AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಚಾಮರಾಜನಗರ: ಸಂಬಳಕ್ಕೆ ಪರದಾಟ, ಇಂದಿರಾ ಕ್ಯಾಂಟೀನ್ ಬಂದ್​ ಮಾಡುವ ಎಚ್ಚರಿಕೆ ಕೊಟ್ಟ ಸಿಬ್ಬಂದಿ

ಕಾಂಗ್ರೆಸ್​ ಸರ್ಕಾರ ಅಧಿಕಾರಕ್ಕೆ ಬರುತ್ತಿದ್ದಂತೆ ಸಿದ್ದರಾಮಯ್ಯನವರ ಕನಸಿನ ಕೂಸು ಇಂದಿರಾ ಕ್ಯಾಂಟೀನ್​ಗೆ ಮರುಜೀವ ಬಂದಿತ್ತು. ಆದರೀಗ ಚಾಮರಾಜನಗರ ಇಂದಿರಾ ಕ್ಯಾಂಟೀನ್​ನ​ನ್ನು​ ಸಿಬ್ಬಂದಿಗಳು ಬಂದ್​ ಮಾಡಲು ಮುಂದಾಗಿದ್ದಾರೆ. ಯಾಕೆ ಅಂತೀರಾ? ಇಲ್ಲಿದೆ ನೋಡಿ.

ಚಾಮರಾಜನಗರ: ಸಂಬಳಕ್ಕೆ ಪರದಾಟ, ಇಂದಿರಾ ಕ್ಯಾಂಟೀನ್ ಬಂದ್​ ಮಾಡುವ ಎಚ್ಚರಿಕೆ ಕೊಟ್ಟ ಸಿಬ್ಬಂದಿ
ಚಾಮರಾಜನಗರ
ಸೂರಜ್ ಪ್ರಸಾದ್ ಎಸ್.ಎನ್
| Edited By: |

Updated on: Aug 06, 2023 | 2:00 PM

Share

ಚಾಮರಾಜನಗರ, ಆ.6: ಕಾಂಗ್ರೆಸ್​ ಸರ್ಕಾರ ಅಧಿಕಾರಕ್ಕೆ ಬರುತ್ತಿದ್ದಂತೆ ಸಿದ್ದರಾಮಯ್ಯನವರ ಕನಸಿನ ಕೂಸು ಇಂದಿರಾ ಕ್ಯಾಂಟೀನ್​ಗೆ ಮರುಜೀವ ಬಂದಿತ್ತು. ಇನ್ನು ಈ ಕುರಿತು ಮಾತನಾಡಿದ್ದ ಸಿಎಂ ‘ಇಂದಿರಾ ಕ್ಯಾಂಟೀನ್ (Indira Canteen) ವಿಚಾರವಾಗಿ ಹೊಸ ಟೆಂಡರ್ ಕರೆಯುತ್ತೇವೆ. ಕ್ವಾಲಿಟಿ ಮತ್ತು ಕ್ವಾಂಟಿಟಿಗೂ ಹೆಚ್ಚಿನ ಒತ್ತು ಕೊಡುತ್ತೇವೆ. ಬೆಂಗಳೂರಿನಲ್ಲಿ 250 ಇಂದಿರಾ ಕ್ಯಾಂಟೀನ್ ಆರಂಭಿಸಲು ಸೂಚನೆ ನೀಡಲಾಗಿದೆ. ಈವರೆಗೆ ಪಾಲಿಕೆ ಶೇ.70, ಸರ್ಕಾರ 30% ಅನುದಾನ ನೀಡುತ್ತಿತ್ತು. ಇನ್ಮುಂದೆ ಸರ್ಕಾರ, ಪಾಲಿಕೆ ತಲಾ 50ರಷ್ಟು ಅನುದಾನ ನೀಡುತ್ತೆ. ಎಲ್ಲೆಲ್ಲಿ ಹೊಸ ಕ್ಯಾಂಟೀನ್​ ಪ್ರಾರಂಭಿಸಬೇಕೆಂಬ ಬಗ್ಗೆಯೂ ಚರ್ಚೆ ಮಾಡಿ ಪಟ್ಟಿ ಕೊಡಲು ಸೂಚನೆ ನೀಡಿದ್ದೇನೆ ಎಂದು ಹೇಳಿದ್ದರು. ಆದರೀಗ ಚಾಮರಾಜನಗರ ಇಂದಿರಾ ಕ್ಯಾಂಟೀನ್​ನ್ನು​ ಸಿಬ್ಬಂದಿಗಳು ಬಂದ್​ ಮಾಡಲು ಮುಂದಾಗಿದ್ದಾರೆ.

ಜಿಲ್ಲೆಯ ನಾಲ್ಕೂ ಇಂದಿರಾ ಕ್ಯಾಂಟೀನ್​ಗಳು ಆಗಲಿದೆ ಬಂದ್

ಕಳೆದ ಎಂಟು ತಿಂಗಳಿನಿಂದ ಇಂದಿರಾ ಕ್ಯಾಂಟೀನ್ ಸಿಬ್ಬಂದಿಗೆ ಸಂಬಳ ನೀಡದ ಹಿನ್ನಲೆ ಬೇಸತ್ತ ಸಿಬ್ಬಂದಿಗಳು ಬಂದ್​ ಮಾಡುವ ನಿರ್ಧಾರ ಮಾಡಿದ್ದಾರೆ. ಹೌದು, ಸರ್ಕಾರದಿಂದ ಒಂದು ಮುಕ್ಕಾಲು ಕೋಟಿ ರೂಪಾಯಿ ಬಿಲ್ ಆಗುವುದು ಬಾಕಿಯಿದ್ದು, ಟೆಂಡರ್‌ದಾರ ಸಿಬ್ಬಂದಿಗೆ ಸಂಬಳ ನೀಡುತ್ತಿಲ್ಲ. ಟೆಂಡರ್‌ದಾರರನ್ನು ಸಂಬಳ ಕೇಳಿದರೆ ಫೋನ್ ರಿಸೀವ್ ಮಾಡುವುದಿಲ್ಲ ಎಂದು ಆರೋಪಿಸಿದ್ದಾರೆ.

ಇದನ್ನೂ ಓದಿ:ಪ್ರತಿ ಭಾನುವಾರ ಜಗಳೂರು ಪಟ್ಟಣದಲ್ಲಿ ಕಸಗುಡಿಸುವೆ ಎಂದ ಕಾಂಗ್ರೆಸ್ ಶಾಸಕ ದೇವೇಂದ್ರಪ್ಪ, ಇಂದಿರಾ ಕ್ಯಾಂಟೀನ್​​ನಲ್ಲಿ ಊಟ ಮಾಡಿದರು

ಸಂಬಳವಿಲ್ಲದೆ ಜೀವನ ನಡೆಸುವುದೇ ದುಸ್ತರ

ಇನ್ನು ಸಂಬಳವಿಲ್ಲದೆ ಜೀವನ ನಡೆಸುವುದೇ ದುಸ್ತರವಾಗಿದೆ ಎಂದು ಸಿಬ್ಬಂದಿಗಳು ಅಳಲು ತೋಡಿಕೊಳ್ಳುತ್ತಿದ್ದಾರೆ. ಈ ಮಧ್ಯೆ ಕಡಿಮೆ ದರದಲ್ಲಿ ಊಟ ತಿಂಡಿ ಸಿಗಲಿದೆ ಎಂದು ಬರುವ ಬಡವರು, ಶ್ರಮಿಕರಿಗೆ ಇದರಿಂದ ತೊಂದರೆ ಆಗಲಿದೆ. ಈ ಕುರಿತು ಜಿಲ್ಲಾಧಿಕಾರಿ ಶಿಲ್ಪಾನಾಗ್ ಮೂರು, ನಾಲ್ಕು ದಿನದಲ್ಲಿ ಸಮಸ್ಯೆ ಬಗೆಹರಿಸುವ ಭರವಸೆ ಕೊಟ್ಟಿದ್ದಾರಂತೆ.

ಇನ್ನಷ್ಟು ರಾಜ್ಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಮಲ್ಲಿಕಾರ್ಜುನ ಖರ್ಗೆ, ಪರಮೇಶ್ವರ್ ಯಾವತ್ತೋ ಸಿಎಂ ಆಗಬೇಕಿತ್ತು: ಹೆಚ್​ಡಿಕೆ
ಮಲ್ಲಿಕಾರ್ಜುನ ಖರ್ಗೆ, ಪರಮೇಶ್ವರ್ ಯಾವತ್ತೋ ಸಿಎಂ ಆಗಬೇಕಿತ್ತು: ಹೆಚ್​ಡಿಕೆ
ಮಗನಿಗೆ ದುಬಾರಿ ಬೆಲೆಯ ಕಾರನ್ನು ಉಡುಗೊರೆಯಾಗಿ ನೀಡಿದ ಹಾರ್ದಿಕ್ ಪಾಂಡ್ಯ
ಮಗನಿಗೆ ದುಬಾರಿ ಬೆಲೆಯ ಕಾರನ್ನು ಉಡುಗೊರೆಯಾಗಿ ನೀಡಿದ ಹಾರ್ದಿಕ್ ಪಾಂಡ್ಯ
ಹನುಮನ ಆಶೀರ್ವಾದದಿಂದಲೇ ರಿಷಬ್​​ಗೆ ಪಾತ್ರ ಸಿಕ್ಕಿದೆ ಎಂದ ಪತ್ನಿ: ವಿಡಿಯೋ
ಹನುಮನ ಆಶೀರ್ವಾದದಿಂದಲೇ ರಿಷಬ್​​ಗೆ ಪಾತ್ರ ಸಿಕ್ಕಿದೆ ಎಂದ ಪತ್ನಿ: ವಿಡಿಯೋ
40 ಭಾರತೀಯ ಮೂಲದ ಆಟಗಾರರನ್ನು ಶ್ಲಾಘಿಸಿದ ಮೋದಿ
40 ಭಾರತೀಯ ಮೂಲದ ಆಟಗಾರರನ್ನು ಶ್ಲಾಘಿಸಿದ ಮೋದಿ
ಭಾರೀ ಅಗ್ನಿ ಅವಘಡ:20 ಕೋಟಿ ರೂ.ಹೆಚ್ಚು ಮೌಲ್ಯದ ವಸ್ತುಗಳು ಭಸ್ಮ
ಭಾರೀ ಅಗ್ನಿ ಅವಘಡ:20 ಕೋಟಿ ರೂ.ಹೆಚ್ಚು ಮೌಲ್ಯದ ವಸ್ತುಗಳು ಭಸ್ಮ
ಶಾಸಕ ಚಂದ್ರು ಲಮಾಣಿ ವಿರುದ್ಧ ನಡೆದಿತ್ತಾ ಷಡ್ಯಂತ್ರ?ಸ್ವಾಮೀಜಿ ಆಡಿಯೋ ವೈರಲ್
ಶಾಸಕ ಚಂದ್ರು ಲಮಾಣಿ ವಿರುದ್ಧ ನಡೆದಿತ್ತಾ ಷಡ್ಯಂತ್ರ?ಸ್ವಾಮೀಜಿ ಆಡಿಯೋ ವೈರಲ್
ಶಾರ್ಟ್​ ಸರ್ಕ್ಯೂಟ್​ನಿಂದ ಸುಗಂಧ ದ್ರವ್ಯ ಗೋದಾಮು ಧಗಧಗ!
ಶಾರ್ಟ್​ ಸರ್ಕ್ಯೂಟ್​ನಿಂದ ಸುಗಂಧ ದ್ರವ್ಯ ಗೋದಾಮು ಧಗಧಗ!
ಲಂಚ ಸ್ವೀಕರಿಸುವಾಗ ಸಿಕ್ಕಿಬಿದ್ದ ಬಿಜೆಪಿ ಶಾಸಕನ ಪರ ರಾಜಣ್ಣ ಬ್ಯಾಟಿಂಗ್
ಲಂಚ ಸ್ವೀಕರಿಸುವಾಗ ಸಿಕ್ಕಿಬಿದ್ದ ಬಿಜೆಪಿ ಶಾಸಕನ ಪರ ರಾಜಣ್ಣ ಬ್ಯಾಟಿಂಗ್
ಆ್ಯಂಬುಲೆನ್ಸ್ ಅಡ್ಡಗಟ್ಟಿ ಕಾರು ಚಾಲಕನ ರಸ್ತೆ ರಂಪಾಟ
ಆ್ಯಂಬುಲೆನ್ಸ್ ಅಡ್ಡಗಟ್ಟಿ ಕಾರು ಚಾಲಕನ ರಸ್ತೆ ರಂಪಾಟ
‘ಜೈ ಹನುಮಾನ’ ಚಿತ್ರದ ಮುಹೂರ್ತ: ಅಂಜನಾದ್ರಿ ಬೆಟ್ಟಕ್ಕೆ ಬಂದ ರಿಷಬ್ ಶೆಟ್ಟಿ
‘ಜೈ ಹನುಮಾನ’ ಚಿತ್ರದ ಮುಹೂರ್ತ: ಅಂಜನಾದ್ರಿ ಬೆಟ್ಟಕ್ಕೆ ಬಂದ ರಿಷಬ್ ಶೆಟ್ಟಿ