AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬರದ ಎಫೆಕ್ಟ್​! ಖಾಲಿ ಕೆರೆಯಲ್ಲಿ ನೀರಿಗಾಗಿ ಕಾಡಾನೆ ಓಡಾಟ; ವಿಡಿಯೋ ವೈರಲ್

ಈ ಬಾರಿ ರಾಜ್ಯದಲ್ಲಿ ಭೀಕರ ಬರ ಪರಿಸ್ಥಿತಿ ಇದೆ. ಕುಡಿಯುವ ನೀರಿಗೂ ಕೂಡ ತತ್ವಾರ ಎದುರಾಗಿದೆ. ಇನ್ನು ಜನರಷ್ಟೇ ಅಲ್ಲ ಜಾನುವಾರುಗಳು ಹಾಗೂ ಕಾಡು ಪ್ರಾಣಿಗಳಿಗೂ ಕೂಡ ನೀರಿನ ಸಮಸ್ಯೆಯಿದೆ. ಇದೀಗ ಚಾಮರಾಜನಗರ ಜಿಲ್ಲೆಯಲ್ಲಿ ಆನೆಯೊಂದು ನೀರಿಗಾಗಿ ಕೆರೆಯ ಬಳಿ ಅಲೆದಾಡಿದ ದೃಶ್ಯ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. 

ಸೂರಜ್ ಪ್ರಸಾದ್ ಎಸ್.ಎನ್
| Updated By: ಕಿರಣ್ ಹನುಮಂತ್​ ಮಾದಾರ್|

Updated on: May 15, 2024 | 3:54 PM

Share

ಚಾಮರಾಜನಗರ, ಮೇ.15: ಅರಣ್ಯದಲ್ಲಿ ನೀರಿಲ್ಲದ‌ ಪರಿಣಾಮ ಕಾಡಾನೆಯೊಂದು(Wild Elephant) ತನ್ನ ದಾಹ ನೀಗಿಸಿಕೊಳ್ಳಲು ಚಾಮರಾಜನಗರ ಜಿಲ್ಲೆಯ ಹನೂರು(Hanur) ತಾಲ್ಲೂಕಿನ ಮಾರ್ಟಳ್ಳಿ‌ಯ ಕಿರಪಾತಿಗೆ ಕೆರೆಗೆ ಬಂದಿದೆ. ನೀರಿನ ದಾಹ ತಾಳಲಾರದ ಆನೆಯೂ ಕಳೆದ ಮೂರು ದಿನಗಳಿಂದ ಇಲ್ಲಿಗೆ ಲಗ್ಗೆ ಇಡುತ್ತಿದ್ದು, ನೀರು‌ ಸಿಗದೆ ವಾಪಾಸ್ಸಾಗಿದೆ. ಈ ಭಾಗದಲ್ಲಿ ರಾತ್ರಿ ವೇಳೆ ಮಾತ್ರ ಕಾಡಾನೆಗಳು ಕಾಣ ಸಿಗುತ್ತಿದ್ದವು. ಆದರೆ, ಈಗ ಹಗಲಿನಲ್ಲೇ ಹಸು, ಎಮ್ಮೆ ಕುರಿಗಳಂತೆ ಕಾಡಾನೆ ದಾಹ ಇಂಗಿಸಿಕೊಳ್ಳಲು ಇಲ್ಲಿಗೆ ಬರುತ್ತಿವೆ. ಕಾಡು ಪ್ರಾಣಿಗಳಿಗೆ ನೀರಿನ ಸಮಸ್ಯೆ ಎದುರಾಗುತ್ತಿದ್ದು, ಅರಣ್ಯ ಇಲಾಖೆ ನೀರಿನ ವ್ಯವಸ್ಥೆ ಮಾಡುವಂತೆ ಒತ್ತಾಯಿಸುತ್ತಿದ್ದಾರೆ. ಇದೀಗ ಸ್ಥಳೀಯರ ಮೊಬೈಲ್​​ನಲ್ಲಿ ಆನೆ ಓಡಾಟದ ದೃಶ್ಯ ಸೆರೆಯಾಗಿದ್ದು, ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.

ಇನ್ನು ಕಾಡಾನೆ ಓಡಾಟದ ಬಗ್ಗೆ ಅರಣ್ಯಾಧಿಕಾರಿಗಳ ಬಗ್ಗೆ ಕೇಳಿದ್ರೆ, ‘ಅದು ಕೂಡ ಕಾಡಂಚಿನ ಪ್ರದೇಶವಾಗಿದೆ. ಸದ್ಯ ಮಲೆ ಮಹದೇಶ್ವರ ವನ್ಯಧಾಮದಲ್ಲಿ ನೀರಿನ ಸಮಸ್ಯೆಯಿಲ್ಲ. ಆನೆ ಬುದ್ದಿವಂತ ಪ್ರಾಣಿ. ನೀರು ಹರಿಯುವ ಕಡೆಗೆ ಅದೇ ಹೋಗುತ್ತದೆ. ಮಾರ್ಟಳ್ಳಿ ಸುತ್ತಲೂ ಕೂಡ ಪ್ರಾಣಿಗಳಿಗೆ ನೀರಿನ ಸಮಸ್ಯೆಯಿಲ್ಲ ಎಂದು ಉತ್ತರ ಕೊಟ್ಟಿದ್ದಾರೆ. ಆದ್ರೆ, ಚಾಮರಾಜನಗರದ ಬಂಡೀಪುರ, ಬಿಆರ್ ಟಿ, ಮಲೆ ಮಹದೇಶ್ವರ, ಕಾವೇರಿ ವನ್ಯಧಾಮ ಎಲ್ಲಾ ಕಡೆಯೂ ಕೂಡ ಕೆರೆಯ ನೀರಿನ ಪ್ರಮಾಣ ಕಡಿಮೆಯಾಗಿದೆ. ಅಲ್ಲದೇ ಕೆಲವು ಕೆರೆಗಳು ಒಣಗಿ ಹೋಗಿವೆ.

ಇದನ್ನೂ ಓದಿ:ಕಾರ್ಮಿಕನನ್ನ ಕೊಂದಿದ್ದ ಕಾಡಾನೆ ಅನುಮಾನಾಸ್ಪದವಾಗಿ ಸಾವು; ತನಿಖೆಗೆ ಪರಿಸರವಾದಿಗಳ ಆಗ್ರಹ

ಒಟ್ಟಿನಲ್ಲಿ ಕಾಡಾನೆಯೊಂದು ಕೆರೆಯಲ್ಲಿ ನೀರಿಗಾಗಿ ಓಡಾಡುವ ದೃಶ್ಯ ವೈರಲ್ ಆಗಿದ್ದು, ಜನ-ಜಾನುವಾರುಗಳಂತೆಯೇ ಕಾಡು ಪ್ರಾಣಿಗಳಿಗೂ ಕುಡಿಯುವ ನೀರಿನ ಅಭಾಯ ಉಂಟಾಗುತ್ತಿದೆ ಎಂಬ ಚರ್ಚೆ ನಡೆದಿದೆ. ಅರಣ್ಯ ಇಲಾಖೆಯ ಅಧಿಕಾರಿಗಳು ಎಲ್ಲಿ ನೀರಿನ ಕೊರತೆಯಾಗಿದೆಯೂ ಅಲ್ಲಿ ಪ್ರಾಣಿಗಳಿಗೆ ನೀರು ಪೂರೈಸುವ ಕೆಲಸಕ್ಕೆ ಮುಂದಾಗಬೇಕಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಬಿಜೆಪಿಗೆ ವಾಪಸ್ ಆಗಲು ಎರಡ್ಮೂರು ಪ್ರಮುಖ ಬೇಡಿಕೆ ಇಟ್ಟ ಯತ್ನಾಳ್
ಬಿಜೆಪಿಗೆ ವಾಪಸ್ ಆಗಲು ಎರಡ್ಮೂರು ಪ್ರಮುಖ ಬೇಡಿಕೆ ಇಟ್ಟ ಯತ್ನಾಳ್
ಡಿಕೆ ಸಿಎಂ, ವಿಜಯೇಂದ್ರ ಡಿಸಿಎಂ ಪ್ಲ್ಯಾನ್:ಅಮಿತ್ ಶಾ ಮುಂದೇನಾಗಿತ್ತು?
ಡಿಕೆ ಸಿಎಂ, ವಿಜಯೇಂದ್ರ ಡಿಸಿಎಂ ಪ್ಲ್ಯಾನ್:ಅಮಿತ್ ಶಾ ಮುಂದೇನಾಗಿತ್ತು?
ಕಂಟೇನರ್ ಲಾರಿ ಅಡಿ ಬೀಳುವುದರಿಂದ ಸ್ವಲ್ಪದರಲ್ಲೇ ಬಚಾವಾದ ಬೈಕ್ ಸವಾರರು!
ಕಂಟೇನರ್ ಲಾರಿ ಅಡಿ ಬೀಳುವುದರಿಂದ ಸ್ವಲ್ಪದರಲ್ಲೇ ಬಚಾವಾದ ಬೈಕ್ ಸವಾರರು!