AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಚಾಮರಾಜನಗರ: ಸಂಬಳಕ್ಕೆ ಪರದಾಟ, ಇಂದಿರಾ ಕ್ಯಾಂಟೀನ್ ಬಂದ್​ ಮಾಡುವ ಎಚ್ಚರಿಕೆ ಕೊಟ್ಟ ಸಿಬ್ಬಂದಿ

ಕಾಂಗ್ರೆಸ್​ ಸರ್ಕಾರ ಅಧಿಕಾರಕ್ಕೆ ಬರುತ್ತಿದ್ದಂತೆ ಸಿದ್ದರಾಮಯ್ಯನವರ ಕನಸಿನ ಕೂಸು ಇಂದಿರಾ ಕ್ಯಾಂಟೀನ್​ಗೆ ಮರುಜೀವ ಬಂದಿತ್ತು. ಆದರೀಗ ಚಾಮರಾಜನಗರ ಇಂದಿರಾ ಕ್ಯಾಂಟೀನ್​ನ​ನ್ನು​ ಸಿಬ್ಬಂದಿಗಳು ಬಂದ್​ ಮಾಡಲು ಮುಂದಾಗಿದ್ದಾರೆ. ಯಾಕೆ ಅಂತೀರಾ? ಇಲ್ಲಿದೆ ನೋಡಿ.

ಚಾಮರಾಜನಗರ: ಸಂಬಳಕ್ಕೆ ಪರದಾಟ, ಇಂದಿರಾ ಕ್ಯಾಂಟೀನ್ ಬಂದ್​ ಮಾಡುವ ಎಚ್ಚರಿಕೆ ಕೊಟ್ಟ ಸಿಬ್ಬಂದಿ
ಚಾಮರಾಜನಗರ
ಸೂರಜ್ ಪ್ರಸಾದ್ ಎಸ್.ಎನ್
| Edited By: |

Updated on: Aug 06, 2023 | 2:00 PM

Share

ಚಾಮರಾಜನಗರ, ಆ.6: ಕಾಂಗ್ರೆಸ್​ ಸರ್ಕಾರ ಅಧಿಕಾರಕ್ಕೆ ಬರುತ್ತಿದ್ದಂತೆ ಸಿದ್ದರಾಮಯ್ಯನವರ ಕನಸಿನ ಕೂಸು ಇಂದಿರಾ ಕ್ಯಾಂಟೀನ್​ಗೆ ಮರುಜೀವ ಬಂದಿತ್ತು. ಇನ್ನು ಈ ಕುರಿತು ಮಾತನಾಡಿದ್ದ ಸಿಎಂ ‘ಇಂದಿರಾ ಕ್ಯಾಂಟೀನ್ (Indira Canteen) ವಿಚಾರವಾಗಿ ಹೊಸ ಟೆಂಡರ್ ಕರೆಯುತ್ತೇವೆ. ಕ್ವಾಲಿಟಿ ಮತ್ತು ಕ್ವಾಂಟಿಟಿಗೂ ಹೆಚ್ಚಿನ ಒತ್ತು ಕೊಡುತ್ತೇವೆ. ಬೆಂಗಳೂರಿನಲ್ಲಿ 250 ಇಂದಿರಾ ಕ್ಯಾಂಟೀನ್ ಆರಂಭಿಸಲು ಸೂಚನೆ ನೀಡಲಾಗಿದೆ. ಈವರೆಗೆ ಪಾಲಿಕೆ ಶೇ.70, ಸರ್ಕಾರ 30% ಅನುದಾನ ನೀಡುತ್ತಿತ್ತು. ಇನ್ಮುಂದೆ ಸರ್ಕಾರ, ಪಾಲಿಕೆ ತಲಾ 50ರಷ್ಟು ಅನುದಾನ ನೀಡುತ್ತೆ. ಎಲ್ಲೆಲ್ಲಿ ಹೊಸ ಕ್ಯಾಂಟೀನ್​ ಪ್ರಾರಂಭಿಸಬೇಕೆಂಬ ಬಗ್ಗೆಯೂ ಚರ್ಚೆ ಮಾಡಿ ಪಟ್ಟಿ ಕೊಡಲು ಸೂಚನೆ ನೀಡಿದ್ದೇನೆ ಎಂದು ಹೇಳಿದ್ದರು. ಆದರೀಗ ಚಾಮರಾಜನಗರ ಇಂದಿರಾ ಕ್ಯಾಂಟೀನ್​ನ್ನು​ ಸಿಬ್ಬಂದಿಗಳು ಬಂದ್​ ಮಾಡಲು ಮುಂದಾಗಿದ್ದಾರೆ.

ಜಿಲ್ಲೆಯ ನಾಲ್ಕೂ ಇಂದಿರಾ ಕ್ಯಾಂಟೀನ್​ಗಳು ಆಗಲಿದೆ ಬಂದ್

ಕಳೆದ ಎಂಟು ತಿಂಗಳಿನಿಂದ ಇಂದಿರಾ ಕ್ಯಾಂಟೀನ್ ಸಿಬ್ಬಂದಿಗೆ ಸಂಬಳ ನೀಡದ ಹಿನ್ನಲೆ ಬೇಸತ್ತ ಸಿಬ್ಬಂದಿಗಳು ಬಂದ್​ ಮಾಡುವ ನಿರ್ಧಾರ ಮಾಡಿದ್ದಾರೆ. ಹೌದು, ಸರ್ಕಾರದಿಂದ ಒಂದು ಮುಕ್ಕಾಲು ಕೋಟಿ ರೂಪಾಯಿ ಬಿಲ್ ಆಗುವುದು ಬಾಕಿಯಿದ್ದು, ಟೆಂಡರ್‌ದಾರ ಸಿಬ್ಬಂದಿಗೆ ಸಂಬಳ ನೀಡುತ್ತಿಲ್ಲ. ಟೆಂಡರ್‌ದಾರರನ್ನು ಸಂಬಳ ಕೇಳಿದರೆ ಫೋನ್ ರಿಸೀವ್ ಮಾಡುವುದಿಲ್ಲ ಎಂದು ಆರೋಪಿಸಿದ್ದಾರೆ.

ಇದನ್ನೂ ಓದಿ:ಪ್ರತಿ ಭಾನುವಾರ ಜಗಳೂರು ಪಟ್ಟಣದಲ್ಲಿ ಕಸಗುಡಿಸುವೆ ಎಂದ ಕಾಂಗ್ರೆಸ್ ಶಾಸಕ ದೇವೇಂದ್ರಪ್ಪ, ಇಂದಿರಾ ಕ್ಯಾಂಟೀನ್​​ನಲ್ಲಿ ಊಟ ಮಾಡಿದರು

ಸಂಬಳವಿಲ್ಲದೆ ಜೀವನ ನಡೆಸುವುದೇ ದುಸ್ತರ

ಇನ್ನು ಸಂಬಳವಿಲ್ಲದೆ ಜೀವನ ನಡೆಸುವುದೇ ದುಸ್ತರವಾಗಿದೆ ಎಂದು ಸಿಬ್ಬಂದಿಗಳು ಅಳಲು ತೋಡಿಕೊಳ್ಳುತ್ತಿದ್ದಾರೆ. ಈ ಮಧ್ಯೆ ಕಡಿಮೆ ದರದಲ್ಲಿ ಊಟ ತಿಂಡಿ ಸಿಗಲಿದೆ ಎಂದು ಬರುವ ಬಡವರು, ಶ್ರಮಿಕರಿಗೆ ಇದರಿಂದ ತೊಂದರೆ ಆಗಲಿದೆ. ಈ ಕುರಿತು ಜಿಲ್ಲಾಧಿಕಾರಿ ಶಿಲ್ಪಾನಾಗ್ ಮೂರು, ನಾಲ್ಕು ದಿನದಲ್ಲಿ ಸಮಸ್ಯೆ ಬಗೆಹರಿಸುವ ಭರವಸೆ ಕೊಟ್ಟಿದ್ದಾರಂತೆ.

ಇನ್ನಷ್ಟು ರಾಜ್ಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow Us
Suraj Prasad SN
Suraj Prasad SN

ಸೂರಜ್ ಪ್ರಸಾದ್ ಎಸ್.ಎನ್ ಆದ ನಾನು ಹುಟ್ಟಿದ್ದು ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿಯಲ್ಲಿ. ಬೆಳೆದಿದ್ದು ದಾವಣಗರೆ ಜಿಲ್ಲೆ ನ್ಯಾಮತಿ ತಾಲೂಕಿನಲ್ಲಿ. ಶಿವಮೊಗ್ಗದ ಸಹ್ಯಾದ್ರಿ ಕಾಲೇಜ್ ನಲ್ಲಿ ಪತ್ರಿಕೋದ್ಯಮದಲ್ಲಿ ಪದವಿಪೂರ್ವ ಶಿಕ್ಷಣ ಪಡೆದಿದ್ದು 2014ರಿಂದ ನನ್ನ ಎಲೆಕ್ಟ್ರಾನಿಕ್ ಮಾದ್ಯಮದ ವೃತ್ತಿ ಜೀವನವನ್ನ ಬೆಂಗಳೂರಿನಲ್ಲಿ ಕ್ರೈಂ ಬೀಟ್ ವರದಿಗಾರನಾಗಿ ಆರಂಭಿಸಿದ್ದು ಬೆಂಗಳೂರಿನಲ್ಲಿ 8 ವರ್ಷಗಳ ಕ್ರೈಂ ವರದಿಗಾರನಾಗಿ ಸೇವೆ ಸಲ್ಲಿಸಿ. ನಾಲ್ಕು ಸಂಸ್ಥೆಯಲ್ಲಿ ಕ್ರೈಂ ರಿಪೋರ್ಟರ್ ಹಾಗೂ ಕ್ರೈಂ ಇನ್ವೆಸ್ಟಿಗೇಟಿವ್ ವರದಿಗಾರನಾಗಿ ಹಾಗೂ ಸ್ಟಿಂಗ್ ಅಪರೇಷನ್ ಗಳನ್ನ ಮಾಡಿದ್ದೇನೆ. ಗೌರಿ ಲಂಕೇಶ್ ಕೊಲೆ ಕೇಸನ್ನ ರಾಜ್ಯದಲ್ಲೇ ಮೊದಲು ಬ್ರೇಕ್ ಮಾಡಿ ಈ ಹಿಂದಿನ ಸಂಸ್ಥೆಯಿಂದ ಪ್ರಶಂಸೆ ಪಡೆದಿರುತ್ನೇನೆ2019 ರಲ್ಲಿ ಪಿಎಸ್ಐ ಅಕ್ರಮದ ಸ್ಟಿಂಗ್ ಆಪರೇಷನ್ ಹಾಗೂ ಬೆಂಗಳೂರು ಸಿಂಥಟಿಕ್ ಡ್ರಗ್ ಮಾಫಿಯಾದ ಸ್ಟಿಂಗ್ ಆಪರೇಷನ್ ಮಾಡಿದ್ದು. ಕಳೆದ 10 ವರ್ಷಗಳಿಂದ ಸಕ್ರೀಯವಾಗಿ ಕಾರ್ಯ ನಿರ್ವಹಿಸುತ್ತಿದ್ದೇನೆ. ಟಿವಿ9 ಸಂಸ್ಥೆಗೆ ಮಂಡ್ಯ ಜಿಲ್ಲಾ ವರದಿಗಾರನಾಗಿ ಕೆಲಸ ಮಾಡಿ ಬಳಿಕ ಚಾಮರಾಜನಗರಕ್ಕೆ ವರ್ಗಾವಣೆಯಾಗಿ ಈಗ ಪ್ರಸ್ಥುತ ಚಾಮರಾಜನಗರ ಜಿಲ್ಲಾ ವರದಿಗಾರನಾಗಿ ಕೆಲಸ ಮಾಡುತ್ತಿದ್ದೇನೆ. ಹವ್ಯಾಸ ಅಡಿಗೆ ಮಾಡುವುದು, ಕ್ರಿಕೆಟ್ ಆಡುವುದು ಕ್ರೈಂ ಇನ್ವೆಷ್ಟಿಗೇಷನ್ ನಾವೆಲ್ ಗಳನ್ನ ಓದುವುದು.

Read More
‘ಕಂಟ್ರಿ ಮೇಡ್’ ಸಿನಿಮಾನಲ್ಲಿ ಕತೆಯೇ ನಾಯಕ: ವಿಡಿಯೋ
‘ಕಂಟ್ರಿ ಮೇಡ್’ ಸಿನಿಮಾನಲ್ಲಿ ಕತೆಯೇ ನಾಯಕ: ವಿಡಿಯೋ
ಅತ್ಯಾಚಾರ ಪ್ರಕರಣದಲ್ಲಿ ಜೈಲಿಂದ ಬಿಡುಗಡೆಯಾದ ಆರೋಪಿಗೆ ಹಾರ ಹಾಕಿ ಮೆರವಣಿಗೆ!
ಅತ್ಯಾಚಾರ ಪ್ರಕರಣದಲ್ಲಿ ಜೈಲಿಂದ ಬಿಡುಗಡೆಯಾದ ಆರೋಪಿಗೆ ಹಾರ ಹಾಕಿ ಮೆರವಣಿಗೆ!
ವಿವಾಹ ವಾರ್ಷಿಕೋತ್ಸವದ ದಿನ ದರ್ಶನ್ ಭೇಟಿ ಮಾಡಿ ಹೊರಟ ವಿಜಯಲಕ್ಷ್ಮಿ; ವಿಡಿಯೋ
ವಿವಾಹ ವಾರ್ಷಿಕೋತ್ಸವದ ದಿನ ದರ್ಶನ್ ಭೇಟಿ ಮಾಡಿ ಹೊರಟ ವಿಜಯಲಕ್ಷ್ಮಿ; ವಿಡಿಯೋ
ಮನೆ ಮೇಲೆ ಬಿದ್ದ ಬೃಹತ್​ ಮರ: ಆಚೆ ಬರಲಾಗದೇ ಮನೆಯೊಳಗೆ ಮೂವರು ಲಾಕ್
ಮನೆ ಮೇಲೆ ಬಿದ್ದ ಬೃಹತ್​ ಮರ: ಆಚೆ ಬರಲಾಗದೇ ಮನೆಯೊಳಗೆ ಮೂವರು ಲಾಕ್
ಹತ್ತು ತಿಂಗಳ ಬಳಿಕ ಪತ್ನಿ-ಮಗನ ಮುಖಾ-ಮುಖಿ ಭೇಟಿಯಾದ ದರ್ಶನ್
ಹತ್ತು ತಿಂಗಳ ಬಳಿಕ ಪತ್ನಿ-ಮಗನ ಮುಖಾ-ಮುಖಿ ಭೇಟಿಯಾದ ದರ್ಶನ್
ಕಾದಾಟದಲ್ಲಿ ಗಾಯಗೊಂಡಿದ್ದ ಮಾರ್ತಾಂಡ ಆನೆ ಸಾವು, ತಪ್ಪು ಯಾರದ್ದು?
ಕಾದಾಟದಲ್ಲಿ ಗಾಯಗೊಂಡಿದ್ದ ಮಾರ್ತಾಂಡ ಆನೆ ಸಾವು, ತಪ್ಪು ಯಾರದ್ದು?
ವಿವಾಹ ವಾರ್ಷಿಕೋತ್ಸವ: ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ವಿವಾಹ ವಾರ್ಷಿಕೋತ್ಸವ: ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ಲಿಫ್ಟ್‌ನಲ್ಲಿ ಸಿಲುಕಿದ್ದ 9 ಜನರನ್ನ ರಕ್ಷಿಸಿದ ಅಗ್ನಿಶಾಮಕ ಸಿಬ್ಬಂದಿ
ಲಿಫ್ಟ್‌ನಲ್ಲಿ ಸಿಲುಕಿದ್ದ 9 ಜನರನ್ನ ರಕ್ಷಿಸಿದ ಅಗ್ನಿಶಾಮಕ ಸಿಬ್ಬಂದಿ
ಯತ್ನಾಳ್​​ ಹೇಳಿಕೆ ಬೆಂಬಲಿಸಿದ ಗಂಗಾವತಿ ಶಾಸಕ ಜನಾರ್ದನ ರೆಡ್ಡಿ!
ಯತ್ನಾಳ್​​ ಹೇಳಿಕೆ ಬೆಂಬಲಿಸಿದ ಗಂಗಾವತಿ ಶಾಸಕ ಜನಾರ್ದನ ರೆಡ್ಡಿ!
ಏಕಾಏಕಿ ಕಳಚಿ ಬಿತ್ತು ವೇಗವಾಗಿ ಚಲಿಸುತ್ತಿದ್ದ ಬಸ್ಸಿನ ಟೈರ್
ಏಕಾಏಕಿ ಕಳಚಿ ಬಿತ್ತು ವೇಗವಾಗಿ ಚಲಿಸುತ್ತಿದ್ದ ಬಸ್ಸಿನ ಟೈರ್