AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮಾದಪ್ಪನ ಬೆಟ್ಟಕ್ಕೆ ಹೋಗುವ ಭಕ್ತರಿಗೆ ಗುಡ್ ನ್ಯೂಸ್; 4 ಹೊಸ ಬಸ್ ಖರೀದಿಸಿದ ಮಲೆ ಮಹದೇಶ್ವರ ಪ್ರಾಧಿಕಾರ

ಜಿಲ್ಲೆಯ ಹನೂರು ತಾಲೂಕಿನಲ್ಲಿರುವ ಮಾದಪ್ಪನ ಬೆಟ್ಟಕ್ಕೆ ಹೋಗುವ ಭಕ್ತರಿಗೆ ಮಲೆ ಮಹದೇಶ್ವರ ಪ್ರಾಧಿಕಾರ ನಾಲ್ಕು ಹೊಸ ಬಸ್ ಖರೀದಿಸುವ ಮೂಲಕ ಸಿಹಿ ಸುದ್ದಿ ನೀಡಿದೆ.

ಮಾದಪ್ಪನ ಬೆಟ್ಟಕ್ಕೆ ಹೋಗುವ ಭಕ್ತರಿಗೆ ಗುಡ್ ನ್ಯೂಸ್; 4 ಹೊಸ ಬಸ್ ಖರೀದಿಸಿದ ಮಲೆ ಮಹದೇಶ್ವರ ಪ್ರಾಧಿಕಾರ
ಪ್ರಾತಿನಿಧಿಕ ಚಿತ್ರ
ಸೂರಜ್ ಪ್ರಸಾದ್ ಎಸ್.ಎನ್
| Edited By: ಕಿರಣ್ ಹನುಮಂತ್​ ಮಾದಾರ್|

Updated on: Jul 06, 2023 | 12:15 PM

Share

ಚಾಮರಾಜನಗರ: ಜಿಲ್ಲೆಯ ಹನೂರು(Hanur)ತಾಲೂಕಿನಲ್ಲಿರುವ ಮಾದಪ್ಪನ ಬೆಟ್ಟಕ್ಕೆ ಹೋಗುವ ಭಕ್ತರಿಗೆ ಮಲೆ ಮಹದೇಶ್ವರ (Male Mahadeshwara Hill) ಪ್ರಾಧಿಕಾರ ನಾಲ್ಕು ಹೊಸ ಬಸ್ ಖರೀದಿಸುವ ಮೂಲಕ ಸಿಹಿ ಸುದ್ದಿ ನೀಡಿದೆ. ಅತೀ ಹೆಚ್ಚು ಭಕ್ತರು ಮಾದಪ್ಪನ ದರ್ಶನ ಪಡೆಯಲು ಬರುತ್ತಿದ್ದು, ಈ ಹಿಂದೆ ಇದ್ದ ಬಸ್​ಗಳು ಹಳೆಯದಾಗಿತ್ತು. ಈ ಕುರಿತು ಪ್ರಯಾಣಿಕರು ಸಾಕಷ್ಟು ದೂರು ಕೂಡ ನೀಡಿದ್ದರು. ಈ ಕಾರಣ ನಾಲ್ಕು ಹೊಸ ಬಸ್ ಖರೀದಿ ಮಾಡಿರುವ ಪ್ರಾಧಿಕಾರ, ಶೀಘ್ರದಲ್ಲೇ ಸಂಚಾರ ಆರಂಭಿಸಲಿವೆ. ಇನ್ನು ಹೊಸ ಬಸ್ ಆಗಮನವಾಗುತ್ತಲೇ ಸಾಲೂರು ಮಠದ ಮಲ್ಲಿಕಾರ್ಜುನ ಸ್ವಾಮಿಗಳು ಹಾಗೂ ಪ್ರಾಧಿಕಾರದ ಕಾರ್ಯದರ್ಶಿ ಗೀತಾ ಹುಡೇದ ಅವರು ಪೂಜೆ ಸಲ್ಲಿಸಿದರು.

ಸಿಎಂ ಸಿದ್ದರಾಮಯ್ಯ ಚಾಲನೆ ನೀಡುವ ಸಾದ್ಯತೆ

ನೂತನ ಬಸ್​ಗಳಿಗೆ ಮಲೆ ಮಹದೇಶ್ವರ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರು ಹಾಗೂ ರಾಜ್ಯದ ಮುಖ್ಯಮಂತ್ರಿಯಾಗಿರುವ ಸಿದ್ದರಾಮಯ್ಯನವರಿಂದ ಚಾಲನೆ ನೀಡುವ ಸಾದ್ಯತೆಯಿದೆ. ಇದಾದ ಬಳಿಕ ಬಸ್​ಗಳು ಯಾವ ಮಾರ್ಗದಲ್ಲಿ ಸಂಚರಿಸುತ್ತವೆ ಎಂದು ಪ್ರಾಧಿಕಾರದ ಅಧಿಕಾರಿಗಳು ರೂಟ್ ಫಿಕ್ಸ್ ಮಾಡಲಿದ್ದಾರೆ.

ಇದನ್ನೂ ಓದಿ:Chamrajnagar: ಮಲೆ ಮಹಾದೇಶ್ವರದ ಮಾದಪ್ಪನ ಸನ್ನಿಧಿಯಲ್ಲಿ ಮಹಿಳೆಯರದ್ದೇ ಬಹುಪರಾಕ್​

ಶಿವರಾತ್ರಿ ಜಾತ್ರಾ ಮಹೋತ್ಸವದಂದು ಹರಿದು ಬಂದಿತ್ತು ಕೋಟಿ ಕೋಟಿ ಹಣ

ಇನ್ನು ಇದೇ ವರ್ಷ ಮಲೆ ಮಹದೇಶ್ವರ ಬೆಟ್ಟದಲ್ಲಿ ನಡೆದಿದ್ದ ಶಿವರಾತ್ರಿ ಜಾತ್ರಾ ಮಹೋತ್ಸವದಂದು ಹರಕೆ, ಪ್ರಸಾದ ವಿತರಣೆಯಿಂದ ಬರೊಬ್ಬರಿ 2.70 ಕೋಟಿಗೂ ಅಧಿಕ ಹಣ ಹರಿದು ಬಂದಿತ್ತು. ಕರ್ನಾಟಕದಲ್ಲಿ ಅತೀ ಹೆಚ್ಚು ಭಕ್ತರು ಭೇಟಿ ನೀಡುವ ದೇವಸ್ಥಾನಗಳಲ್ಲಿ ಮಲೆ ಮಹದೇಶ್ವರ ಬೆಟ್ಟವು ಒಂದಾಗಿದೆ. ಅದಕ್ಕೆ ಸಾಕ್ಷಿಯೆಂಬಂತೆ ಶಿವರಾತ್ರಿಯಂದು ಕಾಲ್ನಡಿಗೆಯಲ್ಲಿ 10 ಲಕ್ಷಕ್ಕೂ ಅಧಿಕ ಭಕ್ತರು ಬೆಟ್ಟವನ್ನ ಹತ್ತಿ ಮಾದಪ್ಪನ ದರ್ಶನ ಪಡೆದಿದ್ದರು. ಈ ಮೂಲಕ ಬೆಟ್ಟಕ್ಕೆ ಬರುವವರ ಭಕ್ತರ ಸಂಖ್ಯೆ ದಿನದಿಂದ ದಿನಕ್ಕೆ ಏರುತ್ತಲೆ ಇದೆ.

ಇನ್ನಷ್ಟು ರಾಜ್ಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ

Follow Us
ದೇಶಾದ್ಯಂತ ಇಂದಿನಿಂದ ನಾಲ್ಕು ದಿನಗಳ ಕಾಲ ಬ್ಯಾಂಕ್​ಗಳು ಬಂದ್
ದೇಶಾದ್ಯಂತ ಇಂದಿನಿಂದ ನಾಲ್ಕು ದಿನಗಳ ಕಾಲ ಬ್ಯಾಂಕ್​ಗಳು ಬಂದ್
‘ನನ್ನತ್ರ ನಡ್ಯಲ್ಲ’; ಕಾವ್ಯಾಗೆ ಖಡಕ್ ವಾರ್ನಿಂಗ್ ಕೊಟ್ಟ ಗಗನ್ ಚಿನ್ನಪ್ಪ
‘ನನ್ನತ್ರ ನಡ್ಯಲ್ಲ’; ಕಾವ್ಯಾಗೆ ಖಡಕ್ ವಾರ್ನಿಂಗ್ ಕೊಟ್ಟ ಗಗನ್ ಚಿನ್ನಪ್ಪ
ಜಿಬಿಎ ಪೌರಕಾರ್ಮಿಕನ ಮೇಲೆ ಹಲ್ಲೆ; ಕೇರಳದ ಯುವಕ, ಯುವತಿ ಪೊಲೀಸ್ ವಶಕ್ಕೆ
ಜಿಬಿಎ ಪೌರಕಾರ್ಮಿಕನ ಮೇಲೆ ಹಲ್ಲೆ; ಕೇರಳದ ಯುವಕ, ಯುವತಿ ಪೊಲೀಸ್ ವಶಕ್ಕೆ
ದೆಹಲಿಗೆ ಆಗಮಿಸಿದ ರಷ್ಯಾ ಅಧ್ಯಕ್ಷ ಪುಟಿನ್
ದೆಹಲಿಗೆ ಆಗಮಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಇಂದು ಈ ರಾಶಿಯವರು ಹಣಕಾಸಿನ ವಿಚಾರದಲ್ಲಿ ಜಾಗೃತರಾಗಿರಿ
ಇಂದು ಈ ರಾಶಿಯವರು ಹಣಕಾಸಿನ ವಿಚಾರದಲ್ಲಿ ಜಾಗೃತರಾಗಿರಿ
ಮುಂಬೈನ ರೈಲಿನಲ್ಲಿ ನೇತಾಡುತ್ತಿದ್ದಾಗ ಕೆಳಗೆ ಬಿದ್ದ ಮಹಿಳೆ!
ಮುಂಬೈನ ರೈಲಿನಲ್ಲಿ ನೇತಾಡುತ್ತಿದ್ದಾಗ ಕೆಳಗೆ ಬಿದ್ದ ಮಹಿಳೆ!
ಬಿಜೆಪಿ ಪಾದಯಾತ್ರೆಗೆ ತೆರೆ: ಹೋರಾಟ ಅಂತ್ಯವಲ್ಲ, ಆರಂಭ ಎಂದ ಕೇಸರಿ ಪಡೆ
ಬಿಜೆಪಿ ಪಾದಯಾತ್ರೆಗೆ ತೆರೆ: ಹೋರಾಟ ಅಂತ್ಯವಲ್ಲ, ಆರಂಭ ಎಂದ ಕೇಸರಿ ಪಡೆ
ಜಾರಕಿಹೊಳಿ ಮನೆಯಲ್ಲಿ ED ಶೋಧ ಅಂತ್ಯ, 37 ಗಂಟೆಗಳ ಕಾಲ ನಡೆದ ಪರಿಶೀಲನೆ
ಜಾರಕಿಹೊಳಿ ಮನೆಯಲ್ಲಿ ED ಶೋಧ ಅಂತ್ಯ, 37 ಗಂಟೆಗಳ ಕಾಲ ನಡೆದ ಪರಿಶೀಲನೆ
ಮಂಜನ ಮಾತಿನಿಂದ ಬಿಗ್ ಬಾಸ್ ಮನೆಯಲ್ಲಿ ಕಿರಿಕಿರಿ; ಕಣ್ಣೀರು ಹಾಕಿದ ಸ್ಪರ್ಧಿ
ಮಂಜನ ಮಾತಿನಿಂದ ಬಿಗ್ ಬಾಸ್ ಮನೆಯಲ್ಲಿ ಕಿರಿಕಿರಿ; ಕಣ್ಣೀರು ಹಾಕಿದ ಸ್ಪರ್ಧಿ
'ಬ್ರಿಕ್ಸ್ ಶೃಂಗಸಭೆಗೆ ಭಾರತ ಸಿದ್ಧ'; ವಿಡಿಯೋ ಹಂಚಿಕೊಂಡ ಪ್ರಧಾನಿ ಮೋದಿ
'ಬ್ರಿಕ್ಸ್ ಶೃಂಗಸಭೆಗೆ ಭಾರತ ಸಿದ್ಧ'; ವಿಡಿಯೋ ಹಂಚಿಕೊಂಡ ಪ್ರಧಾನಿ ಮೋದಿ