Sign In

By signing in or creating an account, you agree with Associated Broadcasting Company's Terms & Conditions and Privacy Policy.

ಎಗ್ಗಿಲ್ಲದೇ ನಡೀತಿದೆ ಹಸುಗಳ ಸಾಗಾಟ, ದಂಧೆ ಕಂಡೂ ಕಣ್ಮುಚ್ಚಿ ಕುಳಿತಿದೆಯಾ ಖಾಕಿ?

ಚಾಮರಾಜನಗರ: ಅಲ್ಲಿ ಹೊರರಾಜ್ಯಗಳಿಗೆ ಅಕ್ರಮವಾಗಿ ಗೋವುಗಳನ್ನು ಸಾಗಿಸಲಾಗ್ತಿದೆ.. ಕ್ಯಾಂಟರ್​ಗಳಲ್ಲಿ ತುಂಬಿಕೊಂಡು ಗೋ ಸಾಗಾಟದ ದಂಧೆ ಜೋರಾಗಿದೆ. ಇಷ್ಟೆಲ್ಲಾ ಆಗ್ತಿದ್ರೂ ಪೊಲೀಸ್ರು ಸೈಲೆಂಟ್ ಆಗಿದ್ದು, ಸ್ಥಳೀಯರ ಆಕ್ರೋಶಕ್ಕೆ ಕಾರಣವಾಗಿದೆ. ನಿರಂತರವಾಗಿ ಕಸಾಯಿಖಾನೆಗಳಿಗೆ ಹಸುಗಳ ಸಾಗಾಟ! ಚಾಮರಾಜನಗರ ಜಿಲ್ಲೆಯ ಗುಂಡ್ಲುಪೇಟೆ ಕೇರಳ ಹಾಗೂ ತಮಿಳುನಾಡು ಗಡಿಗೆ ಹೊಂದಿಕೊಂಡಿದೆ. ಇಲ್ಲಿಂದ ಕೇರಳ ಹಾಗೂ ತಮಿಳುನಾಡು ಕಸಾಯಿಖಾನೆಗಳಿಗೆ ಹಸುಗಳನ್ನು ಸಾಗಿಸುವ ದಂಧೆ ಜೋರಾಗಿದೆ. ಚಾಮರಾಜನಗರ ಜಿಲ್ಲೆಯ ವಿವಿಧೆಡೆ ನಡೆಯೋ ಸಂತೆಗಳಲ್ಲಿ ದನಕರುಗಳನ್ನು ಖರೀದಿಸಿ, ಅಣ್ಣೂರು ಕೇರಿ ಬಳಿ ಸ್ಟಾಕ್ ಮಾಡ್ಲಾಗುತ್ತೆ. ಬಳಿಕ ಕ್ಯಾಂಟರ್​ಗಳಲ್ಲಿ […]

ಎಗ್ಗಿಲ್ಲದೇ ನಡೀತಿದೆ ಹಸುಗಳ ಸಾಗಾಟ, ದಂಧೆ ಕಂಡೂ ಕಣ್ಮುಚ್ಚಿ ಕುಳಿತಿದೆಯಾ ಖಾಕಿ?
Follow us
ಸಾಧು ಶ್ರೀನಾಥ್​
|

Updated on:Feb 01, 2020 | 3:02 PM

ಚಾಮರಾಜನಗರ: ಅಲ್ಲಿ ಹೊರರಾಜ್ಯಗಳಿಗೆ ಅಕ್ರಮವಾಗಿ ಗೋವುಗಳನ್ನು ಸಾಗಿಸಲಾಗ್ತಿದೆ.. ಕ್ಯಾಂಟರ್​ಗಳಲ್ಲಿ ತುಂಬಿಕೊಂಡು ಗೋ ಸಾಗಾಟದ ದಂಧೆ ಜೋರಾಗಿದೆ. ಇಷ್ಟೆಲ್ಲಾ ಆಗ್ತಿದ್ರೂ ಪೊಲೀಸ್ರು ಸೈಲೆಂಟ್ ಆಗಿದ್ದು, ಸ್ಥಳೀಯರ ಆಕ್ರೋಶಕ್ಕೆ ಕಾರಣವಾಗಿದೆ.

ನಿರಂತರವಾಗಿ ಕಸಾಯಿಖಾನೆಗಳಿಗೆ ಹಸುಗಳ ಸಾಗಾಟ! ಚಾಮರಾಜನಗರ ಜಿಲ್ಲೆಯ ಗುಂಡ್ಲುಪೇಟೆ ಕೇರಳ ಹಾಗೂ ತಮಿಳುನಾಡು ಗಡಿಗೆ ಹೊಂದಿಕೊಂಡಿದೆ. ಇಲ್ಲಿಂದ ಕೇರಳ ಹಾಗೂ ತಮಿಳುನಾಡು ಕಸಾಯಿಖಾನೆಗಳಿಗೆ ಹಸುಗಳನ್ನು ಸಾಗಿಸುವ ದಂಧೆ ಜೋರಾಗಿದೆ. ಚಾಮರಾಜನಗರ ಜಿಲ್ಲೆಯ ವಿವಿಧೆಡೆ ನಡೆಯೋ ಸಂತೆಗಳಲ್ಲಿ ದನಕರುಗಳನ್ನು ಖರೀದಿಸಿ, ಅಣ್ಣೂರು ಕೇರಿ ಬಳಿ ಸ್ಟಾಕ್ ಮಾಡ್ಲಾಗುತ್ತೆ. ಬಳಿಕ ಕ್ಯಾಂಟರ್​ಗಳಲ್ಲಿ ತುಂಬಿ ನೆರೆ ರಾಜ್ಯಗಳ ಕಸಾಯಿಖಾನೆಗಳಿಗೆ ಸಾಗಿಸಲಾಗುತ್ತಿದೆ.

ಕ್ಯಾಂಟರ್​ಗಳು ಮೇಲ್ನೋಟಕ್ಕೆ ಗೂಡ್ಸ್ ವೆಹಿಕಲ್ಸ್​ಗಳಂತಿದ್ದು, ನೋಂದಣಿ ಸಂಖ್ಯೆಯನ್ನು ಮರೆ ಮಾಚಲಾಗಿರುತ್ತೆ. ಕೆಲವು ವಾಹನಗಳಿಗಂತೂ ನೋಂದಣಿ ಫಲಕವೇ ಇರುವುದಿಲ್ಲ. ಪ್ರತಿನಿತ್ಯ ನೂರಾರು ಗೋವುಗಳು ಕಸಾಯಿಖಾನೆಗೆ ಸಾಗಿಸಲಾಗಿತ್ತಿದ್ರೂ, ಸ್ಥಳೀಯ ಬಿಜೆಪಿ ಶಾಸಕ ನಿರಂಜನ್ ಕುಮಾರ್ ಮೌನವಹಿಸಿದ್ದಾರೆ. ಅಕ್ರಮಗಳಿಗೆ ಕಡಿವಾಣ ಹಾಕಬೇಕಾದ ಪೊಲೀಸ್ರು ಜಾಣ ಕುರುಡರಂತೆ ವರ್ತಿಸುತ್ತಿದ್ದಾರೆ. ಇದು ಸ್ಥಳೀಯರ ಆಕ್ರೋಶಕ್ಕೆ ಕಾರಣವಾಗಿದೆ.

ನಿತ್ಯ ಹಸುಗಳನ್ನು ಕಸಾಯಿಖಾನೆಗಳಿಗೆ ಸಾಗಿಸಲಾಗುತ್ತೆ.. ಇದಕ್ಕೆ ಸ್ಥಳೀಯ ಶಾಸಕ ನಿರಂಜನ್ ಕುಮಾರ್ ಹಾಗೂ ಪೊಲೀಸ್ರ ಬೆಂಬಲ ಇದೆ ಅಂತಾ ಸ್ಥಳೀಯರು ಆರೋಪಿಸಿದ್ದಾರೆ. ಈ ಬಗ್ಗೆ ಎಸ್​ಪಿ ಅವ್ರನ್ನು ಕೇಳಿದ್ರೆ, ಇಷ್ಟೆಲ್ಲಾ ನಡೀತಿರೋದು ನಮ್ಮ ಗಮನಕ್ಕೆ ಬಂದಿಲ್ಲ.

ಇನ್ನು ಮುಂದೆ ಗೋವುಗಳ ಅಕ್ರಮ ಸಾಗಾಣಿಕೆ ತಡೆಗಟ್ಟಲು ಎಲ್ಲಾ ಚೆಕ್ ಪೋಸ್ಟ್​ಗಳಲ್ಲೂ ತಪಾಸಣೆ ನಡೆಸಲು ಕ್ರಮ ವಹಿಸುವುದಾಗಿ ತಿಳಿಸಿದ್ದಾರೆ. ಒಟ್ನಲ್ಲಿ, ನಿತ್ಯ ಹಲವಾರು ಗೋವುಗಳು ಕಟುಕರ ಪಾಲಾಗುತ್ತಿವೆ. ರಾಷ್ಟ್ರೀಯ ಹೆದ್ದಾರಿಗಳ ಮೂಲಕವೇ ದನಕರುಗಳ ಸಾಗಣೆ ನಿರಂತರವಾಗಿ ನಡೆಯುತ್ತಿದೆ.

Published On - 2:53 pm, Sat, 1 February 20

ಪತಿ ಉಪೇಂದ್ರ ಅವರ ಮಿಮಿಕ್ರಿ ಮಾಡಿ ರಂಜಿಸಿದ ಪ್ರಿಯಾಂಕಾ ಉಪೇಂದ್ರ
ಪತಿ ಉಪೇಂದ್ರ ಅವರ ಮಿಮಿಕ್ರಿ ಮಾಡಿ ರಂಜಿಸಿದ ಪ್ರಿಯಾಂಕಾ ಉಪೇಂದ್ರ
ಅಬ್ಬಬ್ಬಾ.. ಚೈತ್ರಾ ವಾಸುದೇವನ್ ಮದುವೆ ಸೀರೆ ಬೆಲೆ ಬರೋಬ್ಬರಿ 2 ಲಕ್ಷ ರೂ!
ಅಬ್ಬಬ್ಬಾ.. ಚೈತ್ರಾ ವಾಸುದೇವನ್ ಮದುವೆ ಸೀರೆ ಬೆಲೆ ಬರೋಬ್ಬರಿ 2 ಲಕ್ಷ ರೂ!
ಕಾಪು ಹೊಸ ಮಾರಿಗುಡಿಗೆ ಪತ್ನಿ ಹೆಸರಲ್ಲಿ 9,99,999 ರೂ ಡಿಕೆಶಿ​ ದೇಣಿಗೆ
ಕಾಪು ಹೊಸ ಮಾರಿಗುಡಿಗೆ ಪತ್ನಿ ಹೆಸರಲ್ಲಿ 9,99,999 ರೂ ಡಿಕೆಶಿ​ ದೇಣಿಗೆ
ಹಾಲಮತ ಸಮಾಜದ ಕೈಯಲ್ಲಿರುವ ಅಧಿಕಾರ ಬಿಡಿಸಿಕೊಳ್ಳೋದು ಸುಲಭವಲ್ಲ: ಕೋಡಿಶ್ರೀ
ಹಾಲಮತ ಸಮಾಜದ ಕೈಯಲ್ಲಿರುವ ಅಧಿಕಾರ ಬಿಡಿಸಿಕೊಳ್ಳೋದು ಸುಲಭವಲ್ಲ: ಕೋಡಿಶ್ರೀ
ಕರ್ನಾಟಕದ ಬಗ್ಗೆ ಮಹತ್ವದ ಭವಿಷ್ಯ ನುಡಿದ ಕೋಡಿಮಠದ ಶ್ರೀಗಳು
ಕರ್ನಾಟಕದ ಬಗ್ಗೆ ಮಹತ್ವದ ಭವಿಷ್ಯ ನುಡಿದ ಕೋಡಿಮಠದ ಶ್ರೀಗಳು
ಎಲ್ಲಿಸ್ ಪೆರ್ರಿ ಸೂಪರ್​​ವುಮೆನ್ ಕ್ಯಾಚ್: ವಿಡಿಯೋ ವೈರಲ್
ಎಲ್ಲಿಸ್ ಪೆರ್ರಿ ಸೂಪರ್​​ವುಮೆನ್ ಕ್ಯಾಚ್: ವಿಡಿಯೋ ವೈರಲ್
ಯಾದಗಿರಿ: ಸುರಪುರ ಪಟ್ಟಣದಲ್ಲಿ ಒಂದೇ ರಾತ್ರಿಯಲ್ಲಿ 7 ಅಂಗಡಿಗಳ ಕಳ್ಳತನ
ಯಾದಗಿರಿ: ಸುರಪುರ ಪಟ್ಟಣದಲ್ಲಿ ಒಂದೇ ರಾತ್ರಿಯಲ್ಲಿ 7 ಅಂಗಡಿಗಳ ಕಳ್ಳತನ
ಕೊಪ್ಪಳದಲ್ಲಿ ಕಾರ್ಖಾನೆ ಆರಂಭಿಸುವುದು ಕೇಂದ್ರ ಸಂಬಂಧಿಸಿದ್ದಲ್ಲ: ಹೆಚ್​ಡಿಕೆ
ಕೊಪ್ಪಳದಲ್ಲಿ ಕಾರ್ಖಾನೆ ಆರಂಭಿಸುವುದು ಕೇಂದ್ರ ಸಂಬಂಧಿಸಿದ್ದಲ್ಲ: ಹೆಚ್​ಡಿಕೆ
ನಿರೂಪಕಿ ಚೈತ್ರಾ ವಾಸುದೇವನ್ ಎರಡನೇ ವಿವಾಹ, ಮಾಂಗಲ್ಯಧಾರಣೆ ವಿಡಿಯೋ
ನಿರೂಪಕಿ ಚೈತ್ರಾ ವಾಸುದೇವನ್ ಎರಡನೇ ವಿವಾಹ, ಮಾಂಗಲ್ಯಧಾರಣೆ ವಿಡಿಯೋ
ಸುಳ್ಳು ಹೇಳಿದರೆ ಪಾಪ ತಟ್ಟುತ್ತದೆಯೇ? ವಿಡಿಯೋ ನೋಡಿ
ಸುಳ್ಳು ಹೇಳಿದರೆ ಪಾಪ ತಟ್ಟುತ್ತದೆಯೇ? ವಿಡಿಯೋ ನೋಡಿ