AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Chamarajanagar News: ಹಳೆ ದ್ವೇಷಕ್ಕೆ ಟೊಮೆಟೊ ಬೆಳೆ ನಾಶ, ಮುಗಿಲು ಮುಟ್ಟಿದ ಅನ್ನದಾತನ ಆಕ್ರಂದನ

ಚಾಮರಾಜನಗರ ತಾಲೂಕಿನ ಕೆಬ್ಬೇಪುರ ಗ್ರಾಮದಲ್ಲಿ ಹಳೆ ವೈಶಮ್ಯ ಹಿನ್ನಲೆ ತೋಟಕ್ಕೆ ನುಗ್ಗಿ ಟೊಮೆಟೊ ಬೆಳೆಯನ್ನ ನಾಶಪಡಿಸಿದ ಘಟನೆ ನಡೆದಿದೆ. ವಿಷಯ ತಿಳಿದ ರೈತ ಜಮೀನಿನಲ್ಲಿ ಹೊರಳಾಡಿ ಕಣ್ಣೀರು‌ ಹಾಕುತ್ತಿದ್ದಾನೆ.

Chamarajanagar News: ಹಳೆ ದ್ವೇಷಕ್ಕೆ ಟೊಮೆಟೊ ಬೆಳೆ ನಾಶ, ಮುಗಿಲು ಮುಟ್ಟಿದ ಅನ್ನದಾತನ ಆಕ್ರಂದನ
ಚಾಮರಾಜನಗರದಲ್ಲಿ ಟೊಮೆಟೊ ಬೆಳೆ ನಾಶ ಮಾಡಿದ ದುಷ್ಕರ್ಮಿಗಳು
ಸೂರಜ್ ಪ್ರಸಾದ್ ಎಸ್.ಎನ್
| Edited By: |

Updated on:Aug 03, 2023 | 11:48 AM

Share

ಚಾಮರಾಜನಗರ, ಆ.3: ಹಳೆ ವೈಶಮ್ಯ ಹಿನ್ನಲೆ ತೋಟಕ್ಕೆ ನುಗ್ಗಿ ಟೊಮೆಟೊ(Tomato) ಬೆಳೆಯನ್ನ ನಾಶಪಡಿಸಿದ ಘಟನೆ ಚಾಮರಾಜನಗರ (Chamarajanagar) ತಾಲೂಕಿನ ಕೆಬ್ಬೇಪುರ ಗ್ರಾಮದಲ್ಲಿ ನಡೆದಿದೆ. ಗ್ರಾಮದ ಮಂಜು ಎಂಬುವವರು ತಮ್ಮ ಎರಡು ಎಕರೆ ಜಮೀನಿನಲ್ಲಿ ಬೆಳೆದಿದ್ದ ಟೊಮೆಟೊ ಬೆಳೆಯನ್ನು ರಾತ್ರೋ ರಾತ್ರಿ ತೋಟಕ್ಕೆ ನುಗ್ಗಿ ದುಷ್ಕರ್ಮಿಗಳು ಕಿತ್ತು ಹಾಕಿದ ಘಟನೆ ನಡೆದಿದೆ. ಈಗಾಗಲೇ ಮಾರುಕಟ್ಟೆಯಲ್ಲಿ ಕೆ.ಜಿ ಟೊಮೆಟೊಗೆ ಶತಕ ದಾಟಿದೆ. ಈ ವೇಳೆ ಕಷ್ಟಪಟ್ಟು ಬೆಳೆದ ಟೊಮೆಟೊ ನಾಶವಾದ ಸುದ್ದಿ ತಿಳಿದ ಮಾಲೀಕರು ಜಮೀನಿನಲ್ಲಿ ಮಲಗಿ ಹೊರಳಾಡಿ ಕಣ್ಣೀರು‌ ಹಾಕುತ್ತಿದ್ದು, ಅನ್ನದಾತನ ಆಕ್ರಂದನ ಮುಗಿಲು ಮುಟ್ಟಿದೆ.

ರೈತನ ಆಕ್ರಂದನ ನೋಡಿ ಮಮ್ಮಲ ಮರಗಿದ ಗ್ರಾಮಸ್ಥರು

ಹೌದು, ಇದೇ ಮೊದಲ ಬಾರಿಗೆ ಇಷ್ಟೊಂದು ಬೆಲೆ ಟೊಮೆಟೊಗೆ ಬಂದಿದೆ. ಪ್ರತಿ ಬಾರಿ ಸಾಲ ಮಾಡಿ ಬೆಳೆಯುತ್ತಿದ್ದ ಬೆಳೆಗೆ ಮೂರು ಮತ್ತೊಂದು ಬೆಲೆ ಸಿಗುತ್ತಿತ್ತು. ಆದರೀಗ ಎಷ್ಟು ವರ್ಷಗಳ ಬಳಿಕ ಅತ್ಯಧಿಕ ಬೆಲೆ ಬಂದಿದೆ. ಈ ಹಿನ್ನಲೆ ಈ ಬಾರಿಯಾದರೂ ಲಾಭ ಗಳಿಸಬೇಕೆಂಬ ಆಸೆ ಹೊತ್ತಿದ್ದ ರೈತನಿಗೆ, ದುಷ್ಕರ್ಮಿಗಳು ಮಾಡಿದ ಕೃತ್ಯದಿಂದ ಸಿಡಿಲು ಬಡಿದಂತಾಗಿದೆ. ಕಷ್ಟಪಟ್ಟು ಬೆಳೆದಿದ್ದ ಟೊಮ್ಯಾಟೊ ಗಿಡವನ್ನು ಬುಡಸಮೇತ ಕತ್ತರಿಸಿ ಹಾಕಿದ್ದಾರೆ. ಈ ಹಿನ್ನಲೆ ಲಕ್ಷಾಂತರ ರೂಪಾಯಿ ಮೌಲ್ಯದ ಟೊಮ್ಯಾಟೊ ನಾಶವಾಗಿದ್ದು, ಬೇಗೂರು ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.

ಇದನ್ನೂ ಓದಿ: Tomato Price Hike: ಟೊಮೆಟೊ ಬೆಲೆ ಏರಿಕೆ; ಲಕ್ಷ, ಕೋಟಿ ರೂಪಾಯಿಗಳಲ್ಲಿ ಆದಾಯ ಗಳಿಸುತ್ತಿದ್ದಾರೆ ಕರ್ನಾಟಕದ ರೈತರು

ಒಂದುವರೆ ಎಕರೆ ಜಮೀನಿನಲ್ಲಿ ಟೊಮೆಟೊ ಬೆಳೆದು 15 ಲಕ್ಷ ಲಾಭ ಬರುವ ನಿರೀಕ್ಷೆ

ಗದಗ: ತಾಲೂಕಿನ ಬಿಂಕದಕಟ್ಟಿ ಗ್ರಾಮದ ಬಸವನಗೌಡ ತಿಮ್ಮನಗೌಡರ ಎಂಬ ರೈತ ತನ್ನ ಒಂದುವರೆ ಎಕರೆ ಜಮೀನಿನಲ್ಲಿ ಟೊಮೆಟೊ ಬೆಳೆದು 15 ಲಕ್ಷ ಲಾಭ ಬರುವ ನಿರೀಕ್ಷೆಯಲ್ಲಿ ಫುಲ್ ಖುಷ್ ಆಗಿದ್ದಾನೆ. ಹೌದು, ಜಿಲ್ಲೆಯಲ್ಲಿ ಬಹುತೇಕ ರೈತರು ಬೆಳೆದ ಟೊಮೆಟೊ ನಾಶವಾಗಿದ್ದು, ಈಗ ರೈತರು ಮತ್ತೆ ನಾಟಿ ಮಾಡುತ್ತಿದ್ದಾರೆ. ಆದರೆ, ಈಗಾಗಲೇ ಟೊಮೆಟೊ ಬೆಳೆದು ತಮ್ಮ 50 ವರ್ಷದ ಕೃಷಿ ಕಾಯಕದಲ್ಲಿ ಇಷ್ಟೊಂದು ಬೆಲೆ ಕಂಡಿಲ್ಲವೆಂದು ರೈತ ಹೇಳುತ್ತಿದ್ದಾರೆ.

ಇನ್ನಷ್ಟು ರಾಜ್ಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 11:47 am, Thu, 3 August 23

25.2 ಕೋಟಿ ರೂ. ಹರಾಜಿನ ಬೆನ್ನಲ್ಲೇ ಸೊನ್ನೆ ಸುತ್ತಿದ ಕ್ಯಾಮರೋನ್ ಗ್ರೀನ್
25.2 ಕೋಟಿ ರೂ. ಹರಾಜಿನ ಬೆನ್ನಲ್ಲೇ ಸೊನ್ನೆ ಸುತ್ತಿದ ಕ್ಯಾಮರೋನ್ ಗ್ರೀನ್
ಕಾವ್ಯಾ ರೌದ್ರಾವತಾರಕ್ಕೆ ಎಲ್ಲರೂ ಶಾಕ್; ಅಶ್ವಿನಿಗೆ ಏಕವಚನದಲ್ಲೇ ಕ್ಲಾಸ್
ಕಾವ್ಯಾ ರೌದ್ರಾವತಾರಕ್ಕೆ ಎಲ್ಲರೂ ಶಾಕ್; ಅಶ್ವಿನಿಗೆ ಏಕವಚನದಲ್ಲೇ ಕ್ಲಾಸ್
ರಸ್ತೆ ಬದಿ ನಿಂತಿದ್ದ ಯುವತಿಯನ್ನು ಕೆಟ್ಟದಾಗಿ ಸ್ಪರ್ಶಿಸಿ ಪರಾರಿಯಾದ ಯುವಕ
ರಸ್ತೆ ಬದಿ ನಿಂತಿದ್ದ ಯುವತಿಯನ್ನು ಕೆಟ್ಟದಾಗಿ ಸ್ಪರ್ಶಿಸಿ ಪರಾರಿಯಾದ ಯುವಕ
ಇಸ್ಲಾಮಿಯಾದಿಂದ ಇಂಡಿಯಾವರೆಗೆ; ಸಖತ್ ಮಜವಾಗಿದೆ ಈ ಎಡಿಟೆಡ್ ವಿಡಿಯೋ
ಇಸ್ಲಾಮಿಯಾದಿಂದ ಇಂಡಿಯಾವರೆಗೆ; ಸಖತ್ ಮಜವಾಗಿದೆ ಈ ಎಡಿಟೆಡ್ ವಿಡಿಯೋ
ತಮ್ಮ ಸಾವಿಗೂ ಮುನ್ನ ದಾಳಿಕೋರನನ್ನು ತಡೆಯಲು ಯತ್ನಿಸಿದ್ದ ದಂಪತಿ
ತಮ್ಮ ಸಾವಿಗೂ ಮುನ್ನ ದಾಳಿಕೋರನನ್ನು ತಡೆಯಲು ಯತ್ನಿಸಿದ್ದ ದಂಪತಿ
ಶಬರಿಮಲೆಯ 18 ಮೆಟ್ಟಿಲುಗಳ ಮಹತ್ವವೇನು ಗೊತ್ತಾ?
ಶಬರಿಮಲೆಯ 18 ಮೆಟ್ಟಿಲುಗಳ ಮಹತ್ವವೇನು ಗೊತ್ತಾ?
ಇಂದು ಈ ರಾಶಿಯವರಿಗೆ ಪ್ರೀತಿಸಿದವರ ಜೊತೆ ಕಲಹಗಳು ಏರ್ಪಡಲಿವೆ
ಇಂದು ಈ ರಾಶಿಯವರಿಗೆ ಪ್ರೀತಿಸಿದವರ ಜೊತೆ ಕಲಹಗಳು ಏರ್ಪಡಲಿವೆ
ಮೊಬೈಲ್ ಕಳೆದುಕೊಂಡವರ ಮುಖದಲ್ಲಿ ಸಂತಸ ತಂದ ಉಡುಪಿ ಪೊಲೀಸರು
ಮೊಬೈಲ್ ಕಳೆದುಕೊಂಡವರ ಮುಖದಲ್ಲಿ ಸಂತಸ ತಂದ ಉಡುಪಿ ಪೊಲೀಸರು
‘45’ ಸಿನಿಮಾದಲ್ಲಿ ಶಿವರಾಜ್​ಕುಮಾರ್ ಲೇಡಿ ಗೆಟಪ್: ಗೀತಕ್ಕ ರಿಯಾಕ್ಷನ್ ನೋಡಿ
‘45’ ಸಿನಿಮಾದಲ್ಲಿ ಶಿವರಾಜ್​ಕುಮಾರ್ ಲೇಡಿ ಗೆಟಪ್: ಗೀತಕ್ಕ ರಿಯಾಕ್ಷನ್ ನೋಡಿ
ವ್ಯಕ್ತಿ ತಲೆಗೆ ಬಿಯರ್‌ ಬಾಟಲಿಂದ ಹೊಡೆದ ಗ್ಯಾಂಗ್
ವ್ಯಕ್ತಿ ತಲೆಗೆ ಬಿಯರ್‌ ಬಾಟಲಿಂದ ಹೊಡೆದ ಗ್ಯಾಂಗ್