AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ದೀಪಾವಳಿ ಹಬ್ಬಕ್ಕೆ ಗಿಫ್ಟ್; ಚಾಮರಾಜನಗರದ ನಾಗಮಲೆಗೆ ಉಚಿತ ಪ್ರವೇಶಕ್ಕೆ ಅನುಮತಿ

ಈ ಮೊದಲು ಮಲೆಮಹದೇಶ್ವರ ಬೆಟ್ಟದ ಬಳಿ ಇರುವ ನಾಗಮಲೆಗೆ ಮುಕ್ತ ಪ್ರವೇಶ ಇರಲಿಲ್ಲ. ದಿನಕ್ಕೆ ಕೇವಲ 200 ಜನರಿಗೆ ಮಾತ್ರ ಅನುಮತಿ ನೀಡಲಾಗುತ್ತಿತ್ತು. ಆನ್​ಲೈನ್​ನಲ್ಲಿ ಹೆಸರು ನೋಂದಾಯಿಸಿಕೊಂಡು, 200 ರೂ. ಶುಲ್ಕ ಪಾವತಿಸಿ ಈ ಬೆಟ್ಟಕ್ಕೆ ತೆರಳಬೇಕಿತ್ತು.

ದೀಪಾವಳಿ ಹಬ್ಬಕ್ಕೆ ಗಿಫ್ಟ್; ಚಾಮರಾಜನಗರದ ನಾಗಮಲೆಗೆ ಉಚಿತ ಪ್ರವೇಶಕ್ಕೆ ಅನುಮತಿ
ನಾಗಮಲೆ
ಸೂರಜ್ ಪ್ರಸಾದ್ ಎಸ್.ಎನ್
| Updated By: ಸುಷ್ಮಾ ಚಕ್ರೆ|

Updated on: Nov 01, 2024 | 10:52 AM

Share

ಹನೂರು: ಚಾಮರಾಜನಗರ ಜಿಲ್ಲೆಯ ಹನೂರಿನ ನಾಗಮಲೆಗೆ ತೆರಳುವ ಮಾದಪ್ಪನ ಭಕ್ತರಿಗೆ ಕರ್ನಾಟಕ ಸರ್ಕಾರ ಒಳ್ಳೆಯ ಸುದ್ದಿ ನೀಡಿದೆ. ದೀಪಾವಳಿ ಹಬ್ಬಕ್ಕೆ ಮಾದಪ್ಪನ ಭಕ್ತರಿಗೆ ಅರಣ್ಯ ಇಲಾಖೆ ಗುಡ್ ನ್ಯೂಸ್ ಕೊಟ್ಟಿದ್ದು, ದೀಪಾವಳಿ ಹಬ್ಬದ ಹಿನ್ನಲೆಯಲ್ಲಿ ನಾಗಮಲೆ ಮುಕ್ತ ಪ್ರವೇಶಕ್ಕೆ ಅವಕಾಶ ಕಲ್ಪಿಸಲಾಗಿದೆ. ಇಷ್ಟು ದಿನ ಆನ್ ಲೈನ್​ನಲ್ಲಿ ನೋಂದಣಿ ಮಾಡಿಸಿಕೊಂಡು 200 ರೂ. ಶೂಲ್ಕ ಪಾವತಿಸಬೇಕಿತ್ತು. ಆದರೆ, ಇನ್ಮುಂದೆ ದೀಪಾವಳಿ, ಶಿವರಾತ್ರಿ ಹಾಗೂ ಯುಗಾದಿ ಹಬ್ಬಕ್ಕೆ ಉಚಿತ ಪ್ರವೇಶ ಕಲ್ಪಿಸಲಾಗುವುದು.

ಮಾದಪ್ಪನ ಭಕ್ತರಿಗೆ ಮಾತ್ರವಲ್ಲದೆ ಚಾರಣ ಪ್ರಿಯರಿಗೆ ಕೂಡ ನಾಗಮಲೆ ಅತ್ಯಂತ ಇಷ್ಟವಾದ ಸ್ಥಳ. ಇಲ್ಲಿಗೆ ತೆರಳಲು ಆನ್​ಲೈನ್​ನಲ್ಲಿ ನೋಂದಣಿ ಮಾಡಲು ಪರದಾಡುತ್ತಿದ್ದ ಮಾದಪ್ಪನ ಭಕ್ತರು ಈಗ ಉಚಿತವಾಗಿ ಪ್ರವೇಶಿಸಬಹುದು. ಅರಣ್ಯ ಇಲಾಖೆ ಪ್ರತಿದಿನ ಕೇವಲ 200 ಮಂದಿಗೆ ಮಾತ್ರ ಅವಕಾಶ ಕಲ್ಪಿಸಿತ್ತು. ಇನ್ಮುಂದೆ ಪ್ರಮುಖ ಮೂರು ಹಬ್ಬಗಳಿಗೆ ಉಚಿತ ಪ್ರವೇಶಕ್ಕೆ ಅವಕಾಶ ಕಲ್ಪಿಸಲಾಗಿದೆ.

ಇದನ್ನೂ ಓದಿ: ಶಿವರಾತ್ರಿ ಜಾತ್ರೆ: ಮಲೆಮಹದೇಶ್ವರ ದೇಗುಲದಲ್ಲಿ ಬರೋಬ್ಬರಿ ಆದಾಯ ಸಂಗ್ರಹ, ಇಲ್ಲಿದೆ ನೋಡಿ ವಿವರ

ಅರಣ್ಯ ಇಲಾಖೆಯ ನಡೆಯಿಂದ ಮಾದಪ್ಪನ ಭಕ್ತರು ಖುಷಿಯಾಗಿದ್ದಾರೆ. ಅಂದಹಾಗೆ, ಚಾಮರಾಜನಗರ ಜಿಲ್ಲೆ ಹನೂರು ತಾಲೂಕಿನ ನಾಗಮಲೆ ಮಲೆಮಹದೇಶ್ವರ ಬೆಟ್ಟದಿಂದ 15 ಕಿ.ಮೀ. ದೂರದಲ್ಲಿದೆ. 77 ಮಲೆಗಳ ನಾಡು ಎಂದು ಹೆಸರಾಗಿರುವ ಮಲೆಮಹದೇಶ್ವರ ಕ್ಷೇತ್ರದಲ್ಲಿ ನಾಗಮಲೆ ಕೂಡ ಒಂದು ಪ್ರಮುಖ ಆಧ್ಯಾತ್ಮಕ ಸ್ಥಳವಾಗಿದೆ.

ಇದನ್ನೂ ಓದಿ: ಮಲೆಮಹದೇಶ್ವರ ಬೆಟ್ಟದಲ್ಲಿ ಹಂದಿ ಕಾಟ: ತಮಿಳುನಾಡು ಮೂಲದ ಭಕ್ತನ ಮೇಲೆ ದಾಳಿ

ನಾಗಮಲೆಯಲ್ಲಿ ಮಹದೇಶ್ವರ ಸ್ವಾಮಿಯ ವಿಗ್ರಹ ಕಲ್ಲಿನ ರೂಪದಲ್ಲಿದೆ. ಅದಕ್ಕೆ ಹಾವಿನ ಹೆಡೆಯ ಕಲ್ಲಿನ ಆಕೃತಿ ನೆರಳಾಗಿದೆ. ಬೆಟ್ಟಗಳ ಮೇಲಿರುವ ಈ ಕ್ಷೇತ್ರಕ್ಕೆ ಹೋಗಲು ದೊಡ್ಡ ದಾರಿಯಿಲ್ಲ. ಕಾಲುದಾರಿಯಲ್ಲೇ ಬೆಟ್ಟ ಹತ್ತಿ ಹೋಗಬೇಕು. ಈ ಬೆಟ್ಟ ಹತ್ತುವುದು ಸುಲಭವೇನಲ್ಲ. ಕಡಿದಾದ ದಾರಿಯಲ್ಲಿ ಬೆಟ್ಟವೇರಲು ಅನೇಕ ಚಾರಣಿಗರು ಕೂಡ ಬರುತ್ತಾರೆ.

ಇನ್ನಷ್ಟು ಕರ್ನಾಟಕ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಯಶಸ್ವಿ ಜೈಸ್ವಾಲ್ ಸ್ಫೋಟಕ ಸೆಂಚುರಿ: ಮುಂಬೈ ದಾಖಲೆಯ ರನ್ ಚೇಸ್​
ಯಶಸ್ವಿ ಜೈಸ್ವಾಲ್ ಸ್ಫೋಟಕ ಸೆಂಚುರಿ: ಮುಂಬೈ ದಾಖಲೆಯ ರನ್ ಚೇಸ್​
‘ಮಾರ್ಕ್’ ಸಿನಿಮಾದಲ್ಲಿ ಹೀರೋಯಿನ್ ಇಲ್ಲ ಯಾಕೆ? ಉತ್ತರಿಸಿದ ಕಿಚ್ಚ ಸುದೀಪ್
‘ಮಾರ್ಕ್’ ಸಿನಿಮಾದಲ್ಲಿ ಹೀರೋಯಿನ್ ಇಲ್ಲ ಯಾಕೆ? ಉತ್ತರಿಸಿದ ಕಿಚ್ಚ ಸುದೀಪ್
ಚುನಾವಣೆಯಲ್ಲಿ ಸೋತಿದ್ದಕ್ಕೆ ಮೀಸೆ ಬೋಳಿಸಿಕೊಂಡ ಎಲ್‌ಡಿಎಫ್ ಕಾರ್ಯಕರ್ತ
ಚುನಾವಣೆಯಲ್ಲಿ ಸೋತಿದ್ದಕ್ಕೆ ಮೀಸೆ ಬೋಳಿಸಿಕೊಂಡ ಎಲ್‌ಡಿಎಫ್ ಕಾರ್ಯಕರ್ತ
ಪಾಕ್ ವಿರುದ್ಧ ಫ್ಲಾಪ್: ಸುಲಭವಾಗಿ ಔಟಾದ ವೈಭವ್ ಸೂರ್ಯವಂಶಿ
ಪಾಕ್ ವಿರುದ್ಧ ಫ್ಲಾಪ್: ಸುಲಭವಾಗಿ ಔಟಾದ ವೈಭವ್ ಸೂರ್ಯವಂಶಿ
ಶಾಲೆಯ ಬಳಿ ಸೆಕ್ಯುರಿಟಿಯ ಭುಜಕ್ಕೆ ಕಚ್ಚಿದ ಬೀದಿ ನಾಯಿ
ಶಾಲೆಯ ಬಳಿ ಸೆಕ್ಯುರಿಟಿಯ ಭುಜಕ್ಕೆ ಕಚ್ಚಿದ ಬೀದಿ ನಾಯಿ
ರೈಲಿನಲ್ಲಿ ಟಾಯ್ಲೆಟ್​ನಿಂದ ಹೊರಬರಲಾರದೆ ಪೊಲೀಸರಿಗೆ ಕರೆ ಮಾಡಿದ ಮಹಿಳೆ
ರೈಲಿನಲ್ಲಿ ಟಾಯ್ಲೆಟ್​ನಿಂದ ಹೊರಬರಲಾರದೆ ಪೊಲೀಸರಿಗೆ ಕರೆ ಮಾಡಿದ ಮಹಿಳೆ
ನಕಲಿ ಪೊಲೀಸರಿಗೆ ಅಸಲಿ ಖಾಕಿ ಶಾಕ್​​: ದರೋಡೆಗಿಳಿದಿದ್ದ ಗ್ಯಾಂಗ್​​ ಅರೆಸ್ಟ್
ನಕಲಿ ಪೊಲೀಸರಿಗೆ ಅಸಲಿ ಖಾಕಿ ಶಾಕ್​​: ದರೋಡೆಗಿಳಿದಿದ್ದ ಗ್ಯಾಂಗ್​​ ಅರೆಸ್ಟ್
ರಜತ್ ಪಾಪದ ಕೊಡ ತುಂಬಿದೆ, ಮನೆಯಿಂದ ಹೊರಗೆ ಕಳಿಸ್ತೀನಿ: ಗಿಲ್ಲಿ ಚಾಲೆಂಜ್
ರಜತ್ ಪಾಪದ ಕೊಡ ತುಂಬಿದೆ, ಮನೆಯಿಂದ ಹೊರಗೆ ಕಳಿಸ್ತೀನಿ: ಗಿಲ್ಲಿ ಚಾಲೆಂಜ್
Video: ತರಗತಿಯಲ್ಲಿ ಕುಳಿತಿದ್ದಾಗಲೇ ಹೃದಯಾಘಾತದಿಂದ ವಿದ್ಯಾರ್ಥಿನಿ ಸಾವು
Video: ತರಗತಿಯಲ್ಲಿ ಕುಳಿತಿದ್ದಾಗಲೇ ಹೃದಯಾಘಾತದಿಂದ ವಿದ್ಯಾರ್ಥಿನಿ ಸಾವು
ರಸ್ತೆಯಲ್ಲಿರೋದು ಒಂದೇ ಒಂದು ಕಾರು, ಟ್ರಾಫಿಕ್ ಇಲ್ಲ, ಸ್ಟಿಲ್ ವೈಟಿಂಗ್
ರಸ್ತೆಯಲ್ಲಿರೋದು ಒಂದೇ ಒಂದು ಕಾರು, ಟ್ರಾಫಿಕ್ ಇಲ್ಲ, ಸ್ಟಿಲ್ ವೈಟಿಂಗ್