AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೇರಳ ಗುಡ್ಡ ಕುಸಿತ: ಕನ್ನಡತಿ ಜಯಮ್ಮರ ಜೀವ ಉಳಿಸಿದ ದನಕರುಗಳು

ಕೇರಳದ ವಯನಾಡು ಜಿಲ್ಲೆಯಲ್ಲಿ ಭೀಕರ ಭೂಕುಸಿತದಿಂದ ಸಾವನ್ನಪ್ಪಿದವರ ಸಂಖ್ಯೆ 330 ದಾಟಿದೆ. ಇನ್ನೂ 300 ಜನರು ನಾಪತ್ತೆಯಾಗಿದ್ದಾರೆ. ಈ ನಡುವೆ ಭೀಕರ ಗುಡ್ಡ ಕುಸಿತದಿಂದ ತಪ್ಪಿಸಿಕೊಂಡು ಸಾವನ್ನು ಗೆದ್ದು ಬಂದ ಗಟ್ಟಿಗಿತ್ತಿ ಕನ್ನಡತಿಯ ರೋಚಕ ಕಥೆ ಇಲ್ಲಿದೆ.

ಕೇರಳ ಗುಡ್ಡ ಕುಸಿತ: ಕನ್ನಡತಿ ಜಯಮ್ಮರ ಜೀವ ಉಳಿಸಿದ ದನಕರುಗಳು
ಜಯಮ್ಮ
ಸೂರಜ್ ಪ್ರಸಾದ್ ಎಸ್.ಎನ್
| Edited By: |

Updated on: Aug 03, 2024 | 9:24 AM

Share

ಚಾಮರಾಜನಗರ, ಆಗಸ್ಟ್​ 03: ಕೇರಳದ ವಯನಾಡಿನಲ್ಲಿ ಭಾರಿ ಗುಡ್ಡ ಕುಸಿತದಿಂದ  (Wayanad land slide) ಸಾವನ್ನಪ್ಪಿದವರ ಸಂಖ್ಯೆ 330 ದಾಟಿದೆ. ಇನ್ನೂ 300 ಜನರು ನಾಪತ್ತೆಯಾಗಿದ್ದಾರೆ. ಅವರಿಗಾಗಿ ಮಣ್ಣಿನ ಅವಶೇಷಗಳಲ್ಲಿ ತೀವ್ರ ಶೋಧ ಕಾರ್ಯಾಚರಣೆ ನಡೆದಿದೆ. ಕರ್ನಾಟಕದ ಆರು ಜನ ಮೃತಪಟ್ಟಿದ್ದಾರೆ. ಇದೇ ಭೀಕರ ಗುಡ್ಡ ಕುಸಿತದಿಂದ ತಪ್ಪಿಸಿಕೊಂಡು ಸಾವನ್ನು ಗೆದ್ದು ಬಂದ ಗಟ್ಟಿಗಿತ್ತಿ ಕನ್ನಡತಿಯ ರೋಚಕ ಕಥೆ ಇಲ್ಲಿದೆ.

ಜಯಮ್ಮ ದಂಪತಿ ವಯನಾಡು ಬಳಿಯ ಚೂರಲ್ಮಲದಲ್ಲಿ 35 ವರ್ಷಗಳಿಂದ ವಾಸವಾಗಿದ್ದರು. ಟೀ ಎಸ್ಟೇಟ್​ನಲ್ಲಿ ಕೆಲಸ ಮಾಡುತ್ತ ಹೈನುಗಾರಿಕೆ ಮಾಡಿಕೊಂಡಿದ್ದರು. ಜುಲೈ 23ರ ರಾತ್ರಿ ದನಕರಗಳು ಇದ್ದಕ್ಕಿದ್ದಂತೆ ಅರಚಲು ಶುರು ಮಾಡಿದ್ದವು. ದನಕರುಗಳು ಅರಚುವುದನ್ನು ಕಂಡು ಜಯಮ್ಮ ಕೊಟ್ಟಿಗೆ ಬಳಿ ಹೋಗಿ ನೋಡಿದಾಗ ಒಂದು ಕ್ಷಣ ಧಿಗ್ಬ್ರಾಂತರಾಗಿದ್ದಾರೆ.

ಸುಮುದ್ರದ ಅಲೆಯಂತೆ ಇರುವಝಿಂಜಿ ನದಿಯ ಹರಿವು ಜೋರಾಗಿತ್ತು. ನದಿ ನೀರು ಗ್ರಾಮದೊಳಗೆ ನುಗ್ಗಲು ಆರಂಭಿಸಿದೆ. ಹಾಗೆ ಅತ್ತ ಆಗುತಾನೆ ಗುಡ್ಡ ಕುಸಿಯಲು ಆರಂಭಿಸಿತ್ತು. ತಕ್ಷಣವೇ ಜಯಮ್ಮ ಪತಿ ಹಾಗೂ ಮಗನನ್ನು ಹೊರಗೆ ಕರೆದಿದ್ದಾರೆ. ಬಳಿಕ, ಅದಾಗಲೆ ಗುಡ್ಡ ಹತ್ತಿ ಕೂತಿದ್ದ ವಿನೋದ್​ ಎಂಬುವರು ಜಯಮ್ಮರ ಕೈ ಹಿಡಿದು ಮೇಲೆ ಎಳೆದುಕೊಂಡಿದ್ದಾರೆ. ನಂತರ ಗುಡ್ಡದ ಮೇಲೆ ಇದ್ದ ಇನ್ನೀತರರು ಜಯಮ್ಮನ ಪತಿ ಹಾಗೂ ಮಗನನ್ನೂ ಮೇಲೆ ಏಳುದುಕೊಂಡಿದ್ದಾರೆ.

ಇದನ್ನೂ ಓದಿ: ಕೇರಳ ವಯನಾಡು ಗುಡ್ಡ ಕುಸಿತದಿಂದ ಪಾರಾಗಿ, ಮೂವರನ್ನ ರಕ್ಷಿಸಿದ ಕನ್ನಡಿಗನ ಸಾಹಸ ಕಥೆ ಇಲ್ಲಿದೆ

ಆದರೆ, ಕಣ್ಣ ಮುಂದೆಯೇ ಆರು ಹಸುಗಳು ಕೊಚ್ಚಿ ಹೋದವು. ಹಸುಗಳು ಕೊಚ್ಚಿ ಹೋಗುತ್ತಿದ್ದರೂ ಏನು ಮಾಡಲಾಗದ ಪರಿಸ್ಥಿತಿ ಅವರಿಗಿತ್ತು. ಜಯಮ್ಮನ ಮನೆ ಸಂಪೂರ್ಣ ನಾಶವಾಗಿದೆ. ಜಯಮ್ಮ ಉಟ್ಟು ಬಟ್ಟೆಯಲ್ಲೇ ಕೇರಳ ತೊರೆದು, ತವರು ಮನೆ ಚಾಮರಾಜನಗರಕ್ಕೆ ಬಂದಿದ್ದಾರೆ. ಸದ್ಯ ಜಯಮ್ಮ ಮಗಳ ಮನೆಯಲ್ಲಿ ಆಶ್ರಯ ಪಡೆದುಕೊಂಡಿದ್ದಾರೆ.

“ನಮ್ಮ ಜೀವನಕ್ಕೆ ಆಧಾರವಾಗಿದ್ದ ದನಕರುಗಳು ಕೊಚ್ಚಿಕೊಂಡು ಹೋಗಿವೆ. ನಾವು ಬೀದಿಗೆ ಬಂದಿದ್ದೇವೆ. ಮುಂದೆ ನಾವು ಜೀವನ ನಡೆಸಲು ಕಷ್ಟವಾಗುತ್ತದೆ. ನಮಗೆ ಮತ್ತೆ ಕೇರಳಕ್ಕೆ ಹೋಗಿ ಜೀವನ ಮಾಡಲು ಆಗಲ್ಲ. ನಾವು ಇಲ್ಲೇ ಜೀವನ ಸಾಗಿಸುತ್ತೇವೆ. ಹೀಗಾಗಿ ಸರ್ಕಾರ ನಮಗೆ ಇಲ್ಲೇ ಒಂದು ಕೆಲಸ ನೀಡಲಿ. ಜೀವನ ಸಾಗಿಸಿಕೊಂಡು ಹೋಗುತ್ತೇವೆ” ಎಂದು ಜಯಮ್ಮ ಹೇಳಿದರು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

Follow Us
Suraj Prasad SN
Suraj Prasad SN

ಸೂರಜ್ ಪ್ರಸಾದ್ ಎಸ್.ಎನ್ ಆದ ನಾನು ಹುಟ್ಟಿದ್ದು ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿಯಲ್ಲಿ. ಬೆಳೆದಿದ್ದು ದಾವಣಗರೆ ಜಿಲ್ಲೆ ನ್ಯಾಮತಿ ತಾಲೂಕಿನಲ್ಲಿ. ಶಿವಮೊಗ್ಗದ ಸಹ್ಯಾದ್ರಿ ಕಾಲೇಜ್ ನಲ್ಲಿ ಪತ್ರಿಕೋದ್ಯಮದಲ್ಲಿ ಪದವಿಪೂರ್ವ ಶಿಕ್ಷಣ ಪಡೆದಿದ್ದು 2014ರಿಂದ ನನ್ನ ಎಲೆಕ್ಟ್ರಾನಿಕ್ ಮಾದ್ಯಮದ ವೃತ್ತಿ ಜೀವನವನ್ನ ಬೆಂಗಳೂರಿನಲ್ಲಿ ಕ್ರೈಂ ಬೀಟ್ ವರದಿಗಾರನಾಗಿ ಆರಂಭಿಸಿದ್ದು ಬೆಂಗಳೂರಿನಲ್ಲಿ 8 ವರ್ಷಗಳ ಕ್ರೈಂ ವರದಿಗಾರನಾಗಿ ಸೇವೆ ಸಲ್ಲಿಸಿ. ನಾಲ್ಕು ಸಂಸ್ಥೆಯಲ್ಲಿ ಕ್ರೈಂ ರಿಪೋರ್ಟರ್ ಹಾಗೂ ಕ್ರೈಂ ಇನ್ವೆಸ್ಟಿಗೇಟಿವ್ ವರದಿಗಾರನಾಗಿ ಹಾಗೂ ಸ್ಟಿಂಗ್ ಅಪರೇಷನ್ ಗಳನ್ನ ಮಾಡಿದ್ದೇನೆ. ಗೌರಿ ಲಂಕೇಶ್ ಕೊಲೆ ಕೇಸನ್ನ ರಾಜ್ಯದಲ್ಲೇ ಮೊದಲು ಬ್ರೇಕ್ ಮಾಡಿ ಈ ಹಿಂದಿನ ಸಂಸ್ಥೆಯಿಂದ ಪ್ರಶಂಸೆ ಪಡೆದಿರುತ್ನೇನೆ2019 ರಲ್ಲಿ ಪಿಎಸ್ಐ ಅಕ್ರಮದ ಸ್ಟಿಂಗ್ ಆಪರೇಷನ್ ಹಾಗೂ ಬೆಂಗಳೂರು ಸಿಂಥಟಿಕ್ ಡ್ರಗ್ ಮಾಫಿಯಾದ ಸ್ಟಿಂಗ್ ಆಪರೇಷನ್ ಮಾಡಿದ್ದು. ಕಳೆದ 10 ವರ್ಷಗಳಿಂದ ಸಕ್ರೀಯವಾಗಿ ಕಾರ್ಯ ನಿರ್ವಹಿಸುತ್ತಿದ್ದೇನೆ. ಟಿವಿ9 ಸಂಸ್ಥೆಗೆ ಮಂಡ್ಯ ಜಿಲ್ಲಾ ವರದಿಗಾರನಾಗಿ ಕೆಲಸ ಮಾಡಿ ಬಳಿಕ ಚಾಮರಾಜನಗರಕ್ಕೆ ವರ್ಗಾವಣೆಯಾಗಿ ಈಗ ಪ್ರಸ್ಥುತ ಚಾಮರಾಜನಗರ ಜಿಲ್ಲಾ ವರದಿಗಾರನಾಗಿ ಕೆಲಸ ಮಾಡುತ್ತಿದ್ದೇನೆ. ಹವ್ಯಾಸ ಅಡಿಗೆ ಮಾಡುವುದು, ಕ್ರಿಕೆಟ್ ಆಡುವುದು ಕ್ರೈಂ ಇನ್ವೆಷ್ಟಿಗೇಷನ್ ನಾವೆಲ್ ಗಳನ್ನ ಓದುವುದು.

Read More
ಎಂಎಲ್​ಸಿಗಳ ಪ್ರಮಾಣವಚನಕ್ಕೆ ಬೈಕ್​ನಲ್ಲೇ ಆಗಮಿಸಿದ ಮಹಾರಾಷ್ಟ್ರ ಸಿಎಂ
ಎಂಎಲ್​ಸಿಗಳ ಪ್ರಮಾಣವಚನಕ್ಕೆ ಬೈಕ್​ನಲ್ಲೇ ಆಗಮಿಸಿದ ಮಹಾರಾಷ್ಟ್ರ ಸಿಎಂ
ರಜನಿ-ಕಮಲ್ ಸಿನಿಮಾದಲ್ಲಿ ನಟಿಸಲು ತ್ರಿಶಾಗೆ 12 ಕೋಟಿ ರೂಪಾಯಿ ಆಫರ್?
ರಜನಿ-ಕಮಲ್ ಸಿನಿಮಾದಲ್ಲಿ ನಟಿಸಲು ತ್ರಿಶಾಗೆ 12 ಕೋಟಿ ರೂಪಾಯಿ ಆಫರ್?
ಕಿಡ್ನಿ ಆರೋಗ್ಯವಾಗಿರಬೇಕು ಅಂದ್ರೆ ಈ ಸಲಹೆಗಳನ್ನು ತಪ್ಪದೆ ಪಾಲಿಸಬೇಕು
ಕಿಡ್ನಿ ಆರೋಗ್ಯವಾಗಿರಬೇಕು ಅಂದ್ರೆ ಈ ಸಲಹೆಗಳನ್ನು ತಪ್ಪದೆ ಪಾಲಿಸಬೇಕು
ಶೇ. 55 ಅಂಕ ಪಡೆದ ಮಗನಿಗೆ ಅಪ್ಪ-ಅಮ್ಮ ಮಾಡಿದ್ದೇನು?
ಶೇ. 55 ಅಂಕ ಪಡೆದ ಮಗನಿಗೆ ಅಪ್ಪ-ಅಮ್ಮ ಮಾಡಿದ್ದೇನು?
‘ಪೆದ್ದಿ’ ಚಿತ್ರದಲ್ಲಿ ಶಿವರಾಜ್​ಕುಮಾರ್ ಗತ್ತು ನೋಡಿ; ಮೇಕಿಂಗ್ ವಿಡಿಯೋ
‘ಪೆದ್ದಿ’ ಚಿತ್ರದಲ್ಲಿ ಶಿವರಾಜ್​ಕುಮಾರ್ ಗತ್ತು ನೋಡಿ; ಮೇಕಿಂಗ್ ವಿಡಿಯೋ
ಮಂಗಳೂರು: ವಿಮಾನಗಳನ್ನ ಆಕಾಶದಲ್ಲೇ ಅಲೆದಾಡಿಸುತ್ತಿರುವ ಮಳೆರಾಯ!
ಮಂಗಳೂರು: ವಿಮಾನಗಳನ್ನ ಆಕಾಶದಲ್ಲೇ ಅಲೆದಾಡಿಸುತ್ತಿರುವ ಮಳೆರಾಯ!
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!