ಹಣ ಪಡೆದು ಮಹಿಳೆಯರಿಗೆ ಶೂನ್ಯ ಬೆಲೆಯ ಉಚಿತ ಟಿಕೆಟ್​ ನೀಡಿದ KSRTC ನಿರ್ವಾಹಕ

ಕರ್ನಾಟಕದಲ್ಲಿ ಶಕ್ತಿ ಯೋಜನೆ ಜಾರಿಯಾಗಿ ವರ್ಷ ಕಳೆದಿದೆ. ಚಾಮರಾಜನಗರದ ಕೆಎಸ್​ಆರ್​ಟಿಸಿ ಬಸ್​ ನಿರ್ವಾಹಕ ಮಹಿಳೆಯರಿಂದ ಹಣ ಪಡೆದು, ಉಚಿತ ಟಿಕೆಟ್​ ನೀಡುತ್ತಿದ್ದಾನೆ ಎಂಬ ಆರೋಪ ಕೇಳಿಬಂದಿದೆ. ಈ ಬಗ್ಗೆ ವಿದ್ಯಾರ್ಥಿಗಳು ಚಾಮರಾಜನಗರ ಸಂಚಾರಿ ನಿಯಂತ್ರಕರಿಗೆ ದೂರು ಕೊಟ್ಟಿದ್ದಾರೆ.

ಹಣ ಪಡೆದು ಮಹಿಳೆಯರಿಗೆ ಶೂನ್ಯ ಬೆಲೆಯ ಉಚಿತ ಟಿಕೆಟ್​ ನೀಡಿದ KSRTC ನಿರ್ವಾಹಕ
ದೂರು ನೀಡಿದ ವಿದ್ಯಾರ್ಥಿ
Follow us
| Updated By: ವಿವೇಕ ಬಿರಾದಾರ

Updated on: Oct 27, 2024 | 12:58 PM

ಚಾಮರಾಜನಗರ, ಅಕ್ಟೋಬರ್​ 27: ಕರ್ನಾಟಕದಲ್ಲಿ ಶಕ್ತಿ ಯೋಜನೆ (Shakti Scheme) ಜಾರಿಯಾಗಿ ವರ್ಷ ಕಳೆದಿದೆ. ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆ (KSRTC) ಬಸ್​​ಗಳಲ್ಲಿ ಮಹಿಳೆಯರು ಉಚಿತವಾಗಿ ಸಂಚರಿಸುತ್ತಿದ್ದಾರೆ. ಬಸ್​ನಲ್ಲಿ ಮಹಿಳೆಯರಿಗೆ ಉಚಿತವಾಗಿ ಟಿಕೆಟ್​ ನೀಡುತ್ತಾರೆ. ಆದರೆ, ಚಾಮರಾಜನಗರದ ಕೆಎಸ್​ಆರ್​ಟಿಸಿ ಬಸ್​ ನಿರ್ವಾಹಕ ಮಹಿಳೆಯರಿಂದ ಹಣ ಪಡೆದು, ಉಚಿತ ಟಿಕೆಟ್​ ನೀಡುತ್ತಿದ್ದಾನೆ ಎಂಬ ಆರೋಪ ಕೇಳಿಬಂದಿದೆ. ಈ ಬಗ್ಗೆ ವಿದ್ಯಾರ್ಥಿಗಳು ಚಾಮರಾಜನಗರ ಸಂಚಾರಿ ನಿಯಂತ್ರಕರಿಗೆ ದೂರು ಕೊಟ್ಟಿದ್ದಾರೆ.

ಕೆಎಸ್ಆರ್​ಟಿಸಿ ಬಸ್​​ವೊಂದು ಶನಿವಾರ ಬೇಡರಪುರದಿಂದ ಚಾಮರಾಜನಗರಕ್ಕೆ ಹೊರಟಿತ್ತು. ಬಸ್​ ನಿರ್ವಾಹಕ ಮಹಿಳೆಯರಿಂದ ಹಣ ಪಡೆದು, ಶೂನ್ಯ ಬೆಲೆಯ ಉಚಿತ ಟಿಕೆಟ್ ನೀಡಿದ್ದಾನೆ. ಇದೇ ಬಸ್​ನಲ್ಲಿ ಸಂಚರಿಸುತ್ತಿದ್ದ ಕೆಲ ಇಂಜಿನಿಯರಿಂಗ್​ ವಿದ್ಯಾರ್ಥಿಗಳು ಈ ವಿಚಾರವಾಗಿ ನಿರ್ವಾಹಕನನ್ನು ಪ್ರಶ್ನಿಸಿದ್ದಾರೆ. ಅದಕ್ಕೆ ನಿರ್ವಾಹಕ ಸಮರ್ಥನೆ ನೀಡಿದ್ದಾನೆ.

ಇದನ್ನೂ ಓದಿ: ಮಾದಪ್ಪನ ಭಕ್ತರಿಗೆ ಅರಣ್ಯ ಇಲಾಖೆ ಗುಡ್ ನ್ಯೂಸ್: ನಾಗಮಲೆ ಚಾರಣ ನಿಷೇಧ ತೆರವು

ಆದರೆ, ನಿರ್ವಾಹಕನ ನಡೆ ಖಂಡಿಸಿ ಇಂಜಿನಿಯರಿಂಗ್ ವಿದ್ಯಾರ್ಥಿಗಳು ಚಾಮರಾಜನಗರ ಸಂಚಾರಿ ನಿಯಂತ್ರಕರಿಗೆ ದೂರು ನೀಡಿದ್ದಾನೆ. ನಿರ್ವಾಹಕನ ವಿರುದ್ಧ ಸೂಕ್ತ ಕ್ರಮ ಜರುಗಿಸುವಂತೆ ಆಗ್ರಹಿಸಿದ್ದಾರೆ. ಉಚಿತ ಟಿಕೆಟ್​ ಹೆಸರಿನಲ್ಲಿ ನಿರ್ವಾಹಕ ಹಣ ಹೊಡೆಯುತ್ತಿದ್ದಾನೆ ಎಂದು ಪ್ರಯಾಣಿಕರು ಆರೋಪಿಸಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ