ಇಂಡಿಗನತ್ತ ಇವಿಎಂ ಧ್ವಂಸ ಪ್ರಕರಣ: ನಾಡಿಗೆ ಮರಳಲು ಗ್ರಾಮಸ್ಥರಿಗೆ ಭೀತಿ, ಆಹಾರವಿಲ್ಲದೆ ಜಾನುವಾರುಗಳ ಪರದಾಟ

ಇವಿಎಂ ಧ್ವಂಸ ವಿಚಾರವಾಗಿ ಪ್ರಕರಣ ದಾಖಲಾಗುತ್ತಿದ್ದಂತೆಯೇ ಗ್ರಾಮದ ಪುರುಷರೆಲ್ಲಾ ಕಾಡು ಸೇರಿದ್ದು, ಗ್ರಾಮಕ್ಕೆ ಗ್ರಾಮವೇ ಖಾಲಿಯಾಗಿತ್ತು. ಇತ್ತ ಹಸುಗಳಿಗೆ ಮೇವಿಲ್ಲದೆ ವಿಲ ವಿಲ ಒದ್ದಾಡತೊಡಗಿದವು. ಈ ಹಿನ್ನಲೆ ಚಾಮರಾಜನಗರ ಜಿಲ್ಲಾಧಿಕಾರಿ ಶಿಲ್ಪಾನಾಗ್ ಗ್ರಾಮಸ್ಥರಿಗೆ ಅಭಯ ನೀಡಿದ್ದಾರೆ.

ಇಂಡಿಗನತ್ತ ಇವಿಎಂ ಧ್ವಂಸ ಪ್ರಕರಣ: ನಾಡಿಗೆ ಮರಳಲು ಗ್ರಾಮಸ್ಥರಿಗೆ ಭೀತಿ, ಆಹಾರವಿಲ್ಲದೆ ಜಾನುವಾರುಗಳ ಪರದಾಟ
ಇಂಡಿಗನತ್ತ ಇವಿಎಂ ಧ್ವಂಸ ಪ್ರಕರಣ
Edited By:

Updated on: May 14, 2024 | 10:19 AM

ಚಾಮರಾಜನಗರ, ಮೇ 14: ಇಂಡಿಗನತ್ತ ಇವಿಎಂ ಧ್ವಂಸ ಪ್ರಕರಣಕ್ಕೆ (EVM vandalized Case) ಸಂಬಂದ ಪಟ್ಟಂತೆ ಈಗಾಗಲೇ 250 ಅಧಿಕ ಮಂದಿಯ ವಿರುದ್ದ ಎಫ್ಐಆರ್ ದಾಖಲಾಗಿದ್ದು ಇತ್ತ ಬಂಧನದ ಭೀತಿಯಿಂದ ಇಂಡಿಗನತ್ತ (Indiganatha) ಹಾಡಿಯನ್ನು ತೊರೆದ ಗ್ರಾಮಸ್ಥರು ಕಾಡು ಸೇರಿದ್ದಾರೆ. ಇತ್ತ ಗ್ರಾಮದಲ್ಲಿ ದನಕರಗಳು ಮೇವಿಲ್ಲದೆ ಪರದಾಟಪಡುತ್ತಿವೆ. ಈಗ ಇಂಡಿಗತನತ್ತ ಗ್ರಾಮದ ಜನತೆಗೆ ಜಿಲ್ಲಾಧಿಕಾರಿ ಅಭಯ ನೀಡಿದ್ದು ಮರಳಿ ಗ್ರಾಮಕ್ಕೆ ಬರುವಂತೆ ಮನವಿ ಮಾಡಿದ್ದಾರೆ.

ಏಪ್ರಿಲ್ 26 ರಾಜ್ಯದಲ್ಲಿ ಲೋಕಸಭೆ ಚುನಾವಣೆಯ ಮೊದಲ ಹಂತದ ಮತದಾನ ನಡೆದಿತ್ತು. 14 ಲೋಕಸಭಾ ಕ್ಷೇತ್ರಗಳಲ್ಲಿ ಎಲ್ಲೆಡೆ ಮತದಾನ ನಡೆಯುತ್ತಿತ್ತು. ಆದ್ರೆ ಚಾಮರಾಜನಗರ ಜಿಲ್ಲೆ ಹನೂರು ತಾಲೂಕಿನ ಇಂಡಿಗನತ್ತ ಹಾಡಿಯಲ್ಲಿ ಮದ್ಯಾಹ್ನ 1 ಗಂಟೆ ಕಳೆದರೂ ಒಂದೇ ಒಂದು ಮತ ಕೂಡ ಚಲಾವಣೆ ಆಗಿರಲಿಲ್ಲ. ಮೂಲಭೂತ ಸೌಕರ್ಯ ಕಲ್ಪಿಸದ ಹಿನ್ನಲೆಯಲ್ಲಿ ಇಂಡಿಗನತ್ತ ಹಾಡಿಯ ಜನತೆ ಮತದಾನವನ್ನು ಬಹಿಷ್ಕರಿಸಿದ್ದರು. ಆದರೆ, ಪೊಲೀಸರು ಹಾಗೂ ಚುನಾವಣಾ ಅಧಿಕಾರಿಗಳು ಪಕ್ಕದ ಮೆಂದಾರೆ ಹಾಡಿಯ ಜನತೆಯ ಮನವೊಲಿಸಿ ಮತದಾನಕ್ಕೆ ಕರೆತಂದರು. ಈ ವೇಳೆ, ಮೆಂದಾರೆ ಹಾಗೂ ಇಂಡಿಗನತ್ತ ಹಾಡಿಯ ಜನತೆ ನಡುವೆ ಮಾತಿಗೆ ಮಾತು ಬೆಳೆದು ಜಗಳ ಶುರುವಾಗಿತ್ತು. ಪರಿಸ್ಥಿತಿಯನ್ನ ನಿಯಂತ್ರಿಸಲು ಪೊಲೀಸರು ಲಾಠಿ ಬೀಸಿದ್ದರು. ಈ ವೇಳೆ ಇಂಡಿಗನತ್ತ ಹಾಡಿಯ ಜನತೆ ಕಲ್ಲು ತೂರಿ ಮತಪೆಟ್ಟಿಗೆಯನ್ನ ಧ್ವಂಸ ಗೊಳಿಸಿದ್ದರು. ಈ ವೇಳೆ 250 ಕ್ಕೂ ಹೆಚ್ಚು ಜನರ ವಿರುದ್ದ ಎಫ್ಐಆರ್ ದಾಖಲಾಗಿತ್ತು. ಈ ಹಿನ್ನಲೆ ಗ್ರಾಮವನ್ನ ತೊರೆದ ಜನರು ಕಾಡು ಸೇರಿದ್ದರು.

ಇಡೀ ಗ್ರಾಮವೇ ಖಾಲಿ ಖಾಲಿ!

ಪ್ರಕರಣ ದಾಖಲಾಗುತ್ತಿದ್ದಂತೆಯೇ ಗ್ರಾಮದ ಪುರುಷರೆಲ್ಲಾ ಕಾಡು ಸೇರಿದ್ದು, ಗ್ರಾಮಕ್ಕೆ ಗ್ರಾಮವೇ ಖಾಲಿಯಾಗಿತ್ತು. ಇತ್ತ ಹಸುಗಳಿಗೆ ಮೇವಿಲ್ಲದೆ ವಿಲ ವಿಲ ಒದ್ದಾಡತೊಡಗಿದವು. ಈ ಹಿನ್ನಲೆ ಚಾಮರಾಜನಗರ ಜಿಲ್ಲಾಧಿಕಾರಿ ಶಿಲ್ಪಾನಾಗ್ ಗ್ರಾಮಸ್ಥರಿಗೆ ಅಭಯ ನೀಡಿದ್ದಾರೆ. ಗಲಭೆಯಲ್ಲಿ ಭಾಗಿಯಾದವರ ವಿರುದ್ಧವಷ್ಟೇ ಕ್ರಮ ಕೈಗೊಳ್ಳುತ್ತೇವೆ. ಎಲ್ಲರೂ ಗ್ರಾಮ ತೊರೆಯಬೇಡಿ. ನಿಮ್ಮ ಪರ ಜಿಲ್ಲಾಡಳಿತವಿದೆ ಎಂದು ಮನವಿ ಮಾಡಿದ್ದಾರೆ. ಜಿಲ್ಲಾಧಿಕಾರಿ ಮನವಿ ಮೇರೆಗೆ ಈಗ ಅರ್ಧದಷ್ಟು ಗ್ರಾಮಸ್ಥರು ಈಗ ಮರಳಿ ಗೂಡು ಸೇರಿದ್ದಾರೆ. ಆಹಾರವಿಲ್ಲದೆ ಪರಿತಪ್ಪಿಸುತ್ತಿದ್ದ ಮೂಕ ಪ್ರಾಣಿಗಳಿಗೆ ಈಗ ಜಿಲ್ಲಾಡಳಿತ ವತಿಯಿಂದ ಮೇವಿನ ವ್ಯವಸ್ಥೆ ಮಾಡಲಾಗಿದೆ.

ಇದನ್ನೂ ಓದಿ: Chamarajanagar: ಇಂಡಿಗನತ್ತ ಗ್ರಾಮದಲ್ಲಿ ಇವಿಎಂ ಧ್ವಂಸ: ಅಷ್ಟಕ್ಕೂ ಆಗಿದ್ದೇನು? ಕಾರಣ ಬಿಚ್ಚಿಟ್ಟ ಜಿಲ್ಲಾಧಿಕಾರಿ

ತಪ್ಪು ಮಾಡಿದ್ದು ಯಾರೋ ಶಿಕ್ಷೆ ಇನ್ಯಾರಿಗೋ ಎಂಬಂತಾಗಿತ್ತು. ಆದರೆ, ಜಿಲ್ಲಾಡಳಿತದ ಭರವಸೆಯಿಂದ ಈಗ ಗ್ರಾಮಸ್ಥರಿಗೆ ಮರು ಜೀವ ಬಂದಂತಾಗಿದ್ದು ಮರಳಿ ಗ್ರಾಮಕ್ಕೆ ಬಂದಂಥ ಗ್ರಾಮಸ್ಥರಿಗೆ ಈಗ ಜಿಲ್ಲಾಡಳಿತದ ವತಿಯಿಂದ ದಿನಸಿ ಹಾಗೂ ದಿನ ಬಳಕೆ ವಸ್ತುಗಳನ್ನು ನೀಡಲಾಗುತ್ತಿದೆ. ನಾಗಮಲೆಗೆ ಹೋಗುವ ಚಾರಣದ ನಿಷೇಧದ ಕುರಿತು ಮುಂಬರುವ ದಿನಗಳಲ್ಲಿ ಸೂಕ್ತ ಕ್ರಮ ತೆಗೆದು ಕೊಳ್ಳುವುದಾಗಿ ಜಿಲ್ಲಾಧಿಕಾರಿ ಭರವಸೆ ನೀಡಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 10:16 am, Tue, 14 May 24

Suraj Prasad SN

ಸೂರಜ್ ಪ್ರಸಾದ್ ಎಸ್.ಎನ್ ಆದ ನಾನು ಹುಟ್ಟಿದ್ದು ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿಯಲ್ಲಿ. ಬೆಳೆದಿದ್ದು ದಾವಣಗರೆ ಜಿಲ್ಲೆ ನ್ಯಾಮತಿ ತಾಲೂಕಿನಲ್ಲಿ. ಶಿವಮೊಗ್ಗದ ಸಹ್ಯಾದ್ರಿ ಕಾಲೇಜ್ ನಲ್ಲಿ ಪತ್ರಿಕೋದ್ಯಮದಲ್ಲಿ ಪದವಿಪೂರ್ವ ಶಿಕ್ಷಣ ಪಡೆದಿದ್ದು 2014ರಿಂದ ನನ್ನ ಎಲೆಕ್ಟ್ರಾನಿಕ್ ಮಾದ್ಯಮದ ವೃತ್ತಿ ಜೀವನವನ್ನ ಬೆಂಗಳೂರಿನಲ್ಲಿ ಕ್ರೈಂ ಬೀಟ್ ವರದಿಗಾರನಾಗಿ ಆರಂಭಿಸಿದ್ದು ಬೆಂಗಳೂರಿನಲ್ಲಿ 8 ವರ್ಷಗಳ ಕ್ರೈಂ ವರದಿಗಾರನಾಗಿ ಸೇವೆ ಸಲ್ಲಿಸಿ. ನಾಲ್ಕು ಸಂಸ್ಥೆಯಲ್ಲಿ ಕ್ರೈಂ ರಿಪೋರ್ಟರ್ ಹಾಗೂ ಕ್ರೈಂ ಇನ್ವೆಸ್ಟಿಗೇಟಿವ್ ವರದಿಗಾರನಾಗಿ ಹಾಗೂ ಸ್ಟಿಂಗ್ ಅಪರೇಷನ್ ಗಳನ್ನ ಮಾಡಿದ್ದೇನೆ. ಗೌರಿ ಲಂಕೇಶ್ ಕೊಲೆ ಕೇಸನ್ನ ರಾಜ್ಯದಲ್ಲೇ ಮೊದಲು ಬ್ರೇಕ್ ಮಾಡಿ ಈ ಹಿಂದಿನ ಸಂಸ್ಥೆಯಿಂದ ಪ್ರಶಂಸೆ ಪಡೆದಿರುತ್ನೇನೆ2019 ರಲ್ಲಿ ಪಿಎಸ್ಐ ಅಕ್ರಮದ ಸ್ಟಿಂಗ್ ಆಪರೇಷನ್ ಹಾಗೂ ಬೆಂಗಳೂರು ಸಿಂಥಟಿಕ್ ಡ್ರಗ್ ಮಾಫಿಯಾದ ಸ್ಟಿಂಗ್ ಆಪರೇಷನ್ ಮಾಡಿದ್ದು. ಕಳೆದ 10 ವರ್ಷಗಳಿಂದ ಸಕ್ರೀಯವಾಗಿ ಕಾರ್ಯ ನಿರ್ವಹಿಸುತ್ತಿದ್ದೇನೆ. ಟಿವಿ9 ಸಂಸ್ಥೆಗೆ ಮಂಡ್ಯ ಜಿಲ್ಲಾ ವರದಿಗಾರನಾಗಿ ಕೆಲಸ ಮಾಡಿ ಬಳಿಕ ಚಾಮರಾಜನಗರಕ್ಕೆ ವರ್ಗಾವಣೆಯಾಗಿ ಈಗ ಪ್ರಸ್ಥುತ ಚಾಮರಾಜನಗರ ಜಿಲ್ಲಾ ವರದಿಗಾರನಾಗಿ ಕೆಲಸ ಮಾಡುತ್ತಿದ್ದೇನೆ. ಹವ್ಯಾಸ ಅಡಿಗೆ ಮಾಡುವುದು, ಕ್ರಿಕೆಟ್ ಆಡುವುದು ಕ್ರೈಂ ಇನ್ವೆಷ್ಟಿಗೇಷನ್ ನಾವೆಲ್ ಗಳನ್ನ ಓದುವುದು.

Read More
Follow Us