AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Chamarajanagar Rains: ಚಾಮರಾಜನಗರದಲ್ಲಿ ಭಾರಿ ಮಳೆ; ನೀರಿನೊಂದಿಗೆ ಮನೆಯೊಳಕ್ಕೆ ನುಗ್ಗಿದ ಹಾವು, ಚೇಳು!

ಚಾಮರಾಜನಗರ ಜಿಲ್ಲೆಯ ಹಲವೆಡೆ ಮಂಗಳವಾರ ಭಾರಿ ಮಳೆಯಾಗಿದೆ. ಮಳೆಯ ಅಬ್ಬರಕ್ಕೆ ಜನಜೀವನ ಅಸ್ತವ್ಯಸ್ತಗೊಂಡಿದೆ. ಸುಮಾರು 2 ತಾಸು ನಿರಂತರ ಸುರಿದ ಮಳೆಗೆ ಕೂಡ್ಲೂರು ಪಂಚಾಯ್ತಿಯ ವಿದ್ಯಾನಗರದ ತಗ್ಗು ಪ್ರದೇಶದಲ್ಲಿ ನೀರು ನಿಂತು ಹಾವು ಚೇಳುಗಳು ಮನೆ ಒಳಕ್ಕೆ ನುಗ್ಗಿದ ಪರಿಣಾಮ ಸ್ಥಳೀಯ ನಿವಾಸಿಗಳು ಭಯ ಭೀತರಾದರು.

Chamarajanagar Rains: ಚಾಮರಾಜನಗರದಲ್ಲಿ ಭಾರಿ ಮಳೆ; ನೀರಿನೊಂದಿಗೆ ಮನೆಯೊಳಕ್ಕೆ ನುಗ್ಗಿದ ಹಾವು, ಚೇಳು!
ಚಾಮರಾಜನಗರದಲ್ಲಿ ಭಾರಿ ಮಳೆ; ನೀರಿನೊಂದಿಗೆ ಮನೆಯೊಳಕ್ಕೆ ನುಗ್ಗಿದ ಹಾವು, ಚೇಳು!
Follow us
ಸೂರಜ್ ಪ್ರಸಾದ್ ಎಸ್.ಎನ್
| Updated By: Ganapathi Sharma

Updated on: May 22, 2024 | 9:09 AM

ಚಾಮರಾಜನಗರ, ಮೇ 22: ಗಡಿನಾಡು ಚಾಮರಾಜನಗರದಲ್ಲಿ (Chamarajanagar) ಮಂಗಳವಾರ ಭಾರಿ ಮಳೆಯಾಗಿದೆ. ನಿರಂತರವಾಗಿ ಸುರಿದ ಭಾರಿ ಮಳೆಗೆ (Rain) ಗುಂಡ್ಲುಪೇಟೆ ತಾಲೂಕಿನ ಮಂಚಹಳ್ಳಿ ಗ್ರಾಮದಲ್ಲಿ ಸಿದ್ದಶೆಟ್ಟಿ ಎಂಬವರಿಗೆ ಸೇರಿದ ಮನೆಗೋಡೆ ಕುಸಿತವಾಗಿದೆ. ಅದೃಷ್ಟವಶಾತ್​ ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ. ಮತ್ತೊಂದೆಡೆ, ರಾತ್ರಿ ಸುರಿದ ಭಾರಿ ಮಳೆಗೆ ಜಮೀನೆಲ್ಲಾ ಕೆರೆಯಂತಾಗಿದ್ದು, ರೈತರು ಕಂಗಾಲಾಗಿದ್ದಾರೆ.

ಈ ವರ್ಷ ಪೂರ್ವ ಮುಂಗಾರು ಮಳೆ ಬೀಳುತ್ತಿದ್ದು ಆರಂಭದಲ್ಲಿ ರೈತರ ಮೊಗದಲ್ಲಿ ಮಂದಹಾಸ ಮೂಡಿಸಿತ್ತು. ಆದರೆ ಆ ಸಂತಸ ಹೆಚ್ಚಿನ ದಿನ ಇರಲೇ ಇಲ್ಲ. ವರುಣನ ರುದ್ರ ನರ್ತನಕ್ಕೆ ಗಡಿ ನಾಡ ಜನರು ಹೈರಾಣಾಗಿ ಹೋಗಿದ್ದಾರೆ. ತಡ ರಾತ್ರಿ ಸುರಿದ ಭಾರಿ ಮಳೆಗೆ ಜಮೀನೆಲ್ಲಾ ಕೆರೆಯಂತಾಗಿದೆ. ಬೆಳೆಗಳು ಮಳೆಯ ನೀರಿನಲ್ಲಿ ಮುಳುಗಿ ಹೋಗಿದ್ದು ರೈತರು ಕಣ್ಣೀರಲ್ಲಿ ಕೈ ತೊಳೆಯುವ ಪರಿಸ್ಥಿತಿ ಈಗ ಎದುರಾಗಿದೆ.

ಚಾಮರಾಜನಗರ ಹಾಗೂ ಸುತ್ತಮುತ್ತ ಭಾರಿ ಮಳೆಯಾಗಿದೆ. 2 ಗಂಟೆಗೂ ಹೆಚ್ಚು ಜಾಲ ನಿರಂತರ ಸುರಿದ ಮಳೆಗೆ ಕೂಡ್ಲೂರು ಪಂಚಾಯ್ತಿಯ ವಿದ್ಯಾನಗರದ ತಗ್ಗು ಪ್ರದೇಶದಲ್ಲಿ ನೀರು ನಿಂತು ಹಾವು ಚೇಳುಗಳು ಮನೆ ಒಳಕ್ಕೆ ನುಗ್ಗಿದ ಪರಿಣಾಮ ಸ್ಥಳೀಯ ನಿವಾಸಿಗಳು ಭಯ ಭೀತರಾಗಿದ್ದಾರೆ. ಪ್ರತಿ ಬಾರಿ ಮಳೆ ಬಂದಾಗಲು ಇದೇ ರೀತಿ ಸಮಸ್ಯೆ ಆಗುತ್ತಿದ್ದು ಈ ಸಮಸ್ಯೆಗೆ ಅಧಿಕಾರಿಗಳೇ ಕಾರಣವೆಂದು ನಿವಾಸಿಗಳು ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ. ಮಳೆಯಿಂದ ಇಷ್ಟೆಲ್ಲ ಅವಾಂತರಗಳು ಸಂಭವಿಸಿದರೂ ಯಾವೊಬ್ಬ ಜನ ಪ್ರತಿನಿಧಿಗಳು ಬಾರದೆ ಇರುವುದು ನಿರ್ಲ್ಷ್ಯಕ್ಕೆ ಹಿಡಿದ ಕೈಗನ್ನಡಿಯಾಗಿದೆ.

ಇದನ್ನೂ ಓದಿ: ಕೊಡಗು, ಬೆಂಗಳೂರು, ಕರಾವಳಿ ಜಿಲ್ಲೆಗಳಲ್ಲಿ ಮೇ 28ರವರೆಗೂ ಮಳೆ

ಪೂರ್ವ ಮುಂಗಾರಿಗೆ ಗಡಿ ನಾಡ ಜನತೆ ತತ್ತರಿಸಿ ಹೋಗಿದ್ದು ಮುಂಬರುವ ಮಹಾ ಮಳೆ ಮತ್ತೆ ಏನೆಲ್ಲ ಅವಾಂತರಗಳನ್ನು ಸೃಷ್ಟಿ ಮಾಡುತ್ತದೆಂಬ ಭಯ ಜನತೆಯಲ್ಲಿ ಕಾಡುತ್ತಿದೆ. ಆದಷ್ಟು ಬೇಗ ಜಿಲ್ಲಾಡಳಿತ ಮಳೆಗಾಲವನ್ನು ಎದುರಿಸಲು ಸಜ್ಜಾಗಬೇಕಿದೆ.

ರಾಜ್ಯದ ಇತರೆ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

ಆರ್​ಸಿಬಿ ಫ್ಯಾನ್ಸ್ ಕಾಲ್ತುಳಿತ: ಚಂದನ್​ ಶೆಟ್ಟಿಗೂ ಪೊಲೀಸರ ಲಾಠಿ ಏಟು
ಆರ್​ಸಿಬಿ ಫ್ಯಾನ್ಸ್ ಕಾಲ್ತುಳಿತ: ಚಂದನ್​ ಶೆಟ್ಟಿಗೂ ಪೊಲೀಸರ ಲಾಠಿ ಏಟು
ವಿಯೆಟ್ನಾಂನ ಬೈಕ್ ಅಪಘಾತದಲ್ಲಿ 21 ವರ್ಷದ ಭಾರತೀಯ ವಿದ್ಯಾರ್ಥಿ ಸಾವು
ವಿಯೆಟ್ನಾಂನ ಬೈಕ್ ಅಪಘಾತದಲ್ಲಿ 21 ವರ್ಷದ ಭಾರತೀಯ ವಿದ್ಯಾರ್ಥಿ ಸಾವು
ಆಟೋಚಾಲಕನಿಗೆ ತನ್ನ ಫೋನ್ ಕಳುವು ಗೊತ್ತಾಗಿದ್ದು ಕಳ್ಳನನ್ನು ಹಿಡಿದ ನಂತರ!
ಆಟೋಚಾಲಕನಿಗೆ ತನ್ನ ಫೋನ್ ಕಳುವು ಗೊತ್ತಾಗಿದ್ದು ಕಳ್ಳನನ್ನು ಹಿಡಿದ ನಂತರ!
ಕಾಲ್ತುಳಿತದ ನಡುವೆ ನೂರರು ಮೊಬೈಲ್‌ ಎಗರಿಸಿದ ಕಳ್ಳರು...!
ಕಾಲ್ತುಳಿತದ ನಡುವೆ ನೂರರು ಮೊಬೈಲ್‌ ಎಗರಿಸಿದ ಕಳ್ಳರು...!
ಉಚಿತ ಪಾಸ್​ಗಳನ್ನು ವಿತರಿಸಿದ್ದಕ್ಕೆ ಕಾಲ್ತುಳಿತದ ಘಟನೆ ಸಂಭವಿಸಿದೆ: ವಕೀಲ
ಉಚಿತ ಪಾಸ್​ಗಳನ್ನು ವಿತರಿಸಿದ್ದಕ್ಕೆ ಕಾಲ್ತುಳಿತದ ಘಟನೆ ಸಂಭವಿಸಿದೆ: ವಕೀಲ
ಎರಡೆರಡು ಕಡೆ ಸತ್ಕಾರ ಸಮಾರಂಭ ಏರ್ಪಡಿಸುವ ಅಗತ್ಯವೇನಿತ್ತು? ಚಲವಾದಿ
ಎರಡೆರಡು ಕಡೆ ಸತ್ಕಾರ ಸಮಾರಂಭ ಏರ್ಪಡಿಸುವ ಅಗತ್ಯವೇನಿತ್ತು? ಚಲವಾದಿ
ತಮ್ಮ ಮನೆಯಲ್ಲಿ ಸಿಂಧೂರ ಸಸಿ ನೆಟ್ಟ ಪ್ರಧಾನಿ ಮೋದಿ; ಏನಿದರ ವಿಶೇಷತೆ?
ತಮ್ಮ ಮನೆಯಲ್ಲಿ ಸಿಂಧೂರ ಸಸಿ ನೆಟ್ಟ ಪ್ರಧಾನಿ ಮೋದಿ; ಏನಿದರ ವಿಶೇಷತೆ?
ಅರ್​ಸಿಬಿ ಆಟಗಾರರ ವಿಕ್ಟರಿ ಪರೇಡ್ ನೋಡಲು ಅಕ್ಷತಾರನ್ನು ಕರೆತಂದಿದ್ದ ಪತಿ
ಅರ್​ಸಿಬಿ ಆಟಗಾರರ ವಿಕ್ಟರಿ ಪರೇಡ್ ನೋಡಲು ಅಕ್ಷತಾರನ್ನು ಕರೆತಂದಿದ್ದ ಪತಿ
ಆರ್​ಸಿಬಿ ವಿಜಯೋತ್ಸವದಲ್ಲಿ ಕಾಲ್ತುಳಿತ: ಚಂದನ್ ಶೆಟ್ಟಿ ಹೇಳಿದ್ದೇನು?
ಆರ್​ಸಿಬಿ ವಿಜಯೋತ್ಸವದಲ್ಲಿ ಕಾಲ್ತುಳಿತ: ಚಂದನ್ ಶೆಟ್ಟಿ ಹೇಳಿದ್ದೇನು?
ಸರ್ಕಾರದ ತಪ್ಪಿನಿಂದಾಗಿ ಅನೇಕ ಜನ ಪ್ರಾಣ ಕಳೆದುಕೊಂಡರು: ಹಿರಿಯ ನಾಗರಿಕ
ಸರ್ಕಾರದ ತಪ್ಪಿನಿಂದಾಗಿ ಅನೇಕ ಜನ ಪ್ರಾಣ ಕಳೆದುಕೊಂಡರು: ಹಿರಿಯ ನಾಗರಿಕ