ಚಾಮರಾಜನಗರ: ವರದಕ್ಷಿಣೆ ನೀಡಿಲ್ಲವೆಂದು ಮಾವನ ಮನೆ ಮುಂದೆ ನಿಲ್ಲಿಸಿದ್ದ 2 ಬೈಕ್​ಗೆ ಬೆಂಕಿ ಹಚ್ಚಿದ ಅಳಿಯ

ಚಾಮರಾಜನಗರ(Chamarajanagar)ದ ಗಾಳಿಪುರದ ಅಬ್ದುಲ್ ಕಲಾಂ ನಗರದಲ್ಲಿ ಮಾವ ವರದಕ್ಷಿಣೆ ಕೊಟ್ಟಿಲ್ಲ ಎಂಬ ಕಾರಣಕ್ಕೆ ಮನೆ ಮುಂದೆ ಪಾರ್ಕ್ ಮಾಡಿದ್ದ ಎರಡು ಬೈಕ್​ಗಳಿಗೆ ಅಳಿಯ ಬೆಂಕಿ ಹಚ್ಚಿದ ಘಟನೆ ನಡೆದಿದೆ. ಸದ್ಯ ಅಳಿಯನ ಆಟಾಟೋಪಕ್ಕೆ ತಕ್ಕ ಶಾಸ್ತಿ ಮಾಡುವಂತೆ ನೊಂದ ಕುಟುಂಬದವರು ಮನವಿ ಮಾಡಿದ್ದಾರೆ.

ಚಾಮರಾಜನಗರ: ವರದಕ್ಷಿಣೆ ನೀಡಿಲ್ಲವೆಂದು ಮಾವನ ಮನೆ ಮುಂದೆ ನಿಲ್ಲಿಸಿದ್ದ 2 ಬೈಕ್​ಗೆ ಬೆಂಕಿ ಹಚ್ಚಿದ ಅಳಿಯ
ವರದಕ್ಷಿಣೆ ನೀಡಿಲ್ಲವೆಂದು ಮಾವನ ಮನೆ ಮುಂದೆ ನಿಲ್ಲಿಸಿದ್ದ 2 ಬೈಕ್​ಗೆ ಬೆಂಕಿ ಹಚ್ಚಿದ ಅಳಿಯ
Follow us
| Updated By: ಕಿರಣ್ ಹನುಮಂತ್​ ಮಾದಾರ್

Updated on:Jun 20, 2024 | 5:29 PM

ಚಾಮರಾಜನಗರ, ಜೂ.20: ಮಾವ ವರದಕ್ಷಿಣೆ ಕೊಟ್ಟಿಲ್ಲ ಎಂಬ ಕಾರಣಕ್ಕೆ ಮನೆ ಮುಂದೆ ಪಾರ್ಕ್ ಮಾಡಿದ್ದ ಎರಡು ಬೈಕ್​ಗಳಿಗೆ ಅಳಿಯ ಬೆಂಕಿ ಹಚ್ಚಿದ ಘಟನೆ ಚಾಮರಾಜನಗರ(Chamarajanagar)ದ ಗಾಳಿಪುರದ ಅಬ್ದುಲ್ ಕಲಾಂ ನಗರದಲ್ಲಿ ನಡೆದಿದೆ. ಕಳೆದ ಏಳು ತಿಂಗಳ ಹಿಂದೆಯಷ್ಟೇ ಹತೀಜಾ ಖೂಬ್ರಳ ಜತೆ ಸಲ್ಮಾನ್ ಮೊಹಮ್ಮದ್ ಷರೀಫ್ ಎಂಬಾತ ಮದುವೆ ಆಗಿದ್ದ. ಇದಾದ ಬಳಿಕ ಹಣ ಹಾಗೂ ಚಿನ್ನಾಭರಣಕ್ಕೆ ಡಿಮ್ಯಾಂಡ್ ಮಾಡಿದ್ದ.

ಮಾವನ ಮನೆ ಮುಂದೆ ನಿಲ್ಲಿಸಿದ್ಥ ಬೈಕ್​ಗೆ ಬೆಂಕಿ

ವರದಕ್ಷಿಣೆ ನೀಡದ ಹಿನ್ನಲೆ ತಡರಾತ್ರಿ ಮಾವನ ಮನೆ ಮುಂದೆ ನಿಲ್ಲಿಸಿದ್ಥ ಎರಡು ಬೈಕ್​ಗೆ ಬೆಂಕಿ ಹಚ್ಚಿ ವಿಕೃತಿ ಮೆರೆದಿದ್ದಾನೆ. ಈ ಹಿನ್ನಲೆ ಅಳಿಯನಿಗೆ ಬುದ್ದಿವಾದ ಹೇಳಲು ಹೋದ ಅತ್ತೆಯ ಕೈಯನ್ನೂ ಮುರಿದು ಹಾಕಿದ್ದಾನೆ. ಮನೆಯ ಮುಂದೆ ನಿಂತಿದ್ದ ಬೈಕ್ ಧಗ ಧಗಿಸುವ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದೆ. ಈ ಹಿಂದೆಯೇ ಅಳಿಯನ ವಿರುದ್ದ ಚಾಮರಾಜನಗರ ಟೌನ್ ಠಾಣೆಯಲ್ಲಿ ದೂರು ನೀಡಿದ್ದರೂ ಪೊಲೀಸರು ವಿಚಾರಣೆ ನಡೆಸಿರಲಿಲ್ಲ. ಸದ್ಯ ಅಳಿಯನ ಆಟಾಟೋಪಕ್ಕೆ ತಕ್ಕ ಶಾಸ್ತಿ ಮಾಡುವಂತೆ ನೊಂದ ಕುಟುಂಬದವರು ಮನವಿ ಮಾಡಿದ್ದಾರೆ.

ಇದನ್ನೂ ಓದಿ:ವರದಕ್ಷಿಣೆ ತಗೊಂಡು ಬಾ, ಇಲ್ಲದಿದ್ದರೆ ತಮ್ಮನ ಜೊತೆ ಮಲಗು ಎಂದು ಪತ್ನಿಗೆ ಕಿರುಕುಳ ನೀಡುತ್ತಿದ್ದ ವ್ಯಕ್ತಿಯ ಬಂಧನ

ಚಿಕ್ಕಮಗಳೂರು ಜಿಲ್ಲೆಯಲ್ಲಿ ಮಿತಿಮೀರಿದ ಕಾಡಾನೆಗಳ ಹಾವಳಿ

ಚಿಕ್ಕಮಗಳೂರು: ಕಾಡಾನೆಗಳ ಹಾವಳಿ ಜಿಲ್ಲೆಯಲ್ಲಿ ಮಿತಿಮೀರಿದೆ. ಅದರಲ್ಲೂ ಕಳಸ ತಾಲೂಕಿನ ತನೋಡಿ, ಆಳಗೋಡು ಗ್ರಾಮದಲ್ಲಿ ಕಾಡಾನೆ ಉಪಟಳ ಹೆಚ್ಚಾಗಿದ್ದು, ಕಾಡಾನೆಗಳ ದಾಳಿಯಿಂದ ಅಪಾರ ಮೌಲ್ಯದ ಕಾಫಿ, ಅಡಕೆ, ಬಾಳೆ ನಾಶವಾಗಿದೆ. ಇನ್ನು ಕಾಡಾನೆ ದಾಳಿಗೆ ತೋಟಕ್ಕೆ ಹೋಗಲು ಗ್ರಾಮಸ್ಥರು ಹೆದರುತ್ತಿದ್ದಾರೆ. ಈ ಹಿನ್ನಲೆ ಅರಣ್ಯ ಇಲಾಖೆ ಹಾಗೂ ಜನಪ್ರತಿನಿಧಿಗಳ ವಿರುದ್ಧ ಗ್ರಾಮಸ್ಥರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 4:32 pm, Thu, 20 June 24

ತಾಜಾ ಸುದ್ದಿ
ಕೆಪಿಸಿಸಿ ಅಧ್ಯಕ್ಷ ಸ್ಥಾನ ಸಿಕ್ಕರೆ ರಾಜಣ್ಣ ಮಂತ್ರಿ ಸ್ಥಾನ ತ್ಯಜಿಸುತ್ತಾರೆ?
ಕೆಪಿಸಿಸಿ ಅಧ್ಯಕ್ಷ ಸ್ಥಾನ ಸಿಕ್ಕರೆ ರಾಜಣ್ಣ ಮಂತ್ರಿ ಸ್ಥಾನ ತ್ಯಜಿಸುತ್ತಾರೆ?
ಆ ಶ್ರೀ ಸ್ಥಾನ ಬಿಟ್ಟುಕೊಡ್ತಾರಾ? ಕೇಳಿ ನಾನೇ ಸ್ವಾಮೀಜಿ ಆಗ್ತೇನೆ: ರಾಜಣ್ಣ
ಆ ಶ್ರೀ ಸ್ಥಾನ ಬಿಟ್ಟುಕೊಡ್ತಾರಾ? ಕೇಳಿ ನಾನೇ ಸ್ವಾಮೀಜಿ ಆಗ್ತೇನೆ: ರಾಜಣ್ಣ
ಕೆಂಪೇಗೌಡರ ಜಯಂತಿಯಲ್ಲಿ ಹಾಸನ ಡಿಸಿ ಕಣ್ಣೀರು, ಕಾರಣವೇನು ಗೊತ್ತಾ?
ಕೆಂಪೇಗೌಡರ ಜಯಂತಿಯಲ್ಲಿ ಹಾಸನ ಡಿಸಿ ಕಣ್ಣೀರು, ಕಾರಣವೇನು ಗೊತ್ತಾ?
ಚಂದ್ರಶೇಖರ ಶ್ರೀಗಳು ನೀಡಿದ ಹೇಳಿಕೆಗೆ ಆರ್ ಅಶೋಕ ತಮ್ಮ ವ್ಯಾಖ್ಯಾನ ನೀಡಿದರು!
ಚಂದ್ರಶೇಖರ ಶ್ರೀಗಳು ನೀಡಿದ ಹೇಳಿಕೆಗೆ ಆರ್ ಅಶೋಕ ತಮ್ಮ ವ್ಯಾಖ್ಯಾನ ನೀಡಿದರು!
ದರ್ಶನ್ ಕಾಣಲು ಬಂದ ವಿಶೇಷ ಚೇತನ ಅಭಿಮಾನಿಯ ಮಾತು
ದರ್ಶನ್ ಕಾಣಲು ಬಂದ ವಿಶೇಷ ಚೇತನ ಅಭಿಮಾನಿಯ ಮಾತು
ಮಳೆಯಿಂದಾಗಿ ಯೂನಿಯನ್ ಬ್ಯಾಂಕ್ ಎಸಿಯೊಳಗೆ ಬಂದು ಅವಿತು ಕುಳಿತ ಮರಿ ಹೆಬ್ಬಾವು
ಮಳೆಯಿಂದಾಗಿ ಯೂನಿಯನ್ ಬ್ಯಾಂಕ್ ಎಸಿಯೊಳಗೆ ಬಂದು ಅವಿತು ಕುಳಿತ ಮರಿ ಹೆಬ್ಬಾವು
ಶ್ರೀಗಳು ಹೇಳಿದ ಮಾತ್ರಕ್ಕೆ ಸಿಎಂ ಬದಲಾವಣೆ ಆಗಲ್ಲ: ಶಾಮನೂರು ಶಿವಶಂಕರಪ್ಪ
ಶ್ರೀಗಳು ಹೇಳಿದ ಮಾತ್ರಕ್ಕೆ ಸಿಎಂ ಬದಲಾವಣೆ ಆಗಲ್ಲ: ಶಾಮನೂರು ಶಿವಶಂಕರಪ್ಪ
‘ಸೂಪರ್​ ಆಗಿದೆ’: ಬೆಂಗಳೂರಲ್ಲಿ ‘ಕಲ್ಕಿ 2898 ಎಡಿ’ ನೋಡಿ ಕನ್ನಡಿಗರು ಖುಷ್
‘ಸೂಪರ್​ ಆಗಿದೆ’: ಬೆಂಗಳೂರಲ್ಲಿ ‘ಕಲ್ಕಿ 2898 ಎಡಿ’ ನೋಡಿ ಕನ್ನಡಿಗರು ಖುಷ್
ಮಂಗಳೂರು: ಜಲದಿಗ್ಭಂದನಕ್ಕೊಳಗಾದ ಮನೆ, ಮನೆಯಲ್ಲಿ ಒಂಟಿ ಮಹಿಳೆ ವಾಸ!
ಮಂಗಳೂರು: ಜಲದಿಗ್ಭಂದನಕ್ಕೊಳಗಾದ ಮನೆ, ಮನೆಯಲ್ಲಿ ಒಂಟಿ ಮಹಿಳೆ ವಾಸ!
ಸಿದ್ದರಾಮಯ್ಯ ಕರೆದಿರುವ ಸಭೆಗೆ ಹೋಗ್ತೀರಾ ಅಂದಾಗ ಕುಮಾರಸ್ವಾಮಿ ಉಡಾಫೆ ಉತ್ತರ
ಸಿದ್ದರಾಮಯ್ಯ ಕರೆದಿರುವ ಸಭೆಗೆ ಹೋಗ್ತೀರಾ ಅಂದಾಗ ಕುಮಾರಸ್ವಾಮಿ ಉಡಾಫೆ ಉತ್ತರ