AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮದ್ಯ ಮಾರಾಟ ಹೆಚ್ಚಿಸುವಂತೆ ಅಬಕಾರಿ ಇಲಾಖೆ ಒತ್ತಡ: ಸರ್ಕಾರದ ನಡೆಗೆ ಸಿಡಿದೆದ್ದ ಬಾರ್ ಮಾಲೀಕರು

ಕೇಂದ್ರ ಸರ್ಕಾರ ಜಿಎಸ್​ಟಿ ಕಡಿತ ಗೊಳಿಸಿದ್ದೇ ತಡ, ಕೆಲ ರಾಜ್ಯ ಸರ್ಕಾರಗಳು ನೀರಿನಿಂದ ಆಚೆ ಬಂದ ಮೀನಿನಂತೆ ವಿಲ ವಿಲನೆ ಒದ್ದಾಡ ತೊಡಗಿವೆ. ಹಣ ಸರಿದೂಗಿಸಲು ಪಡಬಾರದ ಪರಿಪಾಟಲು ಪಡುತ್ತಿವೆ. ಮತ್ತೊಂದೆಡೆ, ಅಬಕಾರಿ ಸುಂಕ ವಿಪರೀತ ಹೆಚ್ಚಳವಾದ ಕಾರಣ ಮದ್ಯ ಹಾಗೂ ಬಿಯರ್ ಮಾರಾಟದಲ್ಲಿ ಭಾರಿ ಕುಸಿತವಾಗಿರುವುದು ಇತ್ತೀಚೆಗೆ ತಿಳಿದುಬಂದಿದೆ. ಇದರ ಪರಿಣಾಮ ಈಗ ಕರ್ನಾಟಕದ ಬಾರ್ ಮಾಲೀಕರ ಹೆಗಲಮೇಲೂ ಬಿದ್ದಿದೆ.

ಮದ್ಯ ಮಾರಾಟ ಹೆಚ್ಚಿಸುವಂತೆ ಅಬಕಾರಿ ಇಲಾಖೆ ಒತ್ತಡ: ಸರ್ಕಾರದ ನಡೆಗೆ ಸಿಡಿದೆದ್ದ ಬಾರ್ ಮಾಲೀಕರು
ಸಾಂದರ್ಭಿಕ ಚಿತ್ರ
ಸೂರಜ್ ಪ್ರಸಾದ್ ಎಸ್.ಎನ್
| Edited By: |

Updated on: Oct 16, 2025 | 11:02 AM

Share

ಚಾಮರಾಜನಗರ, ಅಕ್ಟೋಬರ್ 16: ಭರ್ಜರಿ ಬಹುಮತದೊಂದಿಗೆ ಅಧಿಕಾರದ ಗದ್ದುಗೆ ಏರಿದ ಕಾಂಗ್ರೆಸ್ ಸರ್ಕಾರ (Congress) ಪಂಚ ಗ್ಯಾರಂಟಿಗಳ್ನು ನೀಡಿದೆ. ಮಹಿಳೆಯರಿಗೆ ಬಸ್ ಫ್ರೀ, ಉಚಿತ ವಿದ್ಯುತ್, ತಿಂಗಳಿಗೆ 2 ಸಾವಿರ ರೂ. ಮಹಿಳೆಯರ ಖಾತೆಗೆ ಹಣ ವರ್ಗಾವಣೆ, ಅನ್ನಭಾಗ್ಯ, ಸ್ಕಾಲರ್ ಶಿಪ್ ಎಂದು ಗ್ಯಾರಂಟಿಗಳ ಮೇಲೆ ಗ್ಯಾರಂಟಿಗಳನ್ನು ನೀಡಿದೆ. ಈ ಹಣದುಬ್ಬರ ಸರಿದೂಗಿಸಲು ಬೆಲೆಗಳ ಏರಿಕೆ ಕೂಡ ಮಾಡಿದೆ. ಆದರೆ ಕೇಂದ್ರ ಸರ್ಕಾರ ಜಿಎಸ್​​ಟಿ ಯಾವಾಗ ಕಡಿತ ಮಾಡಿತೋ ಕೆಲ ರಾಜ್ಯದ ಸರ್ಕಾರಗಳು ಒದ್ದಾಡತೊಡಗಿವೆ. ಜಿಎಸ್​ಟಿ ಪರಿಷ್ಕರಣೆಯಿಂದ ಆಗಬಹುದಾದ ನಷ್ಟವನ್ನು ಸರಿದೂಗಿಸಲು ಸರ್ಕಾರ ಈಗ ಅಬಕಾರಿ ಇಲಾಖೆಗೆ (Excise Department) ಸೂಚನೆ ಕೊಟ್ಟಿದ್ದು, ಇಲಾಖೆಯ ಸಿಬ್ಬಂದಿ ಬಾರ್ ಮಾಲೀಕರ ಪ್ರಾಣ ಹಿಂಡುತ್ತಿದ್ದಾರೆ ಎಂಬ ಆರೋಪ ಕೇಳಿಬಂದಿದೆ.

ಒಂದು ಲೀಟರ್ ಮದ್ಯ ಮಾರಾಟ ಮಾಡುವಲ್ಲಿ 10 ಲೀಟರ್ ಮಾರಾಟ ಮಾಡಿ ಎಂದು ಅಬಕಾರಿ ಇಲಾಖೆಯ ಅಧಿಕಾರಿಗಳು ಮೀಟಿಂಗ್ ಮಾಡಿ ಬಾರ್ ಲೈಸೆನ್ಸ್ ಹೊಲ್ಡರ್​ಗಳಿಗೆ ಕಟ್ಟಪ್ಪಣೆ ಹೊರಡಿಸಿದ್ದಾರೆ. ಇದರಿಂದ ಕೆಂಡಾಮಂಡಲರಾಗಿರುವ ಬಾರ್ ಮಾಲೀಕರು ರಾಜ್ಯ ಸರ್ಕಾರ ಹಾಗೂ ಅಬಕಾರಿ ಇಲಾಖೆ ವಿರುದ್ದ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಕುಡಿಯದೆ ಇರುವವರನ್ನು ನಾವು ಹೇಗೆ ಕರೆತಂದು ವ್ಯಾಪಾರ ಮಾಡುವುದು? ವರ್ಷದಿಂದ ವರ್ಷಕ್ಕೆ ಸೇಲ್ಸ್ 10 ಪಟ್ಟು ಹೆಚ್ಚು ಮಾಡಿ ಅಂದರೆ ಹೇಗೆ ಸಾಧ್ಯ? ರಾಜ್ಯ ಸರ್ಕಾರ ತನ್ನ ಬೊಕ್ಕಸ ತುಂಬಿಸಿಕೊಳ್ಳಲು ಮದ್ಯ ಮಾರಾಟಗಾರರ ವಿರುದ್ದ ಒತ್ತಡ ಹಾಕುವುದು ಸರಿಯಲ್ಲ ಎಂದು ಸರ್ಕಾರ ಹಾಗೂ ಅಬಕಾರಿ ಇಲಾಖೆ ವಿರುದ್ದ ಹರಿ ಹಾಯ್ದಿದ್ದಾರೆ.

ಇದನ್ನೂ ಓದಿ: ಕರ್ನಾಟಕದಲ್ಲಿ ಮದ್ಯ ಮಾರಾಟ ಭಾರಿ ಕುಸಿತ: ಕಾರಣ ಏನು ಗೊತ್ತೇ?

ಏನೇ ಹೇಳಿ, ಮದ್ಯಮುಕ್ತ ಹಾಗೂ ತಂಬಾಕುಮುಕ್ತ ರಾಜ್ಯ ಮಾಡುತ್ತೇವೆ ಎಂದು ಆಗಾಗ ಬಿಲ್ಡಪ್ ಕೊಡುವ ಸರ್ಕಾರಗಳು ಈಗ ಅದನ್ನೇ ಹಣದ ಆಸೆಗಾಗಿ ಹಿಂಬಾಗಿಲಿನಿಂದ ಬೆಂಬಲಿಸಿ ದ್ವಂದ್ವ ನೀತಿ ಪ್ರದರ್ಶಿಸುತ್ತಿವೆ. ಇದೇ ರೀತಿ ಒತ್ತಡ ಮುಂದುವರಿದರೆ ಮುಂದಿನ ದಿನಗಳಲ್ಲಿ ದೊಡ್ಡ ಹೋರಾಟ ನಡೆಸುವ ಎಚ್ಚರಿಕೆಯನ್ನೂ ಬಾರ್ ಮಾಲೀಕರು ನೀಡಿದ್ದಾರೆ.

ಕರ್ನಾಟಕದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಘಾರ್ಗ ಸಿನಿಮಾನಲ್ಲಿ ದರ್ಶನ್ ಸಿನಿಮಾದ ಹಾಡು ಏಕೆ: ಉತ್ತರ ಇಲ್ಲಿದೆ
ಘಾರ್ಗ ಸಿನಿಮಾನಲ್ಲಿ ದರ್ಶನ್ ಸಿನಿಮಾದ ಹಾಡು ಏಕೆ: ಉತ್ತರ ಇಲ್ಲಿದೆ
ಮುಳುಗುತ್ತಿದ್ದ ಇಬ್ಬರು ಯುವಕರನ್ನು ಕಾಪಾಡಿದ ಮಹಿಳಾ ಟ್ರಾಫಿಕ್ ಪೊಲೀಸ್
ಮುಳುಗುತ್ತಿದ್ದ ಇಬ್ಬರು ಯುವಕರನ್ನು ಕಾಪಾಡಿದ ಮಹಿಳಾ ಟ್ರಾಫಿಕ್ ಪೊಲೀಸ್
ತಮ್ಮ‌ ರಕ್ಷಣೆಗೆ ಬೋಟ್ ಆಂಬ್ಯುಲೆನ್ಸ್ ನಿರ್ಮಾಣ, ಮೀನುಗಾರರ ಮಾದರಿ ಹೆಜ್ಜೆ
ತಮ್ಮ‌ ರಕ್ಷಣೆಗೆ ಬೋಟ್ ಆಂಬ್ಯುಲೆನ್ಸ್ ನಿರ್ಮಾಣ, ಮೀನುಗಾರರ ಮಾದರಿ ಹೆಜ್ಜೆ
ಸಿಖ್ಖರನ್ನು ಕೊಂದ ಕುಟುಂಬದ ಕುಡಿಯೊಂದಿಗೆ ಕೈಕುಲುಕುವುದಿಲ್ಲ;ರವನೀತ್ ಬಿಟ್ಟು
ಸಿಖ್ಖರನ್ನು ಕೊಂದ ಕುಟುಂಬದ ಕುಡಿಯೊಂದಿಗೆ ಕೈಕುಲುಕುವುದಿಲ್ಲ;ರವನೀತ್ ಬಿಟ್ಟು
ಮನಸೋ ಇಚ್ಛೆ ಲೈಸೆನ್ಸ್: ಅಬಕಾರಿ ಇಲಾಖೆಯ ಮತ್ತಷ್ಟು ಕಳ್ಳಾಟ ಬಯಲು
ಮನಸೋ ಇಚ್ಛೆ ಲೈಸೆನ್ಸ್: ಅಬಕಾರಿ ಇಲಾಖೆಯ ಮತ್ತಷ್ಟು ಕಳ್ಳಾಟ ಬಯಲು
ಬೆಳಗಾವಿ: ಸಿಗರೇಟ್ ಹಣ ಕೇಳಿದ್ದಕ್ಕೆ ಬಿತ್ತು ಪಾನ್ ಶಾಪ್ ಮಾಲೀಕನ ಹೆಣ
ಬೆಳಗಾವಿ: ಸಿಗರೇಟ್ ಹಣ ಕೇಳಿದ್ದಕ್ಕೆ ಬಿತ್ತು ಪಾನ್ ಶಾಪ್ ಮಾಲೀಕನ ಹೆಣ
ಲವ್​​ ಹೆಸರಲ್ಲಿ ಮೋಸ ಮಾಡಿದವನ ಕಾಮುಕತೆ ಬಿಚ್ಚಿಟ್ಟ ಸಂತ್ರಸ್ತೆ
ಲವ್​​ ಹೆಸರಲ್ಲಿ ಮೋಸ ಮಾಡಿದವನ ಕಾಮುಕತೆ ಬಿಚ್ಚಿಟ್ಟ ಸಂತ್ರಸ್ತೆ
ಬಿಎಂಟಿಸಿ ಬಸ್ ಬಳಿಕ ವಿಕ್ಟೋರಿಯಾ ಆಸ್ಪತ್ರೆಯಲ್ಲೂ UPI ಸ್ಕ್ಯಾನರ್ ಸ್ಕ್ಯಾಮ್
ಬಿಎಂಟಿಸಿ ಬಸ್ ಬಳಿಕ ವಿಕ್ಟೋರಿಯಾ ಆಸ್ಪತ್ರೆಯಲ್ಲೂ UPI ಸ್ಕ್ಯಾನರ್ ಸ್ಕ್ಯಾಮ್
ಲಕ್ಕುಂಡಿಯ ಜೈನ ಬಸದಿಗಳಲ್ಲೂ ನಿಧಿ ಇದ್ಯಾ? ಸರ್ಪಗಳು ಕಾವಲು ಕಾಯ್ತಿದ್ಯಾ?
ಲಕ್ಕುಂಡಿಯ ಜೈನ ಬಸದಿಗಳಲ್ಲೂ ನಿಧಿ ಇದ್ಯಾ? ಸರ್ಪಗಳು ಕಾವಲು ಕಾಯ್ತಿದ್ಯಾ?
ಸದನದಲ್ಲಿ ವೈಯಕ್ತಿಕವಾಗಿ ಬೈದಾಡಿಕೊಂಡ ಶಾಸಕ ಶರಣು ಸಲಗಾರ್- ಶಿವಲಿಂಗೇಗೌಡ
ಸದನದಲ್ಲಿ ವೈಯಕ್ತಿಕವಾಗಿ ಬೈದಾಡಿಕೊಂಡ ಶಾಸಕ ಶರಣು ಸಲಗಾರ್- ಶಿವಲಿಂಗೇಗೌಡ