ಬಂಡೀಪುರ ಸಫಾರಿ ಪಾಯಿಂಟ್ ಆಯ್ತು ಕುಡುಕರ ಅಡ್ಡೆ: ಡಿಸಿಎಫ್ ಕಚೇರಿ ಆವರಣದಲ್ಲೇ ನೂರಾರು ಮದ್ಯದ ಬಾಟಲಿಗಳು!

ಅತಿ ಹೆಚ್ಚು ಹುಲಿಗಳನ್ನು ಹೊಂದಿರುವ, ಪ್ರಧಾನಿ ನರೇಂದ್ರ ಮೋದಿ ಅವರೇ ಮನಸೋತು ಸಫಾರಿ ಮಾಡಿದ್ದ ಬಂಡೀಪುರ ಸಫಾರಿ ಪಾಯಿಂಟ್ ಈಗ ಕುಡುಕರ ಅಡ್ಡೆಯಾಗಿದೆ. ಸಫಾರಿ ಕೇಂದ್ರ ಹಾಗೂ ಡಿಸಿಎಫ್ ಕಚೇರಿ ಆವರಣದಲ್ಲೇ ನೂರಾರು ಮದ್ಯದ ಖಾಲಿ ಬಾಟಲ್ ಪತ್ತೆಯಾಗಿದ್ದು ಪರಿಸರವಾದಿಗಳ ಆಕ್ರೋಶಕ್ಕೆ ಕಾರಣವಾಗಿದೆ.

ಬಂಡೀಪುರ ಸಫಾರಿ ಪಾಯಿಂಟ್ ಆಯ್ತು ಕುಡುಕರ ಅಡ್ಡೆ: ಡಿಸಿಎಫ್ ಕಚೇರಿ ಆವರಣದಲ್ಲೇ ನೂರಾರು ಮದ್ಯದ ಬಾಟಲಿಗಳು!
ಬಂಡೀಪುರ ಸಫಾರಿ ಪಾಯಿಂಟ್ ಆಯ್ತು ಕುಡುಕರ ಅಡ್ಡೆ
Edited By:

Updated on: Oct 30, 2025 | 9:19 AM

ಚಾಮರಾಜನಗರ, ಅಕ್ಟೋಬರ್ 30: ಗಡಿನಾಡು ಚಾಮರಾಜನಗರಕ್ಕೆ (Chamarajanagar) ಹುಲಿಗಳ ನಾಡು ಎಂಬ ಬಿರುದು ಕೂಡ ಇದೆ. ಇಂತಹ ಬಂಡೀಪುರ ಸಫಾರಿಗೆ ಮೈ ಮನ ಸೋಲದವರೇ ಇಲ್ಲ. ರಾಜ್ಯ ಹೊರ ರಾಜ್ಯಗಳಿಂದ ಪ್ರವಾಸಿಗರು ಭೇಟಿ ನೀಡುತ್ತಾರೆ. ಅಷ್ಟೇ ಯಾಕೆ, ಖುದ್ದು ಪ್ರಧಾನಿ ನರೇಂದ್ರ ಮೋದಿ ಕೂಡ ಇಲ್ಲಿ ಸಫಾರಿ ಮಾಡಿ ಖುಷಿ ಪಟ್ಟಿದ್ದಾರೆ. ಇಂತಹ ಬಂಡೀಪುರ ಸಫಾರಿ ಕೇಂದ್ರವೀಗ ಕುಡುಕರ ಅಡ್ಡೆಯಾಗಿದೆ. ಮೇಲುಕಾಮನಹಳ್ಳಿ ಬಳಿ ಇರುವ ಸಫಾರಿ ಕೇಂದ್ರ ಹಾಗೂ ಡಿಸಿಎಫ್ ಪ್ರಭಾಕರನ್ ಅವರ ಕಚೇರಿಯ ಆವರಣದ ಸುತ್ತಮುತ್ತ ನೂರಾರು ಮದ್ಯದ ಖಾಲಿ ಬಾಟಲ್ ಪತ್ತೆಯಾಗಿದ್ದು, ಪರಿಸರವಾದಿಗಳು ಹಾಗೂ ರೈತರ ಆಕ್ರೋಶಕ್ಕೆ ಕಾರಣವಾಗಿದೆ.

ಸಫಾರಿ ವಾಹನ ಚಾಲಕರು, ಅರಣ್ಯ ಸಿಬ್ಬಂದಿಯಿಂದಲೇ ಕೃತ್ಯ

ಸಾಮಾನ್ಯವಾಗಿ ಮೇಲುಕಾಮನಹಳ್ಳಿಯ ಡಿಸಿಎಫ್ ಕಚೇರಿ ಬಳಿ ಸಾಮಾನ್ಯರ ಪ್ರವೇಶವಿಲ್ಲ. ಬ್ಯಾರಿಕೇಡ್ ಹಾಕಿ ಸಾರ್ವಜನಿಕರ ಪ್ರವೇಶ ನಿರ್ಬಂಧಿಸಲಾಗಿದೆ. ಆದರೆ ಇಲ್ಲೇ ಕೆಲಸ ಮಾಡುವ ಸಫಾರಿ ವಾಹನದ ಚಾಲಕರು, ಅರಣ್ಯ ಸಿಬ್ಬಂದಿಯೇ ಮದ್ಯ ಸೇವಿಸಿ ಬಾಟಲಿಗಳನ್ನು ಬೇಕಾಬಿಟ್ಟಿಯಾಗಿ ಬಿಸಾಡಿದ್ದಾರೆ. ಬಂಡಿಪುರದಲ್ಲಿ ಪರಿಸರ ಉಳಿಸಿ ಪ್ಲಾಸ್ಟಿಕ್ ಮುಕ್ತರನ್ನಾಗಿ ಮಾಡುತ್ತೇವೆಂದು ಭಾಷಣ ಮಾಡುವ ಅರಣ್ಯ ಸಚಿವ ಈಶ್ವರ್ ಖಂಡ್ರೆ ಹಾಗೂ ಬಂಡೀಪುರ ಟೈಗರ್ ಫಾರೆಸ್ಟ್ ಡಿಸಿಎಫ್ ಇದಕ್ಕೆ ಸೂಕ್ತ ಉತ್ತರ ನೀಡಬೇಕಾಗಿದೆ ಎಂದು ಪರಿಸರ ಪ್ರಿಯರು ಆಗ್ರಹಿಸಿದ್ದಾರೆ.

ದೇಶ ಹಾಗೂ ವಿದೇಶಗಳಲ್ಲಿ ತನ್ನದೇ ಆದ ಛಾಪು ಮೂಡಿಸಿರುವ ಬಂಡೀಪುರ ಟೈಗರ್ ರಿಸರ್ವ್ ಫಾರೆಸ್ಟ್, ಅರಣ್ಯ ಇಲಾಖೆ ನಿರ್ಲಕ್ಷ್ಯದಿಂದ ಈ ರೀತಿ ಕುಡುಕರ ಅಡ್ಡೆಯಾಗಿ ಬದಲಾಗಿದ್ದು ಮಾತ್ರ ನಿಜಕ್ಕೂ ದುರಂತವೇ ಸರಿ ಎಂದು ಪರಿಸರವಾದಿ ರಘು ವಿಷಾದ ವ್ಯಕ್ತಪಡಿಸಿದ್ದಾರೆ.

ಇದನ್ನೂ ಓದಿ: ಬೆಂಗಳೂರಿನ 7 ಸ್ಥಳಗಳಲ್ಲಿ ಟ್ರೀ ಪಾರ್ಕ್, ದೇಶಿ ಮರಗಳ ರಕ್ಷಣೆಗೆ ಕ್ರಮ: ಮತ್ತೊಂದು ಮಹತ್ವದ ಯೋಜನೆಗೆ ಡಿಕೆ ಶಿವಕುಮಾರ್ ಚಿಂತನೆ

ಮಾತೆತ್ತಿದರೆ ಜನ ಸಾಮಾನ್ಯರ ಮೇಲೆ ಕೇಸ್ ದಾಖಲಿಸಿ ದಂಡಾಸ್ತ್ರ ಪ್ರಯೋಗಿಸುವ ಅರಣ್ಯ ಸಿಬ್ಬಂದಿಯ ಈ ದ್ವಂದ್ವ ನೀತಿಗೆ ಫುಲ್ ಸ್ಟಾಪ್ ಹಾಕಬೇಕಿದೆ. ತಪ್ಪಿತಸ್ಥರ ವಿರುದ್ಧ ಕಾನೂನು ಕ್ರಮ ಆಗಲೇಬೇಕಿದೆ ಎಂದು ಪರಿಸರವಾದಿಗಳು ಆಗ್ರಹಿಸಿದ್ದಾರೆ.

ಕರ್ನಾಟಕದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 7:50 am, Thu, 30 October 25

ಸೂರಜ್ ಪ್ರಸಾದ್ ಎಸ್.ಎನ್

ಸೂರಜ್ ಪ್ರಸಾದ್ ಎಸ್.ಎನ್ ಆದ ನಾನು ಹುಟ್ಟಿದ್ದು ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿಯಲ್ಲಿ. ಬೆಳೆದಿದ್ದು ದಾವಣಗರೆ ಜಿಲ್ಲೆ ನ್ಯಾಮತಿ ತಾಲೂಕಿನಲ್ಲಿ. ಶಿವಮೊಗ್ಗದ ಸಹ್ಯಾದ್ರಿ ಕಾಲೇಜ್ ನಲ್ಲಿ ಪತ್ರಿಕೋದ್ಯಮದಲ್ಲಿ ಪದವಿಪೂರ್ವ ಶಿಕ್ಷಣ ಪಡೆದಿದ್ದು 2014ರಿಂದ ನನ್ನ ಎಲೆಕ್ಟ್ರಾನಿಕ್ ಮಾದ್ಯಮದ ವೃತ್ತಿ ಜೀವನವನ್ನ ಬೆಂಗಳೂರಿನಲ್ಲಿ ಕ್ರೈಂ ಬೀಟ್ ವರದಿಗಾರನಾಗಿ ಆರಂಭಿಸಿದ್ದು ಬೆಂಗಳೂರಿನಲ್ಲಿ 8 ವರ್ಷಗಳ ಕ್ರೈಂ ವರದಿಗಾರನಾಗಿ ಸೇವೆ ಸಲ್ಲಿಸಿ. ನಾಲ್ಕು ಸಂಸ್ಥೆಯಲ್ಲಿ ಕ್ರೈಂ ರಿಪೋರ್ಟರ್ ಹಾಗೂ ಕ್ರೈಂ ಇನ್ವೆಸ್ಟಿಗೇಟಿವ್ ವರದಿಗಾರನಾಗಿ ಹಾಗೂ ಸ್ಟಿಂಗ್ ಅಪರೇಷನ್ ಗಳನ್ನ ಮಾಡಿದ್ದೇನೆ. ಗೌರಿ ಲಂಕೇಶ್ ಕೊಲೆ ಕೇಸನ್ನ ರಾಜ್ಯದಲ್ಲೇ ಮೊದಲು ಬ್ರೇಕ್ ಮಾಡಿ ಈ ಹಿಂದಿನ ಸಂಸ್ಥೆಯಿಂದ ಪ್ರಶಂಸೆ ಪಡೆದಿರುತ್ನೇನೆ2019 ರಲ್ಲಿ ಪಿಎಸ್ಐ ಅಕ್ರಮದ ಸ್ಟಿಂಗ್ ಆಪರೇಷನ್ ಹಾಗೂ ಬೆಂಗಳೂರು ಸಿಂಥಟಿಕ್ ಡ್ರಗ್ ಮಾಫಿಯಾದ ಸ್ಟಿಂಗ್ ಆಪರೇಷನ್ ಮಾಡಿದ್ದು. ಕಳೆದ 10 ವರ್ಷಗಳಿಂದ ಸಕ್ರೀಯವಾಗಿ ಕಾರ್ಯ ನಿರ್ವಹಿಸುತ್ತಿದ್ದೇನೆ. ಟಿವಿ9 ಸಂಸ್ಥೆಗೆ ಮಂಡ್ಯ ಜಿಲ್ಲಾ ವರದಿಗಾರನಾಗಿ ಕೆಲಸ ಮಾಡಿ ಬಳಿಕ ಚಾಮರಾಜನಗರಕ್ಕೆ ವರ್ಗಾವಣೆಯಾಗಿ ಈಗ ಪ್ರಸ್ಥುತ ಚಾಮರಾಜನಗರ ಜಿಲ್ಲಾ ವರದಿಗಾರನಾಗಿ ಕೆಲಸ ಮಾಡುತ್ತಿದ್ದೇನೆ. ಹವ್ಯಾಸ ಅಡಿಗೆ ಮಾಡುವುದು, ಕ್ರಿಕೆಟ್ ಆಡುವುದು ಕ್ರೈಂ ಇನ್ವೆಷ್ಟಿಗೇಷನ್ ನಾವೆಲ್ ಗಳನ್ನ ಓದುವುದು.

Read More
Follow Us