AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅಪ್ರಾಪ್ತೆಯ ಖಾಸಗಿ ವಿಡಿಯೋ, ಫೋಟೋ ಹಿಡಿದು ಬ್ಲಾಕ್​ಮೇಲ್! ಹೆದರಿದ ಕುಟುಂಬ ಆತ್ಮಹತ್ಯೆಗೆ ಯತ್ನ

ಆತ ಹೆಂಡತಿ ಸತ್ತ ಮೇಲೆ ಸೈಕೋ ಆಗಿ ತಿರುಗುತ್ತಿದ್ದ. ಚೆಂದದ ಹೆಣ್ಣುಮಕ್ಕಳು ಕಂಡರೆ ಸಾಕು ತನ್ನ ಕಾಮದ ಕಣ್ಣನ್ನ ಬೀರುತ್ತಿದ್ದ. ಹೀಗಿದ್ದಾತನ ಕಣ್ಣು ಪಿಯುಸಿ ವ್ಯಾಸಾಂಗ ಮಾಡುತ್ತಿದ್ದಾಕೆಯ ಮೇಲೆ ಬಿದ್ದಿತ್ತು. ಆಕೆಯ ಖಾಸಗಿ ಫೋಟೋ, ವಿಡಿಯೋವನ್ನ ಸೆರೆ ಹಿಡಿದು ಇನ್ನಿಲ್ಲದ ಟಾರ್ಚರ್ ನೀಡಿದ್ದ. ಬಳಿಕ ಆಗಿದ್ದಾದ್ರು ಏನು ಅಂತೀರಾ? ಈ ಸ್ಟೋರಿ ಓದಿ.

ಅಪ್ರಾಪ್ತೆಯ ಖಾಸಗಿ ವಿಡಿಯೋ, ಫೋಟೋ ಹಿಡಿದು ಬ್ಲಾಕ್​ಮೇಲ್! ಹೆದರಿದ ಕುಟುಂಬ ಆತ್ಮಹತ್ಯೆಗೆ ಯತ್ನ
ಆರೋಪಿ ಲೋಕೇಶ್​
ಸೂರಜ್ ಪ್ರಸಾದ್ ಎಸ್.ಎನ್
| Edited By: ಕಿರಣ್ ಹನುಮಂತ್​ ಮಾದಾರ್|

Updated on: Jun 08, 2024 | 9:04 PM

Share

ಚಾಮರಾಜನಗರ, ಜೂ.08: ಆಕೆ ಈಗ ತಾನೇ ಮೊದಲ ವರ್ಷದ ಪಿಯುಸಿ(PUC) ಮುಗಿಸಿ ದ್ವಿತೀಯ ವರ್ಷಕ್ಕೆ ಅಡ್ಮಿಷನ್ ಆಗಿದ್ದಳು. ಉತ್ತಮ ವ್ಯಾಸಾಂಗ ಪಡೆದು ಐಎಎಸ್ ಅಧಿಕಾರಿ ಆಗುವ ಕನಸ್ಸು ಕಂಡಿದ್ದಳು. ಆದ್ರೆ, ಆಕೆಯ ಬಾಳಲ್ಲಿ ಕಾಮ ಕ್ರಿಮಿಯ ಪ್ರವೇಶವಾಗಿತ್ತು. ಮದ್ವೆಯಾಗಿ ಎರೆಡು ಮಕ್ಕಳಿದ್ದರೂ ಪ್ರೀತ್ಸೆ ಪ್ರೀತ್ಸೆ ಎಂದು ಹಿಂದೆ ಬಿದ್ದಿದ್ದ. ಜೊತೆಗೆ ಆಕೆಯ ಖಾಸಗಿ ಫೋಟೊ, ವಿಡಿಯೋ ಹಿಡಿದು ಬ್ಲಾಕ್​ಮೇಲ್ ಮಾಡಿದ್ದ ಪರಿಣಾಮ ಈಗ ಒಂದೇ ಕುಟುಂಬದ ನಾಲ್ವರು ವಿಷ ಪ್ರಾಶಾಣ ಮಾಡಿದ್ದು, ಓರ್ವ ಮೃತ ಪಟ್ಟಿದ್ರೆ, ಮೂವರ ಸ್ಥಿತಿ ಚಿಂತಾಜನಕವಾಗಿದೆ.

ಹೌದು, ತಾಳ ಬೆಟ್ಟದಲ್ಲಿ ಕೆ.ಆರ್ ನಗರ ತಾಲೂಕಿನ ಚಂದಗಾಲು ಗ್ರಾಮದ ನಾಲ್ವರು ಕ್ರಿಮಿನಾಶಕ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದಾರೆ. ಅದರಲ್ಲಿ ಮಾಹದೇವನಾಯ್ಕ ಎಂಬಾತ ಸಾವನ್ನಪ್ಪಿದ್ರೆ, ಲೀಲಾವತಿ ಗೌರಮ್ಮ ಹಾಗೂ ಅಪ್ರಾಪ್ಥೆಯ ಸ್ಥಿತಿ ಚಿಂತಾಜನಕವಾಗಿದೆ.

ಇದನ್ನೂ ಓದಿ:ಮಹದೇಶ್ವರನ ದರ್ಶನ ಪಡೆದು ವಾಪಸ್ ಬರುವಾಗ ಆತ್ಮಹತ್ಯೆಗೆ ಯತ್ನಿಸಿದ ಕುಟುಂಬ 

ಆಗಿದ್ದೇನು?

ದೂರು ದಾಖಲಿಸಿಕೊಳ್ಳದ ಪೊಲೀಸರು

ಚೀರನಹಳ್ಳಿಯ ಲೋಕೇಶ್​ ಎಂಬಾತನಿಗೆ ಮದ್ವೆಯಾಗಿ ಪತ್ನಿ ಮೃತ ಪಟ್ಟಿದ್ದು, ಇಬ್ಬರು ಮಕ್ಕಳಿದ್ದಾರೆ. ಆದ್ರೆ, ಈ ಕಾಮ ಕ್ರಿಮಿ ದ್ವಿತೀಯ ಪಿಯುಸಿ ವ್ಯಾಸಾಂಗ ಮಾಡುತ್ತಿದ್ದ ಆಪ್ರಾಪ್ಥೆಯ ಮೇಲೆ ಕಣ್ಣಾಕಿದ್ದಾನೆ. ಆಕೆಯ ಖಾಸಗಿ ವಿಡಿಯೋ ಹಾಗೂ ಫೋಟೊ ಇಟ್ಟುಕೊಂಡು ಬ್ಲಾಕ್​ಮೇಲ್ ಮಾಡುತ್ತಿದ್ದ. ಈ ವಿಚಾರ ಅಪ್ರಾಪ್ತೆಯ ಮನೆಯವರಿಗೆ ತಿಳಿದಿದೆ. ಕೆ.ಆರ್ ನಗರ ಪೊಲೀಸ್ ಠಾಣೆಗೆ ತೆರಳಿ ದೂರು ನೀಡಿದ್ದಾರೆ. ಆ ಠಾಣೆಯ ಪಿಎಸ್ಐ ಹಾಗೂ ಇನ್ಸ್ ಪೆಕ್ಟರ್ ಎರೆಡು ಬಾರಿ ಹೋದಾಗಲೂ ದೂರು ತೆಗೆದುಕೊಳ್ಳದೆ ವಾಪಸ್ಸು ಕಳುಹಿಸಿದ್ದಾರೆ.

ಯಾವಾಗ ಪೊಲೀಸ್ ಠಾಣೆ ಮೆಟ್ಟಿಲೇರಿದರೂ ಆಗ ಲೋಕೇಶ್​ ತಂದಗಾಲು ಗ್ರಾಮಕ್ಕೆ ತೆರಳಿ ಸಂತ್ರಸ್ಥ ಯುವತಿ ಮನೆ ಮುಂದೆ ಗಲಾಟೆ ಮಾಡಿದ್ದಾನೆ. ಇದರಿಂದ ಮನನೊಂದ ಕುಟುಂಬಸ್ಥರು ಚಾಮರಾಜನಗರ ಜಿಲ್ಲೆಯ ಹನೂರು ತಾಲೂಕಿನ ಮಲೆ ಮಾದೇಶ್ವರ ಬೆಟ್ಟಕ್ಕೆ ಬಂದು ದೇವರ ದರ್ಶನ ಪಡೆದು ಬಳಿಕ ತಾಳ ಬೆಟ್ಟಕ್ಕೆ ಬಂದು ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದಾರೆ.

ಲೀಲಾವತಿ, ಗೌರಮ್ಮ, ಹಾಗೂ ಅಪ್ರಾಪ್ಥೆ ವಿಷ ಪ್ರಾಶಾಣದಿಂದ ಗಂಭೀರವಾಗಿದ್ರೆ, ಅತ್ತ ಮಹದೇವನಾಯ್ಕ ಮೃತ ಪಟ್ಟಿದ್ದಾರೆ. ಸದ್ಯ ಮೂವರಿಗೆ ಆಸ್ಪತ್ರೆಯಲ್ಲಿ ಚಿಕಿತ್ಸೆ ಮುಂದುವರೆದಿದ್ದು, ಮಹದೇವನಾಯ್ಕರ ಮೃತದೇಹವನ್ನ ಮರಣೋತ್ತರ ಪರೀಕ್ಷೆಗಾಗಿ ಹನೂರು ಸರ್ಕಾರಿ ಆಸ್ಪತ್ರೆಗೆ ರವಾನಿಸಲಾಗಿದೆ. ಅದೇನೆ ಹೇಳಿ ಉನ್ನತ ವ್ಯಾಸಾಂಗ ಮಾಡಿ ಐಎಎಸ್ ಅಧಿಕಾರಿಯಾಗಬೇಕು ಎಂಬ ಕನಸು ಕಟ್ಟಿದ್ದ ಬಾಲೆಯ ಬಾಳಲ್ಲಿ ನಡೆದಿದ್ದು ಮಾತ್ರ ಘೋರ ದುರಂತ. ದೂರು ದಾಖಲಿಸಿಕೊಳ್ಳದ ಪೊಲೀಸರ ವಿರುದ್ದ ಕಠಿಣ ಕ್ರಮ ಆಗಬೇಕಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
Suraj Prasad SN
Suraj Prasad SN

ಸೂರಜ್ ಪ್ರಸಾದ್ ಎಸ್.ಎನ್ ಆದ ನಾನು ಹುಟ್ಟಿದ್ದು ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿಯಲ್ಲಿ. ಬೆಳೆದಿದ್ದು ದಾವಣಗರೆ ಜಿಲ್ಲೆ ನ್ಯಾಮತಿ ತಾಲೂಕಿನಲ್ಲಿ. ಶಿವಮೊಗ್ಗದ ಸಹ್ಯಾದ್ರಿ ಕಾಲೇಜ್ ನಲ್ಲಿ ಪತ್ರಿಕೋದ್ಯಮದಲ್ಲಿ ಪದವಿಪೂರ್ವ ಶಿಕ್ಷಣ ಪಡೆದಿದ್ದು 2014ರಿಂದ ನನ್ನ ಎಲೆಕ್ಟ್ರಾನಿಕ್ ಮಾದ್ಯಮದ ವೃತ್ತಿ ಜೀವನವನ್ನ ಬೆಂಗಳೂರಿನಲ್ಲಿ ಕ್ರೈಂ ಬೀಟ್ ವರದಿಗಾರನಾಗಿ ಆರಂಭಿಸಿದ್ದು ಬೆಂಗಳೂರಿನಲ್ಲಿ 8 ವರ್ಷಗಳ ಕ್ರೈಂ ವರದಿಗಾರನಾಗಿ ಸೇವೆ ಸಲ್ಲಿಸಿ. ನಾಲ್ಕು ಸಂಸ್ಥೆಯಲ್ಲಿ ಕ್ರೈಂ ರಿಪೋರ್ಟರ್ ಹಾಗೂ ಕ್ರೈಂ ಇನ್ವೆಸ್ಟಿಗೇಟಿವ್ ವರದಿಗಾರನಾಗಿ ಹಾಗೂ ಸ್ಟಿಂಗ್ ಅಪರೇಷನ್ ಗಳನ್ನ ಮಾಡಿದ್ದೇನೆ. ಗೌರಿ ಲಂಕೇಶ್ ಕೊಲೆ ಕೇಸನ್ನ ರಾಜ್ಯದಲ್ಲೇ ಮೊದಲು ಬ್ರೇಕ್ ಮಾಡಿ ಈ ಹಿಂದಿನ ಸಂಸ್ಥೆಯಿಂದ ಪ್ರಶಂಸೆ ಪಡೆದಿರುತ್ನೇನೆ2019 ರಲ್ಲಿ ಪಿಎಸ್ಐ ಅಕ್ರಮದ ಸ್ಟಿಂಗ್ ಆಪರೇಷನ್ ಹಾಗೂ ಬೆಂಗಳೂರು ಸಿಂಥಟಿಕ್ ಡ್ರಗ್ ಮಾಫಿಯಾದ ಸ್ಟಿಂಗ್ ಆಪರೇಷನ್ ಮಾಡಿದ್ದು. ಕಳೆದ 10 ವರ್ಷಗಳಿಂದ ಸಕ್ರೀಯವಾಗಿ ಕಾರ್ಯ ನಿರ್ವಹಿಸುತ್ತಿದ್ದೇನೆ. ಟಿವಿ9 ಸಂಸ್ಥೆಗೆ ಮಂಡ್ಯ ಜಿಲ್ಲಾ ವರದಿಗಾರನಾಗಿ ಕೆಲಸ ಮಾಡಿ ಬಳಿಕ ಚಾಮರಾಜನಗರಕ್ಕೆ ವರ್ಗಾವಣೆಯಾಗಿ ಈಗ ಪ್ರಸ್ಥುತ ಚಾಮರಾಜನಗರ ಜಿಲ್ಲಾ ವರದಿಗಾರನಾಗಿ ಕೆಲಸ ಮಾಡುತ್ತಿದ್ದೇನೆ. ಹವ್ಯಾಸ ಅಡಿಗೆ ಮಾಡುವುದು, ಕ್ರಿಕೆಟ್ ಆಡುವುದು ಕ್ರೈಂ ಇನ್ವೆಷ್ಟಿಗೇಷನ್ ನಾವೆಲ್ ಗಳನ್ನ ಓದುವುದು.

Read More
ಟೆಸ್ಟ್ ಪಂದ್ಯಕ್ಕಾಗಿ ಅಭ್ಯಾಸ ಆರಂಭಿಸಿದ ಟೀಂ ಇಂಡಿಯಾ
ಟೆಸ್ಟ್ ಪಂದ್ಯಕ್ಕಾಗಿ ಅಭ್ಯಾಸ ಆರಂಭಿಸಿದ ಟೀಂ ಇಂಡಿಯಾ
ವಿಧಾನಸೌಧದ ಮೆಟ್ಟಿಲುಗಳಿಗೆ ಸಿಎಂ ಡಿಕೆಶಿಯಿಂದ ದೀರ್ಘದಂಡ ನಮಸ್ಕಾರ
ವಿಧಾನಸೌಧದ ಮೆಟ್ಟಿಲುಗಳಿಗೆ ಸಿಎಂ ಡಿಕೆಶಿಯಿಂದ ದೀರ್ಘದಂಡ ನಮಸ್ಕಾರ
ಮುಂದಿನ ಪೀಳಿಗೆ ಕೂಡ ಡಿಕೆಶಿ ಸಾಧನೆ ಬಗ್ಗೆ ಮಾತಾಡುವಂತೆ ಕೆಲಸ ಆಗಲಿ: ರಮೇಶ್
ಮುಂದಿನ ಪೀಳಿಗೆ ಕೂಡ ಡಿಕೆಶಿ ಸಾಧನೆ ಬಗ್ಗೆ ಮಾತಾಡುವಂತೆ ಕೆಲಸ ಆಗಲಿ: ರಮೇಶ್
ಡಿಕೆ ಶಿವಕುಮಾರ್ ಪದಗ್ರಹಣದ ಬಗ್ಗೆ ಶಿವರಾಜ್ ಕುಮಾರ್ ಮಾತು: ವಿಡಿಯೋ
ಡಿಕೆ ಶಿವಕುಮಾರ್ ಪದಗ್ರಹಣದ ಬಗ್ಗೆ ಶಿವರಾಜ್ ಕುಮಾರ್ ಮಾತು: ವಿಡಿಯೋ
ಸಚಿವರಾಗಿ ಪ್ರಮಾಣದ ಬೆನ್ನಲ್ಲೇ ತಂದೆ ಸಿದ್ದರಾಮಯ್ಯ ಆಶೀರ್ವಾದ ಪಡೆದ ಯತೀಂದ್ರ
ಸಚಿವರಾಗಿ ಪ್ರಮಾಣದ ಬೆನ್ನಲ್ಲೇ ತಂದೆ ಸಿದ್ದರಾಮಯ್ಯ ಆಶೀರ್ವಾದ ಪಡೆದ ಯತೀಂದ್ರ
ಡಿಕೆ ಶಿವಕುಮಾರ್ ಸಿಎಂ ಆಗಿದ್ದಕ್ಕೆ ತುಂಬಾ ಖುಷಿ ಆಗುತ್ತಿದೆ: ನಟಿ ರಮ್ಯಾ
ಡಿಕೆ ಶಿವಕುಮಾರ್ ಸಿಎಂ ಆಗಿದ್ದಕ್ಕೆ ತುಂಬಾ ಖುಷಿ ಆಗುತ್ತಿದೆ: ನಟಿ ರಮ್ಯಾ
ಡಿಕೆಶಿ ಪದಗ್ರಹಣದ ಬೆನ್ನಲ್ಲೇ ವಿಧಾನಸೌಧದಲ್ಲಿ ಬದಲಾದ ಸಿಎಂ ಕಚೇರಿ ನಾಮಫಲಕ
ಡಿಕೆಶಿ ಪದಗ್ರಹಣದ ಬೆನ್ನಲ್ಲೇ ವಿಧಾನಸೌಧದಲ್ಲಿ ಬದಲಾದ ಸಿಎಂ ಕಚೇರಿ ನಾಮಫಲಕ
ಡಿಸಿಎಂ ಆಗಿ ಪರಮೇಶ್ವರ್ ಪ್ರಮಾಣವಚನ, ಇಲ್ಲಿದೆ ಇವರ ರಾಜಕೀಯ ಜರ್ನಿ
ಡಿಸಿಎಂ ಆಗಿ ಪರಮೇಶ್ವರ್ ಪ್ರಮಾಣವಚನ, ಇಲ್ಲಿದೆ ಇವರ ರಾಜಕೀಯ ಜರ್ನಿ
ಸಂವಿಧಾನ ಹಿಡಿದು, ಅಜ್ಜಯ್ಯನ ಹೆಸರಲ್ಲಿ ಪ್ರಮಾಣವಚನ ಸ್ವೀಕರಿಸಿದ ಡಿಕೆಶಿ
ಸಂವಿಧಾನ ಹಿಡಿದು, ಅಜ್ಜಯ್ಯನ ಹೆಸರಲ್ಲಿ ಪ್ರಮಾಣವಚನ ಸ್ವೀಕರಿಸಿದ ಡಿಕೆಶಿ
ಕಾರಿನಲ್ಲಿ ಕುಳಿತೇ ಅಭಿಮಾನಿಗಳಿಗೆ ಫ್ಲೈಯಿಂಗ್ ಕಿಸ್ ಕೊಟ್ಟ ರಾಹುಲ್ ಗಾಂಧಿ
ಕಾರಿನಲ್ಲಿ ಕುಳಿತೇ ಅಭಿಮಾನಿಗಳಿಗೆ ಫ್ಲೈಯಿಂಗ್ ಕಿಸ್ ಕೊಟ್ಟ ರಾಹುಲ್ ಗಾಂಧಿ