AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಇಂಡಿಗನತ್ತ ಇವಿಎಂ ಧ್ವಂಸ ಪ್ರಕರಣ: ನಾಡಿಗೆ ಮರಳಲು ಗ್ರಾಮಸ್ಥರಿಗೆ ಭೀತಿ, ಆಹಾರವಿಲ್ಲದೆ ಜಾನುವಾರುಗಳ ಪರದಾಟ

ಇವಿಎಂ ಧ್ವಂಸ ವಿಚಾರವಾಗಿ ಪ್ರಕರಣ ದಾಖಲಾಗುತ್ತಿದ್ದಂತೆಯೇ ಗ್ರಾಮದ ಪುರುಷರೆಲ್ಲಾ ಕಾಡು ಸೇರಿದ್ದು, ಗ್ರಾಮಕ್ಕೆ ಗ್ರಾಮವೇ ಖಾಲಿಯಾಗಿತ್ತು. ಇತ್ತ ಹಸುಗಳಿಗೆ ಮೇವಿಲ್ಲದೆ ವಿಲ ವಿಲ ಒದ್ದಾಡತೊಡಗಿದವು. ಈ ಹಿನ್ನಲೆ ಚಾಮರಾಜನಗರ ಜಿಲ್ಲಾಧಿಕಾರಿ ಶಿಲ್ಪಾನಾಗ್ ಗ್ರಾಮಸ್ಥರಿಗೆ ಅಭಯ ನೀಡಿದ್ದಾರೆ.

ಇಂಡಿಗನತ್ತ ಇವಿಎಂ ಧ್ವಂಸ ಪ್ರಕರಣ: ನಾಡಿಗೆ ಮರಳಲು ಗ್ರಾಮಸ್ಥರಿಗೆ ಭೀತಿ, ಆಹಾರವಿಲ್ಲದೆ ಜಾನುವಾರುಗಳ ಪರದಾಟ
ಇಂಡಿಗನತ್ತ ಇವಿಎಂ ಧ್ವಂಸ ಪ್ರಕರಣ
ಸೂರಜ್ ಪ್ರಸಾದ್ ಎಸ್.ಎನ್
| Edited By: |

Updated on:May 14, 2024 | 10:19 AM

Share

ಚಾಮರಾಜನಗರ, ಮೇ 14: ಇಂಡಿಗನತ್ತ ಇವಿಎಂ ಧ್ವಂಸ ಪ್ರಕರಣಕ್ಕೆ (EVM vandalized Case) ಸಂಬಂದ ಪಟ್ಟಂತೆ ಈಗಾಗಲೇ 250 ಅಧಿಕ ಮಂದಿಯ ವಿರುದ್ದ ಎಫ್ಐಆರ್ ದಾಖಲಾಗಿದ್ದು ಇತ್ತ ಬಂಧನದ ಭೀತಿಯಿಂದ ಇಂಡಿಗನತ್ತ (Indiganatha) ಹಾಡಿಯನ್ನು ತೊರೆದ ಗ್ರಾಮಸ್ಥರು ಕಾಡು ಸೇರಿದ್ದಾರೆ. ಇತ್ತ ಗ್ರಾಮದಲ್ಲಿ ದನಕರಗಳು ಮೇವಿಲ್ಲದೆ ಪರದಾಟಪಡುತ್ತಿವೆ. ಈಗ ಇಂಡಿಗತನತ್ತ ಗ್ರಾಮದ ಜನತೆಗೆ ಜಿಲ್ಲಾಧಿಕಾರಿ ಅಭಯ ನೀಡಿದ್ದು ಮರಳಿ ಗ್ರಾಮಕ್ಕೆ ಬರುವಂತೆ ಮನವಿ ಮಾಡಿದ್ದಾರೆ.

ಏಪ್ರಿಲ್ 26 ರಾಜ್ಯದಲ್ಲಿ ಲೋಕಸಭೆ ಚುನಾವಣೆಯ ಮೊದಲ ಹಂತದ ಮತದಾನ ನಡೆದಿತ್ತು. 14 ಲೋಕಸಭಾ ಕ್ಷೇತ್ರಗಳಲ್ಲಿ ಎಲ್ಲೆಡೆ ಮತದಾನ ನಡೆಯುತ್ತಿತ್ತು. ಆದ್ರೆ ಚಾಮರಾಜನಗರ ಜಿಲ್ಲೆ ಹನೂರು ತಾಲೂಕಿನ ಇಂಡಿಗನತ್ತ ಹಾಡಿಯಲ್ಲಿ ಮದ್ಯಾಹ್ನ 1 ಗಂಟೆ ಕಳೆದರೂ ಒಂದೇ ಒಂದು ಮತ ಕೂಡ ಚಲಾವಣೆ ಆಗಿರಲಿಲ್ಲ. ಮೂಲಭೂತ ಸೌಕರ್ಯ ಕಲ್ಪಿಸದ ಹಿನ್ನಲೆಯಲ್ಲಿ ಇಂಡಿಗನತ್ತ ಹಾಡಿಯ ಜನತೆ ಮತದಾನವನ್ನು ಬಹಿಷ್ಕರಿಸಿದ್ದರು. ಆದರೆ, ಪೊಲೀಸರು ಹಾಗೂ ಚುನಾವಣಾ ಅಧಿಕಾರಿಗಳು ಪಕ್ಕದ ಮೆಂದಾರೆ ಹಾಡಿಯ ಜನತೆಯ ಮನವೊಲಿಸಿ ಮತದಾನಕ್ಕೆ ಕರೆತಂದರು. ಈ ವೇಳೆ, ಮೆಂದಾರೆ ಹಾಗೂ ಇಂಡಿಗನತ್ತ ಹಾಡಿಯ ಜನತೆ ನಡುವೆ ಮಾತಿಗೆ ಮಾತು ಬೆಳೆದು ಜಗಳ ಶುರುವಾಗಿತ್ತು. ಪರಿಸ್ಥಿತಿಯನ್ನ ನಿಯಂತ್ರಿಸಲು ಪೊಲೀಸರು ಲಾಠಿ ಬೀಸಿದ್ದರು. ಈ ವೇಳೆ ಇಂಡಿಗನತ್ತ ಹಾಡಿಯ ಜನತೆ ಕಲ್ಲು ತೂರಿ ಮತಪೆಟ್ಟಿಗೆಯನ್ನ ಧ್ವಂಸ ಗೊಳಿಸಿದ್ದರು. ಈ ವೇಳೆ 250 ಕ್ಕೂ ಹೆಚ್ಚು ಜನರ ವಿರುದ್ದ ಎಫ್ಐಆರ್ ದಾಖಲಾಗಿತ್ತು. ಈ ಹಿನ್ನಲೆ ಗ್ರಾಮವನ್ನ ತೊರೆದ ಜನರು ಕಾಡು ಸೇರಿದ್ದರು.

ಇಡೀ ಗ್ರಾಮವೇ ಖಾಲಿ ಖಾಲಿ!

ಪ್ರಕರಣ ದಾಖಲಾಗುತ್ತಿದ್ದಂತೆಯೇ ಗ್ರಾಮದ ಪುರುಷರೆಲ್ಲಾ ಕಾಡು ಸೇರಿದ್ದು, ಗ್ರಾಮಕ್ಕೆ ಗ್ರಾಮವೇ ಖಾಲಿಯಾಗಿತ್ತು. ಇತ್ತ ಹಸುಗಳಿಗೆ ಮೇವಿಲ್ಲದೆ ವಿಲ ವಿಲ ಒದ್ದಾಡತೊಡಗಿದವು. ಈ ಹಿನ್ನಲೆ ಚಾಮರಾಜನಗರ ಜಿಲ್ಲಾಧಿಕಾರಿ ಶಿಲ್ಪಾನಾಗ್ ಗ್ರಾಮಸ್ಥರಿಗೆ ಅಭಯ ನೀಡಿದ್ದಾರೆ. ಗಲಭೆಯಲ್ಲಿ ಭಾಗಿಯಾದವರ ವಿರುದ್ಧವಷ್ಟೇ ಕ್ರಮ ಕೈಗೊಳ್ಳುತ್ತೇವೆ. ಎಲ್ಲರೂ ಗ್ರಾಮ ತೊರೆಯಬೇಡಿ. ನಿಮ್ಮ ಪರ ಜಿಲ್ಲಾಡಳಿತವಿದೆ ಎಂದು ಮನವಿ ಮಾಡಿದ್ದಾರೆ. ಜಿಲ್ಲಾಧಿಕಾರಿ ಮನವಿ ಮೇರೆಗೆ ಈಗ ಅರ್ಧದಷ್ಟು ಗ್ರಾಮಸ್ಥರು ಈಗ ಮರಳಿ ಗೂಡು ಸೇರಿದ್ದಾರೆ. ಆಹಾರವಿಲ್ಲದೆ ಪರಿತಪ್ಪಿಸುತ್ತಿದ್ದ ಮೂಕ ಪ್ರಾಣಿಗಳಿಗೆ ಈಗ ಜಿಲ್ಲಾಡಳಿತ ವತಿಯಿಂದ ಮೇವಿನ ವ್ಯವಸ್ಥೆ ಮಾಡಲಾಗಿದೆ.

ಇದನ್ನೂ ಓದಿ: Chamarajanagar: ಇಂಡಿಗನತ್ತ ಗ್ರಾಮದಲ್ಲಿ ಇವಿಎಂ ಧ್ವಂಸ: ಅಷ್ಟಕ್ಕೂ ಆಗಿದ್ದೇನು? ಕಾರಣ ಬಿಚ್ಚಿಟ್ಟ ಜಿಲ್ಲಾಧಿಕಾರಿ

ತಪ್ಪು ಮಾಡಿದ್ದು ಯಾರೋ ಶಿಕ್ಷೆ ಇನ್ಯಾರಿಗೋ ಎಂಬಂತಾಗಿತ್ತು. ಆದರೆ, ಜಿಲ್ಲಾಡಳಿತದ ಭರವಸೆಯಿಂದ ಈಗ ಗ್ರಾಮಸ್ಥರಿಗೆ ಮರು ಜೀವ ಬಂದಂತಾಗಿದ್ದು ಮರಳಿ ಗ್ರಾಮಕ್ಕೆ ಬಂದಂಥ ಗ್ರಾಮಸ್ಥರಿಗೆ ಈಗ ಜಿಲ್ಲಾಡಳಿತದ ವತಿಯಿಂದ ದಿನಸಿ ಹಾಗೂ ದಿನ ಬಳಕೆ ವಸ್ತುಗಳನ್ನು ನೀಡಲಾಗುತ್ತಿದೆ. ನಾಗಮಲೆಗೆ ಹೋಗುವ ಚಾರಣದ ನಿಷೇಧದ ಕುರಿತು ಮುಂಬರುವ ದಿನಗಳಲ್ಲಿ ಸೂಕ್ತ ಕ್ರಮ ತೆಗೆದು ಕೊಳ್ಳುವುದಾಗಿ ಜಿಲ್ಲಾಧಿಕಾರಿ ಭರವಸೆ ನೀಡಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 10:16 am, Tue, 14 May 24

Follow Us
SSLC Results 2026: ಹಿಂದಿ ವಿಷಯಕ್ಕೆ ಗ್ರೇಡೋ, ಅಂಕನೋ? ಗೊಂದಲಗಳಿಗೆ ತೆರೆ
SSLC Results 2026: ಹಿಂದಿ ವಿಷಯಕ್ಕೆ ಗ್ರೇಡೋ, ಅಂಕನೋ? ಗೊಂದಲಗಳಿಗೆ ತೆರೆ
ಅದ್ಭುತ... ಅತ್ಯದ್ಭುತ: ರಿಷಭ್​ ಸ್ಪೈಡಿ ಕ್ಯಾಚ್​ಗೆ ದಂಗಾದ ಪ್ರೇಕ್ಷಕರು
ಅದ್ಭುತ... ಅತ್ಯದ್ಭುತ: ರಿಷಭ್​ ಸ್ಪೈಡಿ ಕ್ಯಾಚ್​ಗೆ ದಂಗಾದ ಪ್ರೇಕ್ಷಕರು
ಮದುವೆ ಸಂಭ್ರಮದಲ್ಲಿ ಕಾರು ಡಿಕ್ಕಿಯಾಗಿ 25 ಅಡಿ ಮೇಲೆ ಹಾರಿದ ಕ್ಯಾಮೆರಾಮನ್
ಮದುವೆ ಸಂಭ್ರಮದಲ್ಲಿ ಕಾರು ಡಿಕ್ಕಿಯಾಗಿ 25 ಅಡಿ ಮೇಲೆ ಹಾರಿದ ಕ್ಯಾಮೆರಾಮನ್
ಅಮರಾವತಿ ಲೈಂಗಿಕ ಹಗರಣದ ಆರೋಪಿಗೆ ನಗರದ ರಸ್ತೆಗಳಲ್ಲಿ ಮೆರವಣಿಗೆ
ಅಮರಾವತಿ ಲೈಂಗಿಕ ಹಗರಣದ ಆರೋಪಿಗೆ ನಗರದ ರಸ್ತೆಗಳಲ್ಲಿ ಮೆರವಣಿಗೆ
ಖಾಲಿ ಕೊಡ ಹಿಡಿದು ಸಚಿವ ತಂಗಡಗಿ ಕಾರಿಗೆ ಮುತ್ತಿಗೆ ಹಾಕಿದ ಮಹಿಳೆಯರು
ಖಾಲಿ ಕೊಡ ಹಿಡಿದು ಸಚಿವ ತಂಗಡಗಿ ಕಾರಿಗೆ ಮುತ್ತಿಗೆ ಹಾಕಿದ ಮಹಿಳೆಯರು
ಬಿಸಿಲಿಗೆ ತತ್ತರ: ಹೆಲ್ಮೆಟ್ ಬದಲು ಸೊಪ್ಪು ಕಟ್ಟಿಕೊಂಡು ಬೈಕ್ ಚಾಲನೆ
ಬಿಸಿಲಿಗೆ ತತ್ತರ: ಹೆಲ್ಮೆಟ್ ಬದಲು ಸೊಪ್ಪು ಕಟ್ಟಿಕೊಂಡು ಬೈಕ್ ಚಾಲನೆ
ವಾರದಲ್ಲಿ ಎರಡನೇ ಭಾರಿ ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ವಾರದಲ್ಲಿ ಎರಡನೇ ಭಾರಿ ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ಹುಬ್ಬಳ್ಳಿ ಭೀಕರ ಅಪಘಾತ: ಕಾರಿನ ಇಂಜಿನ್ ಒಳಗೆ ಸಿಲುಕಿದ ವ್ಯಕ್ತಿಯ ರುಂಡ
ಹುಬ್ಬಳ್ಳಿ ಭೀಕರ ಅಪಘಾತ: ಕಾರಿನ ಇಂಜಿನ್ ಒಳಗೆ ಸಿಲುಕಿದ ವ್ಯಕ್ತಿಯ ರುಂಡ
ಪ್ರಿಯಕರನನ್ನೇ ಕೊಂದ ಪ್ರಿಯತಮೆ : ಕೊಲೆಯಾದ ಕಿರಣ್ ತಂದೆಯ ಕಣ್ಣೀರ ಮಾತು
ಪ್ರಿಯಕರನನ್ನೇ ಕೊಂದ ಪ್ರಿಯತಮೆ : ಕೊಲೆಯಾದ ಕಿರಣ್ ತಂದೆಯ ಕಣ್ಣೀರ ಮಾತು
ಕುಟುಂಬದ ಆರೋಪಕ್ಕೆ ವೈದ್ಯಕೀಯ ಅಧೀಕ್ಷರು ಹೇಳಿದ್ದೇನು?
ಕುಟುಂಬದ ಆರೋಪಕ್ಕೆ ವೈದ್ಯಕೀಯ ಅಧೀಕ್ಷರು ಹೇಳಿದ್ದೇನು?