Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಕೈ’ ಕಡೆ ವಾಲಿದ ಶ್ರೀನಿವಾಸ್ ಪ್ರಸಾದ್ ರಿಂದ ಬಿಜೆಪಿಗೆ ಆಗುವ ಲಾಭ-ನಷ್ಟವೇನು?

ದಿನ ಕಳೆದಂತೆ ಲೋಕಸಭಾ ಚುನಾವಣಾ ಕಾವು ರಂಗೇರುತ್ತಿದೆ. ಚಾಮರಾಜನಗರವನ್ನ ಗೆಲ್ಲಲೇ ಬೇಕೆಂದು ಪಣ ತೊಟ್ಟಿರುವ ಸಿಎಂಗೆ ಶ್ರೀನಿವಾಸ್ ಪ್ರಸಾದ್​ರ ಬೆಂಬಲ ದೊಡ್ಡ ಶಕ್ತಿಯನ್ನ ಕೊಟ್ಟಿದೆ. ಹಾಗಾದರೆ ಶ್ರೀನಿವಾಸ್ ಪ್ರಸಾದ್​ರಿಂದ ಎರಡೂ ಪಕ್ಷಗಳಿಗಾಗುವ ಲಾಭ-ನಷ್ಟ ಆದರೂ ಏನು ಅಂತೀರಾ? ಈ ಸ್ಟೋರಿ ಓದಿ.

‘ಕೈ’ ಕಡೆ ವಾಲಿದ ಶ್ರೀನಿವಾಸ್ ಪ್ರಸಾದ್ ರಿಂದ ಬಿಜೆಪಿಗೆ ಆಗುವ ಲಾಭ-ನಷ್ಟವೇನು?
ಬಿಜೆಪಿ ಸಂಸದ ಶ್ರೀನಿವಾಸ್ ಪ್ರಸಾದ್
Follow us
ಸೂರಜ್ ಪ್ರಸಾದ್ ಎಸ್.ಎನ್
| Updated By: ಕಿರಣ್ ಹನುಮಂತ್​ ಮಾದಾರ್

Updated on:Apr 16, 2024 | 8:52 PM

ಚಾಮರಾಜನಗರ, ಏ.16: ದಿನ ಕಳೆದಂತೆ ಲೋಕಸಭಾ ಚುನಾವಣಾ(Lok sabha election) ಕಾವು ರಂಗೇರುತ್ತಿದೆ. ಶತಾಯ ಗತಾಯ ಗೆಲುವು ಸಾಧಿಸಲೇ ಬೇಕೆಂದು ಕಾಂಗ್ರೆಸ್​ ಪಣ ತೊಟ್ಟು ನಿಂತಿದ್ದು, ಈಗಾಗಲೇ ಆಪರೇಷನ್ ಮೇಲೆ ಆಪರೇಷನ್ ಮಾಡಿ ಬಿಜೆಪಿಗೆ ಮಾಸ್ಟರ್ ಸ್ಟ್ರೋಕ್ ಕೊಟ್ಟಿದೆ. ಬಿಜೆಪಿ ಸಂಸದ ಶ್ರೀನಿವಾಸ್ ಪ್ರಸಾದ್​ರ(Srinivas Prasad) ಕುಟುಂಬ ವರ್ಗದವರಿಗೆ ಟ್ಯಾಕಲ್ ಮಾಡಿ ಕಾಂಗ್ರೆಸ್ ಪಕ್ಷಕ್ಕೆ ಸೇರಿಸಿಕೊಂಡರೆ, ಮತ್ತೊಂದೆಡೆ ಅಧಿಕೃತವಾಗಿ ಕಾಂಗ್ರೆಸ್ ಅಭ್ಯರ್ಥಿ ಪರ ಶ್ರೀನಿವಾಸ್ ಪ್ರಸಾದ್​ರ ಸಹೋದರ ಪ್ರಚಾರ ನಡೆಸಲು ಆರಂಭಿಸಿದ್ದು, ಈಗ ಬಿಜೆಪಿ ಪಾಳಯದಲ್ಲಿ ನಡುಕ ಎದುರಾಗಿದೆ.

ಇನ್ನು ಕಳೆದ ಬಾರಿ ದ್ರುವ ನಾರಾಯಣ್​ರ ವಿರುದ್ದ ಸ್ಪರ್ಧೆ ಮಾಡಿದ್ದ ಬಿಜೆಪಿ ಹಾಲಿ ಸಂಸದ ಶ್ರೀನಿವಾಸ್ ಪ್ರಸಾದ್, ಕೇವಲ ಒಂದುವರೆ ಸಾವಿರ ಮತಗಳಿಂದ ಗೆಲುವು ಸಾಧಿಸಿದ್ದರು. ಇನ್ನು ಬಿಜೆಪಿ ಪಕ್ಷಕ್ಕೆ ಬಂದು ಅಧಿಕಾರ ಅನುಭವಿಸಿ ಈಗ ಕೊನೆ ಸಂದರ್ಭದಲ್ಲಿ ಪಕ್ಷಕ್ಕೆ ದ್ರೋಹ ಮಾಡುತ್ತಿದ್ದಾರೆಂಬ ಮಾತುಗಳು ಸಹ ಕೇಳಿ ಬರುತ್ತಿವೆ. ಒಟ್ಟಾರೆ ಪ್ರತಿಷ್ಠೆಯ ಕಣವಾದ ಚಾಮರಾಜನಗರವನ್ನ ಗೆಲ್ಲಲೇ ಬೇಕೆಂದು ಪಣ ತೊಟ್ಟು ನಿಂತಿರುವ ಸಿದ್ದರಾಮಯ್ಯಗೆ, ಇತ್ತ ಲಿಂಗಾಯತ, ಒಕ್ಕಲಿಗ ಅಸ್ತ್ರ ಬಳಸುವುದಕ್ಕೆ ಉಭಯ ನಾಯಕರು ಮುಂದಾಗಿದ್ದು, ಇದು ಕೈ ನಾಯಕರಲ್ಲಿಯೂ ಭಯ ಸೃಷ್ಠಿಸಿದೆ.

ಇದನ್ನೂ ಓದಿ:ಲೋಕಸಭೆ ಚುನಾವಣೆ: ಚಾಮರಾಜನಗರ ಲೋಕಸಭಾ ಕ್ಷೇತ್ರದಲ್ಲಿ ಕಾಂಗ್ರೆಸ್​ನಿಂದ ಗ್ಯಾರಂಟಿ ಕಾರ್ಡ್ ಹಂಚಿಕೆ

ಮೊನ್ನೆಯಷ್ಟೇ ಬಿಎಸ್​ ಯಡಿಯೂರಪ್ಪನವರು ಶ್ರೀನಿವಾಸ್ ಪ್ರಸಾದ್ ಮನೆಗೆ ತೆರಳಿ ಮೋದಿ ಕಾರ್ಯಕ್ರಮಕ್ಕೆ ಆಹ್ವಾನ ನೀಡಿದ್ದರು. ಆದರೆ, ಆರೋಗ್ಯದ ನೆಪ ಹೇಳಿ ಕಾರ್ಯಕ್ರಮಕ್ಕೆ ಬರಲ್ಲವೆಂದು ಹೇಳಿದ್ದರು. ಒಟ್ಟಾರೆ ದಿನ ಕಳೆದಂತೆ ಚಾಮರಾಜನಗರ ಲೋಕಸಭಾ ಕ್ಷೇತ್ರದಲ್ಲಿ ಕಾಂಗ್ರೆಸ್ ಹಾಗೂ ಬಿಜೆಪಿ ನಡುವೆ ಟಫ್ ಫೈಟ್ ಇದ್ದು, ಮತದಾರಪ್ರಭು ಯಾರ ಕೈ ಹಿಡಿಯುತ್ತಾನೊ ಕಾದು ನೋಡಬೇಕಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಕ್ಲಿಕ್ ಮಾಡಿ

Published On - 8:49 pm, Tue, 16 April 24

ರಾಜಸ್ಥಾನದ ರಾಜ್ಯಪಾಲ ಪ್ರಯಾಣಿಸುತ್ತಿದ್ದ ಹೆಲಿಕಾಪ್ಟರ್​ನಲ್ಲಿ ಬೆಂಕಿ
ರಾಜಸ್ಥಾನದ ರಾಜ್ಯಪಾಲ ಪ್ರಯಾಣಿಸುತ್ತಿದ್ದ ಹೆಲಿಕಾಪ್ಟರ್​ನಲ್ಲಿ ಬೆಂಕಿ
‘ಕೆಡಿ’ ಸಿನಿಮಾದ ನಿಜವಾದ ‘ಹೀರೋ’ ಅನ್ನು ಕೊಂಡಾಡಿದ ಧ್ರುವ ಸರ್ಜಾ
‘ಕೆಡಿ’ ಸಿನಿಮಾದ ನಿಜವಾದ ‘ಹೀರೋ’ ಅನ್ನು ಕೊಂಡಾಡಿದ ಧ್ರುವ ಸರ್ಜಾ
ಹೊಸ ಚೆಂಡಿನಲ್ಲಿ ನಾನೇ ಬೆಸ್ಟ್; ರೋಹಿತ್​ಗೆ ಸಿರಾಜ್ ತಿರುಗೇಟು
ಹೊಸ ಚೆಂಡಿನಲ್ಲಿ ನಾನೇ ಬೆಸ್ಟ್; ರೋಹಿತ್​ಗೆ ಸಿರಾಜ್ ತಿರುಗೇಟು
ಮಹಿಳೆಯರನ್ನು ಕೋಟ್ಯಾಧಿಪತಿ ಮಾಡುತ್ತೇವೆ;WITT ಶೃಂಗಸಭೆಯಲ್ಲಿ ಸ್ಮೃತಿ ಇರಾನಿ
ಮಹಿಳೆಯರನ್ನು ಕೋಟ್ಯಾಧಿಪತಿ ಮಾಡುತ್ತೇವೆ;WITT ಶೃಂಗಸಭೆಯಲ್ಲಿ ಸ್ಮೃತಿ ಇರಾನಿ
2025 ಅಂತ್ಯದೊಳಗೆ ದೇಶಿ ಸೆಮಿಕಂಡಕ್ಟರ್ ಚಿಪ್, ಎಐ ಆರಂಭ;ಅಶ್ವಿನಿ ವೈಷ್ಣವ್
2025 ಅಂತ್ಯದೊಳಗೆ ದೇಶಿ ಸೆಮಿಕಂಡಕ್ಟರ್ ಚಿಪ್, ಎಐ ಆರಂಭ;ಅಶ್ವಿನಿ ವೈಷ್ಣವ್
ಅರ್ಜುನ್ ಜನ್ಯಗೆ ಹಾಡು ಹೊಳೆಯುವುದೆಲ್ಲಿ: ಸಂಗತಿ ವಿವರಿಸಿದ ಪ್ರೇಮ್
ಅರ್ಜುನ್ ಜನ್ಯಗೆ ಹಾಡು ಹೊಳೆಯುವುದೆಲ್ಲಿ: ಸಂಗತಿ ವಿವರಿಸಿದ ಪ್ರೇಮ್
ಮ್ಯಾನ್ಮಾರ್​ಗೆ ಸಹಾಯ ಮಾಡುವ ಆಪರೇಷನ್​ಗೆ ಸರ್ಕಾರ ದೇವರ ಹೆಸರಿಟ್ಟಿದ್ದೇಕೆ?
ಮ್ಯಾನ್ಮಾರ್​ಗೆ ಸಹಾಯ ಮಾಡುವ ಆಪರೇಷನ್​ಗೆ ಸರ್ಕಾರ ದೇವರ ಹೆಸರಿಟ್ಟಿದ್ದೇಕೆ?
ಯುಗಾದಿ: ಕೆಆರ್​ ಮಾರುಕಟ್ಟೆಯಲ್ಲಿ ಗ್ರಾಹಕರಿಗೆ ಶಾಕ್, ಹೂವಿನ ದರ ಏರಿಕೆ
ಯುಗಾದಿ: ಕೆಆರ್​ ಮಾರುಕಟ್ಟೆಯಲ್ಲಿ ಗ್ರಾಹಕರಿಗೆ ಶಾಕ್, ಹೂವಿನ ದರ ಏರಿಕೆ
ಬಿಜೆಪಿ ಎಲ್ಲ ಭಾಷೆಯನ್ನೂ ಗೌರವಿಸುತ್ತದೆ;WITT ಶೃಂಗಸಭೆಯಲ್ಲಿ ಕಿಶನ್ ರೆಡ್ಡಿ
ಬಿಜೆಪಿ ಎಲ್ಲ ಭಾಷೆಯನ್ನೂ ಗೌರವಿಸುತ್ತದೆ;WITT ಶೃಂಗಸಭೆಯಲ್ಲಿ ಕಿಶನ್ ರೆಡ್ಡಿ
ಯತ್ನಾಳ್ ಒಬ್ಬ ಒಳ್ಳೆಯ ನಾಯಕ ಅನ್ನೋದ್ರಲ್ಲಿ ಎರಡು ಮಾತಿಲ್ಲ: ತಂಗಡಿಗಿ
ಯತ್ನಾಳ್ ಒಬ್ಬ ಒಳ್ಳೆಯ ನಾಯಕ ಅನ್ನೋದ್ರಲ್ಲಿ ಎರಡು ಮಾತಿಲ್ಲ: ತಂಗಡಿಗಿ