AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹೈಕೋರ್ಟ್ ಆದೇಶಕ್ಕೂ ಅಧಿಕಾರಿಗಳು ಡೊಂಟ್​ಕೇರ್​; ಮಹಿಳೆಗೆ ಕೆಲಸ ನೀಡಲು ಮೀನಾಮೇಷ

ದೇವರು ವರ ಕೊಟ್ಟರೂ ಪೂಜಾರಿ ವರ ಕೊಟ್ಟಿಲ್ಲ ಎನ್ನುವ ಹಾಗಾಗಿದೆ ಚಾಮರಾಜನಗರ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಅಧಿಕಾರಿಗಳ ನಡೆ. ನ್ಯಾಯಯುತವಾಗಿ ಸಿಗಬೇಕಿದ್ದ ಕೆಲಸಕ್ಕೆ ಅಡ್ಡಿಯಾದ ಅಧಿಕಾರಿಗಳ ವಿರುದ್ದ ದೂರುದಾರೆ ಆಕ್ರೋಶ ಹೊರಹಾಕುತ್ತಿದ್ದಾರೆ. ಅಷ್ಟಕ್ಕೂ ಆಗಿದ್ದಾದರೂ ಏನು ಅಂತೀರಾ? ಈ ಸ್ಟೋರಿ ಓದಿ.

ಹೈಕೋರ್ಟ್ ಆದೇಶಕ್ಕೂ ಅಧಿಕಾರಿಗಳು ಡೊಂಟ್​ಕೇರ್​; ಮಹಿಳೆಗೆ ಕೆಲಸ ನೀಡಲು ಮೀನಾಮೇಷ
ಹೈಕೋಟ್​ ಆದೇಶವಿದ್ದರೂ ಚಾಮರಾಜನಗರದಲ್ಲಿ ಮಹಿಳೆಗೆ ಕೆಲಸ ನೀಡಲು ಅಧಿಕಾರಿಗಳು ಮೀನಾಮೇಷ
ಸೂರಜ್ ಪ್ರಸಾದ್ ಎಸ್.ಎನ್
| Edited By: ಕಿರಣ್ ಹನುಮಂತ್​ ಮಾದಾರ್|

Updated on: Aug 20, 2024 | 7:18 PM

Share

ಚಾಮರಾಜನಗರ, ಆ.20: ತನ್ನ ಕೆಲಸ ಪಡೆದುಕೊಳ್ಳಲು ಕಚೇರಿಯಿಂದ ಕಚೇರಿ ತಿರುಗುತ್ತಿರುವ ಮಹಿಳೆ ಹೆಸರು ಮಂಜುಳಾ, ಚಾಮರಾಜನಗರ (Chamarajanagar) ತಾಲೂಕಿನ ಮಲ್ಲಯ್ಯನಪುರ ಗ್ರಾಮಸ್ಥೆ. 25 ವರ್ಷಗಳಿಂದ ಅತ್ತೆ ನಾಗಮ್ಮ ಮಲ್ಲಯ್ಯನಪುರ ಗ್ರಾಮದ ಅಂಗನವಾಡಿಯಲ್ಲಿ ಶಿಕ್ಷಕಿಯಾಗಿ ಸೇವೆ ಸಲ್ಲಿಸುತ್ತಿದ್ದರು. ಆದ್ರೆ, ಸೇವಾ ಅವಧಿ ಮುಗಿಯುವ ಮೊದಲೇ ನಾಗಮ್ಮ ಅವರು ಅನಾರೋಗ್ಯ ಕಾರಣದಿಂದ ಮೃತ ಪಟ್ಟಿದ್ದಾರೆ. ಈ ಹಿನ್ನಲೆ ಅನುಕಂಪ ಆಧಾರದ ಮೇಲೆ ಕೆಲಸ ನೀಡುವಂತೆ ಮನವಿ ಮಾಡಿದರು. ಮೊದಲು ಬಿಡುಗಡೆಯಾದ ಜಾಬ್ ಲೀಸ್ಟ್​ನಲ್ಲಿ ಮಂಜುಳಾ ಹೆಸರು ಕೂಡ ಬಂದಿತ್ತು. ಆದ್ರೆ, ಮಂಜುಳಾಗೆ ಕೆಲಸ ನೀಡದೆ ಸ್ಥಳೀಯರಲ್ಲದ ಬೇರೊಬ್ಬರಿಗೆ ಇಲಾಖೆ ಕೆಲಸ ನೀಡಿದೆ.

ಹೈಕೋರ್ಟ್ ಮೊರೆ ಹೋಗಿದ್ದ ಮಂಜುಳಾ

ಯಾವಾಗ ಮಂಜುಳಾಗೆ ಕೆಲಸ ಸಿಗಲಿಲ್ಲವೋ ಆಕೆ ಹೈಕೋರ್ಟ್​ಗೆ ಮನವಿ ಸಲ್ಲಿಸಿದ್ದರು. ಸುದೀರ್ಘವಾಗಿ ವಿಚಾರಣೆ ನಡೆಸಿದ ಮಾನ್ಯ ಉಚ್ಛನ್ಯಾಯಾಲಯ, ಈಗ ಮಂಜುಳಾರಿಗೆ ಕೆಲಸ ನೀಡುವಂತೆ ಆದೇಶಿಸಿದೆ. ಅದು ಅಲ್ಲದೆ ನ್ಯಾಯಾಲಯದ ಆದೇಶ ಬಂದು ಎರಡು ವಾರ ಕಳೆಯುವುದರೊಳಗೆ ಕೆಲಸ ನೀಡುವಂತೆ ಸೂಚಿಸಿದರೂ ಮಹಿಳಾ ಮತ್ತು ಮಕ್ಕಳ ಕಲ್ಯಾಣಾಧಿಕಾರಿಗಳು ಕೆಲಸ ನೀಡದೆ ಅಲೆದಾಡಿಸುತ್ತಿದ್ದಾರೆ.

ಇದನ್ನೂ ಓದಿ:ಶಿರೂರು ಗುಡ್ಡ ಕುಸಿತ; ತಿಂಗಳು ಕಳೆದರೂ ಸಂತ್ರಸ್ಥರಿಗೆ ಸಿಕ್ಕಿಲ್ಲ ಇನ್ನೂ ಪರಿಹಾರ

ಹೈಕೋರ್ಟ್ ಆದೇಶಕ್ಕೆ ಅಧಿಕಾರಿಗಳು ಕವಡೆ ಕಾಸಿನ ಕಿಮ್ಮತ್ತು ನೀಡದೆ ನಮ್ಮನ್ನ ಸತಾಯಿಸ್ತಾ ಇದ್ದಾರೆ ಎಂದು ದೂರುದಾರೆ ಮಂಜುಳಾ ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ. ಈ ಮೂಲಕ  ಕೋರ್ಟ್ ಆದೇಶಕ್ಕೂ ಅಧಿಕಾರಿಗಳು ಕವಡೆ ಕಾಸಿನ ಕಿಮ್ಮತ್ತು ಕೊಡುತ್ತಿಲ್ಲವಾ ಎಂಬ ಪ್ರಶ್ನೆ ಮೂಡಿದೆ. ಈಗ ದೂರುದಾರೆ ಮಂಜುಳ “ಕಟ್ಮೆಂಟ್” ಆಫ್ ಕೋರ್ಟ್ ಅರ್ಜಿ ಸಲ್ಲಿಸಲು ಮುಂದಾಗಿದ್ದು, ನಿರ್ಲಕ್ಷ್ಯ ವಹಿಸಿದ ಅಧಿಕಾರಿಗಳಿಗೆ ತಕ್ಕ ಶಾಸ್ತಿಯಾಗುವ ಸಾಧ್ಯತೆಯಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
ಒಮೈದಿಯಾ ಏರ್​ಪೋರ್ಟ್​ ಮೇಲೆ ಅಮೆರಿಕ ಬಾಂಬ್ ದಾಳಿ
ಒಮೈದಿಯಾ ಏರ್​ಪೋರ್ಟ್​ ಮೇಲೆ ಅಮೆರಿಕ ಬಾಂಬ್ ದಾಳಿ
Dudhsagar Falls: ಹಾಲಿನ ಕಡಲಿನಂತೆ ಹರಿಯುತ್ತಿದೆ ದೂದ್‌ ಸಾಗರ್​!
Dudhsagar Falls: ಹಾಲಿನ ಕಡಲಿನಂತೆ ಹರಿಯುತ್ತಿದೆ ದೂದ್‌ ಸಾಗರ್​!
ಸ್ಕೂಟಿಯಲ್ಲಿ ಗಾಂಜಾ ಮಾರಲು ಬಂದು ಪೊಲೀಸರ ಕೈಗೆ ಸಿಕ್ಕಿಬಿದ್ದ ಮಹಿಳೆ
ಸ್ಕೂಟಿಯಲ್ಲಿ ಗಾಂಜಾ ಮಾರಲು ಬಂದು ಪೊಲೀಸರ ಕೈಗೆ ಸಿಕ್ಕಿಬಿದ್ದ ಮಹಿಳೆ
ಮಿಥುನ ರಾಶಿಯಲ್ಲಿ ಸೂರ್ಯ, ಚಂದ್ರ ಸಂಚಾರ: ಇಂದಿನ ರಾಶಿ ಭವಿಷ್ಯ ಹೇಗಿದೆ ನೋಡಿ
ಮಿಥುನ ರಾಶಿಯಲ್ಲಿ ಸೂರ್ಯ, ಚಂದ್ರ ಸಂಚಾರ: ಇಂದಿನ ರಾಶಿ ಭವಿಷ್ಯ ಹೇಗಿದೆ ನೋಡಿ
ಎಸ್ ಜಾನಕಿ ಅವರೊಟ್ಟಿಗಿನ ಅನುಬಂಧ ನೆನೆದ ಹಿರಿಯ ನಟ ಶ್ರೀನಾಥ್
ಎಸ್ ಜಾನಕಿ ಅವರೊಟ್ಟಿಗಿನ ಅನುಬಂಧ ನೆನೆದ ಹಿರಿಯ ನಟ ಶ್ರೀನಾಥ್
ಬೆಳೆ ಹಾನಿ ಪರಿಹಾರದ ಬಗ್ಗೆ ಸರ್ಕಾರ ನಿರ್ಧಾರ ಮಾಡುತ್ತದೆ: ಸತೀಶ್ ಜಾರಕಿಹೊಳಿ
ಬೆಳೆ ಹಾನಿ ಪರಿಹಾರದ ಬಗ್ಗೆ ಸರ್ಕಾರ ನಿರ್ಧಾರ ಮಾಡುತ್ತದೆ: ಸತೀಶ್ ಜಾರಕಿಹೊಳಿ
ಹೊಳೆ ದಾಟೋಕೆ ದೊಣ್ಣೆ‌ನಾಯಕನ ಅಪ್ಪಣೆ ಬೇಕೆ: ಖರ್ಗೆಗೆ ಜೋಶಿ ತಿರುಗೇಟು
ಹೊಳೆ ದಾಟೋಕೆ ದೊಣ್ಣೆ‌ನಾಯಕನ ಅಪ್ಪಣೆ ಬೇಕೆ: ಖರ್ಗೆಗೆ ಜೋಶಿ ತಿರುಗೇಟು
ಎಸ್ ಜಾನಕಿ ಅವರಿಗೆ ಗೌರವ ವಂದನೆ ಸಮರ್ಪಣೆ: ವಿಡಿಯೋ ನೋಡಿ
ಎಸ್ ಜಾನಕಿ ಅವರಿಗೆ ಗೌರವ ವಂದನೆ ಸಮರ್ಪಣೆ: ವಿಡಿಯೋ ನೋಡಿ
ಎಸ್ ಜಾನಕಿ ಅವರಿಗಿದ್ದ ನೋವೇನು? ಭಾರತಿ ವಿಷ್ಣುವರ್ಧನ್ ಮಾತು
ಎಸ್ ಜಾನಕಿ ಅವರಿಗಿದ್ದ ನೋವೇನು? ಭಾರತಿ ವಿಷ್ಣುವರ್ಧನ್ ಮಾತು
ಜಾನಕಮ್ಮ ಸ್ಮಾರಕಕ್ಕೆ ಬೇಡಿಕೆ: ಶೀಘ್ರದಲ್ಲೇ ತೀರ್ಮಾನ ಮಾಡ್ತೀವಿ ಎಂದ ಯತೀಂದ್
ಜಾನಕಮ್ಮ ಸ್ಮಾರಕಕ್ಕೆ ಬೇಡಿಕೆ: ಶೀಘ್ರದಲ್ಲೇ ತೀರ್ಮಾನ ಮಾಡ್ತೀವಿ ಎಂದ ಯತೀಂದ್