AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಚಾಮರಾಜನಗರ: ಮತ್ತೊಂದು ಆನೆಯ ಕಳೇಬರ ಪತ್ತೆ; ಅರಣ್ಯಾಧಿಕಾರಿಗಳಲ್ಲಿ ಮೂಡಿದ ಅನುಮಾನ

ನಿನ್ನೆ(ಆ.31) ತಾನೆ ಯಳಂದೂರು ಹಾಗೂ ಬೈಲೂರು ವ್ಯಾಪ್ತಿಯಲ್ಲಿ ಎರಡು ಆನೆಗಳ ಕಳೇಬರ ಪತ್ತೆಯಾಗಿತ್ತು. ಇಂದು ಮತ್ತೊಂದು ಹೆಣ್ಣಾನೆಯ ಕಳೇಬರಹ ಬೈಲೂರು ವಲಯದ ಮಾವತ್ತೂರಿನಲ್ಲಿ ಗಸ್ತಿ​ನಲ್ಲಿರುವಾಗ ಪತ್ತೆಯಾಗಿದ್ದು, ಅರಣ್ಯಾಧಿಕಾರಿಗಳಲ್ಲಿ ಅನುಮಾನ ಮೂಡಿದೆ.

ಚಾಮರಾಜನಗರ: ಮತ್ತೊಂದು ಆನೆಯ ಕಳೇಬರ ಪತ್ತೆ; ಅರಣ್ಯಾಧಿಕಾರಿಗಳಲ್ಲಿ ಮೂಡಿದ ಅನುಮಾನ
ಚಾಮರಾಜನಗರ: ಮತ್ತೊಂದು ಆನೆಯ ಕಳೇಬರ ಪತ್ತೆ
ಸೂರಜ್ ಪ್ರಸಾದ್ ಎಸ್.ಎನ್
| Updated By: ಕಿರಣ್ ಹನುಮಂತ್​ ಮಾದಾರ್|

Updated on: Sep 01, 2024 | 2:38 PM

Share

ಚಾಮರಾಜನಗರ, ಸೆ.01: ಚಾಮರಾಜನಗರ(Chamarajanagar) ತಾಲೂಕಿನ ಬೈಲೂರು ವಲಯದ ಮಾವತ್ತೂರಿನಲ್ಲಿ ಗಸ್ತಿ​ನಲ್ಲಿರುವಾಗ ಇಂದು (ಭಾನುವಾರ) ಮತ್ತೊಂದು ಆನೆಯ ಕಳೇಬರ ಪತ್ತೆಯಾಗಿದೆ. ಸುಮಾರು 61 ವರ್ಷದ ಹೆಣ್ಣು ಆನೆಯ ಕಳೇಬರ ಇದಾಗಿದೆ. ನಿನ್ನೆ(ಆ.31) ತಾನೆ ಯಳಂದೂರು ಹಾಗೂ ಬೈಲೂರು ವ್ಯಾಪ್ತಿಯಲ್ಲಿ ಎರೆಡು ಆನೆಗಳ ಕಳೇಬರ ಪತ್ತೆಯಾಗಿತ್ತು. ಇಂದು ಮತ್ತೊಂದು ಹೆಣ್ಣಾನೆಯ ಕಳೇಬರಹ ಪತ್ತೆ ಹಿನ್ನಲೆ ಅರಣ್ಯಾಧಿಕಾರಿಗಳಲ್ಲಿ ಅನುಮಾನ ಮೂಡಿದೆ.

ಕಳೆದ ಬೇಸಿಗೆ ವೇಳೆ ಕಾಡಿನಲ್ಲಿ ಕೆರೆ, ಕಟ್ಟೆಗಳೆಲ್ಲಿ ನೀರು ಬತ್ತಿ ಹೋಗಿತ್ತು. ತೀವ್ರ ಬರ ಹಿನ್ನಲೆ ಕುಡಿಯಲು ನೀರಿಲ್ಲದೆ ಆನೆಗಳು ಮೃತ ಪಟ್ಟಿರುವ ಶಂಕೆ ವ್ಯಕ್ತವಾಗಿದೆ. ಸ್ಥಳಕ್ಕೆ ಹಿರಿಯ ಅರಣ್ಯಾಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಇನ್ನು ಪಶು ವೈದ್ಯರು ಮರಣೋತ್ತರ ಪರೀಕ್ಷೆ ನಡೆಸಿದ್ದು, ಆನೆಯು ಸ್ವಾಭಾವಿಕವಾಗಿ 7 ರಿಂದ 8 ದಿನಗಳ ಹಿಂದೆ ಮೃತಪಟ್ಟಿದೆ ಎಂದು ದೃಢಪಡಿಸಿದ್ದಾರೆ.

ಇದನ್ನೂ ಓದಿ:ವಿದ್ಯುತ್ ತಂತಿ ಸ್ಪರ್ಶಿಸಿ ಆನೆಗಳ‌ ಸಾವಿನ ಬಗ್ಗೆ ಹೈಕೋರ್ಟ್ ಕಳವಳ: ಪಿಐಎಲ್​ ದಾಖಲು, ಎಸ್ಕಾಂಗಳಿಗೆ ನೋಟಿಸ್

ಇನ್ನು ಆನೆ ಕಳೇಬರ ಬಹಳ ತಡವಾಗಿ ಪತ್ತೆಯಾಗಿರುವ ಬಗ್ಗೆ ಪರಿಸರ ಹೋರಾಟಗಾರರು ಕಿಡಿಕಾರಿದ್ದಾರೆ. ಇಂದು ಮತ್ತೊಂದು ಆನೆ ಅಸುನೀಗಿರುವ ಮಾಹಿತಿ ಪರಿಸರ ಪ್ರೇಮಿಗಳಲ್ಲಿ ಆತಂಕ‌ ತರಿಸಿದೆ. ಒಂದೇ ವಾರದಲ್ಲಿ ಮೂರು ಆನೆಗಳ ಮೃತಪಟ್ಟಿದ್ದರ ಬಗ್ಗೆ ಅರಣ್ಯ ಇಲಾಖೆಗೂ ಅನುಮಾನ ಮೂಡಿದ್ದು, ಯಾವ ರೀತಿಯ ಕ್ರಮ ಕೈಗೊಳ್ಳುತ್ತಾರೆ ಕಾದುನೋಡಬೇಕಿದೆ. ಇನ್ನು ಬೈಲೂರು ವಲಯದ ಆಳದ ಕೆರೆ ಬಳಿ 45 ರಿಂದ 50 ವರ್ಷದ ಗಂಡಾನೆ ಕಳೇಬರ ಹಾಗೂ ಯಳಂದೂರು ವಲಯದ ಬೇತಾಳಕಟ್ಟೆ ಎಂಬಲ್ಲಿ ಗಂಡಾನೆ ಕಳೇಬರ ಪತ್ತೆಯಾಗಿದ್ದು, 40 ವರ್ಷದ್ದು ಆಗಿರಬಹುದು ಎಂದು ಅಂದಾಜು ಮಾಡಲಾಗಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಬಿಗ್​​ಬಾಸ್ ಫಿನಾಲೆಗೆ ಕನ್ನಡತಿಯರ ಎಂಟ್ರಿ: ಗೆದ್ದವರಿಗೆ ಸಿಗುವ ಹಣವೆಷ್ಟು?
ಬಿಗ್​​ಬಾಸ್ ಫಿನಾಲೆಗೆ ಕನ್ನಡತಿಯರ ಎಂಟ್ರಿ: ಗೆದ್ದವರಿಗೆ ಸಿಗುವ ಹಣವೆಷ್ಟು?
ಮುಂದೆ ನಮ್ರತೆ ಕಲಿತುಕೊಳ್ಳೋಣ ಬಿಡಿ: ಮೋಹನ್ ದಾಸ್ ಪೈಗೆ ಡಿಕೆಶಿ ಟಾಂಗ್
ಮುಂದೆ ನಮ್ರತೆ ಕಲಿತುಕೊಳ್ಳೋಣ ಬಿಡಿ: ಮೋಹನ್ ದಾಸ್ ಪೈಗೆ ಡಿಕೆಶಿ ಟಾಂಗ್
8 ಮಂದಿ ಪೊಲೀಸ್ ಸಸ್ಪೆಂಡ್: ಅಧಿವೇಶನದಲ್ಲಿ ಸದ್ದು ಮಾಡಲಿದೆ ಖಾಕಿ ಕಳ್ಳಾಟ
8 ಮಂದಿ ಪೊಲೀಸ್ ಸಸ್ಪೆಂಡ್: ಅಧಿವೇಶನದಲ್ಲಿ ಸದ್ದು ಮಾಡಲಿದೆ ಖಾಕಿ ಕಳ್ಳಾಟ
ಬೆಳಗಾವಿಯ ಚಳಿಗಾಲದ ಅಧಿವೇಶನದ ನೇರಪ್ರಸಾರ
ಬೆಳಗಾವಿಯ ಚಳಿಗಾಲದ ಅಧಿವೇಶನದ ನೇರಪ್ರಸಾರ
Video: ಗಾಳಿಯ ರಭಸಕ್ಕೆ ಕುಸಿದು ಬಿತ್ತು ಬ್ರೆಜಿಲ್​ನ ಲಿಬರ್ಟಿ ಸ್ಟ್ಯಾಚ್ಯೂ
Video: ಗಾಳಿಯ ರಭಸಕ್ಕೆ ಕುಸಿದು ಬಿತ್ತು ಬ್ರೆಜಿಲ್​ನ ಲಿಬರ್ಟಿ ಸ್ಟ್ಯಾಚ್ಯೂ
ಚಿಕ್ಕಬಳ್ಳಾಪುರದಲ್ಲಿ ಸರಣಿ ಅಪಘಾತ: ತಪ್ಪಿದ ಭಾರಿ ಅನಾಹುತ
ಚಿಕ್ಕಬಳ್ಳಾಪುರದಲ್ಲಿ ಸರಣಿ ಅಪಘಾತ: ತಪ್ಪಿದ ಭಾರಿ ಅನಾಹುತ
ವೇದಿಕೆಯಲ್ಲಿ ವೈದ್ಯೆಯ ಹಿಜಾಬ್ ಎಳೆದ ಸಿಎಂ ನಿತೀಶ್ ಕುಮಾರ್
ವೇದಿಕೆಯಲ್ಲಿ ವೈದ್ಯೆಯ ಹಿಜಾಬ್ ಎಳೆದ ಸಿಎಂ ನಿತೀಶ್ ಕುಮಾರ್
ಧ್ರುವಂತ್​ನ ಸೀಕ್ರೆಟ್​ರೂಂನಲ್ಲಿ ಇಟ್ಟ ಬಗ್ಗೆ ಬಿಗ್ ಬಾಸ್​ಗೆ ಬೇಸರ?
ಧ್ರುವಂತ್​ನ ಸೀಕ್ರೆಟ್​ರೂಂನಲ್ಲಿ ಇಟ್ಟ ಬಗ್ಗೆ ಬಿಗ್ ಬಾಸ್​ಗೆ ಬೇಸರ?
‘ಸು ಫ್ರಮ್ ಸೋ’ ಯಶಸ್ಸಿನ ಮೂಲವನ್ನು‘45’ ನಿರ್ಮಾಪಕನಿಗೆ ಹಸ್ತಾಂತರಿಸಿದ ರಾಜ್
‘ಸು ಫ್ರಮ್ ಸೋ’ ಯಶಸ್ಸಿನ ಮೂಲವನ್ನು‘45’ ನಿರ್ಮಾಪಕನಿಗೆ ಹಸ್ತಾಂತರಿಸಿದ ರಾಜ್
ದೆಹಲಿ-ಆಗ್ರಾ ಎಕ್ಸ್​ಪ್ರೆಸ್​ವೇನಲ್ಲಿ ಹಲವು ಬಸ್​ಗಳಿಗೆ ಬೆಂಕಿ
ದೆಹಲಿ-ಆಗ್ರಾ ಎಕ್ಸ್​ಪ್ರೆಸ್​ವೇನಲ್ಲಿ ಹಲವು ಬಸ್​ಗಳಿಗೆ ಬೆಂಕಿ