AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮದ್ಯ ಮಾರಾಟ ಹೆಚ್ಚಿಸುವಂತೆ ಅಬಕಾರಿ ಇಲಾಖೆ ಒತ್ತಡ: ಸರ್ಕಾರದ ನಡೆಗೆ ಸಿಡಿದೆದ್ದ ಬಾರ್ ಮಾಲೀಕರು

ಕೇಂದ್ರ ಸರ್ಕಾರ ಜಿಎಸ್​ಟಿ ಕಡಿತ ಗೊಳಿಸಿದ್ದೇ ತಡ, ಕೆಲ ರಾಜ್ಯ ಸರ್ಕಾರಗಳು ನೀರಿನಿಂದ ಆಚೆ ಬಂದ ಮೀನಿನಂತೆ ವಿಲ ವಿಲನೆ ಒದ್ದಾಡ ತೊಡಗಿವೆ. ಹಣ ಸರಿದೂಗಿಸಲು ಪಡಬಾರದ ಪರಿಪಾಟಲು ಪಡುತ್ತಿವೆ. ಮತ್ತೊಂದೆಡೆ, ಅಬಕಾರಿ ಸುಂಕ ವಿಪರೀತ ಹೆಚ್ಚಳವಾದ ಕಾರಣ ಮದ್ಯ ಹಾಗೂ ಬಿಯರ್ ಮಾರಾಟದಲ್ಲಿ ಭಾರಿ ಕುಸಿತವಾಗಿರುವುದು ಇತ್ತೀಚೆಗೆ ತಿಳಿದುಬಂದಿದೆ. ಇದರ ಪರಿಣಾಮ ಈಗ ಕರ್ನಾಟಕದ ಬಾರ್ ಮಾಲೀಕರ ಹೆಗಲಮೇಲೂ ಬಿದ್ದಿದೆ.

ಮದ್ಯ ಮಾರಾಟ ಹೆಚ್ಚಿಸುವಂತೆ ಅಬಕಾರಿ ಇಲಾಖೆ ಒತ್ತಡ: ಸರ್ಕಾರದ ನಡೆಗೆ ಸಿಡಿದೆದ್ದ ಬಾರ್ ಮಾಲೀಕರು
ಸಾಂದರ್ಭಿಕ ಚಿತ್ರ
ಸೂರಜ್ ಪ್ರಸಾದ್ ಎಸ್.ಎನ್
| Edited By: |

Updated on: Oct 16, 2025 | 11:02 AM

Share

ಚಾಮರಾಜನಗರ, ಅಕ್ಟೋಬರ್ 16: ಭರ್ಜರಿ ಬಹುಮತದೊಂದಿಗೆ ಅಧಿಕಾರದ ಗದ್ದುಗೆ ಏರಿದ ಕಾಂಗ್ರೆಸ್ ಸರ್ಕಾರ (Congress) ಪಂಚ ಗ್ಯಾರಂಟಿಗಳ್ನು ನೀಡಿದೆ. ಮಹಿಳೆಯರಿಗೆ ಬಸ್ ಫ್ರೀ, ಉಚಿತ ವಿದ್ಯುತ್, ತಿಂಗಳಿಗೆ 2 ಸಾವಿರ ರೂ. ಮಹಿಳೆಯರ ಖಾತೆಗೆ ಹಣ ವರ್ಗಾವಣೆ, ಅನ್ನಭಾಗ್ಯ, ಸ್ಕಾಲರ್ ಶಿಪ್ ಎಂದು ಗ್ಯಾರಂಟಿಗಳ ಮೇಲೆ ಗ್ಯಾರಂಟಿಗಳನ್ನು ನೀಡಿದೆ. ಈ ಹಣದುಬ್ಬರ ಸರಿದೂಗಿಸಲು ಬೆಲೆಗಳ ಏರಿಕೆ ಕೂಡ ಮಾಡಿದೆ. ಆದರೆ ಕೇಂದ್ರ ಸರ್ಕಾರ ಜಿಎಸ್​​ಟಿ ಯಾವಾಗ ಕಡಿತ ಮಾಡಿತೋ ಕೆಲ ರಾಜ್ಯದ ಸರ್ಕಾರಗಳು ಒದ್ದಾಡತೊಡಗಿವೆ. ಜಿಎಸ್​ಟಿ ಪರಿಷ್ಕರಣೆಯಿಂದ ಆಗಬಹುದಾದ ನಷ್ಟವನ್ನು ಸರಿದೂಗಿಸಲು ಸರ್ಕಾರ ಈಗ ಅಬಕಾರಿ ಇಲಾಖೆಗೆ (Excise Department) ಸೂಚನೆ ಕೊಟ್ಟಿದ್ದು, ಇಲಾಖೆಯ ಸಿಬ್ಬಂದಿ ಬಾರ್ ಮಾಲೀಕರ ಪ್ರಾಣ ಹಿಂಡುತ್ತಿದ್ದಾರೆ ಎಂಬ ಆರೋಪ ಕೇಳಿಬಂದಿದೆ.

ಒಂದು ಲೀಟರ್ ಮದ್ಯ ಮಾರಾಟ ಮಾಡುವಲ್ಲಿ 10 ಲೀಟರ್ ಮಾರಾಟ ಮಾಡಿ ಎಂದು ಅಬಕಾರಿ ಇಲಾಖೆಯ ಅಧಿಕಾರಿಗಳು ಮೀಟಿಂಗ್ ಮಾಡಿ ಬಾರ್ ಲೈಸೆನ್ಸ್ ಹೊಲ್ಡರ್​ಗಳಿಗೆ ಕಟ್ಟಪ್ಪಣೆ ಹೊರಡಿಸಿದ್ದಾರೆ. ಇದರಿಂದ ಕೆಂಡಾಮಂಡಲರಾಗಿರುವ ಬಾರ್ ಮಾಲೀಕರು ರಾಜ್ಯ ಸರ್ಕಾರ ಹಾಗೂ ಅಬಕಾರಿ ಇಲಾಖೆ ವಿರುದ್ದ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಕುಡಿಯದೆ ಇರುವವರನ್ನು ನಾವು ಹೇಗೆ ಕರೆತಂದು ವ್ಯಾಪಾರ ಮಾಡುವುದು? ವರ್ಷದಿಂದ ವರ್ಷಕ್ಕೆ ಸೇಲ್ಸ್ 10 ಪಟ್ಟು ಹೆಚ್ಚು ಮಾಡಿ ಅಂದರೆ ಹೇಗೆ ಸಾಧ್ಯ? ರಾಜ್ಯ ಸರ್ಕಾರ ತನ್ನ ಬೊಕ್ಕಸ ತುಂಬಿಸಿಕೊಳ್ಳಲು ಮದ್ಯ ಮಾರಾಟಗಾರರ ವಿರುದ್ದ ಒತ್ತಡ ಹಾಕುವುದು ಸರಿಯಲ್ಲ ಎಂದು ಸರ್ಕಾರ ಹಾಗೂ ಅಬಕಾರಿ ಇಲಾಖೆ ವಿರುದ್ದ ಹರಿ ಹಾಯ್ದಿದ್ದಾರೆ.

ಇದನ್ನೂ ಓದಿ: ಕರ್ನಾಟಕದಲ್ಲಿ ಮದ್ಯ ಮಾರಾಟ ಭಾರಿ ಕುಸಿತ: ಕಾರಣ ಏನು ಗೊತ್ತೇ?

ಏನೇ ಹೇಳಿ, ಮದ್ಯಮುಕ್ತ ಹಾಗೂ ತಂಬಾಕುಮುಕ್ತ ರಾಜ್ಯ ಮಾಡುತ್ತೇವೆ ಎಂದು ಆಗಾಗ ಬಿಲ್ಡಪ್ ಕೊಡುವ ಸರ್ಕಾರಗಳು ಈಗ ಅದನ್ನೇ ಹಣದ ಆಸೆಗಾಗಿ ಹಿಂಬಾಗಿಲಿನಿಂದ ಬೆಂಬಲಿಸಿ ದ್ವಂದ್ವ ನೀತಿ ಪ್ರದರ್ಶಿಸುತ್ತಿವೆ. ಇದೇ ರೀತಿ ಒತ್ತಡ ಮುಂದುವರಿದರೆ ಮುಂದಿನ ದಿನಗಳಲ್ಲಿ ದೊಡ್ಡ ಹೋರಾಟ ನಡೆಸುವ ಎಚ್ಚರಿಕೆಯನ್ನೂ ಬಾರ್ ಮಾಲೀಕರು ನೀಡಿದ್ದಾರೆ.

ಕರ್ನಾಟಕದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್