ಹಣ ಪಡೆದು ಮಹಿಳೆಯರಿಗೆ ಶೂನ್ಯ ಬೆಲೆಯ ಉಚಿತ ಟಿಕೆಟ್​ ನೀಡಿದ KSRTC ನಿರ್ವಾಹಕ

ಕರ್ನಾಟಕದಲ್ಲಿ ಶಕ್ತಿ ಯೋಜನೆ ಜಾರಿಯಾಗಿ ವರ್ಷ ಕಳೆದಿದೆ. ಚಾಮರಾಜನಗರದ ಕೆಎಸ್​ಆರ್​ಟಿಸಿ ಬಸ್​ ನಿರ್ವಾಹಕ ಮಹಿಳೆಯರಿಂದ ಹಣ ಪಡೆದು, ಉಚಿತ ಟಿಕೆಟ್​ ನೀಡುತ್ತಿದ್ದಾನೆ ಎಂಬ ಆರೋಪ ಕೇಳಿಬಂದಿದೆ. ಈ ಬಗ್ಗೆ ವಿದ್ಯಾರ್ಥಿಗಳು ಚಾಮರಾಜನಗರ ಸಂಚಾರಿ ನಿಯಂತ್ರಕರಿಗೆ ದೂರು ಕೊಟ್ಟಿದ್ದಾರೆ.

ಹಣ ಪಡೆದು ಮಹಿಳೆಯರಿಗೆ ಶೂನ್ಯ ಬೆಲೆಯ ಉಚಿತ ಟಿಕೆಟ್​ ನೀಡಿದ KSRTC ನಿರ್ವಾಹಕ
ದೂರು ನೀಡಿದ ವಿದ್ಯಾರ್ಥಿ
Edited By: ವಿವೇಕ ಬಿರಾದಾರ

Updated on: Oct 27, 2024 | 12:58 PM

ಚಾಮರಾಜನಗರ, ಅಕ್ಟೋಬರ್​ 27: ಕರ್ನಾಟಕದಲ್ಲಿ ಶಕ್ತಿ ಯೋಜನೆ (Shakti Scheme) ಜಾರಿಯಾಗಿ ವರ್ಷ ಕಳೆದಿದೆ. ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆ (KSRTC) ಬಸ್​​ಗಳಲ್ಲಿ ಮಹಿಳೆಯರು ಉಚಿತವಾಗಿ ಸಂಚರಿಸುತ್ತಿದ್ದಾರೆ. ಬಸ್​ನಲ್ಲಿ ಮಹಿಳೆಯರಿಗೆ ಉಚಿತವಾಗಿ ಟಿಕೆಟ್​ ನೀಡುತ್ತಾರೆ. ಆದರೆ, ಚಾಮರಾಜನಗರದ ಕೆಎಸ್​ಆರ್​ಟಿಸಿ ಬಸ್​ ನಿರ್ವಾಹಕ ಮಹಿಳೆಯರಿಂದ ಹಣ ಪಡೆದು, ಉಚಿತ ಟಿಕೆಟ್​ ನೀಡುತ್ತಿದ್ದಾನೆ ಎಂಬ ಆರೋಪ ಕೇಳಿಬಂದಿದೆ. ಈ ಬಗ್ಗೆ ವಿದ್ಯಾರ್ಥಿಗಳು ಚಾಮರಾಜನಗರ ಸಂಚಾರಿ ನಿಯಂತ್ರಕರಿಗೆ ದೂರು ಕೊಟ್ಟಿದ್ದಾರೆ.

ಕೆಎಸ್ಆರ್​ಟಿಸಿ ಬಸ್​​ವೊಂದು ಶನಿವಾರ ಬೇಡರಪುರದಿಂದ ಚಾಮರಾಜನಗರಕ್ಕೆ ಹೊರಟಿತ್ತು. ಬಸ್​ ನಿರ್ವಾಹಕ ಮಹಿಳೆಯರಿಂದ ಹಣ ಪಡೆದು, ಶೂನ್ಯ ಬೆಲೆಯ ಉಚಿತ ಟಿಕೆಟ್ ನೀಡಿದ್ದಾನೆ. ಇದೇ ಬಸ್​ನಲ್ಲಿ ಸಂಚರಿಸುತ್ತಿದ್ದ ಕೆಲ ಇಂಜಿನಿಯರಿಂಗ್​ ವಿದ್ಯಾರ್ಥಿಗಳು ಈ ವಿಚಾರವಾಗಿ ನಿರ್ವಾಹಕನನ್ನು ಪ್ರಶ್ನಿಸಿದ್ದಾರೆ. ಅದಕ್ಕೆ ನಿರ್ವಾಹಕ ಸಮರ್ಥನೆ ನೀಡಿದ್ದಾನೆ.

ಇದನ್ನೂ ಓದಿ: ಮಾದಪ್ಪನ ಭಕ್ತರಿಗೆ ಅರಣ್ಯ ಇಲಾಖೆ ಗುಡ್ ನ್ಯೂಸ್: ನಾಗಮಲೆ ಚಾರಣ ನಿಷೇಧ ತೆರವು

ಆದರೆ, ನಿರ್ವಾಹಕನ ನಡೆ ಖಂಡಿಸಿ ಇಂಜಿನಿಯರಿಂಗ್ ವಿದ್ಯಾರ್ಥಿಗಳು ಚಾಮರಾಜನಗರ ಸಂಚಾರಿ ನಿಯಂತ್ರಕರಿಗೆ ದೂರು ನೀಡಿದ್ದಾನೆ. ನಿರ್ವಾಹಕನ ವಿರುದ್ಧ ಸೂಕ್ತ ಕ್ರಮ ಜರುಗಿಸುವಂತೆ ಆಗ್ರಹಿಸಿದ್ದಾರೆ. ಉಚಿತ ಟಿಕೆಟ್​ ಹೆಸರಿನಲ್ಲಿ ನಿರ್ವಾಹಕ ಹಣ ಹೊಡೆಯುತ್ತಿದ್ದಾನೆ ಎಂದು ಪ್ರಯಾಣಿಕರು ಆರೋಪಿಸಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

Suraj Prasad SN

ಸೂರಜ್ ಪ್ರಸಾದ್ ಎಸ್.ಎನ್ ಆದ ನಾನು ಹುಟ್ಟಿದ್ದು ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿಯಲ್ಲಿ. ಬೆಳೆದಿದ್ದು ದಾವಣಗರೆ ಜಿಲ್ಲೆ ನ್ಯಾಮತಿ ತಾಲೂಕಿನಲ್ಲಿ. ಶಿವಮೊಗ್ಗದ ಸಹ್ಯಾದ್ರಿ ಕಾಲೇಜ್ ನಲ್ಲಿ ಪತ್ರಿಕೋದ್ಯಮದಲ್ಲಿ ಪದವಿಪೂರ್ವ ಶಿಕ್ಷಣ ಪಡೆದಿದ್ದು 2014ರಿಂದ ನನ್ನ ಎಲೆಕ್ಟ್ರಾನಿಕ್ ಮಾದ್ಯಮದ ವೃತ್ತಿ ಜೀವನವನ್ನ ಬೆಂಗಳೂರಿನಲ್ಲಿ ಕ್ರೈಂ ಬೀಟ್ ವರದಿಗಾರನಾಗಿ ಆರಂಭಿಸಿದ್ದು ಬೆಂಗಳೂರಿನಲ್ಲಿ 8 ವರ್ಷಗಳ ಕ್ರೈಂ ವರದಿಗಾರನಾಗಿ ಸೇವೆ ಸಲ್ಲಿಸಿ. ನಾಲ್ಕು ಸಂಸ್ಥೆಯಲ್ಲಿ ಕ್ರೈಂ ರಿಪೋರ್ಟರ್ ಹಾಗೂ ಕ್ರೈಂ ಇನ್ವೆಸ್ಟಿಗೇಟಿವ್ ವರದಿಗಾರನಾಗಿ ಹಾಗೂ ಸ್ಟಿಂಗ್ ಅಪರೇಷನ್ ಗಳನ್ನ ಮಾಡಿದ್ದೇನೆ. ಗೌರಿ ಲಂಕೇಶ್ ಕೊಲೆ ಕೇಸನ್ನ ರಾಜ್ಯದಲ್ಲೇ ಮೊದಲು ಬ್ರೇಕ್ ಮಾಡಿ ಈ ಹಿಂದಿನ ಸಂಸ್ಥೆಯಿಂದ ಪ್ರಶಂಸೆ ಪಡೆದಿರುತ್ನೇನೆ2019 ರಲ್ಲಿ ಪಿಎಸ್ಐ ಅಕ್ರಮದ ಸ್ಟಿಂಗ್ ಆಪರೇಷನ್ ಹಾಗೂ ಬೆಂಗಳೂರು ಸಿಂಥಟಿಕ್ ಡ್ರಗ್ ಮಾಫಿಯಾದ ಸ್ಟಿಂಗ್ ಆಪರೇಷನ್ ಮಾಡಿದ್ದು. ಕಳೆದ 10 ವರ್ಷಗಳಿಂದ ಸಕ್ರೀಯವಾಗಿ ಕಾರ್ಯ ನಿರ್ವಹಿಸುತ್ತಿದ್ದೇನೆ. ಟಿವಿ9 ಸಂಸ್ಥೆಗೆ ಮಂಡ್ಯ ಜಿಲ್ಲಾ ವರದಿಗಾರನಾಗಿ ಕೆಲಸ ಮಾಡಿ ಬಳಿಕ ಚಾಮರಾಜನಗರಕ್ಕೆ ವರ್ಗಾವಣೆಯಾಗಿ ಈಗ ಪ್ರಸ್ಥುತ ಚಾಮರಾಜನಗರ ಜಿಲ್ಲಾ ವರದಿಗಾರನಾಗಿ ಕೆಲಸ ಮಾಡುತ್ತಿದ್ದೇನೆ. ಹವ್ಯಾಸ ಅಡಿಗೆ ಮಾಡುವುದು, ಕ್ರಿಕೆಟ್ ಆಡುವುದು ಕ್ರೈಂ ಇನ್ವೆಷ್ಟಿಗೇಷನ್ ನಾವೆಲ್ ಗಳನ್ನ ಓದುವುದು.

Read More
Follow Us