AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮಣ್ಣಲ್ಲಿ ಮಣ್ಣಾದ ಧ್ರುವನಾರಾಯಣ, ಮಿಂಚಿ ಮರೆಯಾದ ಕಾಂಗ್ರೆಸ್​ನ ಧ್ರುವ ತಾರೆ ಇನ್ನು ನೆನಪು ಮಾತ್ರ

ಚಾಮರಾಜನಗರ ತಾಲೂಕಿನ ಹೆಗ್ಗವಾಡಿ ಬಳಿ ತೋಟದಲ್ಲಿ ಸರ್ಕಾರಿ ಗೌರವದೊಂದಿಗೆ ಆರ್.ಧ್ರುವನಾರಾಯಣ ಅವರ ಅಂತ್ಯಕ್ರಿಯೆ ನೆರವೇರಿದೆ.

ಮಣ್ಣಲ್ಲಿ ಮಣ್ಣಾದ ಧ್ರುವನಾರಾಯಣ, ಮಿಂಚಿ ಮರೆಯಾದ ಕಾಂಗ್ರೆಸ್​ನ ಧ್ರುವ ತಾರೆ ಇನ್ನು ನೆನಪು ಮಾತ್ರ
ಸ್ವಗ್ರಾಮ ಹೆಗ್ಗವಾಡಿಯಲ್ಲಿ ಧ್ರುವನಾರಾಯಣ ಅವರ ಅಂತ್ಯಕ್ರಿಯೆ ನೆರವೇರಿದೆ
ಆಯೇಷಾ ಬಾನು
| Edited By: |

Updated on:Mar 12, 2023 | 3:32 PM

Share

ಚಾಮರಾಜನಗರ: ಸರಳತೆ, ಮಿತ ಭಾಷಿ, ಸಜ್ಜನಿಕೆ, ವಿನಯತೆಯ ಸಹಕಾರ ಮೂರ್ತಿಯಂತಿದ್ದ ಮಾಜಿ ಸಂಸದ, ಕೆಪಿಸಿಸಿ ಕಾರ್ಯಾಧ್ಯಕ್ಷ ಆರ್.ಧ್ರುವನಾರಾಯಣ(R Dhruvanarayan) ಮಣ್ಣಲ್ಲಿ ಮಣ್ಣಾಗಿದ್ದಾರೆ. ಚಾಮರಾಜನಗರ ತಾಲೂಕಿನ ಹೆಗ್ಗವಾಡಿ ಬಳಿ ತೋಟದಲ್ಲಿ ಸರ್ಕಾರಿ ಗೌರವದೊಂದಿಗೆ ಅಂತ್ಯಕ್ರಿಯೆ ನೆರವೇರಿದೆ. ತಂದೆ, ತಾಯಿ ಸಮಾಧಿ ಪಕ್ಕದಲ್ಲೇ ಧ್ರುವನಾರಾಯಣ ಅವರ ಅಂತ್ಯಕ್ರಿಯೆ ನೆರವೇರಿಸಲಾಗಿದೆ. ಪುತ್ರರಾದ ದರ್ಶನ್​, ಧೀರನ್ ಅಂತಿಮ ವಿಧಿವಿಧಾನ ಪೂರೈಸಿದರು. ಅಂತ್ಯಕ್ರಿಯೆಯಲ್ಲಿ ಸಿದ್ದರಾಮಯ್ಯ, ಡಿ.ಕೆ.ಶಿವಕುಮಾರ್, ಶಾಮನೂರು ಶಿವಶಂಕರಪ್ಪ, ಜಿ.ಟಿ.ದೇವೇಗೌಡ, ದಿನೇಶ್ ಗುಂಡೂರಾವ್, ಈಶ್ವರ ಖಂಡ್ರೆ, ಸತೀಶ್ ಜಾರಕಿಹೊಳಿ, ಸಲೀಂ ಅಹ್ಮದ್​, ಆರ್.ನರೇಂದ್ರ, ಪುಟ್ಟರಂಗಶೆಟ್ಟಿ, ಹರ್ಷವರ್ಧನ್, ಅನಿಲ್ ಚಿಕ್ಕಮಾದು, ಡಾ.ಯತೀಂದ್ರ, ಡಾ.ಪುಷ್ಪಾ ಅಮರನಾಥ್ ಸೇರಿದಂತೆ ಹಲವು ನಾಯಕರು ಭಾಗಿಯಾಗಿದ್ರು. ಅಪಾರ ಜನಸ್ತೋಮ ನೆರದಿದ್ದು ಅಗಲಿದ ನಾಯಕನಿಗೆ ಕಣ್ಣೀರಿನ ವಿದಾಯ ಹೇಳಲಾಯಿತು.

ಹಳೇ ಮೈಸೂರು ಭಾಗದಲ್ಲಿ ಸಿದ್ದರಾಮಯ್ಯರ ನಂತರ ನಾಯಕನಾಗಿ ಬೆಳೆದ ಧ್ರವನಾರಾಯಣ ಅವರು ನಿನ್ನೆ(ಮಾರ್ಚ್ 11) ಹೃದಯಾಘಾತದಿಂದ ನಿಧನ ಹೊಂದಿದರು. ಕೆಪಿಸಿಸಿ ಕಾರ್ಯಾಧ್ಯಕ್ಷರ ಹಠಾತ್ ನಿಧನ ಇಡೀ ರಾಜ್ಯವನ್ನೇ ದಿಗ್ಬ್ರಮೆಗೊಳಿಸಿದೆ. ಅಜಾತ ಶತ್ರುವಿನ ಅಗಲಿಕೆಯಿಂದ ಕಾಂಗ್ರೆಸ್​ಗೂ ಆಘಾತವಾಗಿದೆ.

ಇದನ್ನೂ ಓದಿ: R Dhruvanarayan: ಆರ್​​ ಧ್ರುವನಾರಾಯಣ ಅಂತಿಮ ದರ್ಶನಕ್ಕೆ ಹರಿದು ಬಂದ ಜನಸಾಗರ

ಮೊನ್ನೆ ಸಂಜೆವರೆಗೂ ಪಕ್ಷದ ಕೆಲಸದಲ್ಲಿ ಬ್ಯುಸಿಯಾಗಿದ್ದ ಧ್ರುವನಾರಾಯಣ್‌, ರಾತ್ರಿ ಮೈಸೂರಿನ ವಿಜಯನಗರದಲ್ಲಿರೋ ತಮ್ಮ ನಿವಾಸದಲ್ಲೇ ನಿದ್ದೆಗೆ ಜಾರಿದ್ರು. ನಿನ್ನೆ ಬೆಳಗಾಗ್ತಿದ್ದಂತೆ ಪಕ್ಷದ ಕೆಲಸದ ಬಗ್ಗೆ ಪ್ಲಾನ್‌ ಮಾಡಿಕೊಂಡಿದ್ದ ನಾಯಕನಿಗೆ ಬೆಳಗ್ಗೆ ಇದ್ದಕ್ಕಿದ್ದಂತೆ ರಕ್ತದ ವಾಂತಿಯಾಗಿದೆ. ಈ ವೇಳೆ ಉಸಿರಾಡುವಾಗ ರಕ್ತ ಶ್ವಾಸಕೋಶದೊಳಗೆ ಹೋಗಿದ್ದರಿಂದ, ಹೃದಯಾಘಾತ ಆಗಿದೆ. ಕೂಡಲೇ ಅವರನ್ನ ಆಸ್ಪತ್ರೆಗೆ ದಾಖಲಿಸಿದ್ರೂ ಯಾವ ಪ್ರಯೋಜನ ಆಗಿಲ್ಲ. ಬೆಳಗ್ಗೆ 6.30 ರ ಹೊತ್ತಿಗೆ ಕಾಂಗ್ರೆಸ್‌ನ ಧ್ರುವತಾರೆ ಕಣ್ಮರೆಯಾಗಿತ್ತು .

ಐದು ನಿಮಿಷದ ಮುಂಚೆ ಆರಾಮಾಗೇ ಇದ್ದ ತಂದೆಯ ಸಾವಿನ ಸುದ್ದಿ ಧ್ರುವನಾರಾಯಣ ಕುಟುಂಬಸ್ಥರಿಗೆ ಭಾರಿ ಆಘಾತವನ್ನೇ ನೀಡಿತ್ತು. ಆಸ್ಪತ್ರೆಯಿಂದ ಧ್ರುವನಾರಾಯಣ ಅವರ ಪಾರ್ಥಿವ ಶರೀರವನ್ನ ವಿಜಯನಗರ ನಿವಾಸಕ್ಕೆ ಶಿಫ್ಟ್​ ಮಾಡುತ್ತಿದ್ದಂತೆ ಕುಟುಂಬಸ್ಥರು & ಮಕ್ಕಳ ಆಕ್ರಂದ ಮುಗಿಲು ಮುಟ್ಟಿತ್ತು. ಮಧ್ಯರಾತ್ರಿಯಾದ್ರೂ ಅಂತಿಮ ದರ್ಶನ ಪಡೆಯುತ್ತಿದ್ದವರ ಸಂಖ್ಯೆ ಕಡಿಮೆ ಆಗಿರಲಿಲ್ಲ. ಬೆಳಗ್ಗೆ ಸಂತೇಮರಹಳ್ಳಿ ವೃತ್ತ, ಭುವನೇಶ್ವರಿ ವೃತ್ತದ ಮೂಲಕ‌ ಮೆರವಣಿಗೆ ನಡೆಸಿ ಕಾಂಗ್ರೆಸ್ ಕಚೇರಿ ಬಳಿ ಅಂತಿಮ ದರ್ಶನಕ್ಕೆ ವ್ಯವಸ್ಥೆ ಮಾಡಲಾಗಿತ್ತು. ನಂತರ ಸ್ವಗ್ರಾಮ ಹೆಗ್ಗವಾಡಿಗೆ ಧ್ರುವನಾರಾಯಣ ಪಾರ್ಥಿವ ಶರೀರವನ್ನು ತಂದು ಅಭಿಮಾನಿಗಳ ಅಂತಿಮ ದರ್ಶನದ ನಂತರ ತೋಟದಲ್ಲಿ ಅಂತ್ಯಕ್ರಿಯೆ ನೆರವೇರಿಸಲಾಗಿದೆ.

ಪ್ರಮುಖ ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ

Published On - 3:17 pm, Sun, 12 March 23

ಗೋಪಾಲ್‌ಗಂಜ್‌ನ ದೇವಸ್ಥಾನದಿಂದ 50 ಲಕ್ಷ ಮೌಲ್ಯದ ಚಿನ್ನದ ಕಿರೀಟ, ಆಭರಣ ಕಳವು
ಗೋಪಾಲ್‌ಗಂಜ್‌ನ ದೇವಸ್ಥಾನದಿಂದ 50 ಲಕ್ಷ ಮೌಲ್ಯದ ಚಿನ್ನದ ಕಿರೀಟ, ಆಭರಣ ಕಳವು
ಕಾಳಹಸ್ತಿ ದೇವಸ್ಥಾನದಲ್ಲಿ ನೆಲದ ಮೇಲೆ ಕುಳಿತು ಪ್ರಸಾದ ಸೇವಿಸಿದ ರಷ್ಯನ್ನರು
ಕಾಳಹಸ್ತಿ ದೇವಸ್ಥಾನದಲ್ಲಿ ನೆಲದ ಮೇಲೆ ಕುಳಿತು ಪ್ರಸಾದ ಸೇವಿಸಿದ ರಷ್ಯನ್ನರು
ಗಂಡನ ಬಗ್ಗೆ ಬಿಗ್ ಬಾಸ್​ನಲ್ಲಿ ಚೈತ್ರಾ ಕುಂದಾಪುರ ಹೇಳಿದ್ದು ಸುಳ್ಳು: ತಂದೆ
ಗಂಡನ ಬಗ್ಗೆ ಬಿಗ್ ಬಾಸ್​ನಲ್ಲಿ ಚೈತ್ರಾ ಕುಂದಾಪುರ ಹೇಳಿದ್ದು ಸುಳ್ಳು: ತಂದೆ
ಚೈತ್ರಾ ಕುಂದಾಪುರ ಡಿಬಾರ್ ಆಗಿದ್ದಳು: ಎಲ್ಲ ವಿಷಯ ಹೇಳಿದ ತಂದೆ ಬಾಲಕೃಷ್ಣ
ಚೈತ್ರಾ ಕುಂದಾಪುರ ಡಿಬಾರ್ ಆಗಿದ್ದಳು: ಎಲ್ಲ ವಿಷಯ ಹೇಳಿದ ತಂದೆ ಬಾಲಕೃಷ್ಣ
ಸಂಜು ಹೊಡೆತಕ್ಕೆ ಸಿಲುಕಿ ನೋವಿನಿಂದ ನರಳಾಡಿದ ಅಂಪೈರ್
ಸಂಜು ಹೊಡೆತಕ್ಕೆ ಸಿಲುಕಿ ನೋವಿನಿಂದ ನರಳಾಡಿದ ಅಂಪೈರ್
ರೈಲಿನಿಂದ ಬೀಳುತ್ತಿದ್ದ ಪ್ರಯಾಣಿಕನನ್ನು ಕಾಪಾಡಿದ ಸ್ಟೇಷನ್ ಮಾಸ್ಟರ್
ರೈಲಿನಿಂದ ಬೀಳುತ್ತಿದ್ದ ಪ್ರಯಾಣಿಕನನ್ನು ಕಾಪಾಡಿದ ಸ್ಟೇಷನ್ ಮಾಸ್ಟರ್
ಗೃಹಲಕ್ಷ್ಮೀ ಹಣದ ಬಗ್ಗೆ ಸ್ಫೋಟಕ ಮಾಹಿತಿ ಬಿಚ್ಚಿಟ್ಟ ಸಿಎಂ ಆರ್ಥಿಕ ಸಲಹೆಗಾರ
ಗೃಹಲಕ್ಷ್ಮೀ ಹಣದ ಬಗ್ಗೆ ಸ್ಫೋಟಕ ಮಾಹಿತಿ ಬಿಚ್ಚಿಟ್ಟ ಸಿಎಂ ಆರ್ಥಿಕ ಸಲಹೆಗಾರ
ಮೋದಿಯಿಂದ ನಾಳೆ ಉದ್ಘಾಟನೆಯಾಗಲಿದೆ ಅಸ್ಸಾಂನ ಅತಿದೊಡ್ಡ ವಿಮಾನ ನಿಲ್ದಾಣ
ಮೋದಿಯಿಂದ ನಾಳೆ ಉದ್ಘಾಟನೆಯಾಗಲಿದೆ ಅಸ್ಸಾಂನ ಅತಿದೊಡ್ಡ ವಿಮಾನ ನಿಲ್ದಾಣ
ಶಾಲೆಗೆ ಬರುವ ಮಕ್ಕಳನ್ನ ಗಾರೆ ಕೆಲಸಕ್ಕಚ್ಚಿದ ಮೇಸ್ಟ್ರು, ವಿಡಿಯೋ ವೈರಲ್
ಶಾಲೆಗೆ ಬರುವ ಮಕ್ಕಳನ್ನ ಗಾರೆ ಕೆಲಸಕ್ಕಚ್ಚಿದ ಮೇಸ್ಟ್ರು, ವಿಡಿಯೋ ವೈರಲ್
ಸಂಸತ್ ಅಧಿವೇಶನ ಮುಕ್ತಾಯ; ಮೋದಿ ಸೇರಿ ಎಲ್ಲ ಸಂಸದರಿಗೆ ಸ್ಪೀಕರ್ ಟೀ ಪಾರ್ಟಿ
ಸಂಸತ್ ಅಧಿವೇಶನ ಮುಕ್ತಾಯ; ಮೋದಿ ಸೇರಿ ಎಲ್ಲ ಸಂಸದರಿಗೆ ಸ್ಪೀಕರ್ ಟೀ ಪಾರ್ಟಿ