ನರೇಂದ್ರ ಮೋದಿ ಪ್ರಮಾಣ ವಚನ ಸ್ವೀಕಾರ ಕಾರ್ಯಕ್ರಮಕ್ಕೆ ಚಾಮರಾಜನಗರದ ಯುವತಿಗೆ ಆಹ್ವಾನ

ಮೊರನೇ ಬಾರಿಗೆ ಪ್ರಧಾನಿಯಾಗಿ ನರೇಂದ್ರ ಮೋದಿ(Narendra Modi) ಅವರು ಇಂದು(ಜೂ.09) ರಾಷ್ಟ್ರಪತಿ ಭವನದಲ್ಲಿ ಸಂಜೆ 7:15 ರ ಸುಮಾರಿಗೆ ಪ್ರಮಾಣ ವಚನ ಸ್ವೀಕರಿಸಲಿದ್ದಾರೆ. ಈ ಹಿನ್ನೆಲೆ ಮೋದಿ ಪ್ರಮಾಣ ವಚನ ಸ್ವೀಕಾರ ಕಾರ್ಯಕ್ರಮಕ್ಕೆ ಚಾಮರಾಜನಗರದ ಉಮ್ಮತ್ತೂರಿನಲ್ಲಿ ಕರಕುಶಲ ಉದ್ಯಮ ನಡೆಸುತ್ತಿರುವ ವರ್ಷಾ ಎಂಬ ಯುವತಿಗೆ ಆಹ್ವಾನಿಸಲಾಗಿದೆ.

ನರೇಂದ್ರ ಮೋದಿ ಪ್ರಮಾಣ ವಚನ ಸ್ವೀಕಾರ ಕಾರ್ಯಕ್ರಮಕ್ಕೆ ಚಾಮರಾಜನಗರದ ಯುವತಿಗೆ ಆಹ್ವಾನ
ಮೋದಿ ಪ್ರಮಾಣ ವಚನ ಸ್ವೀಕಾರ ಕಾರ್ಯಕ್ರಮಕ್ಕೆ ಚಾಮರಾಜನಗರದ ಯುವತಿಗೆ ಆಹ್ವಾನ
Follow us
| Updated By: ಕಿರಣ್ ಹನುಮಂತ್​ ಮಾದಾರ್

Updated on:Jun 09, 2024 | 5:23 PM

ಚಾಮರಾಜನಗರ, ಜೂ.09: ಮೋದಿ ಪ್ರಮಾಣ ವಚನ ಸ್ವೀಕಾರ ಕಾರ್ಯಕ್ರಮಕ್ಕೆ ಚಾಮರಾಜನಗರದ ಉಮ್ಮತ್ತೂರಿನಲ್ಲಿ ಕರಕುಶಲ ಉದ್ಯಮ ನಡೆಸುತ್ತಿರುವ ವರ್ಷಾ ಎಂಬ ಯುವತಿಗೆ ಆಹ್ವಾನಿಸಲಾಗಿದೆ. ಮೊರನೇ ಬಾರಿಗೆ ಪ್ರಧಾನಿಯಾಗಿ ನರೇಂದ್ರ ಮೋದಿ(Narendra Modi) ಅವರು ಇಂದು(ಜೂ.09) ರಾಷ್ಟ್ರಪತಿ ಭವನದಲ್ಲಿ ಸಂಜೆ 7:15 ರ ಸುಮಾರಿಗೆ ಪ್ರಮಾಣ ವಚನ ಸ್ವೀಕರಿಸಲಿದ್ದಾರೆ. ಈ ಹಿನ್ನೆಲೆ ಪದಗ್ರಹಣಕ್ಕೆ ಎಲ್ಲಾ ಸಿದ್ಧತೆಗಳು ಪೂರ್ಣಗೊಂಡಿದ್ದು, ಸಮಾರಂಭಕ್ಕೆ ಗಣ್ಯಾತಿ ಗಣ್ಯರಿಗೆ ಆಹ್ವಾನಿಸಲಾಗಿದೆ.

ವರ್ಷಾ ಅವರಿಗೆ ಪ್ರಮಾಣ ವಚನ ಸ್ವೀಕಾರ ಕಾರ್ಯಕ್ರಮಕ್ಕೆ ಆಹ್ವಾನ

ಮೋದಿ ಅವರ ಮನ್‌ಕಿ ಬಾತ್​ನಿಂದ ಪ್ರೇರಣೆಗೊಂಡು ಕರಕುಶಲ ಉದ್ಯಮ ಆರಂಭಿಸಿದ್ದರು. ಅನುಪಯುಕ್ತ ಬಾಳೆ ದಿಂಡಿನಿಂದ ಅಲಂಕಾರಿಕ ವಸ್ತುಗಳನ್ನು ತಯಾರಿಸುವ ಉದ್ಯಮ ನಡೆಸುತ್ತಿರುವ ವರ್ಷಾ, ಹಲವು ಮಹಿಳೆಯರಿಗೆ ಉದ್ಯಮ ನೀಡುವ ಜೊತೆಗೆ ಸ್ವಾವಲಂಬಿ ಬದುಕು ನಡೆಸುತ್ತಿದ್ದಾರೆ. ವರ್ಷಾ ಸಾಧನೆಯ ಬಗ್ಗೆಯು ಮನ್.ಕಿ ಬಾತ್​ನಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ವೋಕಲ್ ಫಾರ್ ಲೋಕಲ್ ಎಂದು ಪ್ರಶಂಸಿದ್ದರು. ಇದೀಗ ವರ್ಷಾ ಅವರಿಗೆ ಪ್ರಮಾಣ ವಚನ ಸ್ವೀಕಾರ ಕಾರ್ಯಕ್ರಮಕ್ಕೆ ಆಹ್ವಾನ ನೀಡಲಾಗಿದ್ದು, ಈಗಾಗಲೇ ನವದೆಹಲಿ ತಲುಪಿದ್ದಾರೆ.

ಇದನ್ನೂ ಓದಿ: ಮೂರನೇ ಬಾರಿ ಪ್ರಧಾನಿಯಾಗಿ ಪ್ರಮಾಣ ವಚನ ಸ್ವೀಕರಿಸಲಿದ್ದಾರೆ ಮೋದಿ

ಪ್ರಧಾನಿ ನರೇಂದ್ರ ಮೋದಿ ಅವರು ಆಕಾಶವಾಣಿಯಲ್ಲಿ ಪ್ರತಿ ತಿಂಗಳು ನಡೆಸಿಕೊಡುವ ಮನ್​ ಕಿ ಬಾತ್​ ಕಾರ್ಯಕ್ರಮವೊಂದರಲ್ಲಿ 2023 ನವೆಂಬರ್​ 27 ರಂದು ವರ್ಷಾ ಅವರಿಗೆ ಮೋದಿ ಮೆಚ್ಚುಗೆ ವ್ಯಕ್ತಪಡಿಸಿದ್ದರು. ವರ್ಷಾ ಅವರು ಅಲಂಕಾರಿಕ ವಸ್ತುಗಳು ಮತ್ತು ವ್ಯಾನಿಟಿ ಬ್ಯಾಗ್ ನಂತಹ ವಸ್ತುಗಳ ಉತ್ಪಾದನೆ ಮಾಡುತ್ತಾ ಸ್ವಾವಲಂಬಿ ಆಗುವುದರ ಜೊತೆಗೆ ಹಲವರಿಗೆ ಉದ್ಯೋಗವನ್ನೂ ನೀಡಿದ್ದಾರೆ. ವೋಕಲ್ ಫಾರ್ ಲೋಕಲ್​ನಿಂದ ಇದೆಲ್ಲವೂ ಸಾಧ್ಯವಾಗಿದೆ ಎಂದು ಪ್ರಧಾನಿ ಮೋದಿ ಮೆಚ್ಚುಗೆ ವ್ಯಕ್ತಪಡಿಸಿದ್ದರು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 5:17 pm, Sun, 9 June 24

ತಾಜಾ ಸುದ್ದಿ
ಬೃಹತ್ ಗಾತ್ರದ ಹೆಬ್ಬಾವು ಪ್ರತ್ಯಕ್ಷ, ಕೂದಲೆಳೆ ಅಂತರದಿಂದ ವ್ಯಕ್ತಿ ಬಚಾವ್
ಬೃಹತ್ ಗಾತ್ರದ ಹೆಬ್ಬಾವು ಪ್ರತ್ಯಕ್ಷ, ಕೂದಲೆಳೆ ಅಂತರದಿಂದ ವ್ಯಕ್ತಿ ಬಚಾವ್
Charmadi Ghat: ಭಾರಿ ಮಳೆಯಿಂದ ಚಾರ್ಮಾಡಿ ಘಾಟ್​ನಲ್ಲಿ ಗುಡ್ಡ ಕುಸಿತ
Charmadi Ghat: ಭಾರಿ ಮಳೆಯಿಂದ ಚಾರ್ಮಾಡಿ ಘಾಟ್​ನಲ್ಲಿ ಗುಡ್ಡ ಕುಸಿತ
‘ಮಾರ್ಟಿನ್’ ಸಿನಿಮಾ ನಿರ್ಮಾಪಕರ ಜೊತೆ ಮನಸ್ತಾಪ ಬಂದಿದ್ದೇಕೆ?
‘ಮಾರ್ಟಿನ್’ ಸಿನಿಮಾ ನಿರ್ಮಾಪಕರ ಜೊತೆ ಮನಸ್ತಾಪ ಬಂದಿದ್ದೇಕೆ?
Daily Devotional: ಪರೋಪಕಾರಾರ್ಥಂ ಇದಂ ಶರೀರಂ ಇದರ ಅರ್ಥ, ಮಹತ್ವ ತಿಳಿಯಿರಿ
Daily Devotional: ಪರೋಪಕಾರಾರ್ಥಂ ಇದಂ ಶರೀರಂ ಇದರ ಅರ್ಥ, ಮಹತ್ವ ತಿಳಿಯಿರಿ
Nithya Bhavishya: ಶನಿವಾರದ ನಿಮ್ಮ ರಾಶಿ ಭವಿಷ್ಯ ತಿಳಿಯಿರಿ
Nithya Bhavishya: ಶನಿವಾರದ ನಿಮ್ಮ ರಾಶಿ ಭವಿಷ್ಯ ತಿಳಿಯಿರಿ
ಟ್ರಾಫಿಕ್ ರೂಲ್ಸ್​ ಉಲ್ಲಂಘಿಸುವವರೇ ಹುಷಾರ್​! ಬಂದಿದೆ ಉನ್ನತ ತಂತ್ರಜ್ಞಾನ
ಟ್ರಾಫಿಕ್ ರೂಲ್ಸ್​ ಉಲ್ಲಂಘಿಸುವವರೇ ಹುಷಾರ್​! ಬಂದಿದೆ ಉನ್ನತ ತಂತ್ರಜ್ಞಾನ
ಮಂಗಳೂರು: ಸುಂಟರಗಾಳಿಗೆ ಧರೆಗೆ ಉರುಳಿದ ವಿದ್ಯುತ್ ಕಂಬ, ಮರ; ವಿಡಿಯೋ ನೋಡಿ
ಮಂಗಳೂರು: ಸುಂಟರಗಾಳಿಗೆ ಧರೆಗೆ ಉರುಳಿದ ವಿದ್ಯುತ್ ಕಂಬ, ಮರ; ವಿಡಿಯೋ ನೋಡಿ
ಚಾಮುಂಡಿ ದರ್ಶನಕ್ಕೆ ಬಂದ ದಿನಕರ್, ಚಿಕ್ಕಣ್ಣ; ಜನಜಂಗುಳಿಯಲ್ಲಿ ಹೈರಾಣು
ಚಾಮುಂಡಿ ದರ್ಶನಕ್ಕೆ ಬಂದ ದಿನಕರ್, ಚಿಕ್ಕಣ್ಣ; ಜನಜಂಗುಳಿಯಲ್ಲಿ ಹೈರಾಣು
‘ಮಾರ್ಟಿನ್’ ಮನಸ್ತಾಪ; ಕಮಿಷನ್ ಆರೋಪಕ್ಕೆ ಎ.ಪಿ. ಅರ್ಜುನ್ ಸುದ್ದಿಗೋಷ್ಠಿ
‘ಮಾರ್ಟಿನ್’ ಮನಸ್ತಾಪ; ಕಮಿಷನ್ ಆರೋಪಕ್ಕೆ ಎ.ಪಿ. ಅರ್ಜುನ್ ಸುದ್ದಿಗೋಷ್ಠಿ
ಕುಮಾರಸ್ವಾಮಿಯವರಿಗೆ ರಾಮನಗರ ಜನರ ನಾಡಿಮಿಡಿತ ಗೊತ್ತಿಲ್ಲ:ಇಕ್ಬಾಲ್ ಹುಸ್ಸೇನ್
ಕುಮಾರಸ್ವಾಮಿಯವರಿಗೆ ರಾಮನಗರ ಜನರ ನಾಡಿಮಿಡಿತ ಗೊತ್ತಿಲ್ಲ:ಇಕ್ಬಾಲ್ ಹುಸ್ಸೇನ್