AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಚಾಮರಾಜನಗರದಲ್ಲಿ ಸಿಎಂ ಹಣಿಯಲು ಬಿಜೆಪಿ ಹೈಕಮಾಂಡ್ ತಂತ್ರ: ಸ್ಥಳೀಯ ನಾಯಕರಿಗೆ ಬಿಜೆಪಿ ಚುನಾವಣಾ ಉಸ್ತುವಾರಿಯ ಹೊಣೆ

ಲೋಕಸಭೆ ಚುನಾವಣೆಯಲ್ಲಿ ತವರು ಕ್ಷೇತ್ರಗಳಾದ ಮೈಸೂರು ಹಾಗೂ ಚಾಮರಾಜನಗರವನ್ನು ಗೆಲ್ಲಿಸಿಕೊಂಡು ಬರಬೇಕಾದ ಮಹತ್ವದ ಜವಾಬ್ದಾರಿ ಸಿಎಂ ಸಿದ್ದರಾಮಯ್ಯ ಮೇಲಿದೆ. ಆದರೆ, ಆ ಎರಡು ಕ್ಷೇತ್ರಗಳಲ್ಲಿಯೇ ಅವರಿಗೆ ಟಕ್ಕರ್ ಕೊಡಲು ಬಿಜೆಪಿ ರಣತಂತ್ರ ಹೆಣೆಯುತ್ತಿದೆ. ಚಾಮರಾಜನಗರದಲ್ಲಿ ಬಿಜೆಪಿ ತಂತ್ರಗಾರಿಕೆ ಏನು ಎಂಬುದರ ವಿವರ ಇಲ್ಲಿದೆ ನೋಡಿ.

ಚಾಮರಾಜನಗರದಲ್ಲಿ ಸಿಎಂ ಹಣಿಯಲು ಬಿಜೆಪಿ ಹೈಕಮಾಂಡ್ ತಂತ್ರ: ಸ್ಥಳೀಯ ನಾಯಕರಿಗೆ ಬಿಜೆಪಿ ಚುನಾವಣಾ ಉಸ್ತುವಾರಿಯ ಹೊಣೆ
ಸಾಂದರ್ಭಿಕ ಚಿತ್ರ
Follow us
ಕಿರಣ್​ ಹನಿಯಡ್ಕ
| Updated By: Ganapathi Sharma

Updated on: Apr 08, 2024 | 2:15 PM

ಬೆಂಗಳೂರು, ಏಪ್ರಿಲ್ 8: ರಾಜ್ಯದಲ್ಲಿ ಲೋಕಸಭೆ ಚುನಾವಣೆಯ (Lok Sabha Elections) ಕಾವು ಏರತೊಡಗಿದ್ದು, ಮೈಸೂರು ಮತ್ತು ಚಾಮರಾಜನಗರದಲ್ಲಿ ಕಾಂಗ್ರೆಸ್ ಅಭ್ಯರ್ಥಿಗಳನ್ನು ಗೆಲ್ಲಿಸಿಕೊಂಡು ಬರುವ ಹೊಣೆಯನ್ನು ಖುದ್ದು ಸಿಎಂ ಸಿದ್ದರಾಮಯ್ಯ ವಹಿಸಿಕೊಂಡಿದ್ದಾರೆ. ಆದರೆ, ಇದಕ್ಕೆ ಟಕ್ಕರ್ ಕೊಟ್ಟು ಸಿದ್ದರಾಮಯ್ಯರನ್ನು ಹಳಿಯಲು ಬಿಜೆಪಿ (BJP) ಹೈಕಮಾಂಡ್ ಬೇರೆಯೇ ತಂತ್ರಗಾರಿಕೆ ಹೆಣೆದಿದೆ. ಇದೇ ಗುರುವಾರ ಚಾಮರಾಜನಗರ (Chamarajanagar) ಅಖಾಡಕ್ಕೆ ಸಿಎಂ ಸಿದ್ದರಾಮಯ್ಯ ಎಂಟ್ರಿ ಕೊಡುತ್ತಿದ್ದಾರೆ. ತವರು ಕ್ಷೇತ್ರ ಗೆಲ್ಲಲು ತಂತ್ರಗಾರಿಕೆಗೆ ಸಿಎಂ ಮುಂದಾಗುತ್ತಿದ್ದಂತೆಯೇ ಬಿಜೆಪಿ ನಾಯಕರು ಸಕ್ರಿಯರಾಗಿದ್ದಾರೆ. ಬಿಜೆಪಿ ಹೈಕಮಾಂಡ್ ಕೂಡಾ ಚಾಮರಾಜನಗರದ ಮೇಲೆ ಕಣ್ಣಿಟ್ಟಿದ್ದು, ಬಿಜೆಪಿ ಅಭ್ಯರ್ಥಿ ಗೆಲ್ಲಿಸುವ ಜವಾಬ್ದಾರಿ ನೀಡಿದೆ.

ಚಾಮರಾಜನಗರ ಲೋಕಸಭಾ ಕ್ಷೇತ್ರವೀಗ ಬಿಜೆಪಿ ಹಾಗೂ ಕಾಂಗ್ರೆಸ್‌ಗೆ ಪ್ರತಿಷ್ಠೆಯ ಕಣವಾಗಿದೆ. ಸಿಎಂ ತವರು ಕ್ಷೇತ್ರ ವರುಣಾ ಚಾಮರಾಜನಗರ ಲೋಕಸಭಾ ಕ್ಷೇತ್ರ ವ್ಯಾಪ್ತಿಗೆ ಬರುತ್ತೆ. ಹೀಗಾಗಿ ಕಾಂಗ್ರೆಸ್ ಅಭ್ಯರ್ಥಿ ಸುನಿಲ್ ಬೋಸ್ ಗೆಲುವಿಗೆ ಸಿಎಂ ತಂತ್ರ ರೂಪಿಸ್ತಿದ್ದಾರೆ. ಇದೇ 11ರಂದು ಚಾಮರಾಜನಗರಕ್ಕೆ ಸಿಎಂ ಭೇಟಿ ನೀಡಲಿದ್ದು, ಕೈ ಅಭ್ಯರ್ಥಿ ಗೆಲುವಿಗೆ ರಣತಂತ್ರ ಹೆಣೆಯಲಿದ್ದಾರೆ. ಹೀಗಾಗಿ ಚಾಮರಾಜನಗರವನ್ನ ಗಂಭೀರವಾಗಿ ಪರಿಗಣಿಸಿರೋ ಬಿಜೆಪಿ ಹೈಕಮಾಂಡ್, ತವರಿನಲ್ಲಿ ಸಿಎಂಗೆ ಸೋಲಿನ ರುಚಿ ತೋರಿಸಲು ತಂತ್ರ ಹೆಣೆಯುತ್ತಿದೆ. ಚಾಮರಾಜನಗರಕ್ಕೆ ಭಾನುವಾರ ಭೇಟಿ ನೀಡಿದ್ದ ರಾಜ್ಯ ಬಿಜೆಪಿ ಚುನಾವಣಾ ಉಸ್ತುವಾರಿ ರಾಧಾ ಮೋಹನ್ ದಾಸ್, ಸ್ಥಳೀಯ ನಾಯಕರಿಗೆ ಜವಾಬ್ದಾರಿ ನೀಡಿದ್ದಾರೆ.

ಚಾಮರಾಜನಗರ ಗೆಲುವಿಗೆ ‘ಹೈ’ಟಾಸ್ಕ್!

ವಿಧಾನಸಭೆ ಚುನಾವಣೆಯಲ್ಲಾದ ತಪ್ಪು ಮರುಕಳಿಸದಂತೆ ಎಚ್ಚರಿಕೋ ನೀಡಿರುವ ರಾಧಾ ಮೋಹನ್ ದಾಸ್, ಬಿಜೆಪಿ ಮಂಡಲ ಅಧ್ಯಕ್ಷರ ಸಭೆಯಲ್ಲಿ ಟಾಸ್ಕ್ ನೀಡಿದ್ದಾರೆ. ನಿಮ್ಮ ಮಂಡಲದಲ್ಲಿ ಎಷ್ಟು ಲೀಡ್ ಕೊಡಬಹುದು? ಎಲ್ಲಿ ಸಮಸ್ಯೆ ಇದೆ? ಆ ಸಮಸ್ಯೆಯನ್ನು ಜಿಲ್ಲಾ ಮುಖಂಡರೊಂದಿಗೆ ಚರ್ಚಿಸಿ ಬಗೆಹರಿಸಿಕೊಳ್ಳಿ. ಜೆಡಿಎಸ್ ನಾಯಕರು, ಕಾರ್ಯಕರ್ತರನ್ನೂ ಜೊತೆಗೆ ಕರೆದುಕೊಂಡು ಹೋಗಿ ಎಂದು ಸೂಚನೆ ಕೊಟ್ಟಿದ್ದಾರೆ. ಅಲ್ಲದೇ ಯಾವುದೇ ಅಸಮಾಧಾನವೂ ಚುನಾವಣೆ ಮೇಲೆ ಪ್ರಭಾವ ಬೀರಬಾರದು ಎಂದು ಖಡಕ್ ಸೂಚನೆ ನೀಡಿದ್ದಾರೆ.

ಇದನ್ನೂ ಓದಿ: ಸಿದ್ದರಾಮಯ್ಯ ತವರಿನಲ್ಲೇ ಚುನಾವಣಾ ಬಹಿಷ್ಕಾರದ ಎಚ್ಚರಿಕೆ: ಯತೀಂದ್ರರನ್ನು ತರಾಟೆಗೆ ತೆಗೆದುಕೊಂಡ ಪ್ರತಿಭಟನಾಕಾರರು

ಈ ಮಧ್ಯೆ ಹಾಸನದಲ್ಲಿ ಮೈತ್ರಿ ಅಭ್ಯರ್ಥಿ ಪ್ರಜ್ವಲ್​​ಗೆ ಪ್ರೀತಂಗೌಡ ಆಪ್ತರು ​ಶಾಕ್ ಕೊಟ್ಟಿದ್ದಾರೆ. ಹಾಸನದಲ್ಲಿ ಏನೂ ಗೊಂದಲ ಇಲ್ಲ ಅಂತ ಬಿಜೆಪಿ ನಾಯಕರು ಹೇಳ್ತಿದ್ದರೆ, ಹಾಸನದಿಂದ ಅಂತರಕಾಯ್ದುಕೊಂಡಿರುವ ಪ್ರೀತಂಗೌಡ, ಮೈಸೂರು ಚಾಮರಾಜನಗರ ಉಸ್ತುವಾರಿಯಲ್ಲಿ ವ್ಯಸ್ತರಾಗಿದ್ದಾರೆ. ಇತ್ತ ಪ್ರೀತಂಗೌಡ ಆಪ್ತ ಉದ್ದೂರು ಪುರುಷೋತ್ತಮ್, ಕಾಂಗ್ರೆಸ್ ಅಭ್ಯರ್ಥಿ ಶ್ರೇಯಸ್‌ ಪಟೇಲ್‌ ಪರ ಪ್ರಚಾರಕ್ಕಿಳಿದಿದ್ದಾರೆ.

ಮಂಡ್ಯದಲ್ಲಿ ಶಕ್ತಿ ಪ್ರದರ್ಶನಕ್ಕೆ ಮುಂದಾದ ದಳಪತಿ

ಮಂಡ್ಯ ಅಖಾಡ ಗೆಲ್ಲು ದಳಪತಿಗಳು ಮಾಸ್ಟರ್ ಪ್ಲ್ಯಾನ್ ಮಾಡಿದ್ದಾರೆ. ಆದರೆ, ಹೆಚ್‌ಡಿ ಕುಮಾರಸ್ವಾಮಿ ರಾಜ್ಯಾದ್ಯಂತ ಪ್ರವಾಸ ಮಾಡಬೇಕಾಗಿರುವುದರಿಂದ, ಮಂಡ್ಯದಲ್ಲಿ ಮೂರು ದಿನ ರೋಡ್‌ ಶೋ, ಱಲಿಗೆ ಪ್ಲ್ಯಾನ್ ಮಾಡಿದ್ದಾರೆ. ಮಂಡ್ಯದಲ್ಲಿ 10 ಲಕ್ಷಕ್ಕೂ ಅಧಿಕ ಜನರ ಸೇರಿಸಿ ಸಮಾವೇಶಕ್ಕೆ ಸಿದ್ದತೆ ಮಾಡಿಕೊಳ್ಳಲಾಗುತ್ತಿದೆ.

ಮಂಡ್ಯದಲ್ಲಿ ಕುಮಾರಸ್ವಾಮಿ ಪರ ಸುಮಲತಾ ಪ್ರಚಾರ ಮಾಡುತ್ತಾರೆಯೇ ಎಂಬ ಕುತೂಹಲ ಹೆಚ್ಚಾಗಿದೆ. ಬಿಜೆಪಿ ಸೂಚನೆಗಾಗಿ ಸುಮಲತಾ ಕಾಯುತ್ತಿದ್ದು, ಸೂಚನೆ ಬಂದ ಕೂಡಲೇ ಪ್ರಚಾರ ಶುರು ಮಾಡಲಿದ್ದಾರೆ. ಆದ್ರೆ, ಹೆಚ್‌ಡಿ ಕುಮಾರಸ್ವಾಮಿ ಪ್ರಚಾರ ಮಾಡುವಂತೆ ಆಹ್ವಾನ ನೀಡಿಲ್ಲ. ಹೀಗಾಗಿ ಮಂಡ್ಯದಲ್ಲಿ ಸುಮಲತಾ ಮತಬೇಟೆಯಾಡುತ್ತಾರಾ? ಮಂಡ್ಯದಲ್ಲಿ ಪ್ರಚಾರ ಮಾಡುವಂತೆ ಬಿಜೆಪಿ ಸೂಚನೆ ನೀಡುತ್ತಾ ಎಂಬುದನ್ನು ಕಾದು ನೋಡಬೇಕಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಭಾರಿ ಮಳೆಗೆ ಜಮಖಂಡಿ ಬಸ್ ನಿಲ್ದಾಣದೊಳಗೆ ನುಗ್ಗಿದ ನೀರು
ಭಾರಿ ಮಳೆಗೆ ಜಮಖಂಡಿ ಬಸ್ ನಿಲ್ದಾಣದೊಳಗೆ ನುಗ್ಗಿದ ನೀರು
ಶಿವಣ್ಣ, ದರ್ಶನ್ ಅವರನ್ನು ನಿಂದಿಸಿದ್ದು ನಿಜವೇ? ಮನು ಹೇಳಿದ್ದೇನು?
ಶಿವಣ್ಣ, ದರ್ಶನ್ ಅವರನ್ನು ನಿಂದಿಸಿದ್ದು ನಿಜವೇ? ಮನು ಹೇಳಿದ್ದೇನು?
ಕಪ್​ಗೆ ಮುತ್ತಿಡಲು ಶಿವಕುಮಾರ್ ಆರ್​ಸಿಬಿ ತಂಡದ ಆಟಗಾರನೇ? ಭಾಸ್ಕರ್ ರಾವ್
ಕಪ್​ಗೆ ಮುತ್ತಿಡಲು ಶಿವಕುಮಾರ್ ಆರ್​ಸಿಬಿ ತಂಡದ ಆಟಗಾರನೇ? ಭಾಸ್ಕರ್ ರಾವ್
ನನ್ನ ಆರೋಗ್ಯ ಚೆನ್ನಾಗಿದೆ, ಅದನ್ನು ದೇವರು ನೋಡ್ಕೋತಾನೆ: ಕುಮಾರಸ್ವಾಮಿ
ನನ್ನ ಆರೋಗ್ಯ ಚೆನ್ನಾಗಿದೆ, ಅದನ್ನು ದೇವರು ನೋಡ್ಕೋತಾನೆ: ಕುಮಾರಸ್ವಾಮಿ
ವಿರಾಟ್ ಕೊಹ್ಲಿ ಏನು ದೇವರಾ: ಮೃತ ಪ್ರಜ್ವಲ್ ತಾಯಿ ಆಕ್ರೋಶದ ಮಾತು
ವಿರಾಟ್ ಕೊಹ್ಲಿ ಏನು ದೇವರಾ: ಮೃತ ಪ್ರಜ್ವಲ್ ತಾಯಿ ಆಕ್ರೋಶದ ಮಾತು
ಸರ್ಕಾರದಿಂದ ನೆರವು ಸಿಕ್ಕಿಲ್ಲ, ಅಧಿಕಾರಿಗಳು ಮನಗೆ ಬಂದಿಲ್ಲ:ಶಿವಲಿಂಗನ ತಾಯಿ
ಸರ್ಕಾರದಿಂದ ನೆರವು ಸಿಕ್ಕಿಲ್ಲ, ಅಧಿಕಾರಿಗಳು ಮನಗೆ ಬಂದಿಲ್ಲ:ಶಿವಲಿಂಗನ ತಾಯಿ
ಕಾಶ್ಮೀರದ ಮೊದಲ ವಂದೇ ಭಾರತ್ ರೈಲು ಅಂಜಿ ಸೇತುವೆ ದಾಟಿದ ಅದ್ಭುತ ವಿಡಿಯೋ
ಕಾಶ್ಮೀರದ ಮೊದಲ ವಂದೇ ಭಾರತ್ ರೈಲು ಅಂಜಿ ಸೇತುವೆ ದಾಟಿದ ಅದ್ಭುತ ವಿಡಿಯೋ
ನಾನು ಪುನಃ ಜೈಲಿಗೆ ಹೋಗುವುದನ್ನು ನೋಡಲು ಬಹಳ ಜನ ಕಾಯುತ್ತಿದ್ದರು: ಕುಲಕರ್ಣಿ
ನಾನು ಪುನಃ ಜೈಲಿಗೆ ಹೋಗುವುದನ್ನು ನೋಡಲು ಬಹಳ ಜನ ಕಾಯುತ್ತಿದ್ದರು: ಕುಲಕರ್ಣಿ
ಕೇದಾರನಾಥಕ್ಕೆ ಹೋಗುವಾಗ ರಸ್ತೆಯಲ್ಲೇ ಲ್ಯಾಂಡ್ ಆದ ಹೆಲಿಕಾಪ್ಟರ್
ಕೇದಾರನಾಥಕ್ಕೆ ಹೋಗುವಾಗ ರಸ್ತೆಯಲ್ಲೇ ಲ್ಯಾಂಡ್ ಆದ ಹೆಲಿಕಾಪ್ಟರ್
ಮೃತಪ್ರೇಮಿಯನ್ನು ಮಾತಾಡುವ ನೆಪದಲ್ಲಿ ತೋಟದ ಮನೆಗೆ ಕರೆಸಲಾಗಿತ್ತು
ಮೃತಪ್ರೇಮಿಯನ್ನು ಮಾತಾಡುವ ನೆಪದಲ್ಲಿ ತೋಟದ ಮನೆಗೆ ಕರೆಸಲಾಗಿತ್ತು