ಕಾವೇರಿ ಕೊಳ್ಳದಲ್ಲಿ ಉತ್ತಮ ಮಳೆ; ಚಾಮರಾಜನಗರದ 12 ಗ್ರಾಮಗಳಿಗೆ ಪ್ರವಾಹ ಭೀತಿ

ಕಾವೇರಿ ಕೊಳ್ಳದಲ್ಲಿ ಉತ್ತಮ ಮಳೆ ಹಿನ್ನಲೆ ಕಾವೇರಿ ಜಲಾನಯನ ಪ್ರದೇಶಗಳಲ್ಲಿ ಈಗ ಆತಂಕ ಮನೆ ಮಾಡಿದೆ. ಅದರಲ್ಲೂ ಕೊಳ್ಳೇಗಾಲ ತಾಲೂಕಿನ 12 ಗ್ರಾಮಗಳು ಪ್ರವಾಹದ ಭೀತಿಯಲ್ಲಿದ್ದು, ಮುಂಜಾಗ್ರತ ಕ್ರಮ ಕೈಗೊಳ್ಳದ ಜಿಲ್ಲಾಡಳಿತ ವಿರುದ್ದ ಗ್ರಾಮಸ್ಥರು ಹಿಡಿ ಶಾಪ ಹಾಕುತ್ತಿದ್ದಾರೆ. ಈ ಕುರಿತಾದ ಒಂದು ವರದಿ ಇಲ್ಲಿದೆ.

ಕಾವೇರಿ ಕೊಳ್ಳದಲ್ಲಿ ಉತ್ತಮ ಮಳೆ; ಚಾಮರಾಜನಗರದ 12 ಗ್ರಾಮಗಳಿಗೆ ಪ್ರವಾಹ ಭೀತಿ
ಕಾವೇರಿ ಕೊಳ್ಳದಲ್ಲಿ ಉತ್ತಮ ಮಳೆ; ಚಾಮರಾಜನಗರದ 12 ಗ್ರಾಮಗಳಿಗೆ ಪ್ರವಾಹ ಭೀತಿ
Edited By:

Updated on: Jul 23, 2024 | 7:17 PM

ಚಾಮರಾಜನಗರ, ಜು.23: ಚಾಮರಾಜನಗರ ಜಿಲ್ಲೆ ಕೊಳ್ಳೇಗಾಲ(Kollegala) ತಾಲೂಕಿನ ದಾಸನಪುರ ಗ್ರಾಮದಲ್ಲಿ ಅಪಾಯದ ಮಟ್ಟ ಮೀರಿ ಕಾವೇರಿ ನದಿ ಹರಿಯುತ್ತಿದೆ. ಈ ಹಿನ್ನಲೆ ನದಿಯ ಪಕ್ಕದಲ್ಲೇ ಪೊಲೀಸರು ಬ್ಯಾರಿಕೇಡ್ ಅಳವಡಿಸಿದ್ದಾರೆ. ಕಳೆದ ವರ್ಷ ಮಳೆಯಿಲ್ಲದೆ ಭೀಕರ ಬರಗಾಲವಿತ್ತು. ಆದ್ರೆ, ಈ ವರ್ಷ ಅತಿಯಾದ ಮಳೆ ಹಿನ್ನಲೆ ಕಬಿನಿ ಹಾಗೂ ಕನ್ನಂಬಾಡಿ ಕಟ್ಟೆಯಿಂದ ಔಟ್ ಫ್ಲೋ ಹೆಚ್ಚಳವಾಗಿದೆ. ಇದರಿಂದ ಕೊಳ್ಳೇಗಾಲ ತಾಲೂಕಿನ 12 ಗ್ರಾಮಗಳು ಅಪಾಯದ ಅಂಚಿಗೆ ತಲುಪಿದೆ.

ಮೂರು ವರ್ಷದ ಹಿಂದೆ 12 ಗ್ರಾಮಗಳು ಸಂಪೂರ್ಣ ಜಲಾವೃತ

ಇನ್ನು ಕಳೆದ ಮೂರು ವರ್ಷದ ಹಿಂದೆ ಅತಿಯಾದ ಮಳೆಯಿಂದ ದಾಸನಪುರ ಗ್ರಾಮ ಸೇರಿದಂತೆ 12 ಗ್ರಾಮಗಳು ಸಂಪೂರ್ಣ ಜಲಾವೃತವಾಗಿತ್ತು. ಅಪಾರ ಪ್ರಮಾಣದ ಆಸ್ತಿ ಪಾಸ್ತಿ ನಷ್ಟವಾಗಿತ್ತು. ಜೊತೆಗೆ ಬೆಳೆದ ಬೆಳೆಗಳೆಲ್ಲವೂ ನೀರು ಪಾಲಾಗಿತ್ತು. ಈ ಹಿನ್ನಲೆ ಗ್ರಾಮಕ್ಕೆ ನೀರು ನುಗ್ಗದಂತೆ ತಡೆಗೋಡೆ ನಿರ್ಮಾಣ ಮಾಡಬೇಕಿತ್ತು. ತಡೆಗೋಡೆ ನಿರ್ಮಾಣ ಮಾಡಿದ್ರೆ ಗ್ರಾಮಗಳಿಗೆ ನೀರು ನುಗ್ಗುವುದಿಲ್ಲವೆಂದು ಸಾಭೀತಾಗಿತ್ತು.

ಇದನ್ನೂ ಓದಿ:ಮೈದುಂಬಿ ಹರಿಯುತ್ತಿವೆ ಬೆಳಗಾವಿಯ ಸಪ್ತನದಿಗಳು: ಪ್ರವಾಹ ಭೀತಿ ಪ್ರದೇಶಗಳಿಗೆ ಡಿಸಿ ನೇತೃತ್ವದ ತಂಡ ಭೇಟಿ

ಜಿಲ್ಲಾಡಳಿತ ನಿರ್ಲಕ್ಷ್ಯ

ಆದ್ರೆ, 12 ಗ್ರಾಮಸ್ಥರು ಮನವಿ ಮಾಡಿದರೂ ತಡೆಗೋಡೆ ಮಾತ್ರ ನಿರ್ಮಾಣ ಮಾಡಿಲ್ಲ. ಇದರಿಂದ ಪ್ರತಿ ವರ್ಷ ಮಳೆಗಾಲದಲ್ಲಿ 12 ಗ್ರಾಮಸ್ದರು ಆತಂಕದಲ್ಲೇ ಕಾಲ ಕಳೆಯುವಂತಾಗಿದೆ. ಅದೇನೆ ಇರಲಿ, ಪ್ರತಿ ವರ್ಷ ಮಳೆಗಾಲದಲ್ಲಿ ಕೊಳ್ಳೇಗಾಲ ತಾಲೂಕಿನ 12 ಗ್ರಾಮಸ್ದರು ಆತಂಕದಲ್ಲೇ ಕಾಲ ಕಳೆಯುವಂತಾಗಿದ್ದು, ತಡೆಗೋಡೆ ನಿರ್ಮಿಸದೆ ಜಿಲ್ಲಾಡಳಿತ ನಿರ್ಲಕ್ಷ್ಯ ವಹಿಸಿರುವುದು ನಿಜಕ್ಕೂ ದುರಃತವೇ ಸರಿ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Suraj Prasad SN

ಸೂರಜ್ ಪ್ರಸಾದ್ ಎಸ್.ಎನ್ ಆದ ನಾನು ಹುಟ್ಟಿದ್ದು ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿಯಲ್ಲಿ. ಬೆಳೆದಿದ್ದು ದಾವಣಗರೆ ಜಿಲ್ಲೆ ನ್ಯಾಮತಿ ತಾಲೂಕಿನಲ್ಲಿ. ಶಿವಮೊಗ್ಗದ ಸಹ್ಯಾದ್ರಿ ಕಾಲೇಜ್ ನಲ್ಲಿ ಪತ್ರಿಕೋದ್ಯಮದಲ್ಲಿ ಪದವಿಪೂರ್ವ ಶಿಕ್ಷಣ ಪಡೆದಿದ್ದು 2014ರಿಂದ ನನ್ನ ಎಲೆಕ್ಟ್ರಾನಿಕ್ ಮಾದ್ಯಮದ ವೃತ್ತಿ ಜೀವನವನ್ನ ಬೆಂಗಳೂರಿನಲ್ಲಿ ಕ್ರೈಂ ಬೀಟ್ ವರದಿಗಾರನಾಗಿ ಆರಂಭಿಸಿದ್ದು ಬೆಂಗಳೂರಿನಲ್ಲಿ 8 ವರ್ಷಗಳ ಕ್ರೈಂ ವರದಿಗಾರನಾಗಿ ಸೇವೆ ಸಲ್ಲಿಸಿ. ನಾಲ್ಕು ಸಂಸ್ಥೆಯಲ್ಲಿ ಕ್ರೈಂ ರಿಪೋರ್ಟರ್ ಹಾಗೂ ಕ್ರೈಂ ಇನ್ವೆಸ್ಟಿಗೇಟಿವ್ ವರದಿಗಾರನಾಗಿ ಹಾಗೂ ಸ್ಟಿಂಗ್ ಅಪರೇಷನ್ ಗಳನ್ನ ಮಾಡಿದ್ದೇನೆ. ಗೌರಿ ಲಂಕೇಶ್ ಕೊಲೆ ಕೇಸನ್ನ ರಾಜ್ಯದಲ್ಲೇ ಮೊದಲು ಬ್ರೇಕ್ ಮಾಡಿ ಈ ಹಿಂದಿನ ಸಂಸ್ಥೆಯಿಂದ ಪ್ರಶಂಸೆ ಪಡೆದಿರುತ್ನೇನೆ2019 ರಲ್ಲಿ ಪಿಎಸ್ಐ ಅಕ್ರಮದ ಸ್ಟಿಂಗ್ ಆಪರೇಷನ್ ಹಾಗೂ ಬೆಂಗಳೂರು ಸಿಂಥಟಿಕ್ ಡ್ರಗ್ ಮಾಫಿಯಾದ ಸ್ಟಿಂಗ್ ಆಪರೇಷನ್ ಮಾಡಿದ್ದು. ಕಳೆದ 10 ವರ್ಷಗಳಿಂದ ಸಕ್ರೀಯವಾಗಿ ಕಾರ್ಯ ನಿರ್ವಹಿಸುತ್ತಿದ್ದೇನೆ. ಟಿವಿ9 ಸಂಸ್ಥೆಗೆ ಮಂಡ್ಯ ಜಿಲ್ಲಾ ವರದಿಗಾರನಾಗಿ ಕೆಲಸ ಮಾಡಿ ಬಳಿಕ ಚಾಮರಾಜನಗರಕ್ಕೆ ವರ್ಗಾವಣೆಯಾಗಿ ಈಗ ಪ್ರಸ್ಥುತ ಚಾಮರಾಜನಗರ ಜಿಲ್ಲಾ ವರದಿಗಾರನಾಗಿ ಕೆಲಸ ಮಾಡುತ್ತಿದ್ದೇನೆ. ಹವ್ಯಾಸ ಅಡಿಗೆ ಮಾಡುವುದು, ಕ್ರಿಕೆಟ್ ಆಡುವುದು ಕ್ರೈಂ ಇನ್ವೆಷ್ಟಿಗೇಷನ್ ನಾವೆಲ್ ಗಳನ್ನ ಓದುವುದು.

Read More
Follow Us