AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಚಾಮರಾಜನಗರ: ಅಳಿವಿನಂಚಿನಲ್ಲಿರುವ ಶತಮಾನದ ಶಾಲೆಗೆ ಬೇಕಿದೆ ಸಹಾಯ ಹಸ್ತ

ಚಾಮರಾಜನಗರದಲ್ಲಿರುವ ಶತಮಾನ ಕಳೆದ ಶಾಲೆ ಅಳಿವಿನಂಚಿನಲ್ಲಿದೆ. ಸಾವಿರಾರು ಮಂದಿ ವಿದ್ಯಾರ್ಥಿಗಳು ಇದೆ ಶಾಲೆಯಲ್ಲಿ ವ್ಯಾಸಾಂಗ ಮಾಡಿ ಜೀವನ ಕಟ್ಟಿ ಕೊಂಡಿದ್ದಾರೆ. ಸಮಾಜದ ಉನ್ನತ ಸ್ಥಾನಕ್ಕೆರಿದ್ದಾರೆ. ಆದರೆ ಅಂತ ಶಾಲೆ ಪರಿಸ್ಥಿತಿ ಈಗ ಹೇಳ ತೀರದಂತಾಗಿದೆ. ಅಳವಿನಂಚಿನಲ್ಲಿರುವ ಈ ಸರ್ಕಾರಿ ಶತಮಾನದ ಶಾಲೆಗೆ ಈಗ ಸಹಾಯ ಹಸ್ತ ಬೇಕಿದೆ. ನಿದ್ದೆಯಲ್ಲಿ ಮುಳುಗಿರುವ ಶಿಕ್ಷಣ ಇಲಾಖೆ ಹಾಗೂ ಜಿಲ್ಲಾಡಳಿತ ಎಚ್ಚೆತ್ತುಕೊಳ್ಳಬೇಕಿದೆ.

ಚಾಮರಾಜನಗರ: ಅಳಿವಿನಂಚಿನಲ್ಲಿರುವ ಶತಮಾನದ ಶಾಲೆಗೆ ಬೇಕಿದೆ ಸಹಾಯ ಹಸ್ತ
ಮುಕ್ಕಡಹಳ್ಳಿ ಶಾಲೆ
ಸೂರಜ್ ಪ್ರಸಾದ್ ಎಸ್.ಎನ್
| Edited By: Rakesh Nayak Manchi|

Updated on:Jan 04, 2024 | 12:47 PM

Share

ಚಾಮರಾಜನಗರ, ಡಿ.30: ಚಾಮರಾಜನಗರ ಜಿಲ್ಲೆ ಚಾಮರಾಜನಗರ ತಾಲೂಕಿನ ಮುಕ್ಕಡಹಳ್ಳಿ ಶಾಲೆಯಲ್ಲಿ ಅವ್ಯವಸ್ಥೆ ತಾಂಡವವಾಡುತ್ತಿದೆ (Government School). ಈ ಶಾಲೆಯ ಗೋಡೆಗಳು ಬಿರುಕು ಬಿಟ್ಟಿವೆ. ಈ ಶಾಳೆ ಇಗ್ಲೋ ಆಗ್ಲೋ ಬೀಳುವ ಹಂತದಲ್ಲಿದೆ. ಮೇಲ್ಚಾವಣಿ ದೂಳು ಹಿಡಿದಿದೆ. ಕೂರಲು ಬೆಂಚುಗಳಿಲ್ಲದೆ ನೆಲದ ಮೇಲೆ ಕುಳಿತು ಶಾಲಾ ವಿದ್ಯಾರ್ಥಿಗಳು ಪಾಠ ಕೇಳುತ್ತಿದ್ದಾರೆ. ಇಲ್ಲಿನ ಶೌಚಾಲಯಕ್ಕೆ ಬಾಗಿಲು ಸಹ ಇಲ್ಲ.

ಗಡಿ ನಾಡು ಚಾಮರಾಜನಗರದ ಶತಮಾನದ ಶಾಲೆ ಎಂಬ ಹೆಗ್ಗಳಿಕೆ ಪಡೆದಿರುವ ಈ ಮುಕ್ಕಡಹಳ್ಳಿಯ ದುಸ್ಥಿತಿ ಹೇಳತೀರದ್ದು. ಅಂಗನವಾಡಿಯಿಂದ 7ನೇ ತರಗತಿ ವರೆಗೂ ಈ ಶಾಲೆಯಲ್ಲಿ ನೂರಕ್ಕೂ ಹೆಚ್ಚು ವಿದ್ಯಾರ್ಥಿಗಳು ವ್ಯಾಸಂಗ ಮಾಡುತ್ತಿದ್ದಾರೆ. ಈ ಶಾಲಾ ಕಟ್ಟಡದ ದುಸ್ಥಿತಿ ನೋಡಿ ಪೋಷಕರು ಈಗ ಈ ಶಾಲೆಗೆ ಮಕ್ಕಳನ್ನ ಕಳಿಸುವುದನ್ನ ನಿಲ್ಲಿಸಿದ್ದಾರೆ. ವರ್ಷದಿಂದ ವರ್ಷಕ್ಕೆ ವಿದ್ಯಾರ್ಥಿಗಳ ಸಂಖ್ಯೆಯಲ್ಲೂ ಭಾರಿ ಇಳಿಕೆ ಕಾಣುತ್ತಿದೆ. ಈ ಪರಿಸ್ಥಿತಿ ಹೀಗೆ ಮುಂದುವರೆದ್ರೆ ಶಾಲೆ ಮುಚ್ಚಲೇ ಬೇಕಾದ ಅನಿವಾರ್ಯತೆ ಎದುರಾಗಲಿದೆ.

ಇದನ್ನೂ ಓದಿ: ಶಾಲೆ ಸ್ವಚ್ಛತೆ ಹೊಣೆ ಎಸ್​ಡಿಎಂಸಿ ಸಮಿತಿಗೆ ನೀಡಲು ತೀರ್ಮಾನ, ಶೀಘ್ರದಲ್ಲೇ ಅಧಿಸೂಚನೆ

ಇನ್ನು ಮುಕ್ಕಡಹಳ್ಳಿಯಲ್ಲಿ ಅತಿ ಹೆಚ್ಚಾಗಿ ಕೂಲಿ ಕಾರ್ಮಿಕರು ಹಾಗೂ ರೈತರಿದ್ದಾರೆ. ಇವರು ಲಕ್ಷಗಟ್ಟಲೇ ಡೊನೇಷನ್ ಕೊಟ್ಟು ಖಾಸಗಿ ಶಾಲೆಗೆ ತಮ್ಮ ಮಕ್ಕಳನ್ನು ಸೇರಿಸುವ ಪರಿಸ್ಥಿತಿಯಲ್ಲಿಲ್ಲ. ಇವರೆಲ್ಲ ನೆಚ್ಚಿ ಕೊಂಡಿರುವುದು ಸರ್ಕಾರಿ ಶಾಲೆಯನ್ನೇ. ಇಂತ ಸರ್ಕಾರಿ ಶಾಲೆಯ ಪರಿಸ್ಥಿತಿ ಹೀಗೆ ಆದ್ರೆ ನೂರಾರು ಮಕ್ಕಳು ಶಾಲೆಯಿಂದ ವಂಚಿತರಾಗಲಿದ್ದಾರೆ. ಶಿಕ್ಷಣದಿಂದ ದೂರ ಉಳಿಯುವಂತಾಗುತ್ತೆ. ಇನ್ನು ಕಟ್ಟಡ ದುರಸ್ಥಿ ಕಾರ್ಯ ನಡೆಸಲು ಶಿಕ್ಷಣ ಇಲಾಖೆಯಲ್ಲಿ ಹಣದ ಸಮಸ್ಯೆಯಿದೆ ಜೊತೆಗೆ ಶಿಕ್ಷಕರ ಕೊರತೆ ಇರುವ ಕಾರಣ ದಿನ ಕಳೆದಂತೆ ಶಾಲೆಯಿಂದ ಮಕ್ಕಳು ದೂರವಾಗುತ್ತಿರುವುದು ಈಗ ಆತಂಕ ಸೃಷ್ಠಿಸುತ್ತಿದೆ.

ಅದೇನೆ ಹೇಳಿ ಸರ್ಕಾರಿ ಶಾಲೆ ಉಳಿಸಿ ಎಂಬ ಮಾತನ್ನ ಬರಿ ಬಾಯಿ ಮಾತಿಗೆ ಮಾತ್ರ ಈ ಮಾತು ಸೀಮಿತವಾಗಿದೆ. ಸರ್ಕಾರಿ ಶಾಲೆಯ ಪರಿಸ್ಥಿತಿ ಹೀಗೆ ಮುಂದುವರೆದ್ರೆ ನೂರಾರು ಹಳ್ಳಿ ಹಾಗೂ ಗುಡ್ಡಗಾಡಿನ ಮಕ್ಕಳ ಭವಿಷ್ಯಕ್ಕೆ ಮುಳುವಾಗುವುದಂತು ಸುಳ್ಳಲ್ಲ. ಇನ್ಮುಂದೆಯಾದ್ರು ರಾಜ್ಯ ಸರ್ಕಾರ ಹಾಗೂ ಶಿಕ್ಷಣ ಇಲಾಖೆ ಸರ್ಕಾರಿ ಶಾಲೆಗಳ ಕುರಿತು ಹೆಚ್ಚಿನ ಗಮನ ಹರಿಸುವ ಮೂಲಕ ಬಡ ವಿದ್ಯಾರ್ಥಿಗಳ ಪಾಲಿಗೆ ಆಶಾ ಕಿರಣವಾಗಬೇಕಿದೆ.

ರಾಜ್ಯದ ಪ್ರಮುಖ ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ

Published On - 3:56 pm, Sat, 30 December 23

Follow Us
Suraj Prasad SN
Suraj Prasad SN

ಸೂರಜ್ ಪ್ರಸಾದ್ ಎಸ್.ಎನ್ ಆದ ನಾನು ಹುಟ್ಟಿದ್ದು ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿಯಲ್ಲಿ. ಬೆಳೆದಿದ್ದು ದಾವಣಗರೆ ಜಿಲ್ಲೆ ನ್ಯಾಮತಿ ತಾಲೂಕಿನಲ್ಲಿ. ಶಿವಮೊಗ್ಗದ ಸಹ್ಯಾದ್ರಿ ಕಾಲೇಜ್ ನಲ್ಲಿ ಪತ್ರಿಕೋದ್ಯಮದಲ್ಲಿ ಪದವಿಪೂರ್ವ ಶಿಕ್ಷಣ ಪಡೆದಿದ್ದು 2014ರಿಂದ ನನ್ನ ಎಲೆಕ್ಟ್ರಾನಿಕ್ ಮಾದ್ಯಮದ ವೃತ್ತಿ ಜೀವನವನ್ನ ಬೆಂಗಳೂರಿನಲ್ಲಿ ಕ್ರೈಂ ಬೀಟ್ ವರದಿಗಾರನಾಗಿ ಆರಂಭಿಸಿದ್ದು ಬೆಂಗಳೂರಿನಲ್ಲಿ 8 ವರ್ಷಗಳ ಕ್ರೈಂ ವರದಿಗಾರನಾಗಿ ಸೇವೆ ಸಲ್ಲಿಸಿ. ನಾಲ್ಕು ಸಂಸ್ಥೆಯಲ್ಲಿ ಕ್ರೈಂ ರಿಪೋರ್ಟರ್ ಹಾಗೂ ಕ್ರೈಂ ಇನ್ವೆಸ್ಟಿಗೇಟಿವ್ ವರದಿಗಾರನಾಗಿ ಹಾಗೂ ಸ್ಟಿಂಗ್ ಅಪರೇಷನ್ ಗಳನ್ನ ಮಾಡಿದ್ದೇನೆ. ಗೌರಿ ಲಂಕೇಶ್ ಕೊಲೆ ಕೇಸನ್ನ ರಾಜ್ಯದಲ್ಲೇ ಮೊದಲು ಬ್ರೇಕ್ ಮಾಡಿ ಈ ಹಿಂದಿನ ಸಂಸ್ಥೆಯಿಂದ ಪ್ರಶಂಸೆ ಪಡೆದಿರುತ್ನೇನೆ2019 ರಲ್ಲಿ ಪಿಎಸ್ಐ ಅಕ್ರಮದ ಸ್ಟಿಂಗ್ ಆಪರೇಷನ್ ಹಾಗೂ ಬೆಂಗಳೂರು ಸಿಂಥಟಿಕ್ ಡ್ರಗ್ ಮಾಫಿಯಾದ ಸ್ಟಿಂಗ್ ಆಪರೇಷನ್ ಮಾಡಿದ್ದು. ಕಳೆದ 10 ವರ್ಷಗಳಿಂದ ಸಕ್ರೀಯವಾಗಿ ಕಾರ್ಯ ನಿರ್ವಹಿಸುತ್ತಿದ್ದೇನೆ. ಟಿವಿ9 ಸಂಸ್ಥೆಗೆ ಮಂಡ್ಯ ಜಿಲ್ಲಾ ವರದಿಗಾರನಾಗಿ ಕೆಲಸ ಮಾಡಿ ಬಳಿಕ ಚಾಮರಾಜನಗರಕ್ಕೆ ವರ್ಗಾವಣೆಯಾಗಿ ಈಗ ಪ್ರಸ್ಥುತ ಚಾಮರಾಜನಗರ ಜಿಲ್ಲಾ ವರದಿಗಾರನಾಗಿ ಕೆಲಸ ಮಾಡುತ್ತಿದ್ದೇನೆ. ಹವ್ಯಾಸ ಅಡಿಗೆ ಮಾಡುವುದು, ಕ್ರಿಕೆಟ್ ಆಡುವುದು ಕ್ರೈಂ ಇನ್ವೆಷ್ಟಿಗೇಷನ್ ನಾವೆಲ್ ಗಳನ್ನ ಓದುವುದು.

Read More
ಟೆಸ್ಟ್ ಪಂದ್ಯಕ್ಕಾಗಿ ಅಭ್ಯಾಸ ಆರಂಭಿಸಿದ ಟೀಂ ಇಂಡಿಯಾ
ಟೆಸ್ಟ್ ಪಂದ್ಯಕ್ಕಾಗಿ ಅಭ್ಯಾಸ ಆರಂಭಿಸಿದ ಟೀಂ ಇಂಡಿಯಾ
ವಿಧಾನಸೌಧದ ಮೆಟ್ಟಿಲುಗಳಿಗೆ ಸಿಎಂ ಡಿಕೆಶಿಯಿಂದ ದೀರ್ಘದಂಡ ನಮಸ್ಕಾರ
ವಿಧಾನಸೌಧದ ಮೆಟ್ಟಿಲುಗಳಿಗೆ ಸಿಎಂ ಡಿಕೆಶಿಯಿಂದ ದೀರ್ಘದಂಡ ನಮಸ್ಕಾರ
ಮುಂದಿನ ಪೀಳಿಗೆ ಕೂಡ ಡಿಕೆಶಿ ಸಾಧನೆ ಬಗ್ಗೆ ಮಾತಾಡುವಂತೆ ಕೆಲಸ ಆಗಲಿ: ರಮೇಶ್
ಮುಂದಿನ ಪೀಳಿಗೆ ಕೂಡ ಡಿಕೆಶಿ ಸಾಧನೆ ಬಗ್ಗೆ ಮಾತಾಡುವಂತೆ ಕೆಲಸ ಆಗಲಿ: ರಮೇಶ್
ಡಿಕೆ ಶಿವಕುಮಾರ್ ಪದಗ್ರಹಣದ ಬಗ್ಗೆ ಶಿವರಾಜ್ ಕುಮಾರ್ ಮಾತು: ವಿಡಿಯೋ
ಡಿಕೆ ಶಿವಕುಮಾರ್ ಪದಗ್ರಹಣದ ಬಗ್ಗೆ ಶಿವರಾಜ್ ಕುಮಾರ್ ಮಾತು: ವಿಡಿಯೋ
ಸಚಿವರಾಗಿ ಪ್ರಮಾಣದ ಬೆನ್ನಲ್ಲೇ ತಂದೆ ಸಿದ್ದರಾಮಯ್ಯ ಆಶೀರ್ವಾದ ಪಡೆದ ಯತೀಂದ್ರ
ಸಚಿವರಾಗಿ ಪ್ರಮಾಣದ ಬೆನ್ನಲ್ಲೇ ತಂದೆ ಸಿದ್ದರಾಮಯ್ಯ ಆಶೀರ್ವಾದ ಪಡೆದ ಯತೀಂದ್ರ
ಡಿಕೆ ಶಿವಕುಮಾರ್ ಸಿಎಂ ಆಗಿದ್ದಕ್ಕೆ ತುಂಬಾ ಖುಷಿ ಆಗುತ್ತಿದೆ: ನಟಿ ರಮ್ಯಾ
ಡಿಕೆ ಶಿವಕುಮಾರ್ ಸಿಎಂ ಆಗಿದ್ದಕ್ಕೆ ತುಂಬಾ ಖುಷಿ ಆಗುತ್ತಿದೆ: ನಟಿ ರಮ್ಯಾ
ಡಿಕೆಶಿ ಪದಗ್ರಹಣದ ಬೆನ್ನಲ್ಲೇ ವಿಧಾನಸೌಧದಲ್ಲಿ ಬದಲಾದ ಸಿಎಂ ಕಚೇರಿ ನಾಮಫಲಕ
ಡಿಕೆಶಿ ಪದಗ್ರಹಣದ ಬೆನ್ನಲ್ಲೇ ವಿಧಾನಸೌಧದಲ್ಲಿ ಬದಲಾದ ಸಿಎಂ ಕಚೇರಿ ನಾಮಫಲಕ
ಡಿಸಿಎಂ ಆಗಿ ಪರಮೇಶ್ವರ್ ಪ್ರಮಾಣವಚನ, ಇಲ್ಲಿದೆ ಇವರ ರಾಜಕೀಯ ಜರ್ನಿ
ಡಿಸಿಎಂ ಆಗಿ ಪರಮೇಶ್ವರ್ ಪ್ರಮಾಣವಚನ, ಇಲ್ಲಿದೆ ಇವರ ರಾಜಕೀಯ ಜರ್ನಿ
ಸಂವಿಧಾನ ಹಿಡಿದು, ಅಜ್ಜಯ್ಯನ ಹೆಸರಲ್ಲಿ ಪ್ರಮಾಣವಚನ ಸ್ವೀಕರಿಸಿದ ಡಿಕೆಶಿ
ಸಂವಿಧಾನ ಹಿಡಿದು, ಅಜ್ಜಯ್ಯನ ಹೆಸರಲ್ಲಿ ಪ್ರಮಾಣವಚನ ಸ್ವೀಕರಿಸಿದ ಡಿಕೆಶಿ
ಕಾರಿನಲ್ಲಿ ಕುಳಿತೇ ಅಭಿಮಾನಿಗಳಿಗೆ ಫ್ಲೈಯಿಂಗ್ ಕಿಸ್ ಕೊಟ್ಟ ರಾಹುಲ್ ಗಾಂಧಿ
ಕಾರಿನಲ್ಲಿ ಕುಳಿತೇ ಅಭಿಮಾನಿಗಳಿಗೆ ಫ್ಲೈಯಿಂಗ್ ಕಿಸ್ ಕೊಟ್ಟ ರಾಹುಲ್ ಗಾಂಧಿ