ಕೊನೆಗೂ ಮಲೆಮಹದೇಶ್ವರ ಬೆಟ್ಟದಲ್ಲಿ ಕ್ಯಾಬಿನೆಟ್ ಮೀಟಿಂಗ್​ಗೆ ಮುಹೂರ್ತ ಫಿಕ್ಸ್

ಅಂತೂ ಇಂತೂ ಮಲೆ ಮಹದೇಶ್ವರ ಬೆಟ್ಟದಲ್ಲಿ ಸಚಿವ ಸಂಪುಟ ಸಭೆಯ ಮುಹೂರ್ತ ಫಿಕ್ಸ್ ಆಗಿದೆ. ಇದೇ ತಿಂಗಳ 17 ರಂದು ಮಲೆ ಮಹದೇಶ್ವರ ಬೆಟ್ಟದಲ್ಲಿ ಕ್ಯಾಬಿನೆಟ್ ಮೀಟಿಂಗ್ ನಡೆಯಲಿದೆ. ಸದ್ಯ ಸಿದ್ದು ಸಂಪುಟ ಸಭೆಯ ಮೇಲೆ ಗಡಿ ನಾಡ ಜನರ ಚಿತ್ತ ನೆಟ್ಟಿದೆ. ಇದರಿಂದ ಹಿಂದುಳಿದ ಜಿಲ್ಲೆಗೆ ಎಷ್ಟರ ಮಟ್ಟಿಗೆ ಅನುಕೂಲ ಆಗಲಿದೆ? ವಿವರಗಳಿಗೆ ಮುಂದೆ ಓದಿ.

ಕೊನೆಗೂ ಮಲೆಮಹದೇಶ್ವರ ಬೆಟ್ಟದಲ್ಲಿ ಕ್ಯಾಬಿನೆಟ್ ಮೀಟಿಂಗ್​ಗೆ ಮುಹೂರ್ತ ಫಿಕ್ಸ್
ಮಲೆಮಹದೇಶ್ವರ ಬೆಟ್ಟ
Edited By:

Updated on: Feb 07, 2025 | 8:22 PM

ಚಾಮರಾಜನಗರ, ಫೆಬ್ರವರಿ 7: ಹಿಂದುಳಿದ ಜಿಲ್ಲೆ, ಅಭಿವೃದ್ಧಿ ಕಾಣದ ಜಿಲ್ಲೆ ಎಂಬ ಹಣೆ ಪಟ್ಟಿ ಪಡೆದ ಚಾಮರಾಜನಗರಕ್ಕೆ ಸಿಎಂ ಸಿದ್ದರಾಮಯ್ಯ ಸರ್ಕಾರ ಬಿಗ್ ಗಿಫ್ಟ್ ಕೊಡಲು ಮುಂದಾಗಿದೆ. 1997 ರಲ್ಲಿ ಅಖಂಡ ಮೈಸೂರು ಜಿಲ್ಲೆಯಿಂದ ಬೇರ್ಪಟ್ಟ ಬಳಿಕ ಚಾಮರಾಜನಗರ ಜಿಲ್ಲೆ ಅಬಿವೃದ್ಧಿ ಕುಂಟಿತವಾಯ್ತು. ಶೇಕಡ 48 ಕಾಡನ್ನೆ ಹೊಂದಿರುವ ಈ ಜಿಲ್ಲೆ ಕೇರಳ ಹಾಗೂ ಹಾಗೂ ತಮಿಳುನಾಡಿನ ಗಡಿಯನ್ನು ಹಂಚಿಕೊಂಡಿದೆ. ಟೈಗರ್ ರಿಸರ್ವ್ ಫಾರೆಸ್ಟ್ ಹೊಂದಿರುವ ಬಿಆರ್​​ಟಿ ಹಾಗೂ ಬಂಡೀಪುರ ಇಡೀ ದೇಶದ ಚಿತ್ತವನ್ನು ತನ್ನತ್ತ ಸೆಳೆಯುವುದರ ಜೊತೆಗೆ ಅಪಾರ ಪ್ರಾಣಿ ವನ್ಯ ಮೃಗ ಹಾಗೂ ಸಸ್ಯಕಾಶಿಯನ್ನು ಹೊಂದಿದೆ.

ಇಷ್ಟೆಲ್ಲ ಅಪಾರ ನೈಸರ್ಗಿಕ ಸಂಪತ್ತು ಹೊಂದಿರುವ ಗಡಿನಾಡು ಚಾಮರಾಜನಗರಕ್ಕೆ ಕಾಲಿಟ್ಟರೆ ಮುಖ್ಯಮಂತ್ರಿಗಳು ಅಧಿಕಾರ ಕಳೆದುಕೊಳ್ಳುತ್ತಾರೆ ಎಂಬ ಅಪಖ್ಯಾತಿ ಕೂಡ ಇದೆ. ಈ ಹಣೆಪಟ್ಟಿ ಪಡೆದಿರುವ ಚಾಮರಾಜನಗರದ ಕಳಂಕ ಅಳಿಸಲು ಸಿದ್ದರಾಮಯ್ಯ ಹಾಗೂ ಅವರ ಸರ್ಕಾರ ಮುಂದಾಗಿದೆ. ಇದೇ ಫೆಬ್ರವರಿ 17 ಕ್ಕೆ ಮಲೆಮಹದೇಶ್ವರ ಬೆಟ್ಟದಲ್ಲಿ ಸಚಿವ ಸಂಪುಟ ಸಭೆ ನಡೆಸುವ ಮೂಲಕ ಚಾಮರಾಜನಗರ ಜಿಲ್ಲೆಗೆ ಕೆಲವು ಉಡುಗೊರೆ ನೀಡಲು ಮುಂದಾಗಿದೆ.

ಇತಿಹಾಸದಲ್ಲೇ ಮೊದಲ ಬಾರಿಗೆ ಮಲೆಮಹದೇಶ್ವರ ಬೆಟ್ಟದಲ್ಲಿ ಪೂರ್ಣ ಪ್ರಮಾಣದ ಸಂಪುಟ ಸಭೆ

ಸಿದ್ದರಾಮಯ್ಯ ಮುಖ್ಯಮಂತ್ರಿ ಆದಮೇಲೆ 20ಕ್ಕೂ ಹೆಚ್ಚು ಬಾರಿ ಚಾಮರಾಜನಗರಕ್ಕೆ ಭೇಟಿ ನೀಡಿ ಈ ಮೌಢ್ಯ ತೊಲಗಿಸುವ ಪ್ರಯತ್ನ ಕೂಡ ಪಟ್ಟಿದ್ದಾರೆ. ಅಷ್ಟೇ ಯಾಕೆ, ಇತಿಹಾಸದಲ್ಲೇ ಮೊಟ್ಟ ಮೊದಲ ಬಾರಿಗೆ ಮಲೆಮಹದೇಶ್ವರ ಬೆಟ್ಟದಲ್ಲಿ ಪೂರ್ಣ ಪ್ರಮಾಣದ ಸಂಪುಟ ಸಭೆ ನಡೆಸುವ ಮೂಲಕ ಚಾಮರಾಜನಗರ ಜಿಲ್ಲೆಯ ಅಭಿವೃದ್ಧಿಗೆ ಒತ್ತು ಕೊಡಲು ಮುಂದಾಗಿದ್ದಾರೆ. ಈ ಸಚಿವ ಸಂಪುಟ ಸಭೆಯಲ್ಲಿ ಉದ್ಯೋಗ, ಆಕ್ಸಿಜನ್ ದುರಂತ ಸೇರಿದಂತೆ ಹತ್ತು ಹಲವು ಪ್ರಮುಖ ವಿಚಾರಗಳು ಚರ್ಚೆಯಾಗಲಿವೆ.

ಇದನ್ನೂ ಓದಿ: ಯುವಕರ ಹಠಾತ್ ಸಾವುಗಳ ಆತಂಕ: ಸಂಶೋಧನೆಗೆ ತಜ್ಞರ ಸಮಿತಿ ರಚಿಸಲು ಸಿಎಂ ಸಿದ್ದರಾಮಯ್ಯ ಸೂಚನೆ

ಈ ಕ್ಯಾಬಿನೆಟ್ ಮೀಟಿಂಗ್ ಗಡಿ ನಾಡ ಜನರಿಗೆ ಭಾರೀ ನಿರೀಕ್ಷೆ ಹುಟ್ಟಿಸಿದ್ದು ಚಾಮರಾಜನಗರದ ಸರ್ವಾಂಗೀಣ ಅಭಿವೃದ್ಧಿಗೆ ಈ ಸಚಿವ ಸಂಪುಟ ಸಭೆ ಎಷ್ಟರ ಮಟ್ಟಿಗೆ ಎಷ್ಟರ ಮಟ್ಟಿಗೆ ಅನುಕೂಲ ಆಗಲಿದೆ ಕಾದು ನೋಡಬೇಕಿದೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Suraj Prasad SN

ಸೂರಜ್ ಪ್ರಸಾದ್ ಎಸ್.ಎನ್ ಆದ ನಾನು ಹುಟ್ಟಿದ್ದು ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿಯಲ್ಲಿ. ಬೆಳೆದಿದ್ದು ದಾವಣಗರೆ ಜಿಲ್ಲೆ ನ್ಯಾಮತಿ ತಾಲೂಕಿನಲ್ಲಿ. ಶಿವಮೊಗ್ಗದ ಸಹ್ಯಾದ್ರಿ ಕಾಲೇಜ್ ನಲ್ಲಿ ಪತ್ರಿಕೋದ್ಯಮದಲ್ಲಿ ಪದವಿಪೂರ್ವ ಶಿಕ್ಷಣ ಪಡೆದಿದ್ದು 2014ರಿಂದ ನನ್ನ ಎಲೆಕ್ಟ್ರಾನಿಕ್ ಮಾದ್ಯಮದ ವೃತ್ತಿ ಜೀವನವನ್ನ ಬೆಂಗಳೂರಿನಲ್ಲಿ ಕ್ರೈಂ ಬೀಟ್ ವರದಿಗಾರನಾಗಿ ಆರಂಭಿಸಿದ್ದು ಬೆಂಗಳೂರಿನಲ್ಲಿ 8 ವರ್ಷಗಳ ಕ್ರೈಂ ವರದಿಗಾರನಾಗಿ ಸೇವೆ ಸಲ್ಲಿಸಿ. ನಾಲ್ಕು ಸಂಸ್ಥೆಯಲ್ಲಿ ಕ್ರೈಂ ರಿಪೋರ್ಟರ್ ಹಾಗೂ ಕ್ರೈಂ ಇನ್ವೆಸ್ಟಿಗೇಟಿವ್ ವರದಿಗಾರನಾಗಿ ಹಾಗೂ ಸ್ಟಿಂಗ್ ಅಪರೇಷನ್ ಗಳನ್ನ ಮಾಡಿದ್ದೇನೆ. ಗೌರಿ ಲಂಕೇಶ್ ಕೊಲೆ ಕೇಸನ್ನ ರಾಜ್ಯದಲ್ಲೇ ಮೊದಲು ಬ್ರೇಕ್ ಮಾಡಿ ಈ ಹಿಂದಿನ ಸಂಸ್ಥೆಯಿಂದ ಪ್ರಶಂಸೆ ಪಡೆದಿರುತ್ನೇನೆ2019 ರಲ್ಲಿ ಪಿಎಸ್ಐ ಅಕ್ರಮದ ಸ್ಟಿಂಗ್ ಆಪರೇಷನ್ ಹಾಗೂ ಬೆಂಗಳೂರು ಸಿಂಥಟಿಕ್ ಡ್ರಗ್ ಮಾಫಿಯಾದ ಸ್ಟಿಂಗ್ ಆಪರೇಷನ್ ಮಾಡಿದ್ದು. ಕಳೆದ 10 ವರ್ಷಗಳಿಂದ ಸಕ್ರೀಯವಾಗಿ ಕಾರ್ಯ ನಿರ್ವಹಿಸುತ್ತಿದ್ದೇನೆ. ಟಿವಿ9 ಸಂಸ್ಥೆಗೆ ಮಂಡ್ಯ ಜಿಲ್ಲಾ ವರದಿಗಾರನಾಗಿ ಕೆಲಸ ಮಾಡಿ ಬಳಿಕ ಚಾಮರಾಜನಗರಕ್ಕೆ ವರ್ಗಾವಣೆಯಾಗಿ ಈಗ ಪ್ರಸ್ಥುತ ಚಾಮರಾಜನಗರ ಜಿಲ್ಲಾ ವರದಿಗಾರನಾಗಿ ಕೆಲಸ ಮಾಡುತ್ತಿದ್ದೇನೆ. ಹವ್ಯಾಸ ಅಡಿಗೆ ಮಾಡುವುದು, ಕ್ರಿಕೆಟ್ ಆಡುವುದು ಕ್ರೈಂ ಇನ್ವೆಷ್ಟಿಗೇಷನ್ ನಾವೆಲ್ ಗಳನ್ನ ಓದುವುದು.

Read More
Follow Us