AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಚಾಮರಾಜನಗರ: ಮತ್ತೊಂದು ಆನೆಯ ಕಳೇಬರ ಪತ್ತೆ; ಅರಣ್ಯಾಧಿಕಾರಿಗಳಲ್ಲಿ ಮೂಡಿದ ಅನುಮಾನ

ನಿನ್ನೆ(ಆ.31) ತಾನೆ ಯಳಂದೂರು ಹಾಗೂ ಬೈಲೂರು ವ್ಯಾಪ್ತಿಯಲ್ಲಿ ಎರಡು ಆನೆಗಳ ಕಳೇಬರ ಪತ್ತೆಯಾಗಿತ್ತು. ಇಂದು ಮತ್ತೊಂದು ಹೆಣ್ಣಾನೆಯ ಕಳೇಬರಹ ಬೈಲೂರು ವಲಯದ ಮಾವತ್ತೂರಿನಲ್ಲಿ ಗಸ್ತಿ​ನಲ್ಲಿರುವಾಗ ಪತ್ತೆಯಾಗಿದ್ದು, ಅರಣ್ಯಾಧಿಕಾರಿಗಳಲ್ಲಿ ಅನುಮಾನ ಮೂಡಿದೆ.

ಚಾಮರಾಜನಗರ: ಮತ್ತೊಂದು ಆನೆಯ ಕಳೇಬರ ಪತ್ತೆ; ಅರಣ್ಯಾಧಿಕಾರಿಗಳಲ್ಲಿ ಮೂಡಿದ ಅನುಮಾನ
ಚಾಮರಾಜನಗರ: ಮತ್ತೊಂದು ಆನೆಯ ಕಳೇಬರ ಪತ್ತೆ
ಸೂರಜ್ ಪ್ರಸಾದ್ ಎಸ್.ಎನ್
| Edited By: ಕಿರಣ್ ಹನುಮಂತ್​ ಮಾದಾರ್|

Updated on: Sep 01, 2024 | 2:38 PM

Share

ಚಾಮರಾಜನಗರ, ಸೆ.01: ಚಾಮರಾಜನಗರ(Chamarajanagar) ತಾಲೂಕಿನ ಬೈಲೂರು ವಲಯದ ಮಾವತ್ತೂರಿನಲ್ಲಿ ಗಸ್ತಿ​ನಲ್ಲಿರುವಾಗ ಇಂದು (ಭಾನುವಾರ) ಮತ್ತೊಂದು ಆನೆಯ ಕಳೇಬರ ಪತ್ತೆಯಾಗಿದೆ. ಸುಮಾರು 61 ವರ್ಷದ ಹೆಣ್ಣು ಆನೆಯ ಕಳೇಬರ ಇದಾಗಿದೆ. ನಿನ್ನೆ(ಆ.31) ತಾನೆ ಯಳಂದೂರು ಹಾಗೂ ಬೈಲೂರು ವ್ಯಾಪ್ತಿಯಲ್ಲಿ ಎರೆಡು ಆನೆಗಳ ಕಳೇಬರ ಪತ್ತೆಯಾಗಿತ್ತು. ಇಂದು ಮತ್ತೊಂದು ಹೆಣ್ಣಾನೆಯ ಕಳೇಬರಹ ಪತ್ತೆ ಹಿನ್ನಲೆ ಅರಣ್ಯಾಧಿಕಾರಿಗಳಲ್ಲಿ ಅನುಮಾನ ಮೂಡಿದೆ.

ಕಳೆದ ಬೇಸಿಗೆ ವೇಳೆ ಕಾಡಿನಲ್ಲಿ ಕೆರೆ, ಕಟ್ಟೆಗಳೆಲ್ಲಿ ನೀರು ಬತ್ತಿ ಹೋಗಿತ್ತು. ತೀವ್ರ ಬರ ಹಿನ್ನಲೆ ಕುಡಿಯಲು ನೀರಿಲ್ಲದೆ ಆನೆಗಳು ಮೃತ ಪಟ್ಟಿರುವ ಶಂಕೆ ವ್ಯಕ್ತವಾಗಿದೆ. ಸ್ಥಳಕ್ಕೆ ಹಿರಿಯ ಅರಣ್ಯಾಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಇನ್ನು ಪಶು ವೈದ್ಯರು ಮರಣೋತ್ತರ ಪರೀಕ್ಷೆ ನಡೆಸಿದ್ದು, ಆನೆಯು ಸ್ವಾಭಾವಿಕವಾಗಿ 7 ರಿಂದ 8 ದಿನಗಳ ಹಿಂದೆ ಮೃತಪಟ್ಟಿದೆ ಎಂದು ದೃಢಪಡಿಸಿದ್ದಾರೆ.

ಇದನ್ನೂ ಓದಿ:ವಿದ್ಯುತ್ ತಂತಿ ಸ್ಪರ್ಶಿಸಿ ಆನೆಗಳ‌ ಸಾವಿನ ಬಗ್ಗೆ ಹೈಕೋರ್ಟ್ ಕಳವಳ: ಪಿಐಎಲ್​ ದಾಖಲು, ಎಸ್ಕಾಂಗಳಿಗೆ ನೋಟಿಸ್

ಇನ್ನು ಆನೆ ಕಳೇಬರ ಬಹಳ ತಡವಾಗಿ ಪತ್ತೆಯಾಗಿರುವ ಬಗ್ಗೆ ಪರಿಸರ ಹೋರಾಟಗಾರರು ಕಿಡಿಕಾರಿದ್ದಾರೆ. ಇಂದು ಮತ್ತೊಂದು ಆನೆ ಅಸುನೀಗಿರುವ ಮಾಹಿತಿ ಪರಿಸರ ಪ್ರೇಮಿಗಳಲ್ಲಿ ಆತಂಕ‌ ತರಿಸಿದೆ. ಒಂದೇ ವಾರದಲ್ಲಿ ಮೂರು ಆನೆಗಳ ಮೃತಪಟ್ಟಿದ್ದರ ಬಗ್ಗೆ ಅರಣ್ಯ ಇಲಾಖೆಗೂ ಅನುಮಾನ ಮೂಡಿದ್ದು, ಯಾವ ರೀತಿಯ ಕ್ರಮ ಕೈಗೊಳ್ಳುತ್ತಾರೆ ಕಾದುನೋಡಬೇಕಿದೆ. ಇನ್ನು ಬೈಲೂರು ವಲಯದ ಆಳದ ಕೆರೆ ಬಳಿ 45 ರಿಂದ 50 ವರ್ಷದ ಗಂಡಾನೆ ಕಳೇಬರ ಹಾಗೂ ಯಳಂದೂರು ವಲಯದ ಬೇತಾಳಕಟ್ಟೆ ಎಂಬಲ್ಲಿ ಗಂಡಾನೆ ಕಳೇಬರ ಪತ್ತೆಯಾಗಿದ್ದು, 40 ವರ್ಷದ್ದು ಆಗಿರಬಹುದು ಎಂದು ಅಂದಾಜು ಮಾಡಲಾಗಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
ರಾಜ್ಯಸಭೆ ಕಲಾಪದಲ್ಲಿ ಸಿಪಿಎಂ ಸಂಸದನಿಗೆ ಲುಂಗಿವಾಲಾ ಎಂದ ಬಿಜೆಪಿ ಸಂಸದೆ
ರಾಜ್ಯಸಭೆ ಕಲಾಪದಲ್ಲಿ ಸಿಪಿಎಂ ಸಂಸದನಿಗೆ ಲುಂಗಿವಾಲಾ ಎಂದ ಬಿಜೆಪಿ ಸಂಸದೆ
‘ರೈತರ ಪ್ರತಿಭಟನೆಗೆ ಬಾರದ ಸ್ಟಾರ್​ಗಳ ಸಿನಿಮಾ ನಿಷೇಧಿಸಿ’: ಸಾರಾ ಗೋವಿಂದು
‘ರೈತರ ಪ್ರತಿಭಟನೆಗೆ ಬಾರದ ಸ್ಟಾರ್​ಗಳ ಸಿನಿಮಾ ನಿಷೇಧಿಸಿ’: ಸಾರಾ ಗೋವಿಂದು
'ಅಮಿತ್ ಶಾ ಭಾಷಣ ನಮಗೆ ಬೇಕಾಗಿಲ್ಲ'; ರಾಹುಲ್ ಗಾಂಧಿ ವ್ಯಂಗ್ಯ
'ಅಮಿತ್ ಶಾ ಭಾಷಣ ನಮಗೆ ಬೇಕಾಗಿಲ್ಲ'; ರಾಹುಲ್ ಗಾಂಧಿ ವ್ಯಂಗ್ಯ
ಮುಖ್ಯ ಚುನಾವಣಾಧಿಕಾರಿ ಮಹತ್ವದ ಸುದ್ದಿಗೋಷ್ಠಿ
ಮುಖ್ಯ ಚುನಾವಣಾಧಿಕಾರಿ ಮಹತ್ವದ ಸುದ್ದಿಗೋಷ್ಠಿ
ಕರ್ನಾಟಕ ಬಂದ್​​​​​​​​ಗೆ ಬೆಂಬಲವಿಲ್ಲ: ಪ್ರವೀಣ್ ಶೆಟ್ಟಿ, ಸಾರಾ ಗೋವಿಂದ್
ಕರ್ನಾಟಕ ಬಂದ್​​​​​​​​ಗೆ ಬೆಂಬಲವಿಲ್ಲ: ಪ್ರವೀಣ್ ಶೆಟ್ಟಿ, ಸಾರಾ ಗೋವಿಂದ್
ದೆಹಲಿ-ಪುಣೆ ಸ್ಪೈಸ್‌ಜೆಟ್ ವಿಮಾನದಲ್ಲಿ ಎಸಿ ವೈಫಲ್ಯ
ದೆಹಲಿ-ಪುಣೆ ಸ್ಪೈಸ್‌ಜೆಟ್ ವಿಮಾನದಲ್ಲಿ ಎಸಿ ವೈಫಲ್ಯ
ನಿಶ್ಚಿತಾರ್ಥಕ್ಕೆ ಹತ್ತು ವರ್ಷ, ಅಪರೂಪದ ವಿಡಿಯೋ ಹಂಚಿಕೊಂಡ ರಾಧಿಕಾ ಪಂಡಿತ್
ನಿಶ್ಚಿತಾರ್ಥಕ್ಕೆ ಹತ್ತು ವರ್ಷ, ಅಪರೂಪದ ವಿಡಿಯೋ ಹಂಚಿಕೊಂಡ ರಾಧಿಕಾ ಪಂಡಿತ್
ರಾಮಮಂದಿರ ದೇಣಿಗೆ ಕಳ್ಳತನ ಖಂಡಿಸಿ ವಿಪಕ್ಷಗಳ ಪ್ರತಿಭಟನೆ
ರಾಮಮಂದಿರ ದೇಣಿಗೆ ಕಳ್ಳತನ ಖಂಡಿಸಿ ವಿಪಕ್ಷಗಳ ಪ್ರತಿಭಟನೆ
ಇನ್ಮುಂದೆ ಬೇಕಾಬಿಟ್ಟಿ ಟ್ಯಾಟೂಗೆ ಬೀಳಲಿದೆ ಸರ್ಕಾರದ ಕಡಿವಾಣ
ಇನ್ಮುಂದೆ ಬೇಕಾಬಿಟ್ಟಿ ಟ್ಯಾಟೂಗೆ ಬೀಳಲಿದೆ ಸರ್ಕಾರದ ಕಡಿವಾಣ
ಸ್ವಾತಂತ್ರೋತ್ಸವದ ಆಹ್ವಾನ ಪತ್ರಿಕೆಯಲ್ಲಿ ಭಾರತೀಯ ಕಲಾ ವೈವಿಧ್ಯದ ಅನಾವರಣ
ಸ್ವಾತಂತ್ರೋತ್ಸವದ ಆಹ್ವಾನ ಪತ್ರಿಕೆಯಲ್ಲಿ ಭಾರತೀಯ ಕಲಾ ವೈವಿಧ್ಯದ ಅನಾವರಣ