AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬಂಡೀಪುರ ಸಫಾರಿಗೆ ಹೋಗುವವವರಿಗೆ ಗುಡ್ ನ್ಯೂಸ್: ಪ್ರವಾಸಿಗರಿಗೆ ಇನ್ಮುಂದೆ ವಿಮಾ ಸೌಲಭ್ಯ

ಚಾಮರಾಜನಗರ: ಬಂಡೀಪುರ ಹುಲಿ ಸಂರಕ್ಷಿತ ಅರಣ್ಯ 50 ರ ಸಂಭ್ರಮದಲ್ಲಿದೆ. ಈಗಾಗ್ಲೇ ವನ್ಯ ಸಂಪತ್ತು ವೃದ್ದಿಯ ಜೊತೆಗೆ ಪ್ರವಾಸೋದ್ಯಮ ಅಭಿವೃದ್ಧಿಗೆ ಹೊಸ ಹೊಸ ಯೋಜನೆ ರೂಪಿಸಿದೆ. ಇದೀಗ ಸಫಾರಿಗೆ ಹೋಗುವ ಪ್ರವಾಸಿಗರಿಗೆ ಇನ್ಶುರೆನ್ಸ್ ಮಾಡಿಸಲು ಒಂದೊಳ್ಳೆ ಹೆಜ್ಜೆ ಇಟ್ಟಿದೆ.

ಬಂಡೀಪುರ ಸಫಾರಿಗೆ ಹೋಗುವವವರಿಗೆ ಗುಡ್ ನ್ಯೂಸ್: ಪ್ರವಾಸಿಗರಿಗೆ ಇನ್ಮುಂದೆ ವಿಮಾ ಸೌಲಭ್ಯ
ಬಂಡೀಪುರ ಪ್ರವಾಸಿಗರಿಗೆ ಇನ್ಮುಂದೆ ವಿಮಾ ಸೌಲಭ್ಯ
ಸೂರಜ್ ಪ್ರಸಾದ್ ಎಸ್.ಎನ್
| Edited By: |

Updated on: Aug 09, 2023 | 11:50 AM

Share

ಬಂಡೀಪುರ ಅಂದ್ರೆ ಸಾಕು ಎಂತಹವರಿಗಾದ್ರು ಆ ಕಾಡಲ್ಲಿ ಸಫಾರಿ ಮಾಡ್ಬೇಕು ಅಂತ ಅನಿಸದೆ ಇರದು.ದೇಶ,ವಿದೇಶದಿಂದಲೂ ಪ್ರವಾಸಿಗರ (Tourists) ದಂಡೇ ಸಫಾರಿಗೆ ಆಗಮಿಸುತ್ತೆ.ಸಫಾರಿ ವೇಳೆ ಯಾವುದಾದ್ರೂ ಅವಘಡ ಸಂಭವಿಸಿದ್ರೆ ಪ್ರವಾಸಿಗರಿಗೆ ತೊಂದರೆಯಾಗುತ್ತೆ.ಅದಕ್ಕೋಸ್ಕರ ಸಫಾರಿಗೆ (Bandipur Safari) ಹೋಗುವ ಪ್ರವಾಸಿಗರಿಗೆ ಹೊಸದಾಗಿ ಇನ್ಶುರೆನ್ಸ್ (Insurance) ಮಾಡಿಸಲು ಚಿಂತನೆ ನಡೆದಿದೆ.ಈ ಕುರಿತು ಒಂದು ಸ್ಟೋರಿ ಇಲ್ಲಿದೆ ನೋಡಿ.

ಹಚ್ಚ ಹಸಿರಿನ ಕಾನನ, ಸ್ವಚ್ಛಂದವಾಗಿ ವಿಹರಿಸುತ್ತಿರುವ ವನ್ಯಜೀವಿಗಳು, ಕಿವಿಗಿಂಪು ನೀಡೋ ಪಕ್ಷಿಗಳ ನಿನಾದ.ಅಬ್ಬಾ ಬಂಡೀಪುರದಲ್ಲಿ ಸಫಾರಿ ಮಾಡಿದ್ರೆ ಸ್ವರ್ಗ ಅಂತ ಅನಿಸದೆ ಇರದು.ಹೌದು ಚಾಮರಾಜನಗರ ಜಿಲ್ಲೆಯ ಗುಂಡ್ಲುಪೇಟೆ ತಾಲೂಕಿನ ಬಂಡೀಪುರಕ್ಕೆ ಸಫಾರಿ ನಡೆಸಲು ರಾಜ್ಯದಲ್ಲಷ್ಟೇ ಅಲ್ಲದೇ ದೇಶ,ವಿದೇಶದಿಂದಲೂ ಕೂಡ ಪ್ರವಾಸಿಗರು ಆಗಮಿಸ್ತಾರೆ.

ಈ ಸಫಾರಿಗೆ ಹೋಗುವ ಪ್ರವಾಸಿಗರ ಸೇಫ್ಟಿ ಕೂಡ ಅರಣ್ಯ ಇಲಾಖೆಗೆ ಸೇರಿದೆ.ಈ ಹಿನ್ನೆಲೆ ಇನ್ಮುಂದೆ ಸಫಾರಿಗೆ ಹೋಗುವ ಪ್ರವಾಸಿಗರಿಗೆ ರಕ್ಷಣೆಯ ದೃಷ್ಟಿಯಿಂದ ಇದೀಗ ಅರಣ್ಯ ಅಧಿಕಾರಿಗಳು ಇನ್ಶುರೆನ್ಸ್ ಮಾಡಿಸುವ ಚಿಂತನೆ ನಡೆಸಿದ್ದಾರೆ.ಹೆಡ್ ಆಫೀಸ್ ನಿಂದಲೂ ಕೂಡ ಈ ಬಗ್ಗೆ ಅಧಿಕಾರಿಗಳಿಗೆ ಸೂಚನೆ ಬಂದಿದೆ.ಅಲ್ಲದೇ ಈಗಾಗ್ಲೇ ಇನ್ಶುರೆನ್ಸ್ ಕಚೇರಿಯನ್ನೂ ಕೂಡ ಸಂಪರ್ಕ ಮಾಡಿದ್ದಾರೆ.ಪ್ರಸ್ತುತ ಇರುವ ಸಫಾರಿ ದರದ ಜೊತೆಗೆ 5 ರೂ ಟಿಕೆಟ್ ದರ ಹೆಚ್ಚಿಸಿ ಇನ್ಶುರೆನ್ಸ್ ಮಾಡಿಸಲು ಅಧಿಕಾರಿಗಳು ಪ್ಲಾನ್ ಮಾಡಿದ್ದಾರೆ.

ಪ್ರವಾಸಿಗರು ದುಬಾರಿ ವೆಚ್ಚ ತೆತ್ತು ಸಫಾರಿಗೆ ಹೋಗ್ತಾರೆ.ಈ ವೇಳೆ ಕಾಡಿನಲ್ಲಿ ವನ್ಯ ಪ್ರಾಣಿಗಳ ದರ್ಶನ ಹಾಗೂ ಪ್ರಾಕೃತಿಕ ವನ್ಯ ಸಂಪತ್ತನ್ನು ಕಣ್ತುಂಬಿಕೊಳ್ತಾರೆ.ಇಂತಾ ವೇಳೆ ಕಾಡಾನೆ ಅಟ್ಟಿಸಿಕೊಂಡು ಬರೋದು ಅಥವಾ ಇನ್ನಿತರ ವನ್ಯ ಪ್ರಾಣಿಗಳು ಕೂಡ ಸಫಾರಿ ವಾಹನದ ಮೇಲೆ ದಾಳಿ ನಡೆಸಿದ ನಿದರ್ಶನ ಸಾಕಷ್ಟಿದೆ.

ಈ ಹಿನ್ನೆಲೆ ಸಫಾರಿಗೆ ಹೋದ ವೇಳೆ ಪ್ರವಾಸಿಗರಿಗೆ ತೊಂದರೆಯಾಗುವ ಸಾಧ್ಯತೆ ಇರುವುದರಿಂದ ಮುನ್ನೆಚ್ಚರಿಕೆ ಕ್ರಮವಹಿಸುವ ಜೊತೆಗೆ ಪ್ರವಾಸಿಗರ ಹಿತರಕ್ಷಣೆ ದೃಷ್ಟಿಯಿಂದ ಇನ್ಶುರೆನ್ಸ್ ಪ್ಲಾನ್ ನಲ್ಲಿದೆ.ಅಲ್ಲದೇ ಈಗಾಗ್ಲೇ ಕಳ್ಳರ ಬೇಟೆ ಶಿಬಿರದಲ್ಲಿ ಕಾರ್ಯನಿರ್ವಹಿಸುವ ಸಿಬ್ಬಂದಿಗೂ ಕೂಡ ಇನ್ಶುರೆನ್ಸ್ ಮಾಡಿಸಿ,ಸೌಲಭ್ಯ ಒದಗಿಸಲಾಗಿದೆ.

ಒಟ್ನಲ್ಲಿ ಬಂಡೀಪುರ ಹುಲಿ ಸಂರಕ್ಷಿತ ಅರಣ್ಯ 50 ರ ಸಂಭ್ರಮದಲ್ಲಿದೆ.ಈಗಾಗ್ಲೇ ವನ್ಯ ಸಂಪತ್ತು ವೃದ್ದಿಯ ಜೊತೆಗೆ ಪ್ರವಾಸೋದ್ಯಮ ಅಭಿವೃದ್ಧಿಗೆ ಹೊಸ ಹೊಸ ಯೋಜನೆ ರೂಪಿಸಿವೆ.ಆ ನಿಟ್ಟಿನಲ್ಲಿ ಇದೀಗ ಸಫಾರಿಗೆ ಹೋಗುವ ಪ್ರವಾಸಿಗರಿಗೆ ಇನ್ಶುರೆನ್ಸ್ ಮಾಡಿಸಲು ಒಂದೊಳ್ಳೆ ಹೆಜ್ಜೆ ಇಟ್ಟಿದೆ.ಇದು ಎಷ್ಟರ ಮಟ್ಟಿಗೆ ಸಕ್ಸಸ್ ಆಗುತ್ತೆ? ಅಥವಾ ವನ್ಯಜೀವಿ ಪ್ರಿಯರ ಆಕ್ರೋಶಕ್ಕೆ ಕಾರಣವಾಗುತ್ತಾ ಅನ್ನೋದ್ನ ಕಾದುನೋಡಬೇಕಾಗಿದೆ.

  ಚಾಮರಾಜನಗರ ಜಿಲ್ಲಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow Us
Suraj Prasad SN
Suraj Prasad SN

ಸೂರಜ್ ಪ್ರಸಾದ್ ಎಸ್.ಎನ್ ಆದ ನಾನು ಹುಟ್ಟಿದ್ದು ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿಯಲ್ಲಿ. ಬೆಳೆದಿದ್ದು ದಾವಣಗರೆ ಜಿಲ್ಲೆ ನ್ಯಾಮತಿ ತಾಲೂಕಿನಲ್ಲಿ. ಶಿವಮೊಗ್ಗದ ಸಹ್ಯಾದ್ರಿ ಕಾಲೇಜ್ ನಲ್ಲಿ ಪತ್ರಿಕೋದ್ಯಮದಲ್ಲಿ ಪದವಿಪೂರ್ವ ಶಿಕ್ಷಣ ಪಡೆದಿದ್ದು 2014ರಿಂದ ನನ್ನ ಎಲೆಕ್ಟ್ರಾನಿಕ್ ಮಾದ್ಯಮದ ವೃತ್ತಿ ಜೀವನವನ್ನ ಬೆಂಗಳೂರಿನಲ್ಲಿ ಕ್ರೈಂ ಬೀಟ್ ವರದಿಗಾರನಾಗಿ ಆರಂಭಿಸಿದ್ದು ಬೆಂಗಳೂರಿನಲ್ಲಿ 8 ವರ್ಷಗಳ ಕ್ರೈಂ ವರದಿಗಾರನಾಗಿ ಸೇವೆ ಸಲ್ಲಿಸಿ. ನಾಲ್ಕು ಸಂಸ್ಥೆಯಲ್ಲಿ ಕ್ರೈಂ ರಿಪೋರ್ಟರ್ ಹಾಗೂ ಕ್ರೈಂ ಇನ್ವೆಸ್ಟಿಗೇಟಿವ್ ವರದಿಗಾರನಾಗಿ ಹಾಗೂ ಸ್ಟಿಂಗ್ ಅಪರೇಷನ್ ಗಳನ್ನ ಮಾಡಿದ್ದೇನೆ. ಗೌರಿ ಲಂಕೇಶ್ ಕೊಲೆ ಕೇಸನ್ನ ರಾಜ್ಯದಲ್ಲೇ ಮೊದಲು ಬ್ರೇಕ್ ಮಾಡಿ ಈ ಹಿಂದಿನ ಸಂಸ್ಥೆಯಿಂದ ಪ್ರಶಂಸೆ ಪಡೆದಿರುತ್ನೇನೆ2019 ರಲ್ಲಿ ಪಿಎಸ್ಐ ಅಕ್ರಮದ ಸ್ಟಿಂಗ್ ಆಪರೇಷನ್ ಹಾಗೂ ಬೆಂಗಳೂರು ಸಿಂಥಟಿಕ್ ಡ್ರಗ್ ಮಾಫಿಯಾದ ಸ್ಟಿಂಗ್ ಆಪರೇಷನ್ ಮಾಡಿದ್ದು. ಕಳೆದ 10 ವರ್ಷಗಳಿಂದ ಸಕ್ರೀಯವಾಗಿ ಕಾರ್ಯ ನಿರ್ವಹಿಸುತ್ತಿದ್ದೇನೆ. ಟಿವಿ9 ಸಂಸ್ಥೆಗೆ ಮಂಡ್ಯ ಜಿಲ್ಲಾ ವರದಿಗಾರನಾಗಿ ಕೆಲಸ ಮಾಡಿ ಬಳಿಕ ಚಾಮರಾಜನಗರಕ್ಕೆ ವರ್ಗಾವಣೆಯಾಗಿ ಈಗ ಪ್ರಸ್ಥುತ ಚಾಮರಾಜನಗರ ಜಿಲ್ಲಾ ವರದಿಗಾರನಾಗಿ ಕೆಲಸ ಮಾಡುತ್ತಿದ್ದೇನೆ. ಹವ್ಯಾಸ ಅಡಿಗೆ ಮಾಡುವುದು, ಕ್ರಿಕೆಟ್ ಆಡುವುದು ಕ್ರೈಂ ಇನ್ವೆಷ್ಟಿಗೇಷನ್ ನಾವೆಲ್ ಗಳನ್ನ ಓದುವುದು.

Read More
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?