77 ಮಲೆಯ ಒಡೆಯ ಮಹದೇಶ್ವರನ ಬೆಟ್ಟದಲ್ಲಿ 300 ಲೀಟರ್ ಮದ್ಯ ಜಪ್ತಿ

ಕಾನನದ ದಟ್ಟಾರಣ್ಯದ ನಡುವೆ ಇರುವ ದೇವಾಲಯವದು. ಪವಾಡ ಪುರಷನ ಪವಾಡಕ್ಕೆ ಬೆರಗಾಗಿ ಕೋಟ್ಯಾಂತರ ಭಕ್ತ ವೃಂದ ಹೊಂದಿರುವ ಪ್ರದೇಶವದು. 77 ಮಲೆಯ ಒಡೆಯನಾದ ಮಾದಪ್ಪನ ಪುಣ್ಯ ಸನ್ನಿಧಾನದಲ್ಲಿಗ ಕುಡುಟರದ್ದೇ ಹಾವಳಿಯಾಗಿದೆ. ಅಕ್ರಮ ಮದ್ಯ ಮಾರಾಟದಿಂದ ಮಾದಪ್ಪನ ಬೆಟ್ಟದ ಪವಿತ್ರ್ಯಕ್ಕೆ ಧಕ್ಕೆಯಾಗಿದೆ. ಮಲೆ ಮಹದೇಶ್ವರ ಬೆಟ್ಟದಲ್ಲಿ ಎಗ್ಗಿಲ್ಲದೆ ಅಕ್ರಮ ಮದ್ಯ ಮಾರಾಟ ಆಗುತ್ತಿದ್ದು, ಅಧಿಕಾರಿಗಳು ದಾಳಿ ಮಾಡಿದ್ದಾರೆ.

77 ಮಲೆಯ ಒಡೆಯ ಮಹದೇಶ್ವರನ ಬೆಟ್ಟದಲ್ಲಿ 300 ಲೀಟರ್ ಮದ್ಯ ಜಪ್ತಿ
ಮಲೆ ಮಹದೇಶ್ವರನ ಬೆಟ್ಟದಲ್ಲಿ 300 ಲೀಟರ್ ಮದ್ಯ ಜಪ್ತಿ
Edited By: ವಿವೇಕ ಬಿರಾದಾರ

Updated on: Mar 09, 2025 | 9:55 AM

ಚಾಮರಾಜನಗರ, ಮಾರ್ಚ್ 09: ಏಳು ಮಲೆ ಎಪ್ಪತ್ತೇಳು ಮಲೆಯ ಒಡೆಯ, ದಂಡಕಾರಣ್ಯದ ನಡುವೆ ಬೆಟ್ಟದಲ್ಲಿ ನೆಲೆ ನಿಂತಿರುವ ಮಹದೇಶ್ವರ ಬೆಟ್ಟದಲ್ಲಿ (Mahadeshwara Hill) ಅಕ್ರಮ ಮದ್ಯದ ಘಾಟು ಹೆಚ್ಚಾಗಿದೆ. ಮದ್ಯ ಹಾಗೂ ತಂಬಾಕು ಮುಕ್ತ ಮಲೆ ಮಹದೇಶ್ವರ ಬೆಟ್ಟದ ಹೊತ್ತಾಸೆಗೆ ಬೆಟ್ಟದಲ್ಲೆ ವಾಸಿಸುವ ಕೆಲ ಕಿಡಿಗೇಡಿಗಳು ಸಂಚಕಾರ ತಂದಿದ್ದಾರೆ. ಪಾವಿತ್ರ್ಯಕ್ಕೆ ತೊಡಕಾಗಿದ್ದಾರೆ. ಮಲೆ ಮಹದೇಶ್ವರ ಬೆಟ್ಟದಲ್ಲಿ ಎಗ್ಗಿಲ್ಲದೆ ಅಕ್ರಮ ಮದ್ಯ (Liquor) ಮಾರಾಟ ಆಗುತ್ತಿದ್ದು, ಶನಿವಾರ (ಮಾ.08) ರಂದು ನಡೆದ ಪೊಲೀಸರ ದಾಳಿ ವೇಳೆ ಬರೋಬ್ಬರಿ 300 ಲೀಟರ್ ಮದ್ಯ ಸಿಕ್ಕಿದೆ.

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ನೆಚ್ಚಿನ ಜಿಲ್ಲೆಗಳಲ್ಲಿ ಚಾಮರಾಜನಗರ ಜಿಲ್ಲೆ ಕೂಡ ಒಂದು. ಯಾರೇ ಮುಖ್ಯಮಂತ್ರಿಯಾದರೂ ಚಾಮರಾಜನಗರ ಜಿಲ್ಲೆಗೆ ತೆರಳಲು ಹಿಂದೇಟು ಹಾಕುತ್ತಾರೆ. ಚಾಮರಾಜನಗರ ಜಿಲ್ಲೆಗೆ ಹೋದರೇ ಅಧಿಕಾರ ಕಳೆದುಕೊಳ್ಳುತ್ತಾರೆ ಎಂಬ ವಾಡಿಕೆ ಇದೆ. ಆದರೆ, ಸಿಎಂ ಸಿದ್ದರಾಮಯ್ಯ ಅನೇಕ ಬಾರಿ ಚಾಮರಾಜನಗರಕ್ಕೆ ಭೇಟಿ ನೀಡಿ ಆ ಕಳಂಕವನ್ನು ದೂರವಾಗಿಸಿದ್ದಾರೆ.

ಜೊತೆಗೆ ಮಲೆ ಮಹದೇಶ್ವರ ಬೆಟ್ಟವನ್ನ ಮದ್ಯ ಮುಕ್ತ ಪ್ರದೇಶವನ್ನಾಗಿಸುವ ಸಂಕಲ್ಪ ಮಾಡಿದ್ದಾರೆ. ಜೊತೆಗೆ ಅಧಿಕಾರಿಗಳಿಗೆ ಕೆಡಿಪಿ ಸಭೆಯಲ್ಲಿ ಖಡಕ್ ಆಗಿ ಸೂಚನೆ ನೀಡಿದ್ದಾರೆ. ಇವೆಲ್ಲರ ನಡುವೆ ಈಗ ಮತ್ತೆ ಮಲೆ ಮಹದೇಶ್ವರ ಬೆಟ್ಟದಲ್ಲಿ 300 ಲೀಟರ್ ಮದ್ಯ ಜಪ್ತಿಯಾಗಿದೆ. ಅಕ್ರಮವಾಗಿ ಮದ್ಯ ತಂದು ಮಾರಾಟ ಮಾಡುತ್ತಿದ್ದ ಸಿದ್ದಪ್ಪ ಹಾಗೂ ಮುತ್ತುರಾಜ್ ಎಂಬ ಇಬ್ಬರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ.

ಇದನ್ನೂ ಓದಿ
ಬಿಆರ್‌ಟಿ ಅರಣ್ಯದಲ್ಲಿ ಹುಲಿ ಸಂತತಿ ಹೆಚ್ಚಳಕ್ಕೆ ಸೋಲಿಗರ ಶ್ಲಾಘಿಸಿದ ಮೋದಿ
ಪ್ರಧಾನಿ ಮೋದಿ ಭೇಟಿ ಬಳಿಕ ಬಂಡೀಪುರ ಪ್ರವಾಸಿಗರ ಸಂಖ್ಯೆ, ಆದಾಯ ಹೆಚ್ಚಳ
ಬಂಡೀಪುರದಲ್ಲಿ ಹಸಿರು ಸುಂಕ ವಸೂಲಿಗೆ ಫಾಸ್ಟ್ ಟ್ಯಾಗ್ ಐಡಿಯಾ
ಮತ್ತೆ ಕೋಟ್ಯಧಿಪತಿಯಾದ ಮಲೆ ಮಹದೇಶ್ವರ: ಹುಂಡಿಯಲ್ಲಿ ಸಿಕ್ತು 1.94 ಕೋಟಿ ರೂ.

ಇದನ್ನೂ ನೋಡಿ: ಹೂ, ಹಣ್ಣು, ತರಕಾರಿಗಳಿಂದ ಮಾದಪ್ಪನ ದೇಗುಲ ಅಲಂಕಾರ

ಅಕ್ರಮ ಮದ್ಯ ಮಾರಟಗಾರರ ಜೊತೆ ಅಧಿಕಾರಿಗಳ ಕೈವಾಡವಿದೆ ಎಂಬ ಆರೋಪವೂ ಕೇಳಿಬಂದಿದೆ. ಜಿಲ್ಲಾ ಎಸ್ ಪಿ ಹಾಗೂ ಅಬಕಾರಿ ಇಲಾಖೆಯ ಡಿಸಿ ಈ ಕುರಿತು ಹೆಚ್ಚಿನ ನಿಗಾ ವಹಿಸಬೇಕಿದೆ. ಹಾಗಿದಲ್ಲಿ ಮಾತ್ರ ಮಾದಪ್ಪನ ಕ್ಷೇತ್ರದ ಪಾವಿತ್ರ್ಯ ಉಳಿಸಿಕೊಳ್ಳಲು ಸಾದ್ಯವಾಗುತ್ತದೆ.

ಕರ್ನಾಟಕದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Suraj Prasad SN

ಸೂರಜ್ ಪ್ರಸಾದ್ ಎಸ್.ಎನ್ ಆದ ನಾನು ಹುಟ್ಟಿದ್ದು ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿಯಲ್ಲಿ. ಬೆಳೆದಿದ್ದು ದಾವಣಗರೆ ಜಿಲ್ಲೆ ನ್ಯಾಮತಿ ತಾಲೂಕಿನಲ್ಲಿ. ಶಿವಮೊಗ್ಗದ ಸಹ್ಯಾದ್ರಿ ಕಾಲೇಜ್ ನಲ್ಲಿ ಪತ್ರಿಕೋದ್ಯಮದಲ್ಲಿ ಪದವಿಪೂರ್ವ ಶಿಕ್ಷಣ ಪಡೆದಿದ್ದು 2014ರಿಂದ ನನ್ನ ಎಲೆಕ್ಟ್ರಾನಿಕ್ ಮಾದ್ಯಮದ ವೃತ್ತಿ ಜೀವನವನ್ನ ಬೆಂಗಳೂರಿನಲ್ಲಿ ಕ್ರೈಂ ಬೀಟ್ ವರದಿಗಾರನಾಗಿ ಆರಂಭಿಸಿದ್ದು ಬೆಂಗಳೂರಿನಲ್ಲಿ 8 ವರ್ಷಗಳ ಕ್ರೈಂ ವರದಿಗಾರನಾಗಿ ಸೇವೆ ಸಲ್ಲಿಸಿ. ನಾಲ್ಕು ಸಂಸ್ಥೆಯಲ್ಲಿ ಕ್ರೈಂ ರಿಪೋರ್ಟರ್ ಹಾಗೂ ಕ್ರೈಂ ಇನ್ವೆಸ್ಟಿಗೇಟಿವ್ ವರದಿಗಾರನಾಗಿ ಹಾಗೂ ಸ್ಟಿಂಗ್ ಅಪರೇಷನ್ ಗಳನ್ನ ಮಾಡಿದ್ದೇನೆ. ಗೌರಿ ಲಂಕೇಶ್ ಕೊಲೆ ಕೇಸನ್ನ ರಾಜ್ಯದಲ್ಲೇ ಮೊದಲು ಬ್ರೇಕ್ ಮಾಡಿ ಈ ಹಿಂದಿನ ಸಂಸ್ಥೆಯಿಂದ ಪ್ರಶಂಸೆ ಪಡೆದಿರುತ್ನೇನೆ2019 ರಲ್ಲಿ ಪಿಎಸ್ಐ ಅಕ್ರಮದ ಸ್ಟಿಂಗ್ ಆಪರೇಷನ್ ಹಾಗೂ ಬೆಂಗಳೂರು ಸಿಂಥಟಿಕ್ ಡ್ರಗ್ ಮಾಫಿಯಾದ ಸ್ಟಿಂಗ್ ಆಪರೇಷನ್ ಮಾಡಿದ್ದು. ಕಳೆದ 10 ವರ್ಷಗಳಿಂದ ಸಕ್ರೀಯವಾಗಿ ಕಾರ್ಯ ನಿರ್ವಹಿಸುತ್ತಿದ್ದೇನೆ. ಟಿವಿ9 ಸಂಸ್ಥೆಗೆ ಮಂಡ್ಯ ಜಿಲ್ಲಾ ವರದಿಗಾರನಾಗಿ ಕೆಲಸ ಮಾಡಿ ಬಳಿಕ ಚಾಮರಾಜನಗರಕ್ಕೆ ವರ್ಗಾವಣೆಯಾಗಿ ಈಗ ಪ್ರಸ್ಥುತ ಚಾಮರಾಜನಗರ ಜಿಲ್ಲಾ ವರದಿಗಾರನಾಗಿ ಕೆಲಸ ಮಾಡುತ್ತಿದ್ದೇನೆ. ಹವ್ಯಾಸ ಅಡಿಗೆ ಮಾಡುವುದು, ಕ್ರಿಕೆಟ್ ಆಡುವುದು ಕ್ರೈಂ ಇನ್ವೆಷ್ಟಿಗೇಷನ್ ನಾವೆಲ್ ಗಳನ್ನ ಓದುವುದು.

Read More
Follow Us