AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪ್ರಧಾನಿ ಮೋದಿ ಬಂದೋದ ಬಳಿಕ ಬದಲಾಯ್ತು ಬಂಡೀಪುರದ ಚಿತ್ರಣ, ಪ್ರವಾಸಿಗರ ಹೆಚ್ಚಳ, ಆದಾಯ ದ್ವಿಗುಣ

ಪ್ರಧಾನಿ ನರೇಂದ್ರ ಮೋದಿಯವರು ಬಂಡೀಪುರ ರಾಷ್ಟ್ರೀಯ ಉದ್ಯಾನವನಕ್ಕೆ ಬಂದು ಹೋದ ಬಳಿಕ ಸಫಾರಿಗೆ ಆಗಮಿಸುವ ಪ್ರವಾಸಿಗರ ಸಂಖ್ಯೆಯಲ್ಲಿ ಹೆಚ್ಚಳವಾಗಿದೆ. ರಾಜ್ಯ ಮತ್ತು ಹೊರ ರಾಜ್ಯದಿಂದಲೂ ಹೆಚ್ಚಿನ ಸಂಖ್ಯೆಯಲ್ಲಿ ಪ್ರವಾಸಿಗರು ಆಗಮಿಸುತ್ತಿದ್ದಾರೆ.

ಪ್ರಧಾನಿ ಮೋದಿ ಬಂದೋದ ಬಳಿಕ ಬದಲಾಯ್ತು ಬಂಡೀಪುರದ ಚಿತ್ರಣ, ಪ್ರವಾಸಿಗರ ಹೆಚ್ಚಳ, ಆದಾಯ ದ್ವಿಗುಣ
ಬಂಡೀಪುರ ರಾಷ್ಟ್ರೀಯ ಉದ್ಯಾನವನ
Follow us
Shivaprasad
| Updated By: ವಿವೇಕ ಬಿರಾದಾರ

Updated on: Jan 03, 2024 | 11:40 AM

ಚಾಮರಾಜನಗರ, ಜನವರಿ 03: ಪ್ರಧಾನಿ ನರೇಂದ್ರ ಮೋದಿಯವರು (PM Narendra Modi) ಬಂಡೀಪುರ ರಾಷ್ಟ್ರೀಯ ಉದ್ಯಾನವನಕ್ಕೆ (Bandipur National Park) ಬಂದು ಹೋದ ಬಳಿಕ ಸಫಾರಿಗೆ ಆಗಮಿಸುವ ಪ್ರವಾಸಿಗರ ಸಂಖ್ಯೆಯಲ್ಲಿ ಹೆಚ್ಚಳವಾಗಿದೆ. ರಾಜ್ಯ ಮತ್ತು ಹೊರ ರಾಜ್ಯದಿಂದಲೂ ಹೆಚ್ಚಿನ ಸಂಖ್ಯೆಯಲ್ಲಿ ಪ್ರವಾಸಿಗರು ಆಗಮಿಸುತ್ತಿದ್ದಾರೆ. ರಾಜ್ಯದಲ್ಲೇ ಅತಿ ಹೆಚ್ಚು ಹುಲಿ, ಆನೆ ಮತ್ತು ಚಿರತೆ ಬಂಡೀಪುರ ಉದ್ಯಾನವದಲ್ಲಿವೆ. ಬಂಡೀಪುರ ಉದ್ಯಾನವಕ್ಕೆ ಹೆಚ್ಚಿನ ಸಂಖ್ಯೆಯಲ್ಲಿ ಪ್ರವಾಸಿಗರು ಬರುತ್ತಿರುವುದರಿಂದ ಆದಾಯ ಕೂಡ ಅಧಿಕವಾಗಿ ಹರಿದು ಬರುತ್ತಿದೆ.

ಪ್ರತಿ ವರ್ಷ ಸಫಾರಿಯಿಂದ 8 ಕೋಟಿಯಷ್ಟು ಆದಾಯ ಬರುತ್ತಿತ್ತು. ಆದರೆ ಈಗಾಗಲೇ 12 ಕೋಟಿಯಷ್ಟು ಸಫಾರಿಯಿಂದಲೇ ಹಣ ಹರಿದು ಬಂದಿದೆ. ಹೀಗಾಗಿ ಈ ಬಾರಿ 15 ಕೋಟಿ ರೂಪಾಯಿಯಷ್ಟು ಆದಾಯ ಹರಿದು ಬರುವ ನಿರೀಕ್ಷೆಯಲ್ಲಿ ಅರಣ್ಯ ಇಲಾಖೆ ಅಧಿಕಾರಿಗಳು ಇದ್ದಾರೆ. ಕ್ರಿಸ್ ಮಸ್ ಹಬ್ಬದ ಒಂದೇ ದಿನ ಕೇವಲ ಗ್ರೀನ್ ಫೀ ಹಾಗೂ ಪಾರ್ಕಿಂಗ್ ಲಾಟ್​ನಿಂದ 75 ಸಾವಿರ ಕಲೆಕ್ಷನ್ ಆಗಿದೆ.

ಇದನ್ನೂ ಓದಿ: ಬಂಡೀಪುರ, ನಾಗರಹೊಳೆ ಸಫಾರಿ ಹೋಗೋರಿಗೆ ವಿಮಾ ಸೌಲಭ್ಯ: ಬರೋಬ್ಬರಿ 1 ಕೋಟಿ ರೂ. ಇನ್ಶೂರೆನ್ಸ್‌

ಇದರಿಂದ ರಾಜ್ಯದಲ್ಲಿನ ಸಫಾರಿ ಕೇಂದ್ರಗಳಿಗೆ ಬರುವ ಆದಾಯಕ್ಕಿಂತ ಬಂಡೀಪುರ ಉದ್ಯಾನವನಕ್ಕೆ ಬರುವ ಆದಾಯ ಅಧಿಕವಾಗಿದೆ. ಈ ಮೂಲಕ ಬಂಡೀಪುರ ಉದ್ಯಾನವನ ಮೊದಲ ಸ್ಥಾನಕ್ಕೆ ಏರಿದೆ. ನಾಗರಹೊಳೆ ಬಿ.ಆರ್.ಟಿ ಟೈಗರ್ ಸಫಾರಿ ಕೇಂದ್ರ, ಮಲೆ ಮಹದೇಶ್ವರ ವನ್ಯಧಾಮ ಸಫಾರಿ ಕೇಂದ್ರಗಳಿಗಿಂತ ಬಂಡೀಪುರದ ಸಫಾರಿ ಕೇಂದ್ರಕ್ಕೆ ಡಿಮ್ಯಾಂಡ್ ಹೆಚ್ಚಾಗಿದೆ.

ಬಂಡೀಪುರ ಉದ್ಯಾನವನಕ್ಕೆ ಪ್ರಧಾನಿ ಮೋದಿ ಭೇಟಿ

“ಪ್ರಾಜೆಕ್ಟ್ ಟೈಗರ್” (Project Tiger) ಘೋಷಿಸಿ 50 ವರ್ಷವಾದ ಹಿನ್ನೆಲೆಯಲ್ಲಿ 2023ರ ಏಪ್ರಿಲ್​ 9 ರಂದು ಬಂಡೀಪುರ ರಾಷ್ಟ್ರೀಯ ಹುಲಿ ಸಂರಕ್ಷಿತಾರಣ್ಯ ಪ್ರದೇಶಕ್ಕೆ ಪ್ರಧಾನಿ ನರೇಂದ್ರ ಮೋದಿಯವರು ಭೇಟಿ ನೀಡಿ ಸಫಾರಿ ನಡೆಸಿದ್ದರು. ಎರಡು ಗಂಟೆಗಳ ಕಾಲ ಸುಮಾರು 20 ಕಿ.ಮೀ. ಸಫಾರಿ ನಡೆಸಿದ್ದಾರೆ. 50 ವರ್ಷ ಈ ವೇಳೆ ವಿಶೇಷ ಅಂಚೆ ಚೀಟಿ ಬಿಡುಗಡೆಗೊಳಿಸಿದರು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

ಬಿಜೆಪಿಯ 25 ಶಾಸಕರನ್ನು ಸೇರಿಸಿಕೊಳ್ಳಲು ಶಿವಕುಮಾರ್ ರೆಡಿ ಮಾಡಿದ್ದಾರೆ:ಶಾಸಕ
ಬಿಜೆಪಿಯ 25 ಶಾಸಕರನ್ನು ಸೇರಿಸಿಕೊಳ್ಳಲು ಶಿವಕುಮಾರ್ ರೆಡಿ ಮಾಡಿದ್ದಾರೆ:ಶಾಸಕ
ವಿಜಯೇಂದ್ರ ನಾಯಕತ್ವದಲ್ಲಿ 245/224 ಸೀಟು ಬಂದರೂ ಅಚ್ಚರಿಯಿಲ್ಲ: ಯತ್ನಾಳ್
ವಿಜಯೇಂದ್ರ ನಾಯಕತ್ವದಲ್ಲಿ 245/224 ಸೀಟು ಬಂದರೂ ಅಚ್ಚರಿಯಿಲ್ಲ: ಯತ್ನಾಳ್
ಕ್ಷೇತ್ರದಲ್ಲಿ ಮಾಡಲು ಬೇಕಾದಷ್ಟು ಕೆಲಸವಿದೆ, ಮುಂದುವರಿಸುತ್ತೇನೆ: ಸೋಮಶೇಖರ್
ಕ್ಷೇತ್ರದಲ್ಲಿ ಮಾಡಲು ಬೇಕಾದಷ್ಟು ಕೆಲಸವಿದೆ, ಮುಂದುವರಿಸುತ್ತೇನೆ: ಸೋಮಶೇಖರ್
ಸೋಮಶೇಖರ್‌, ಹೆಬ್ಬಾರ್‌ ಬಿಜೆಪಿಯಿಂದ ಉಚ್ಛಾಟನೆ ಮಾಡಿದ್ಯಾಕೆ?ಇಲ್ಲಿದೆ ಕಾರಣ
ಸೋಮಶೇಖರ್‌, ಹೆಬ್ಬಾರ್‌ ಬಿಜೆಪಿಯಿಂದ ಉಚ್ಛಾಟನೆ ಮಾಡಿದ್ಯಾಕೆ?ಇಲ್ಲಿದೆ ಕಾರಣ
ಯಡಿಯೂರಪ್ಪ ಕುಟುಂಬ ವಿರುದ್ಧ ಮಾತಾಡಿದ್ದಕ್ಕೆ ಕ್ಷಮೆ ಕೇಳಲ್ಲ: ಯತ್ಮಾಳ್
ಯಡಿಯೂರಪ್ಪ ಕುಟುಂಬ ವಿರುದ್ಧ ಮಾತಾಡಿದ್ದಕ್ಕೆ ಕ್ಷಮೆ ಕೇಳಲ್ಲ: ಯತ್ಮಾಳ್
ಉಗ್ರರ ದಾಳಿ ಬಳಿಕ ಪಹಲ್ಗಾಮ್​ನ ಬೇತಾಬ್ ಕಣಿವೆ ಪ್ರವಾಸಿಗರಿಗೆ ಓಪನ್
ಉಗ್ರರ ದಾಳಿ ಬಳಿಕ ಪಹಲ್ಗಾಮ್​ನ ಬೇತಾಬ್ ಕಣಿವೆ ಪ್ರವಾಸಿಗರಿಗೆ ಓಪನ್
ಶಿವಣ್ಣ ಬಗ್ಗೆ ಅವಹೇಳನಕಾರಿ ಮಾತು: ಮಡೆನೂರು ಮನು ವಿರುದ್ಧ ಚೇಂಬರ್ ಕ್ರಮ
ಶಿವಣ್ಣ ಬಗ್ಗೆ ಅವಹೇಳನಕಾರಿ ಮಾತು: ಮಡೆನೂರು ಮನು ವಿರುದ್ಧ ಚೇಂಬರ್ ಕ್ರಮ
ಗಾಂಧಿನಗರದಲ್ಲಿ ಪ್ರಧಾನಿ ಮೋದಿ ರೋಡ್ ಶೋ; ಜನರಿಂದ ಹೂವಿನ ಮಳೆ
ಗಾಂಧಿನಗರದಲ್ಲಿ ಪ್ರಧಾನಿ ಮೋದಿ ರೋಡ್ ಶೋ; ಜನರಿಂದ ಹೂವಿನ ಮಳೆ
ಜನರಲ್ಲಿ ಗೊಂದಲ, ಅಶಾಂತಿ ಸೃಷ್ಟಿಸುವುದೇ ಬಿಜೆಪಿ ನಾಯಕರ ಕೆಲಸ: ಸಿದ್ದರಾಮಯ್ಯ
ಜನರಲ್ಲಿ ಗೊಂದಲ, ಅಶಾಂತಿ ಸೃಷ್ಟಿಸುವುದೇ ಬಿಜೆಪಿ ನಾಯಕರ ಕೆಲಸ: ಸಿದ್ದರಾಮಯ್ಯ
ಕರೆಂಟ್ ಬೇಲಿ ದಾಟಲು ಆನೆ ಬಳಸಿದ ಈ ಟ್ರಿಕ್, ನಿಮಗೂ ಉಪಯೋಗಕ್ಕೆ ಬರಬಹುದು
ಕರೆಂಟ್ ಬೇಲಿ ದಾಟಲು ಆನೆ ಬಳಸಿದ ಈ ಟ್ರಿಕ್, ನಿಮಗೂ ಉಪಯೋಗಕ್ಕೆ ಬರಬಹುದು