅಪಘಾತ: ಪ್ರಯಾಣಿಕರ ಸ್ಥಿತಿ ಗಂಭೀರ
ಶಿರಸಿ ಬಳಿ ಎರಡು ಬಸ್​​ಗಳ ನಡುವೆ ಭೀಕರ ಅಪಘಾತ: ಪ್ರಯಾಣಿಕರ ಸ್ಥಿತಿ ಗಂಭೀರ
ಸಚಿವ ಮುನಿಯಪ್ಪ ಮೇಲೆ ಕೆಪಿಸಿಸಿ ವಕ್ತಾರ ಲಕ್ಷ್ಮಣ್​​ ಗರಂ!
ಸಚಿವ ಮುನಿಯಪ್ಪ ಮೇಲೆ ಕೆಪಿಸಿಸಿ ವಕ್ತಾರ ಲಕ್ಷ್ಮಣ್​​ ಗರಂ!