AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಚಾಮರಾಜನಗರ: ಮತ್ತೊಂದು ಆನೆಯ ಕಳೇಬರ ಪತ್ತೆ; ಅರಣ್ಯಾಧಿಕಾರಿಗಳಲ್ಲಿ ಮೂಡಿದ ಅನುಮಾನ

ನಿನ್ನೆ(ಆ.31) ತಾನೆ ಯಳಂದೂರು ಹಾಗೂ ಬೈಲೂರು ವ್ಯಾಪ್ತಿಯಲ್ಲಿ ಎರಡು ಆನೆಗಳ ಕಳೇಬರ ಪತ್ತೆಯಾಗಿತ್ತು. ಇಂದು ಮತ್ತೊಂದು ಹೆಣ್ಣಾನೆಯ ಕಳೇಬರಹ ಬೈಲೂರು ವಲಯದ ಮಾವತ್ತೂರಿನಲ್ಲಿ ಗಸ್ತಿ​ನಲ್ಲಿರುವಾಗ ಪತ್ತೆಯಾಗಿದ್ದು, ಅರಣ್ಯಾಧಿಕಾರಿಗಳಲ್ಲಿ ಅನುಮಾನ ಮೂಡಿದೆ.

ಚಾಮರಾಜನಗರ: ಮತ್ತೊಂದು ಆನೆಯ ಕಳೇಬರ ಪತ್ತೆ; ಅರಣ್ಯಾಧಿಕಾರಿಗಳಲ್ಲಿ ಮೂಡಿದ ಅನುಮಾನ
ಚಾಮರಾಜನಗರ: ಮತ್ತೊಂದು ಆನೆಯ ಕಳೇಬರ ಪತ್ತೆ
ಸೂರಜ್ ಪ್ರಸಾದ್ ಎಸ್.ಎನ್
| Edited By: ಕಿರಣ್ ಹನುಮಂತ್​ ಮಾದಾರ್|

Updated on: Sep 01, 2024 | 2:38 PM

Share

ಚಾಮರಾಜನಗರ, ಸೆ.01: ಚಾಮರಾಜನಗರ(Chamarajanagar) ತಾಲೂಕಿನ ಬೈಲೂರು ವಲಯದ ಮಾವತ್ತೂರಿನಲ್ಲಿ ಗಸ್ತಿ​ನಲ್ಲಿರುವಾಗ ಇಂದು (ಭಾನುವಾರ) ಮತ್ತೊಂದು ಆನೆಯ ಕಳೇಬರ ಪತ್ತೆಯಾಗಿದೆ. ಸುಮಾರು 61 ವರ್ಷದ ಹೆಣ್ಣು ಆನೆಯ ಕಳೇಬರ ಇದಾಗಿದೆ. ನಿನ್ನೆ(ಆ.31) ತಾನೆ ಯಳಂದೂರು ಹಾಗೂ ಬೈಲೂರು ವ್ಯಾಪ್ತಿಯಲ್ಲಿ ಎರೆಡು ಆನೆಗಳ ಕಳೇಬರ ಪತ್ತೆಯಾಗಿತ್ತು. ಇಂದು ಮತ್ತೊಂದು ಹೆಣ್ಣಾನೆಯ ಕಳೇಬರಹ ಪತ್ತೆ ಹಿನ್ನಲೆ ಅರಣ್ಯಾಧಿಕಾರಿಗಳಲ್ಲಿ ಅನುಮಾನ ಮೂಡಿದೆ.

ಕಳೆದ ಬೇಸಿಗೆ ವೇಳೆ ಕಾಡಿನಲ್ಲಿ ಕೆರೆ, ಕಟ್ಟೆಗಳೆಲ್ಲಿ ನೀರು ಬತ್ತಿ ಹೋಗಿತ್ತು. ತೀವ್ರ ಬರ ಹಿನ್ನಲೆ ಕುಡಿಯಲು ನೀರಿಲ್ಲದೆ ಆನೆಗಳು ಮೃತ ಪಟ್ಟಿರುವ ಶಂಕೆ ವ್ಯಕ್ತವಾಗಿದೆ. ಸ್ಥಳಕ್ಕೆ ಹಿರಿಯ ಅರಣ್ಯಾಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಇನ್ನು ಪಶು ವೈದ್ಯರು ಮರಣೋತ್ತರ ಪರೀಕ್ಷೆ ನಡೆಸಿದ್ದು, ಆನೆಯು ಸ್ವಾಭಾವಿಕವಾಗಿ 7 ರಿಂದ 8 ದಿನಗಳ ಹಿಂದೆ ಮೃತಪಟ್ಟಿದೆ ಎಂದು ದೃಢಪಡಿಸಿದ್ದಾರೆ.

ಇದನ್ನೂ ಓದಿ:ವಿದ್ಯುತ್ ತಂತಿ ಸ್ಪರ್ಶಿಸಿ ಆನೆಗಳ‌ ಸಾವಿನ ಬಗ್ಗೆ ಹೈಕೋರ್ಟ್ ಕಳವಳ: ಪಿಐಎಲ್​ ದಾಖಲು, ಎಸ್ಕಾಂಗಳಿಗೆ ನೋಟಿಸ್

ಇನ್ನು ಆನೆ ಕಳೇಬರ ಬಹಳ ತಡವಾಗಿ ಪತ್ತೆಯಾಗಿರುವ ಬಗ್ಗೆ ಪರಿಸರ ಹೋರಾಟಗಾರರು ಕಿಡಿಕಾರಿದ್ದಾರೆ. ಇಂದು ಮತ್ತೊಂದು ಆನೆ ಅಸುನೀಗಿರುವ ಮಾಹಿತಿ ಪರಿಸರ ಪ್ರೇಮಿಗಳಲ್ಲಿ ಆತಂಕ‌ ತರಿಸಿದೆ. ಒಂದೇ ವಾರದಲ್ಲಿ ಮೂರು ಆನೆಗಳ ಮೃತಪಟ್ಟಿದ್ದರ ಬಗ್ಗೆ ಅರಣ್ಯ ಇಲಾಖೆಗೂ ಅನುಮಾನ ಮೂಡಿದ್ದು, ಯಾವ ರೀತಿಯ ಕ್ರಮ ಕೈಗೊಳ್ಳುತ್ತಾರೆ ಕಾದುನೋಡಬೇಕಿದೆ. ಇನ್ನು ಬೈಲೂರು ವಲಯದ ಆಳದ ಕೆರೆ ಬಳಿ 45 ರಿಂದ 50 ವರ್ಷದ ಗಂಡಾನೆ ಕಳೇಬರ ಹಾಗೂ ಯಳಂದೂರು ವಲಯದ ಬೇತಾಳಕಟ್ಟೆ ಎಂಬಲ್ಲಿ ಗಂಡಾನೆ ಕಳೇಬರ ಪತ್ತೆಯಾಗಿದ್ದು, 40 ವರ್ಷದ್ದು ಆಗಿರಬಹುದು ಎಂದು ಅಂದಾಜು ಮಾಡಲಾಗಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
ಸೂರಜ್ ಪ್ರಸಾದ್ ಎಸ್.ಎನ್
ಸೂರಜ್ ಪ್ರಸಾದ್ ಎಸ್.ಎನ್

ಸೂರಜ್ ಪ್ರಸಾದ್ ಎಸ್.ಎನ್ ಆದ ನಾನು ಹುಟ್ಟಿದ್ದು ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿಯಲ್ಲಿ. ಬೆಳೆದಿದ್ದು ದಾವಣಗರೆ ಜಿಲ್ಲೆ ನ್ಯಾಮತಿ ತಾಲೂಕಿನಲ್ಲಿ. ಶಿವಮೊಗ್ಗದ ಸಹ್ಯಾದ್ರಿ ಕಾಲೇಜ್ ನಲ್ಲಿ ಪತ್ರಿಕೋದ್ಯಮದಲ್ಲಿ ಪದವಿಪೂರ್ವ ಶಿಕ್ಷಣ ಪಡೆದಿದ್ದು 2014ರಿಂದ ನನ್ನ ಎಲೆಕ್ಟ್ರಾನಿಕ್ ಮಾದ್ಯಮದ ವೃತ್ತಿ ಜೀವನವನ್ನ ಬೆಂಗಳೂರಿನಲ್ಲಿ ಕ್ರೈಂ ಬೀಟ್ ವರದಿಗಾರನಾಗಿ ಆರಂಭಿಸಿದ್ದು ಬೆಂಗಳೂರಿನಲ್ಲಿ 8 ವರ್ಷಗಳ ಕ್ರೈಂ ವರದಿಗಾರನಾಗಿ ಸೇವೆ ಸಲ್ಲಿಸಿ. ನಾಲ್ಕು ಸಂಸ್ಥೆಯಲ್ಲಿ ಕ್ರೈಂ ರಿಪೋರ್ಟರ್ ಹಾಗೂ ಕ್ರೈಂ ಇನ್ವೆಸ್ಟಿಗೇಟಿವ್ ವರದಿಗಾರನಾಗಿ ಹಾಗೂ ಸ್ಟಿಂಗ್ ಅಪರೇಷನ್ ಗಳನ್ನ ಮಾಡಿದ್ದೇನೆ. ಗೌರಿ ಲಂಕೇಶ್ ಕೊಲೆ ಕೇಸನ್ನ ರಾಜ್ಯದಲ್ಲೇ ಮೊದಲು ಬ್ರೇಕ್ ಮಾಡಿ ಈ ಹಿಂದಿನ ಸಂಸ್ಥೆಯಿಂದ ಪ್ರಶಂಸೆ ಪಡೆದಿರುತ್ನೇನೆ2019 ರಲ್ಲಿ ಪಿಎಸ್ಐ ಅಕ್ರಮದ ಸ್ಟಿಂಗ್ ಆಪರೇಷನ್ ಹಾಗೂ ಬೆಂಗಳೂರು ಸಿಂಥಟಿಕ್ ಡ್ರಗ್ ಮಾಫಿಯಾದ ಸ್ಟಿಂಗ್ ಆಪರೇಷನ್ ಮಾಡಿದ್ದು. ಕಳೆದ 10 ವರ್ಷಗಳಿಂದ ಸಕ್ರೀಯವಾಗಿ ಕಾರ್ಯ ನಿರ್ವಹಿಸುತ್ತಿದ್ದೇನೆ. ಟಿವಿ9 ಸಂಸ್ಥೆಗೆ ಮಂಡ್ಯ ಜಿಲ್ಲಾ ವರದಿಗಾರನಾಗಿ ಕೆಲಸ ಮಾಡಿ ಬಳಿಕ ಚಾಮರಾಜನಗರಕ್ಕೆ ವರ್ಗಾವಣೆಯಾಗಿ ಈಗ ಪ್ರಸ್ಥುತ ಚಾಮರಾಜನಗರ ಜಿಲ್ಲಾ ವರದಿಗಾರನಾಗಿ ಕೆಲಸ ಮಾಡುತ್ತಿದ್ದೇನೆ. ಹವ್ಯಾಸ ಅಡಿಗೆ ಮಾಡುವುದು, ಕ್ರಿಕೆಟ್ ಆಡುವುದು ಕ್ರೈಂ ಇನ್ವೆಷ್ಟಿಗೇಷನ್ ನಾವೆಲ್ ಗಳನ್ನ ಓದುವುದು.

Read More
ಕೊಲ್ಲೂರು ಮೂಕಾಂಬಿಕಾ ದೇವಾಲಯದಲ್ಲಿ ವಿಜಯ್ ಮಾಡಿಸಿದ ಪೂಜೆ ಯಾವುದು?
ಕೊಲ್ಲೂರು ಮೂಕಾಂಬಿಕಾ ದೇವಾಲಯದಲ್ಲಿ ವಿಜಯ್ ಮಾಡಿಸಿದ ಪೂಜೆ ಯಾವುದು?
ಮೂಕಾಂಬಿಕೆಯ ಮಹಿಮೆ, ದೇವಿ ಶಕ್ತಿ ಬಗ್ಗೆ ಆಧ್ಯಾತ್ಮಕ ಚಿಂತಕ ಹೇಳಿದ್ದಿಷ್ಟು
ಮೂಕಾಂಬಿಕೆಯ ಮಹಿಮೆ, ದೇವಿ ಶಕ್ತಿ ಬಗ್ಗೆ ಆಧ್ಯಾತ್ಮಕ ಚಿಂತಕ ಹೇಳಿದ್ದಿಷ್ಟು
ಕೊಲ್ಲೂರು ಮೂಕಾಂಬಿಕೆ ದರ್ಶನ ಪಡೆದ ತಮಿಳುನಾಡು ಸಿಎಂ ವಿಜಯ್​
ಕೊಲ್ಲೂರು ಮೂಕಾಂಬಿಕೆ ದರ್ಶನ ಪಡೆದ ತಮಿಳುನಾಡು ಸಿಎಂ ವಿಜಯ್​
ನೀವೇ ಸಿಎಂ ಆಗಿ ಎಂದಾಗಲೂ ಆಗಿಲ್ಲವಲ್ಲ: ಹೆಚ್​.ಡಿ.ಕುಮಾರಸ್ವಾಮಿ ಟಾಂಗ್
ನೀವೇ ಸಿಎಂ ಆಗಿ ಎಂದಾಗಲೂ ಆಗಿಲ್ಲವಲ್ಲ: ಹೆಚ್​.ಡಿ.ಕುಮಾರಸ್ವಾಮಿ ಟಾಂಗ್
ಪ್ರಕಾಶ್ ರಾಜ್ ವಿರುದ್ಧ ಬೆಳಗಾವಿಯಲ್ಲಿ ಶ್ರೀರಾಮ ಸೇನೆ ಪ್ರತಿಭಟನೆ
ಪ್ರಕಾಶ್ ರಾಜ್ ವಿರುದ್ಧ ಬೆಳಗಾವಿಯಲ್ಲಿ ಶ್ರೀರಾಮ ಸೇನೆ ಪ್ರತಿಭಟನೆ
ವಿಜಯ್ ನೋಡಲು ಟಿವಿಕೆ ಬಾವುಟ ಹಿಡಿದು ಕಾಯುತ್ತಿರುವ ಫ್ಯಾನ್ಸ್
ವಿಜಯ್ ನೋಡಲು ಟಿವಿಕೆ ಬಾವುಟ ಹಿಡಿದು ಕಾಯುತ್ತಿರುವ ಫ್ಯಾನ್ಸ್
ಮಾವಿನಹಣ್ಣು ಸೇವಿಸಿ ಅಸ್ವಸ್ಥರಾಗಿದ್ದ ಇಬ್ಬರು ಬಾಲಕಿಯರು ಸಾವು
ಮಾವಿನಹಣ್ಣು ಸೇವಿಸಿ ಅಸ್ವಸ್ಥರಾಗಿದ್ದ ಇಬ್ಬರು ಬಾಲಕಿಯರು ಸಾವು
ರಾಜ್ಯಸಭೆಗೆ ಅವಿರೋಧ ಆಯ್ಕೆ: ಪ್ರಮಾಣಪತ್ರ ಸ್ವೀಕರಿಸಿದ ಮಲ್ಲಿಕಾರ್ಜುನ ಖರ್ಗೆ
ರಾಜ್ಯಸಭೆಗೆ ಅವಿರೋಧ ಆಯ್ಕೆ: ಪ್ರಮಾಣಪತ್ರ ಸ್ವೀಕರಿಸಿದ ಮಲ್ಲಿಕಾರ್ಜುನ ಖರ್ಗೆ
ಮಂಗಳೂರಿನಲ್ಲಿ ಬಂದಿಳಿದ ತಮಿಳುನಾಡು ಸಿಎಂ ಜೋಸೆಫ್ ವಿಜಯ್​ಗೆ ಅದ್ದೂರಿ ಸ್ವಾಗ
ಮಂಗಳೂರಿನಲ್ಲಿ ಬಂದಿಳಿದ ತಮಿಳುನಾಡು ಸಿಎಂ ಜೋಸೆಫ್ ವಿಜಯ್​ಗೆ ಅದ್ದೂರಿ ಸ್ವಾಗ
ರಾಷ್ಟ್ರಪತಿ, ಉಪರಾಷ್ಟ್ರಪತಿಗಳನ್ನು ಭೇಟಿಯಾದ ಸಿಎಂ ಡಿಕೆಶಿ
ರಾಷ್ಟ್ರಪತಿ, ಉಪರಾಷ್ಟ್ರಪತಿಗಳನ್ನು ಭೇಟಿಯಾದ ಸಿಎಂ ಡಿಕೆಶಿ