Chamarajanagar News: ಹಳೆ ದ್ವೇಷಕ್ಕೆ ಟೊಮೆಟೊ ಬೆಳೆ ನಾಶ, ಮುಗಿಲು ಮುಟ್ಟಿದ ಅನ್ನದಾತನ ಆಕ್ರಂದನ

ಚಾಮರಾಜನಗರ ತಾಲೂಕಿನ ಕೆಬ್ಬೇಪುರ ಗ್ರಾಮದಲ್ಲಿ ಹಳೆ ವೈಶಮ್ಯ ಹಿನ್ನಲೆ ತೋಟಕ್ಕೆ ನುಗ್ಗಿ ಟೊಮೆಟೊ ಬೆಳೆಯನ್ನ ನಾಶಪಡಿಸಿದ ಘಟನೆ ನಡೆದಿದೆ. ವಿಷಯ ತಿಳಿದ ರೈತ ಜಮೀನಿನಲ್ಲಿ ಹೊರಳಾಡಿ ಕಣ್ಣೀರು‌ ಹಾಕುತ್ತಿದ್ದಾನೆ.

Chamarajanagar News: ಹಳೆ ದ್ವೇಷಕ್ಕೆ ಟೊಮೆಟೊ ಬೆಳೆ ನಾಶ, ಮುಗಿಲು ಮುಟ್ಟಿದ ಅನ್ನದಾತನ ಆಕ್ರಂದನ
ಚಾಮರಾಜನಗರದಲ್ಲಿ ಟೊಮೆಟೊ ಬೆಳೆ ನಾಶ ಮಾಡಿದ ದುಷ್ಕರ್ಮಿಗಳು
Edited By: ಕಿರಣ್ ಹನುಮಂತ್​ ಮಾದಾರ್

Updated on: Aug 03, 2023 | 11:48 AM

ಚಾಮರಾಜನಗರ, ಆ.3: ಹಳೆ ವೈಶಮ್ಯ ಹಿನ್ನಲೆ ತೋಟಕ್ಕೆ ನುಗ್ಗಿ ಟೊಮೆಟೊ(Tomato) ಬೆಳೆಯನ್ನ ನಾಶಪಡಿಸಿದ ಘಟನೆ ಚಾಮರಾಜನಗರ (Chamarajanagar) ತಾಲೂಕಿನ ಕೆಬ್ಬೇಪುರ ಗ್ರಾಮದಲ್ಲಿ ನಡೆದಿದೆ. ಗ್ರಾಮದ ಮಂಜು ಎಂಬುವವರು ತಮ್ಮ ಎರಡು ಎಕರೆ ಜಮೀನಿನಲ್ಲಿ ಬೆಳೆದಿದ್ದ ಟೊಮೆಟೊ ಬೆಳೆಯನ್ನು ರಾತ್ರೋ ರಾತ್ರಿ ತೋಟಕ್ಕೆ ನುಗ್ಗಿ ದುಷ್ಕರ್ಮಿಗಳು ಕಿತ್ತು ಹಾಕಿದ ಘಟನೆ ನಡೆದಿದೆ. ಈಗಾಗಲೇ ಮಾರುಕಟ್ಟೆಯಲ್ಲಿ ಕೆ.ಜಿ ಟೊಮೆಟೊಗೆ ಶತಕ ದಾಟಿದೆ. ಈ ವೇಳೆ ಕಷ್ಟಪಟ್ಟು ಬೆಳೆದ ಟೊಮೆಟೊ ನಾಶವಾದ ಸುದ್ದಿ ತಿಳಿದ ಮಾಲೀಕರು ಜಮೀನಿನಲ್ಲಿ ಮಲಗಿ ಹೊರಳಾಡಿ ಕಣ್ಣೀರು‌ ಹಾಕುತ್ತಿದ್ದು, ಅನ್ನದಾತನ ಆಕ್ರಂದನ ಮುಗಿಲು ಮುಟ್ಟಿದೆ.

ರೈತನ ಆಕ್ರಂದನ ನೋಡಿ ಮಮ್ಮಲ ಮರಗಿದ ಗ್ರಾಮಸ್ಥರು

ಹೌದು, ಇದೇ ಮೊದಲ ಬಾರಿಗೆ ಇಷ್ಟೊಂದು ಬೆಲೆ ಟೊಮೆಟೊಗೆ ಬಂದಿದೆ. ಪ್ರತಿ ಬಾರಿ ಸಾಲ ಮಾಡಿ ಬೆಳೆಯುತ್ತಿದ್ದ ಬೆಳೆಗೆ ಮೂರು ಮತ್ತೊಂದು ಬೆಲೆ ಸಿಗುತ್ತಿತ್ತು. ಆದರೀಗ ಎಷ್ಟು ವರ್ಷಗಳ ಬಳಿಕ ಅತ್ಯಧಿಕ ಬೆಲೆ ಬಂದಿದೆ. ಈ ಹಿನ್ನಲೆ ಈ ಬಾರಿಯಾದರೂ ಲಾಭ ಗಳಿಸಬೇಕೆಂಬ ಆಸೆ ಹೊತ್ತಿದ್ದ ರೈತನಿಗೆ, ದುಷ್ಕರ್ಮಿಗಳು ಮಾಡಿದ ಕೃತ್ಯದಿಂದ ಸಿಡಿಲು ಬಡಿದಂತಾಗಿದೆ. ಕಷ್ಟಪಟ್ಟು ಬೆಳೆದಿದ್ದ ಟೊಮ್ಯಾಟೊ ಗಿಡವನ್ನು ಬುಡಸಮೇತ ಕತ್ತರಿಸಿ ಹಾಕಿದ್ದಾರೆ. ಈ ಹಿನ್ನಲೆ ಲಕ್ಷಾಂತರ ರೂಪಾಯಿ ಮೌಲ್ಯದ ಟೊಮ್ಯಾಟೊ ನಾಶವಾಗಿದ್ದು, ಬೇಗೂರು ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.

ಇದನ್ನೂ ಓದಿ: Tomato Price Hike: ಟೊಮೆಟೊ ಬೆಲೆ ಏರಿಕೆ; ಲಕ್ಷ, ಕೋಟಿ ರೂಪಾಯಿಗಳಲ್ಲಿ ಆದಾಯ ಗಳಿಸುತ್ತಿದ್ದಾರೆ ಕರ್ನಾಟಕದ ರೈತರು

ಒಂದುವರೆ ಎಕರೆ ಜಮೀನಿನಲ್ಲಿ ಟೊಮೆಟೊ ಬೆಳೆದು 15 ಲಕ್ಷ ಲಾಭ ಬರುವ ನಿರೀಕ್ಷೆ

ಗದಗ: ತಾಲೂಕಿನ ಬಿಂಕದಕಟ್ಟಿ ಗ್ರಾಮದ ಬಸವನಗೌಡ ತಿಮ್ಮನಗೌಡರ ಎಂಬ ರೈತ ತನ್ನ ಒಂದುವರೆ ಎಕರೆ ಜಮೀನಿನಲ್ಲಿ ಟೊಮೆಟೊ ಬೆಳೆದು 15 ಲಕ್ಷ ಲಾಭ ಬರುವ ನಿರೀಕ್ಷೆಯಲ್ಲಿ ಫುಲ್ ಖುಷ್ ಆಗಿದ್ದಾನೆ. ಹೌದು, ಜಿಲ್ಲೆಯಲ್ಲಿ ಬಹುತೇಕ ರೈತರು ಬೆಳೆದ ಟೊಮೆಟೊ ನಾಶವಾಗಿದ್ದು, ಈಗ ರೈತರು ಮತ್ತೆ ನಾಟಿ ಮಾಡುತ್ತಿದ್ದಾರೆ. ಆದರೆ, ಈಗಾಗಲೇ ಟೊಮೆಟೊ ಬೆಳೆದು ತಮ್ಮ 50 ವರ್ಷದ ಕೃಷಿ ಕಾಯಕದಲ್ಲಿ ಇಷ್ಟೊಂದು ಬೆಲೆ ಕಂಡಿಲ್ಲವೆಂದು ರೈತ ಹೇಳುತ್ತಿದ್ದಾರೆ.

ಇನ್ನಷ್ಟು ರಾಜ್ಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 11:47 am, Thu, 3 August 23

Suraj Prasad SN

ಸೂರಜ್ ಪ್ರಸಾದ್ ಎಸ್.ಎನ್ ಆದ ನಾನು ಹುಟ್ಟಿದ್ದು ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿಯಲ್ಲಿ. ಬೆಳೆದಿದ್ದು ದಾವಣಗರೆ ಜಿಲ್ಲೆ ನ್ಯಾಮತಿ ತಾಲೂಕಿನಲ್ಲಿ. ಶಿವಮೊಗ್ಗದ ಸಹ್ಯಾದ್ರಿ ಕಾಲೇಜ್ ನಲ್ಲಿ ಪತ್ರಿಕೋದ್ಯಮದಲ್ಲಿ ಪದವಿಪೂರ್ವ ಶಿಕ್ಷಣ ಪಡೆದಿದ್ದು 2014ರಿಂದ ನನ್ನ ಎಲೆಕ್ಟ್ರಾನಿಕ್ ಮಾದ್ಯಮದ ವೃತ್ತಿ ಜೀವನವನ್ನ ಬೆಂಗಳೂರಿನಲ್ಲಿ ಕ್ರೈಂ ಬೀಟ್ ವರದಿಗಾರನಾಗಿ ಆರಂಭಿಸಿದ್ದು ಬೆಂಗಳೂರಿನಲ್ಲಿ 8 ವರ್ಷಗಳ ಕ್ರೈಂ ವರದಿಗಾರನಾಗಿ ಸೇವೆ ಸಲ್ಲಿಸಿ. ನಾಲ್ಕು ಸಂಸ್ಥೆಯಲ್ಲಿ ಕ್ರೈಂ ರಿಪೋರ್ಟರ್ ಹಾಗೂ ಕ್ರೈಂ ಇನ್ವೆಸ್ಟಿಗೇಟಿವ್ ವರದಿಗಾರನಾಗಿ ಹಾಗೂ ಸ್ಟಿಂಗ್ ಅಪರೇಷನ್ ಗಳನ್ನ ಮಾಡಿದ್ದೇನೆ. ಗೌರಿ ಲಂಕೇಶ್ ಕೊಲೆ ಕೇಸನ್ನ ರಾಜ್ಯದಲ್ಲೇ ಮೊದಲು ಬ್ರೇಕ್ ಮಾಡಿ ಈ ಹಿಂದಿನ ಸಂಸ್ಥೆಯಿಂದ ಪ್ರಶಂಸೆ ಪಡೆದಿರುತ್ನೇನೆ2019 ರಲ್ಲಿ ಪಿಎಸ್ಐ ಅಕ್ರಮದ ಸ್ಟಿಂಗ್ ಆಪರೇಷನ್ ಹಾಗೂ ಬೆಂಗಳೂರು ಸಿಂಥಟಿಕ್ ಡ್ರಗ್ ಮಾಫಿಯಾದ ಸ್ಟಿಂಗ್ ಆಪರೇಷನ್ ಮಾಡಿದ್ದು. ಕಳೆದ 10 ವರ್ಷಗಳಿಂದ ಸಕ್ರೀಯವಾಗಿ ಕಾರ್ಯ ನಿರ್ವಹಿಸುತ್ತಿದ್ದೇನೆ. ಟಿವಿ9 ಸಂಸ್ಥೆಗೆ ಮಂಡ್ಯ ಜಿಲ್ಲಾ ವರದಿಗಾರನಾಗಿ ಕೆಲಸ ಮಾಡಿ ಬಳಿಕ ಚಾಮರಾಜನಗರಕ್ಕೆ ವರ್ಗಾವಣೆಯಾಗಿ ಈಗ ಪ್ರಸ್ಥುತ ಚಾಮರಾಜನಗರ ಜಿಲ್ಲಾ ವರದಿಗಾರನಾಗಿ ಕೆಲಸ ಮಾಡುತ್ತಿದ್ದೇನೆ. ಹವ್ಯಾಸ ಅಡಿಗೆ ಮಾಡುವುದು, ಕ್ರಿಕೆಟ್ ಆಡುವುದು ಕ್ರೈಂ ಇನ್ವೆಷ್ಟಿಗೇಷನ್ ನಾವೆಲ್ ಗಳನ್ನ ಓದುವುದು.

Read More
Follow Us