AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಚಾಮರಾಜನಗರ: ಸಂಬಳಕ್ಕೆ ಪರದಾಟ, ಇಂದಿರಾ ಕ್ಯಾಂಟೀನ್ ಬಂದ್​ ಮಾಡುವ ಎಚ್ಚರಿಕೆ ಕೊಟ್ಟ ಸಿಬ್ಬಂದಿ

ಕಾಂಗ್ರೆಸ್​ ಸರ್ಕಾರ ಅಧಿಕಾರಕ್ಕೆ ಬರುತ್ತಿದ್ದಂತೆ ಸಿದ್ದರಾಮಯ್ಯನವರ ಕನಸಿನ ಕೂಸು ಇಂದಿರಾ ಕ್ಯಾಂಟೀನ್​ಗೆ ಮರುಜೀವ ಬಂದಿತ್ತು. ಆದರೀಗ ಚಾಮರಾಜನಗರ ಇಂದಿರಾ ಕ್ಯಾಂಟೀನ್​ನ​ನ್ನು​ ಸಿಬ್ಬಂದಿಗಳು ಬಂದ್​ ಮಾಡಲು ಮುಂದಾಗಿದ್ದಾರೆ. ಯಾಕೆ ಅಂತೀರಾ? ಇಲ್ಲಿದೆ ನೋಡಿ.

ಚಾಮರಾಜನಗರ: ಸಂಬಳಕ್ಕೆ ಪರದಾಟ, ಇಂದಿರಾ ಕ್ಯಾಂಟೀನ್ ಬಂದ್​ ಮಾಡುವ ಎಚ್ಚರಿಕೆ ಕೊಟ್ಟ ಸಿಬ್ಬಂದಿ
ಚಾಮರಾಜನಗರ
ಸೂರಜ್ ಪ್ರಸಾದ್ ಎಸ್.ಎನ್
| Edited By: ಕಿರಣ್ ಹನುಮಂತ್​ ಮಾದಾರ್|

Updated on: Aug 06, 2023 | 2:00 PM

Share

ಚಾಮರಾಜನಗರ, ಆ.6: ಕಾಂಗ್ರೆಸ್​ ಸರ್ಕಾರ ಅಧಿಕಾರಕ್ಕೆ ಬರುತ್ತಿದ್ದಂತೆ ಸಿದ್ದರಾಮಯ್ಯನವರ ಕನಸಿನ ಕೂಸು ಇಂದಿರಾ ಕ್ಯಾಂಟೀನ್​ಗೆ ಮರುಜೀವ ಬಂದಿತ್ತು. ಇನ್ನು ಈ ಕುರಿತು ಮಾತನಾಡಿದ್ದ ಸಿಎಂ ‘ಇಂದಿರಾ ಕ್ಯಾಂಟೀನ್ (Indira Canteen) ವಿಚಾರವಾಗಿ ಹೊಸ ಟೆಂಡರ್ ಕರೆಯುತ್ತೇವೆ. ಕ್ವಾಲಿಟಿ ಮತ್ತು ಕ್ವಾಂಟಿಟಿಗೂ ಹೆಚ್ಚಿನ ಒತ್ತು ಕೊಡುತ್ತೇವೆ. ಬೆಂಗಳೂರಿನಲ್ಲಿ 250 ಇಂದಿರಾ ಕ್ಯಾಂಟೀನ್ ಆರಂಭಿಸಲು ಸೂಚನೆ ನೀಡಲಾಗಿದೆ. ಈವರೆಗೆ ಪಾಲಿಕೆ ಶೇ.70, ಸರ್ಕಾರ 30% ಅನುದಾನ ನೀಡುತ್ತಿತ್ತು. ಇನ್ಮುಂದೆ ಸರ್ಕಾರ, ಪಾಲಿಕೆ ತಲಾ 50ರಷ್ಟು ಅನುದಾನ ನೀಡುತ್ತೆ. ಎಲ್ಲೆಲ್ಲಿ ಹೊಸ ಕ್ಯಾಂಟೀನ್​ ಪ್ರಾರಂಭಿಸಬೇಕೆಂಬ ಬಗ್ಗೆಯೂ ಚರ್ಚೆ ಮಾಡಿ ಪಟ್ಟಿ ಕೊಡಲು ಸೂಚನೆ ನೀಡಿದ್ದೇನೆ ಎಂದು ಹೇಳಿದ್ದರು. ಆದರೀಗ ಚಾಮರಾಜನಗರ ಇಂದಿರಾ ಕ್ಯಾಂಟೀನ್​ನ್ನು​ ಸಿಬ್ಬಂದಿಗಳು ಬಂದ್​ ಮಾಡಲು ಮುಂದಾಗಿದ್ದಾರೆ.

ಜಿಲ್ಲೆಯ ನಾಲ್ಕೂ ಇಂದಿರಾ ಕ್ಯಾಂಟೀನ್​ಗಳು ಆಗಲಿದೆ ಬಂದ್

ಕಳೆದ ಎಂಟು ತಿಂಗಳಿನಿಂದ ಇಂದಿರಾ ಕ್ಯಾಂಟೀನ್ ಸಿಬ್ಬಂದಿಗೆ ಸಂಬಳ ನೀಡದ ಹಿನ್ನಲೆ ಬೇಸತ್ತ ಸಿಬ್ಬಂದಿಗಳು ಬಂದ್​ ಮಾಡುವ ನಿರ್ಧಾರ ಮಾಡಿದ್ದಾರೆ. ಹೌದು, ಸರ್ಕಾರದಿಂದ ಒಂದು ಮುಕ್ಕಾಲು ಕೋಟಿ ರೂಪಾಯಿ ಬಿಲ್ ಆಗುವುದು ಬಾಕಿಯಿದ್ದು, ಟೆಂಡರ್‌ದಾರ ಸಿಬ್ಬಂದಿಗೆ ಸಂಬಳ ನೀಡುತ್ತಿಲ್ಲ. ಟೆಂಡರ್‌ದಾರರನ್ನು ಸಂಬಳ ಕೇಳಿದರೆ ಫೋನ್ ರಿಸೀವ್ ಮಾಡುವುದಿಲ್ಲ ಎಂದು ಆರೋಪಿಸಿದ್ದಾರೆ.

ಇದನ್ನೂ ಓದಿ:ಪ್ರತಿ ಭಾನುವಾರ ಜಗಳೂರು ಪಟ್ಟಣದಲ್ಲಿ ಕಸಗುಡಿಸುವೆ ಎಂದ ಕಾಂಗ್ರೆಸ್ ಶಾಸಕ ದೇವೇಂದ್ರಪ್ಪ, ಇಂದಿರಾ ಕ್ಯಾಂಟೀನ್​​ನಲ್ಲಿ ಊಟ ಮಾಡಿದರು

ಸಂಬಳವಿಲ್ಲದೆ ಜೀವನ ನಡೆಸುವುದೇ ದುಸ್ತರ

ಇನ್ನು ಸಂಬಳವಿಲ್ಲದೆ ಜೀವನ ನಡೆಸುವುದೇ ದುಸ್ತರವಾಗಿದೆ ಎಂದು ಸಿಬ್ಬಂದಿಗಳು ಅಳಲು ತೋಡಿಕೊಳ್ಳುತ್ತಿದ್ದಾರೆ. ಈ ಮಧ್ಯೆ ಕಡಿಮೆ ದರದಲ್ಲಿ ಊಟ ತಿಂಡಿ ಸಿಗಲಿದೆ ಎಂದು ಬರುವ ಬಡವರು, ಶ್ರಮಿಕರಿಗೆ ಇದರಿಂದ ತೊಂದರೆ ಆಗಲಿದೆ. ಈ ಕುರಿತು ಜಿಲ್ಲಾಧಿಕಾರಿ ಶಿಲ್ಪಾನಾಗ್ ಮೂರು, ನಾಲ್ಕು ದಿನದಲ್ಲಿ ಸಮಸ್ಯೆ ಬಗೆಹರಿಸುವ ಭರವಸೆ ಕೊಟ್ಟಿದ್ದಾರಂತೆ.

ಇನ್ನಷ್ಟು ರಾಜ್ಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow Us
ದಿನ ಭವಿಷ್ಯ: ಶನಿವಾರ ಈ ಮೂರು ದೇವರ ಆರಾಧನೆಯಿಂದ ಸಿಗಲಿದೆ ಸರ್ವ ಸಿದ್ಧಿ
ದಿನ ಭವಿಷ್ಯ: ಶನಿವಾರ ಈ ಮೂರು ದೇವರ ಆರಾಧನೆಯಿಂದ ಸಿಗಲಿದೆ ಸರ್ವ ಸಿದ್ಧಿ
ಅಡವಿಟ್ಟ ಚಿನ್ನ ಬಿಡಿಸಿಕೊಳ್ಳಲು ಅಧ್ಯಾತ್ಮದಲ್ಲಿದೆ ಐಡಿಯಾ!
ಅಡವಿಟ್ಟ ಚಿನ್ನ ಬಿಡಿಸಿಕೊಳ್ಳಲು ಅಧ್ಯಾತ್ಮದಲ್ಲಿದೆ ಐಡಿಯಾ!
ಒಮ್ಮೆಯೂ ಅಯೋಧ್ಯೆಗೆ ಹೋಗದವರು ರಾಮಭಕ್ತಿಯ ನಾಟಕವಾಡುತ್ತಿದ್ದಾರೆ; ಸಿಎಂ ಯೋಗಿ
ಒಮ್ಮೆಯೂ ಅಯೋಧ್ಯೆಗೆ ಹೋಗದವರು ರಾಮಭಕ್ತಿಯ ನಾಟಕವಾಡುತ್ತಿದ್ದಾರೆ; ಸಿಎಂ ಯೋಗಿ
‘ಮೋಡ ಕವಿದ ವಾತಾವರಣ’ ಸಿನಿಮಾದಲ್ಲಿದೆ ಹಲವು ವಿಶೇಷ; ವಿವರಿಸಿದ ಚಿತ್ರತಂಡ
‘ಮೋಡ ಕವಿದ ವಾತಾವರಣ’ ಸಿನಿಮಾದಲ್ಲಿದೆ ಹಲವು ವಿಶೇಷ; ವಿವರಿಸಿದ ಚಿತ್ರತಂಡ
ಫೀಲ್ಡಿಗಿಳಿದ ಸಚಿವ: ಪಿಂಕ್ ಲೈನ್ ಮೆಟ್ರೋ ಕಾಮಗಾರಿಗೆ ಡೆಡ್​​ಲೈನ್ ಫಿಕ್ಸ್
ಫೀಲ್ಡಿಗಿಳಿದ ಸಚಿವ: ಪಿಂಕ್ ಲೈನ್ ಮೆಟ್ರೋ ಕಾಮಗಾರಿಗೆ ಡೆಡ್​​ಲೈನ್ ಫಿಕ್ಸ್
ಗ್ಯಾರಂಟಿ ಯೋಜನೆಗಳಿಗೆ ಮತ್ತೊಂದು ರೂಲ್ಸ್: ಮನೆಗೆ ಬಂದು ದಾಖಲೆ ಚೆಕ್ಕಿಂಗ್
ಗ್ಯಾರಂಟಿ ಯೋಜನೆಗಳಿಗೆ ಮತ್ತೊಂದು ರೂಲ್ಸ್: ಮನೆಗೆ ಬಂದು ದಾಖಲೆ ಚೆಕ್ಕಿಂಗ್
‘ನಾನು ಇಲ್ಲಿ ನಿಂತಿದ್ದಕ್ಕೆ ಟೈಗರ್ ಪ್ರಭಾಕರ್ ಕಾರಣ’: ವಿನೋದ್ ಪ್ರಭಾಕರ್
‘ನಾನು ಇಲ್ಲಿ ನಿಂತಿದ್ದಕ್ಕೆ ಟೈಗರ್ ಪ್ರಭಾಕರ್ ಕಾರಣ’: ವಿನೋದ್ ಪ್ರಭಾಕರ್
ರಾಜ್ಯದ ಜನತೆಗೆ ಶೀಘ್ರದಲ್ಲೇ ಕಾದಿದ್ಯಾ ಬಸ್ ಪ್ರಯಾಣ ದರ ಏರಿಕೆ ಶಾಕ್?
ರಾಜ್ಯದ ಜನತೆಗೆ ಶೀಘ್ರದಲ್ಲೇ ಕಾದಿದ್ಯಾ ಬಸ್ ಪ್ರಯಾಣ ದರ ಏರಿಕೆ ಶಾಕ್?
ರಾಹುಲ್ ಗಾಂಧಿ ಫೋಟೋಗೆ ಹಾಲಿನ ಅಭಿಷೇಕ ಮಾಡಿದ ಅಭಿಮಾನಿಗಳು!
ರಾಹುಲ್ ಗಾಂಧಿ ಫೋಟೋಗೆ ಹಾಲಿನ ಅಭಿಷೇಕ ಮಾಡಿದ ಅಭಿಮಾನಿಗಳು!
ಗ್ಯಾರಂಟಿ ಯೋಜನೆಗಳ ಬಗ್ಗೆ ಕಟ್ಟು ನಿಟ್ಟಿನ ಕ್ರಮ:ಸಿಎಂ ಕೊಟ್ಟ ಸೂಚನೆಗಳೇನು?
ಗ್ಯಾರಂಟಿ ಯೋಜನೆಗಳ ಬಗ್ಗೆ ಕಟ್ಟು ನಿಟ್ಟಿನ ಕ್ರಮ:ಸಿಎಂ ಕೊಟ್ಟ ಸೂಚನೆಗಳೇನು?