AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಚಾಮರಾಜನಗರ: ಮತ್ತೊಂದು ಆನೆಯ ಕಳೇಬರ ಪತ್ತೆ; ಅರಣ್ಯಾಧಿಕಾರಿಗಳಲ್ಲಿ ಮೂಡಿದ ಅನುಮಾನ

ನಿನ್ನೆ(ಆ.31) ತಾನೆ ಯಳಂದೂರು ಹಾಗೂ ಬೈಲೂರು ವ್ಯಾಪ್ತಿಯಲ್ಲಿ ಎರಡು ಆನೆಗಳ ಕಳೇಬರ ಪತ್ತೆಯಾಗಿತ್ತು. ಇಂದು ಮತ್ತೊಂದು ಹೆಣ್ಣಾನೆಯ ಕಳೇಬರಹ ಬೈಲೂರು ವಲಯದ ಮಾವತ್ತೂರಿನಲ್ಲಿ ಗಸ್ತಿ​ನಲ್ಲಿರುವಾಗ ಪತ್ತೆಯಾಗಿದ್ದು, ಅರಣ್ಯಾಧಿಕಾರಿಗಳಲ್ಲಿ ಅನುಮಾನ ಮೂಡಿದೆ.

ಚಾಮರಾಜನಗರ: ಮತ್ತೊಂದು ಆನೆಯ ಕಳೇಬರ ಪತ್ತೆ; ಅರಣ್ಯಾಧಿಕಾರಿಗಳಲ್ಲಿ ಮೂಡಿದ ಅನುಮಾನ
ಚಾಮರಾಜನಗರ: ಮತ್ತೊಂದು ಆನೆಯ ಕಳೇಬರ ಪತ್ತೆ
ಸೂರಜ್ ಪ್ರಸಾದ್ ಎಸ್.ಎನ್
| Edited By: ಕಿರಣ್ ಹನುಮಂತ್​ ಮಾದಾರ್|

Updated on: Sep 01, 2024 | 2:38 PM

Share

ಚಾಮರಾಜನಗರ, ಸೆ.01: ಚಾಮರಾಜನಗರ(Chamarajanagar) ತಾಲೂಕಿನ ಬೈಲೂರು ವಲಯದ ಮಾವತ್ತೂರಿನಲ್ಲಿ ಗಸ್ತಿ​ನಲ್ಲಿರುವಾಗ ಇಂದು (ಭಾನುವಾರ) ಮತ್ತೊಂದು ಆನೆಯ ಕಳೇಬರ ಪತ್ತೆಯಾಗಿದೆ. ಸುಮಾರು 61 ವರ್ಷದ ಹೆಣ್ಣು ಆನೆಯ ಕಳೇಬರ ಇದಾಗಿದೆ. ನಿನ್ನೆ(ಆ.31) ತಾನೆ ಯಳಂದೂರು ಹಾಗೂ ಬೈಲೂರು ವ್ಯಾಪ್ತಿಯಲ್ಲಿ ಎರೆಡು ಆನೆಗಳ ಕಳೇಬರ ಪತ್ತೆಯಾಗಿತ್ತು. ಇಂದು ಮತ್ತೊಂದು ಹೆಣ್ಣಾನೆಯ ಕಳೇಬರಹ ಪತ್ತೆ ಹಿನ್ನಲೆ ಅರಣ್ಯಾಧಿಕಾರಿಗಳಲ್ಲಿ ಅನುಮಾನ ಮೂಡಿದೆ.

ಕಳೆದ ಬೇಸಿಗೆ ವೇಳೆ ಕಾಡಿನಲ್ಲಿ ಕೆರೆ, ಕಟ್ಟೆಗಳೆಲ್ಲಿ ನೀರು ಬತ್ತಿ ಹೋಗಿತ್ತು. ತೀವ್ರ ಬರ ಹಿನ್ನಲೆ ಕುಡಿಯಲು ನೀರಿಲ್ಲದೆ ಆನೆಗಳು ಮೃತ ಪಟ್ಟಿರುವ ಶಂಕೆ ವ್ಯಕ್ತವಾಗಿದೆ. ಸ್ಥಳಕ್ಕೆ ಹಿರಿಯ ಅರಣ್ಯಾಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಇನ್ನು ಪಶು ವೈದ್ಯರು ಮರಣೋತ್ತರ ಪರೀಕ್ಷೆ ನಡೆಸಿದ್ದು, ಆನೆಯು ಸ್ವಾಭಾವಿಕವಾಗಿ 7 ರಿಂದ 8 ದಿನಗಳ ಹಿಂದೆ ಮೃತಪಟ್ಟಿದೆ ಎಂದು ದೃಢಪಡಿಸಿದ್ದಾರೆ.

ಇದನ್ನೂ ಓದಿ:ವಿದ್ಯುತ್ ತಂತಿ ಸ್ಪರ್ಶಿಸಿ ಆನೆಗಳ‌ ಸಾವಿನ ಬಗ್ಗೆ ಹೈಕೋರ್ಟ್ ಕಳವಳ: ಪಿಐಎಲ್​ ದಾಖಲು, ಎಸ್ಕಾಂಗಳಿಗೆ ನೋಟಿಸ್

ಇನ್ನು ಆನೆ ಕಳೇಬರ ಬಹಳ ತಡವಾಗಿ ಪತ್ತೆಯಾಗಿರುವ ಬಗ್ಗೆ ಪರಿಸರ ಹೋರಾಟಗಾರರು ಕಿಡಿಕಾರಿದ್ದಾರೆ. ಇಂದು ಮತ್ತೊಂದು ಆನೆ ಅಸುನೀಗಿರುವ ಮಾಹಿತಿ ಪರಿಸರ ಪ್ರೇಮಿಗಳಲ್ಲಿ ಆತಂಕ‌ ತರಿಸಿದೆ. ಒಂದೇ ವಾರದಲ್ಲಿ ಮೂರು ಆನೆಗಳ ಮೃತಪಟ್ಟಿದ್ದರ ಬಗ್ಗೆ ಅರಣ್ಯ ಇಲಾಖೆಗೂ ಅನುಮಾನ ಮೂಡಿದ್ದು, ಯಾವ ರೀತಿಯ ಕ್ರಮ ಕೈಗೊಳ್ಳುತ್ತಾರೆ ಕಾದುನೋಡಬೇಕಿದೆ. ಇನ್ನು ಬೈಲೂರು ವಲಯದ ಆಳದ ಕೆರೆ ಬಳಿ 45 ರಿಂದ 50 ವರ್ಷದ ಗಂಡಾನೆ ಕಳೇಬರ ಹಾಗೂ ಯಳಂದೂರು ವಲಯದ ಬೇತಾಳಕಟ್ಟೆ ಎಂಬಲ್ಲಿ ಗಂಡಾನೆ ಕಳೇಬರ ಪತ್ತೆಯಾಗಿದ್ದು, 40 ವರ್ಷದ್ದು ಆಗಿರಬಹುದು ಎಂದು ಅಂದಾಜು ಮಾಡಲಾಗಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
ಮಹಾರಾಷ್ಟ್ರದ ಪಾಲ್ಘರ್​​ನಲ್ಲಿ ಭಾರೀ ಪ್ರವಾಹ; 891 ಜನರ ರಕ್ಷಣೆ
ಮಹಾರಾಷ್ಟ್ರದ ಪಾಲ್ಘರ್​​ನಲ್ಲಿ ಭಾರೀ ಪ್ರವಾಹ; 891 ಜನರ ರಕ್ಷಣೆ
‘ಕರಾವಳಿ’ ಸಿನಿಮಾ ನೋಡಿದ ಶಿವಮೊಗ್ಗ ಮಂದಿ ಹೇಳಿದ್ದೇನು?
‘ಕರಾವಳಿ’ ಸಿನಿಮಾ ನೋಡಿದ ಶಿವಮೊಗ್ಗ ಮಂದಿ ಹೇಳಿದ್ದೇನು?
‘ಜನ ನಾಯಗನ್’ ಹೇಗಿದೆ? ಸಿನಿಮಾ ನೋಡಿದವರು ಹೇಳಿದ್ದು ಹೀಗೆ...
‘ಜನ ನಾಯಗನ್’ ಹೇಗಿದೆ? ಸಿನಿಮಾ ನೋಡಿದವರು ಹೇಳಿದ್ದು ಹೀಗೆ...
‘ಜನ ನಾಯಗನ್’ ಚಿತ್ರದಲ್ಲಿ ದಳಪತಿ ವಿಜಯ್ ಜೊತೆ ಅಭಿನಯಿಸಿದ ಕನ್ನಡದ ಹೊಸ ನಟ
‘ಜನ ನಾಯಗನ್’ ಚಿತ್ರದಲ್ಲಿ ದಳಪತಿ ವಿಜಯ್ ಜೊತೆ ಅಭಿನಯಿಸಿದ ಕನ್ನಡದ ಹೊಸ ನಟ
ಕರ್ನಾಟಕದ ಹಲವೆಡೆ ಭುಗಿಲೆದ್ದ ಕಾಂಗ್ರೆಸ್-ಬಿಜೆಪಿ ಸಂಘರ್ಷ, ಎಲ್ಲಿ ಏನೇನಾಯ್ತ
ಕರ್ನಾಟಕದ ಹಲವೆಡೆ ಭುಗಿಲೆದ್ದ ಕಾಂಗ್ರೆಸ್-ಬಿಜೆಪಿ ಸಂಘರ್ಷ, ಎಲ್ಲಿ ಏನೇನಾಯ್ತ
ಬೆಂಗಳೂರಿನಲ್ಲಿ ‘ಜನ ನಾಯಗನ್’ ಚಿತ್ರಕ್ಕೆ ಕ್ರೇಜ್ ಹೇಗಿದೆ? ವಿಡಿಯೋ ನೋಡಿ..
ಬೆಂಗಳೂರಿನಲ್ಲಿ ‘ಜನ ನಾಯಗನ್’ ಚಿತ್ರಕ್ಕೆ ಕ್ರೇಜ್ ಹೇಗಿದೆ? ವಿಡಿಯೋ ನೋಡಿ..
ಆಸಿಡ್ ದಾಳಿ ಆಗದಿದ್ರೆ ತಾಯಿ ಇನ್ನೂ 10 ವರ್ಷ ಇರ್ತಿದ್ರು ಎಂದ ರೇವಣ್ಣ
ಆಸಿಡ್ ದಾಳಿ ಆಗದಿದ್ರೆ ತಾಯಿ ಇನ್ನೂ 10 ವರ್ಷ ಇರ್ತಿದ್ರು ಎಂದ ರೇವಣ್ಣ
ವಿದ್ಯಾರ್ಥಿಗಳ ಭವಿಷ್ಯದ ಬಗ್ಗೆ ಪ್ರಧಾನಿ ಅತ್ಯಂತ ಸಂವೇದನಾಶೀಲರಾಗಿದ್ದಾರೆ
ವಿದ್ಯಾರ್ಥಿಗಳ ಭವಿಷ್ಯದ ಬಗ್ಗೆ ಪ್ರಧಾನಿ ಅತ್ಯಂತ ಸಂವೇದನಾಶೀಲರಾಗಿದ್ದಾರೆ
ಮಹಾರಾಷ್ಟ್ರದಲ್ಲಿ ಮಳೆ: ಏರಿಕೆ ಕಂಡ ಕೃಷ್ಣಾ, ಘಟಪ್ರಭಾ ನದಿಗಳ ಒಳಹರಿವು
ಮಹಾರಾಷ್ಟ್ರದಲ್ಲಿ ಮಳೆ: ಏರಿಕೆ ಕಂಡ ಕೃಷ್ಣಾ, ಘಟಪ್ರಭಾ ನದಿಗಳ ಒಳಹರಿವು
ಪ್ರವಾಹ: ನೋಡ ನೋಡುತ್ತಿದ್ದಂತೆ ಕೊಚ್ಚಿ ಹೋದ ಅಂಗಡಿ ಮುಂಗಟ್ಟುಗಳು
ಪ್ರವಾಹ: ನೋಡ ನೋಡುತ್ತಿದ್ದಂತೆ ಕೊಚ್ಚಿ ಹೋದ ಅಂಗಡಿ ಮುಂಗಟ್ಟುಗಳು