AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹೈಕೋರ್ಟ್ ಆದೇಶಕ್ಕೂ ಅಧಿಕಾರಿಗಳು ಡೊಂಟ್​ಕೇರ್​; ಮಹಿಳೆಗೆ ಕೆಲಸ ನೀಡಲು ಮೀನಾಮೇಷ

ದೇವರು ವರ ಕೊಟ್ಟರೂ ಪೂಜಾರಿ ವರ ಕೊಟ್ಟಿಲ್ಲ ಎನ್ನುವ ಹಾಗಾಗಿದೆ ಚಾಮರಾಜನಗರ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಅಧಿಕಾರಿಗಳ ನಡೆ. ನ್ಯಾಯಯುತವಾಗಿ ಸಿಗಬೇಕಿದ್ದ ಕೆಲಸಕ್ಕೆ ಅಡ್ಡಿಯಾದ ಅಧಿಕಾರಿಗಳ ವಿರುದ್ದ ದೂರುದಾರೆ ಆಕ್ರೋಶ ಹೊರಹಾಕುತ್ತಿದ್ದಾರೆ. ಅಷ್ಟಕ್ಕೂ ಆಗಿದ್ದಾದರೂ ಏನು ಅಂತೀರಾ? ಈ ಸ್ಟೋರಿ ಓದಿ.

ಹೈಕೋರ್ಟ್ ಆದೇಶಕ್ಕೂ ಅಧಿಕಾರಿಗಳು ಡೊಂಟ್​ಕೇರ್​; ಮಹಿಳೆಗೆ ಕೆಲಸ ನೀಡಲು ಮೀನಾಮೇಷ
ಹೈಕೋಟ್​ ಆದೇಶವಿದ್ದರೂ ಚಾಮರಾಜನಗರದಲ್ಲಿ ಮಹಿಳೆಗೆ ಕೆಲಸ ನೀಡಲು ಅಧಿಕಾರಿಗಳು ಮೀನಾಮೇಷ
ಸೂರಜ್ ಪ್ರಸಾದ್ ಎಸ್.ಎನ್
| Edited By: ಕಿರಣ್ ಹನುಮಂತ್​ ಮಾದಾರ್|

Updated on: Aug 20, 2024 | 7:18 PM

Share

ಚಾಮರಾಜನಗರ, ಆ.20: ತನ್ನ ಕೆಲಸ ಪಡೆದುಕೊಳ್ಳಲು ಕಚೇರಿಯಿಂದ ಕಚೇರಿ ತಿರುಗುತ್ತಿರುವ ಮಹಿಳೆ ಹೆಸರು ಮಂಜುಳಾ, ಚಾಮರಾಜನಗರ (Chamarajanagar) ತಾಲೂಕಿನ ಮಲ್ಲಯ್ಯನಪುರ ಗ್ರಾಮಸ್ಥೆ. 25 ವರ್ಷಗಳಿಂದ ಅತ್ತೆ ನಾಗಮ್ಮ ಮಲ್ಲಯ್ಯನಪುರ ಗ್ರಾಮದ ಅಂಗನವಾಡಿಯಲ್ಲಿ ಶಿಕ್ಷಕಿಯಾಗಿ ಸೇವೆ ಸಲ್ಲಿಸುತ್ತಿದ್ದರು. ಆದ್ರೆ, ಸೇವಾ ಅವಧಿ ಮುಗಿಯುವ ಮೊದಲೇ ನಾಗಮ್ಮ ಅವರು ಅನಾರೋಗ್ಯ ಕಾರಣದಿಂದ ಮೃತ ಪಟ್ಟಿದ್ದಾರೆ. ಈ ಹಿನ್ನಲೆ ಅನುಕಂಪ ಆಧಾರದ ಮೇಲೆ ಕೆಲಸ ನೀಡುವಂತೆ ಮನವಿ ಮಾಡಿದರು. ಮೊದಲು ಬಿಡುಗಡೆಯಾದ ಜಾಬ್ ಲೀಸ್ಟ್​ನಲ್ಲಿ ಮಂಜುಳಾ ಹೆಸರು ಕೂಡ ಬಂದಿತ್ತು. ಆದ್ರೆ, ಮಂಜುಳಾಗೆ ಕೆಲಸ ನೀಡದೆ ಸ್ಥಳೀಯರಲ್ಲದ ಬೇರೊಬ್ಬರಿಗೆ ಇಲಾಖೆ ಕೆಲಸ ನೀಡಿದೆ.

ಹೈಕೋರ್ಟ್ ಮೊರೆ ಹೋಗಿದ್ದ ಮಂಜುಳಾ

ಯಾವಾಗ ಮಂಜುಳಾಗೆ ಕೆಲಸ ಸಿಗಲಿಲ್ಲವೋ ಆಕೆ ಹೈಕೋರ್ಟ್​ಗೆ ಮನವಿ ಸಲ್ಲಿಸಿದ್ದರು. ಸುದೀರ್ಘವಾಗಿ ವಿಚಾರಣೆ ನಡೆಸಿದ ಮಾನ್ಯ ಉಚ್ಛನ್ಯಾಯಾಲಯ, ಈಗ ಮಂಜುಳಾರಿಗೆ ಕೆಲಸ ನೀಡುವಂತೆ ಆದೇಶಿಸಿದೆ. ಅದು ಅಲ್ಲದೆ ನ್ಯಾಯಾಲಯದ ಆದೇಶ ಬಂದು ಎರಡು ವಾರ ಕಳೆಯುವುದರೊಳಗೆ ಕೆಲಸ ನೀಡುವಂತೆ ಸೂಚಿಸಿದರೂ ಮಹಿಳಾ ಮತ್ತು ಮಕ್ಕಳ ಕಲ್ಯಾಣಾಧಿಕಾರಿಗಳು ಕೆಲಸ ನೀಡದೆ ಅಲೆದಾಡಿಸುತ್ತಿದ್ದಾರೆ.

ಇದನ್ನೂ ಓದಿ:ಶಿರೂರು ಗುಡ್ಡ ಕುಸಿತ; ತಿಂಗಳು ಕಳೆದರೂ ಸಂತ್ರಸ್ಥರಿಗೆ ಸಿಕ್ಕಿಲ್ಲ ಇನ್ನೂ ಪರಿಹಾರ

ಹೈಕೋರ್ಟ್ ಆದೇಶಕ್ಕೆ ಅಧಿಕಾರಿಗಳು ಕವಡೆ ಕಾಸಿನ ಕಿಮ್ಮತ್ತು ನೀಡದೆ ನಮ್ಮನ್ನ ಸತಾಯಿಸ್ತಾ ಇದ್ದಾರೆ ಎಂದು ದೂರುದಾರೆ ಮಂಜುಳಾ ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ. ಈ ಮೂಲಕ  ಕೋರ್ಟ್ ಆದೇಶಕ್ಕೂ ಅಧಿಕಾರಿಗಳು ಕವಡೆ ಕಾಸಿನ ಕಿಮ್ಮತ್ತು ಕೊಡುತ್ತಿಲ್ಲವಾ ಎಂಬ ಪ್ರಶ್ನೆ ಮೂಡಿದೆ. ಈಗ ದೂರುದಾರೆ ಮಂಜುಳ “ಕಟ್ಮೆಂಟ್” ಆಫ್ ಕೋರ್ಟ್ ಅರ್ಜಿ ಸಲ್ಲಿಸಲು ಮುಂದಾಗಿದ್ದು, ನಿರ್ಲಕ್ಷ್ಯ ವಹಿಸಿದ ಅಧಿಕಾರಿಗಳಿಗೆ ತಕ್ಕ ಶಾಸ್ತಿಯಾಗುವ ಸಾಧ್ಯತೆಯಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
Suraj Prasad SN
Suraj Prasad SN

ಸೂರಜ್ ಪ್ರಸಾದ್ ಎಸ್.ಎನ್ ಆದ ನಾನು ಹುಟ್ಟಿದ್ದು ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿಯಲ್ಲಿ. ಬೆಳೆದಿದ್ದು ದಾವಣಗರೆ ಜಿಲ್ಲೆ ನ್ಯಾಮತಿ ತಾಲೂಕಿನಲ್ಲಿ. ಶಿವಮೊಗ್ಗದ ಸಹ್ಯಾದ್ರಿ ಕಾಲೇಜ್ ನಲ್ಲಿ ಪತ್ರಿಕೋದ್ಯಮದಲ್ಲಿ ಪದವಿಪೂರ್ವ ಶಿಕ್ಷಣ ಪಡೆದಿದ್ದು 2014ರಿಂದ ನನ್ನ ಎಲೆಕ್ಟ್ರಾನಿಕ್ ಮಾದ್ಯಮದ ವೃತ್ತಿ ಜೀವನವನ್ನ ಬೆಂಗಳೂರಿನಲ್ಲಿ ಕ್ರೈಂ ಬೀಟ್ ವರದಿಗಾರನಾಗಿ ಆರಂಭಿಸಿದ್ದು ಬೆಂಗಳೂರಿನಲ್ಲಿ 8 ವರ್ಷಗಳ ಕ್ರೈಂ ವರದಿಗಾರನಾಗಿ ಸೇವೆ ಸಲ್ಲಿಸಿ. ನಾಲ್ಕು ಸಂಸ್ಥೆಯಲ್ಲಿ ಕ್ರೈಂ ರಿಪೋರ್ಟರ್ ಹಾಗೂ ಕ್ರೈಂ ಇನ್ವೆಸ್ಟಿಗೇಟಿವ್ ವರದಿಗಾರನಾಗಿ ಹಾಗೂ ಸ್ಟಿಂಗ್ ಅಪರೇಷನ್ ಗಳನ್ನ ಮಾಡಿದ್ದೇನೆ. ಗೌರಿ ಲಂಕೇಶ್ ಕೊಲೆ ಕೇಸನ್ನ ರಾಜ್ಯದಲ್ಲೇ ಮೊದಲು ಬ್ರೇಕ್ ಮಾಡಿ ಈ ಹಿಂದಿನ ಸಂಸ್ಥೆಯಿಂದ ಪ್ರಶಂಸೆ ಪಡೆದಿರುತ್ನೇನೆ2019 ರಲ್ಲಿ ಪಿಎಸ್ಐ ಅಕ್ರಮದ ಸ್ಟಿಂಗ್ ಆಪರೇಷನ್ ಹಾಗೂ ಬೆಂಗಳೂರು ಸಿಂಥಟಿಕ್ ಡ್ರಗ್ ಮಾಫಿಯಾದ ಸ್ಟಿಂಗ್ ಆಪರೇಷನ್ ಮಾಡಿದ್ದು. ಕಳೆದ 10 ವರ್ಷಗಳಿಂದ ಸಕ್ರೀಯವಾಗಿ ಕಾರ್ಯ ನಿರ್ವಹಿಸುತ್ತಿದ್ದೇನೆ. ಟಿವಿ9 ಸಂಸ್ಥೆಗೆ ಮಂಡ್ಯ ಜಿಲ್ಲಾ ವರದಿಗಾರನಾಗಿ ಕೆಲಸ ಮಾಡಿ ಬಳಿಕ ಚಾಮರಾಜನಗರಕ್ಕೆ ವರ್ಗಾವಣೆಯಾಗಿ ಈಗ ಪ್ರಸ್ಥುತ ಚಾಮರಾಜನಗರ ಜಿಲ್ಲಾ ವರದಿಗಾರನಾಗಿ ಕೆಲಸ ಮಾಡುತ್ತಿದ್ದೇನೆ. ಹವ್ಯಾಸ ಅಡಿಗೆ ಮಾಡುವುದು, ಕ್ರಿಕೆಟ್ ಆಡುವುದು ಕ್ರೈಂ ಇನ್ವೆಷ್ಟಿಗೇಷನ್ ನಾವೆಲ್ ಗಳನ್ನ ಓದುವುದು.

Read More