AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹಣ ಪಡೆದು ಮಹಿಳೆಯರಿಗೆ ಶೂನ್ಯ ಬೆಲೆಯ ಉಚಿತ ಟಿಕೆಟ್​ ನೀಡಿದ KSRTC ನಿರ್ವಾಹಕ

ಕರ್ನಾಟಕದಲ್ಲಿ ಶಕ್ತಿ ಯೋಜನೆ ಜಾರಿಯಾಗಿ ವರ್ಷ ಕಳೆದಿದೆ. ಚಾಮರಾಜನಗರದ ಕೆಎಸ್​ಆರ್​ಟಿಸಿ ಬಸ್​ ನಿರ್ವಾಹಕ ಮಹಿಳೆಯರಿಂದ ಹಣ ಪಡೆದು, ಉಚಿತ ಟಿಕೆಟ್​ ನೀಡುತ್ತಿದ್ದಾನೆ ಎಂಬ ಆರೋಪ ಕೇಳಿಬಂದಿದೆ. ಈ ಬಗ್ಗೆ ವಿದ್ಯಾರ್ಥಿಗಳು ಚಾಮರಾಜನಗರ ಸಂಚಾರಿ ನಿಯಂತ್ರಕರಿಗೆ ದೂರು ಕೊಟ್ಟಿದ್ದಾರೆ.

ಹಣ ಪಡೆದು ಮಹಿಳೆಯರಿಗೆ ಶೂನ್ಯ ಬೆಲೆಯ ಉಚಿತ ಟಿಕೆಟ್​ ನೀಡಿದ KSRTC ನಿರ್ವಾಹಕ
ದೂರು ನೀಡಿದ ವಿದ್ಯಾರ್ಥಿ
ಸೂರಜ್ ಪ್ರಸಾದ್ ಎಸ್.ಎನ್
| Edited By: |

Updated on: Oct 27, 2024 | 12:58 PM

Share

ಚಾಮರಾಜನಗರ, ಅಕ್ಟೋಬರ್​ 27: ಕರ್ನಾಟಕದಲ್ಲಿ ಶಕ್ತಿ ಯೋಜನೆ (Shakti Scheme) ಜಾರಿಯಾಗಿ ವರ್ಷ ಕಳೆದಿದೆ. ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆ (KSRTC) ಬಸ್​​ಗಳಲ್ಲಿ ಮಹಿಳೆಯರು ಉಚಿತವಾಗಿ ಸಂಚರಿಸುತ್ತಿದ್ದಾರೆ. ಬಸ್​ನಲ್ಲಿ ಮಹಿಳೆಯರಿಗೆ ಉಚಿತವಾಗಿ ಟಿಕೆಟ್​ ನೀಡುತ್ತಾರೆ. ಆದರೆ, ಚಾಮರಾಜನಗರದ ಕೆಎಸ್​ಆರ್​ಟಿಸಿ ಬಸ್​ ನಿರ್ವಾಹಕ ಮಹಿಳೆಯರಿಂದ ಹಣ ಪಡೆದು, ಉಚಿತ ಟಿಕೆಟ್​ ನೀಡುತ್ತಿದ್ದಾನೆ ಎಂಬ ಆರೋಪ ಕೇಳಿಬಂದಿದೆ. ಈ ಬಗ್ಗೆ ವಿದ್ಯಾರ್ಥಿಗಳು ಚಾಮರಾಜನಗರ ಸಂಚಾರಿ ನಿಯಂತ್ರಕರಿಗೆ ದೂರು ಕೊಟ್ಟಿದ್ದಾರೆ.

ಕೆಎಸ್ಆರ್​ಟಿಸಿ ಬಸ್​​ವೊಂದು ಶನಿವಾರ ಬೇಡರಪುರದಿಂದ ಚಾಮರಾಜನಗರಕ್ಕೆ ಹೊರಟಿತ್ತು. ಬಸ್​ ನಿರ್ವಾಹಕ ಮಹಿಳೆಯರಿಂದ ಹಣ ಪಡೆದು, ಶೂನ್ಯ ಬೆಲೆಯ ಉಚಿತ ಟಿಕೆಟ್ ನೀಡಿದ್ದಾನೆ. ಇದೇ ಬಸ್​ನಲ್ಲಿ ಸಂಚರಿಸುತ್ತಿದ್ದ ಕೆಲ ಇಂಜಿನಿಯರಿಂಗ್​ ವಿದ್ಯಾರ್ಥಿಗಳು ಈ ವಿಚಾರವಾಗಿ ನಿರ್ವಾಹಕನನ್ನು ಪ್ರಶ್ನಿಸಿದ್ದಾರೆ. ಅದಕ್ಕೆ ನಿರ್ವಾಹಕ ಸಮರ್ಥನೆ ನೀಡಿದ್ದಾನೆ.

ಇದನ್ನೂ ಓದಿ: ಮಾದಪ್ಪನ ಭಕ್ತರಿಗೆ ಅರಣ್ಯ ಇಲಾಖೆ ಗುಡ್ ನ್ಯೂಸ್: ನಾಗಮಲೆ ಚಾರಣ ನಿಷೇಧ ತೆರವು

ಆದರೆ, ನಿರ್ವಾಹಕನ ನಡೆ ಖಂಡಿಸಿ ಇಂಜಿನಿಯರಿಂಗ್ ವಿದ್ಯಾರ್ಥಿಗಳು ಚಾಮರಾಜನಗರ ಸಂಚಾರಿ ನಿಯಂತ್ರಕರಿಗೆ ದೂರು ನೀಡಿದ್ದಾನೆ. ನಿರ್ವಾಹಕನ ವಿರುದ್ಧ ಸೂಕ್ತ ಕ್ರಮ ಜರುಗಿಸುವಂತೆ ಆಗ್ರಹಿಸಿದ್ದಾರೆ. ಉಚಿತ ಟಿಕೆಟ್​ ಹೆಸರಿನಲ್ಲಿ ನಿರ್ವಾಹಕ ಹಣ ಹೊಡೆಯುತ್ತಿದ್ದಾನೆ ಎಂದು ಪ್ರಯಾಣಿಕರು ಆರೋಪಿಸಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

Follow Us
ಮೂರನೇ ಬಾರಿ ರಾಜ್ಯಪಾಲರನ್ನು ಭೇಟಿ ಮಾಡಿದ ಟಿವಿಕೆ ಮುಖ್ಯಸ್ಥ ವಿಜಯ್
ಮೂರನೇ ಬಾರಿ ರಾಜ್ಯಪಾಲರನ್ನು ಭೇಟಿ ಮಾಡಿದ ಟಿವಿಕೆ ಮುಖ್ಯಸ್ಥ ವಿಜಯ್
ತಮಿಳುನಾಡಿನಲ್ಲಿ ಹೇಗಿದೆ ವಿಜಯ್ ಕ್ರೇಜ್: ಕಣ್ಣಾರೆ ನೋಡಿದ ವಜ್ರಾಂಗ್ ಮಾತು
ತಮಿಳುನಾಡಿನಲ್ಲಿ ಹೇಗಿದೆ ವಿಜಯ್ ಕ್ರೇಜ್: ಕಣ್ಣಾರೆ ನೋಡಿದ ವಜ್ರಾಂಗ್ ಮಾತು
ಮ್ಯಾಜಿಕ್ ನಂಬರ್ ಗಿಂತಲೂ ಹೆಚ್ಚಿನ ಬೆಂಬಲ: ವಿಜಯ್​​ ಕೈ ಹಿಡಿದ ಪಕ್ಷಗಳಾವುವು
ಮ್ಯಾಜಿಕ್ ನಂಬರ್ ಗಿಂತಲೂ ಹೆಚ್ಚಿನ ಬೆಂಬಲ: ವಿಜಯ್​​ ಕೈ ಹಿಡಿದ ಪಕ್ಷಗಳಾವುವು
ತಮಿಳುನಾಡಿನಲ್ಲಿ TVK ಸರ್ಕಾರ ಫಿಕ್ಸ್‌, ಮ್ಯಾಜಿಕ್ ನಂಬರ್ ಹೊಂದಿಸಿದ ವಿಜಯ್
ತಮಿಳುನಾಡಿನಲ್ಲಿ TVK ಸರ್ಕಾರ ಫಿಕ್ಸ್‌, ಮ್ಯಾಜಿಕ್ ನಂಬರ್ ಹೊಂದಿಸಿದ ವಿಜಯ್
ವಿಜಯ್ ಜೊತೆ ನಟಿಸಿರುವ ಕನ್ನಡದ ನಟ ವಜ್ರಾಂಗ್ ದಳಪತಿ ಬಗ್ಗೆ ಹೇಳಿದ್ದೇನು?
ವಿಜಯ್ ಜೊತೆ ನಟಿಸಿರುವ ಕನ್ನಡದ ನಟ ವಜ್ರಾಂಗ್ ದಳಪತಿ ಬಗ್ಗೆ ಹೇಳಿದ್ದೇನು?
ನನ್ನ ಎಲ್ಲಾ ಅಸ್ತಿ ಅನಾಥ ಆಶ್ರಮಕ್ಕೆ ಕೊಡ್ತೇನೆ ಎಂದ ತಾಯಿ
ನನ್ನ ಎಲ್ಲಾ ಅಸ್ತಿ ಅನಾಥ ಆಶ್ರಮಕ್ಕೆ ಕೊಡ್ತೇನೆ ಎಂದ ತಾಯಿ
ತಮಿಳುನಾಡಿನ ಒಳರಾಜಕೀಯನ ಎಳೆಎಳೆಯಾಗಿ ಬಿಚ್ಚಿಟ್ಟ ಕಾಂಗ್ರೆಸ್ ಉಸ್ತುವಾರಿ
ತಮಿಳುನಾಡಿನ ಒಳರಾಜಕೀಯನ ಎಳೆಎಳೆಯಾಗಿ ಬಿಚ್ಚಿಟ್ಟ ಕಾಂಗ್ರೆಸ್ ಉಸ್ತುವಾರಿ
ಆಪ್ತ ಸಹಾಯಕನ ಅರಿಶಿಣ ಶಾಸ್ತ್ರದಲ್ಲಿ ಪತ್ನಿ ಜೊತೆ ಶರಣು ಸಲಗರ ಡ್ಯಾನ್ಸ್​​
ಆಪ್ತ ಸಹಾಯಕನ ಅರಿಶಿಣ ಶಾಸ್ತ್ರದಲ್ಲಿ ಪತ್ನಿ ಜೊತೆ ಶರಣು ಸಲಗರ ಡ್ಯಾನ್ಸ್​​
ಜಿಗಣಿ ಪೊಲೀಸರ ಭರ್ಜರಿ ಬೇಟೆ: ಕೋಟ್ಯಂತರ ರೂ ಮೌಲ್ಯದ 250 ಕೆಜಿ ಗಾಂಜಾ ಜಪ್ತಿ
ಜಿಗಣಿ ಪೊಲೀಸರ ಭರ್ಜರಿ ಬೇಟೆ: ಕೋಟ್ಯಂತರ ರೂ ಮೌಲ್ಯದ 250 ಕೆಜಿ ಗಾಂಜಾ ಜಪ್ತಿ
ಸಂಚಲನ ಮೂಡಿಸಿದ ಬಿಎಲ್ ಸಂತೋಷ್ ಪೋಸ್ಟ್
ಸಂಚಲನ ಮೂಡಿಸಿದ ಬಿಎಲ್ ಸಂತೋಷ್ ಪೋಸ್ಟ್