Sign In

By signing in or creating an account, you agree with Associated Broadcasting Company's Terms & Conditions and Privacy Policy.

ಶಿವರಾತ್ರಿ ಜಾತ್ರೆ: ಮಲೆಮಹದೇಶ್ವರ ದೇಗುಲದಲ್ಲಿ ಬರೋಬ್ಬರಿ ಆದಾಯ ಸಂಗ್ರಹ, ಇಲ್ಲಿದೆ ನೋಡಿ ವಿವರ

ಇತಿಹಾಸ ಪ್ರಸಿದ್ಧ ಮಲೆಮಹದೇಶ್ವರ ದೇಗುಲದಲ್ಲಿ ಶಿವರಾತ್ರಿ ಜಾತ್ರೆಯ ಆರು ದಿನಗಳಲ್ಲಿ ಬರೋಬ್ಬರಿ 3.24 ಕೋಟಿ ರೂ. ಆದಾಯ ಸಂಗ್ರಹವಾಗಿದೆ ಎಂದು ದೇಗುಲದ ಆಡಳಿತ ಮಂಡಳಿ ತಿಳಿಸಿದೆ. ವಿಶೇಷ ದರ್ಶನ ಟಿಕೆಟ್, ಲಡ್ಡು ಪ್ರಸಾದ, ಇತರ ಸೇವೆಗಳಿಂದ ಈ ಆದಾಯ ಸಂಗ್ರಹವಾಗಿದ್ದು, ಹುಂಡಿ ಕಾಣಿಕೆ ಮತ್ತು ವಸತಿಯಿಂದ ಬಂದಿರುವ ಆದಾಯವನ್ನು ಇದರಲ್ಲಿ ಸೇರಿಸಲಾಗಿಲ್ಲ.

ಶಿವರಾತ್ರಿ ಜಾತ್ರೆ: ಮಲೆಮಹದೇಶ್ವರ ದೇಗುಲದಲ್ಲಿ ಬರೋಬ್ಬರಿ ಆದಾಯ ಸಂಗ್ರಹ, ಇಲ್ಲಿದೆ ನೋಡಿ ವಿವರ
ಮಲೆಮಹದೇಶ್ವರ ದೇಗುಲ
Follow us
Ganapathi Sharma
|

Updated on:Mar 14, 2024 | 11:10 AM

ಚಾಮರಾಜನಗರ, ಮಾರ್ಚ್​ 14: ಚಾಮರಾಜನಗರ (Chamarajanagar) ಜಿಲ್ಲೆಯ ಹನೂರು ತಾಲೂಕಿನ ಪ್ರಸಿದ್ಧ ಯಾತ್ರಾ ಸ್ಥಳವಾದ ಮಲೆ ಮಹದೇಶ್ವರ ಬೆಟ್ಟದ ಮಲೆಮಹದೇಶ್ವರ ದೇವಸ್ಥಾನದಲ್ಲಿ (Male Mahadeshwara hill temple) ಮಾರ್ಚ್ 6 ರಿಂದ 11 ರವರೆಗೆ ನಡೆದ ಶಿವರಾತ್ರಿ (Maha Shivratri) ಜಾತ್ರಾ ಮಹೋತ್ಸವದ ಸಂದರ್ಭದಲ್ಲಿ ಬರೋಬ್ಬರಿ 3.24 ಕೋಟಿ ರೂ. ಆದಾಯ ಸಂಗ್ರಹವಾಗಿದೆ. ವಿಶೇಷವೆಂದರೆ, ಹುಂಡಿ ಕಾಣಿಕೆ ಮತ್ತು ವಸತಿ ವ್ಯವಸ್ಥೆಯ ಶುಲ್ಕದಿಂದ ಗಳಿಸಿದ ಹಣವನ್ನು ಹೊರತುಪಡಿಸಿದ ಆದಾಯ ಇದಾಗಿದೆ.

ಮಲೆ ಮಹದೇಶ್ವರ ಬೆಟ್ಟದ ದೇಗುಲದ ಆಡಳಿತ ಮಂಡಳಿಯು ಎಲ್ಲಾ ರೀತಿಯ ಉತ್ಸವಗಳು, ಸೇವೆಗಳು, ಲಡ್ಡು ಪ್ರಸಾದ ಮಾರಾಟ ಮತ್ತು ಇತರ ಪ್ರಸಾದ, ವಿಶೇಷ ದರ್ಶನ ಟಿಕೆಟ್‌ಗಳು, ಬ್ಯಾಗ್‌ಗಳು, ಸ್ಟಾಲ್ ಒಪ್ಪಂದಗಳು ಮತ್ತು ಇತರ ಎಲ್ಲಾ ಆದಾಯದ ಮೂಲಗಳನ್ನು ಗಣನೆಗೆ ತೆಗೆದುಕೊಂಡಿದೆ.

ಆರು ದಿನಗಳ ಪೈಕಿ ಮಾರ್ಚ್ 10 ರಂದು (ಭಾನುವಾರ) ಅತ್ಯಧಿಕ ಆದಾಯ ಗಳಿಸಲಾಗಿದೆ. ಆ ದಿನ 87.92 ಲಕ್ಷ ರೂ. ಆದಾಯ ಸಂಗ್ರಹವಾಗಿದೆ. ಮಾರ್ಚ್ 6 ರಂದು 40.17 ಲಕ್ಷ ರೂ., ಮಾರ್ಚ್ 7 ರಂದು 30.21 ಲಕ್ಷ ರೂ., ಮಾರ್ಚ್ 8 ರಂದು 70.85 ಲಕ್ಷ ರೂ., ಮಾರ್ಚ್ 9 ರಂದು 62.78 ಲಕ್ಷ ರೂ., ಮಾರ್ಚ್ 11 ರಂದು 32.21 ಲಕ್ಷ ರೂ. ಆದಾಯ ಸಂಗ್ರವಾಗಿದೆ ಎಂದು ಆಡಳಿತ ಮಂಡಳಿಯು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದೆ.

ಆರು ದಿನಗಳಲ್ಲಿ ಲಡ್ಡು ಮಾರಾಟದ ಮೂಲಕ 1.13 ಕೋಟಿ ರೂ., ಚಿನ್ನದ ರಥದ ಸೇವೆಯಿಂದ 90.25 ಲಕ್ಷ ರೂ., ವಿಶೇಷ ದರ್ಶನ ಟಿಕೆಟ್‌ನಿಂದ 67.70 ಲಕ್ಷ ರೂ., ಪ್ರಸಾದ ಮಾರಾಟದಿಂದ 11.93 ಲಕ್ಷ ರೂ., ಸ್ಟಾಲ್ ಒಪ್ಪಂದದ ಮೂಲಕ 10.52 ಲಕ್ಷ ರೂ. ಆದಾಯ ಬಂದಿದೆ ಎಂದು ಆಡಳಿತ ಮಂಡಳಿ ಮಾಹಿತಿ ನೀಡಿದೆ.

ಶಿವರಾತ್ರಿ ಸಂದರ್ಭದ ಮಲೆಮಹದೇಶ್ವರ ದೇವಸ್ಥಾನದಲ್ಲಿ ನಡೆಯುವ ಆರು ದಿನಗಳ ಜಾತ್ರೆಗೆ ರಾಜ್ಯ, ಹೊರ ರಾಜ್ಯಗಳ ಲಕ್ಷಾಂತರ ಭಕ್ತರು ಆಗಮಿಸುತ್ತಾರೆ. ಪಾದಯಾತ್ರೆ ಮೂಲಕವೂ ಸಾವಿರಾರು ಭಕ್ತರು ಮಲೆಮಹದೇಶ್ವರನ ದರ್ಶನಕ್ಕೆ ಬರುತ್ತಾರೆ. ಈ ಹಬ್ಬದ ಸಂದರ್ಭದಲ್ಲಿ ದೇಗುಲದ ಆದಾಯ ಗಣನೀಯವಾಗಿ ಹೆಚ್ಚಿರುತ್ತದೆ.

ಇದನ್ನೂ ಓದಿ: ಮೋದಿ ಮತ್ತೊಮ್ಮೆ ಪ್ರಧಾನಿಯಾಗಬೇಕೆಂದು ಮಹದೇಶ್ವರ ಬೆಟ್ಟದವರೆಗೆ ಪಾದಯಾತ್ರೆ ಮಾಡಿದ್ದ 102 ವರ್ಷದ ವೃದ್ಧೆಗೆ ಸನ್ಮಾನ

102 ವರ್ಷ ವಯಸ್ಸಿನ ವೃದ್ಧೆಯೊಬ್ಬರು ನರೇಂದ್ರ ಮೋದಿ ಅವರು ಮತ್ತೆ ಪ್ರಧಾನಿಯಾಗಬೇಕು, ದೇಶದಲ್ಲಿ ಮಳೆ-ಬೆಳೆ ಚೆನ್ನಾಗಿ ಆಗಬೇಕೆಂದು ಪ್ರಾರ್ಥಿಸಿ ಪಾದಯಾತ್ರೆ ನಡೆಸಿದ್ದ ವಿಡಿಯೋ ಇತ್ತೀಚೆಗೆ ವೈರಲ್ ಆಗಿತ್ತು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 11:09 am, Thu, 14 March 24

ಪುನೀತ್ ರಾಜ್​ಕುಮಾರ್ ಬಗ್ಗೆ ಅರ್ಧಗಂಟೆ ಮಾತನಾಡಿದ ರಶ್ಮಿಕಾ ಮಂದಣ್ಣ
ಪುನೀತ್ ರಾಜ್​ಕುಮಾರ್ ಬಗ್ಗೆ ಅರ್ಧಗಂಟೆ ಮಾತನಾಡಿದ ರಶ್ಮಿಕಾ ಮಂದಣ್ಣ
ಪತಿಯೊಂದಿಗೆ ಜಗಳವಾಡಿ ವಿದ್ಯುತ್ ಟವರ್ ಹತ್ತಿ ಆತ್ಮಹತ್ಯೆಗೆ ಯತ್ನಿಸಿದ ಪತ್ನಿ
ಪತಿಯೊಂದಿಗೆ ಜಗಳವಾಡಿ ವಿದ್ಯುತ್ ಟವರ್ ಹತ್ತಿ ಆತ್ಮಹತ್ಯೆಗೆ ಯತ್ನಿಸಿದ ಪತ್ನಿ
ಶಿವಪುರಿಯ ಮಾತಟಿಲಾ ಡ್ಯಾಂನಲ್ಲಿ ಮುಳುಗಿದ ದೋಣಿ; 7 ಜನ ಸಾವನ್ನಪ್ಪಿರುವ ಶಂಕೆ
ಶಿವಪುರಿಯ ಮಾತಟಿಲಾ ಡ್ಯಾಂನಲ್ಲಿ ಮುಳುಗಿದ ದೋಣಿ; 7 ಜನ ಸಾವನ್ನಪ್ಪಿರುವ ಶಂಕೆ
ಚಂದನ್ ಶೆಟ್ಟಿ ಜೊತೆ ಮದುವೆ ಗಾಸಿಪ್, ಸ್ಪಷ್ಟನೆ ಕೊಟ್ಟ ಸಂಜನಾ
ಚಂದನ್ ಶೆಟ್ಟಿ ಜೊತೆ ಮದುವೆ ಗಾಸಿಪ್, ಸ್ಪಷ್ಟನೆ ಕೊಟ್ಟ ಸಂಜನಾ
ಕುಮಾರಸ್ವಾಮಿ ನನ್ನನ್ನು ಬಯ್ಯದೆ ಬೇರೆ ಯಾರನ್ನು ಬಯ್ಯಲು ಸಾಧ್ಯ? ಶಿವಕುಮಾರ್
ಕುಮಾರಸ್ವಾಮಿ ನನ್ನನ್ನು ಬಯ್ಯದೆ ಬೇರೆ ಯಾರನ್ನು ಬಯ್ಯಲು ಸಾಧ್ಯ? ಶಿವಕುಮಾರ್
ಜಾರ್ಖಂಡ್‌ನ ದಿಯೋಘರ್‌ನಲ್ಲಿ ಇಂಡಿಯನ್ ಆಯಿಲ್ ಸ್ಥಾವರದಲ್ಲಿ ಬೆಂಕಿ ಅವಘಡ
ಜಾರ್ಖಂಡ್‌ನ ದಿಯೋಘರ್‌ನಲ್ಲಿ ಇಂಡಿಯನ್ ಆಯಿಲ್ ಸ್ಥಾವರದಲ್ಲಿ ಬೆಂಕಿ ಅವಘಡ
ಕರ್ನಾಟಕ ಮೊದಲು ತಮಿಳುನಾಡು ಚರ್ಚೆ ಮಾಡಬೇಕಾದ ಅವಶ್ಯಕತೆ ಸ್ಪಷ್ಟವಾಗುತ್ತಿದೆ
ಕರ್ನಾಟಕ ಮೊದಲು ತಮಿಳುನಾಡು ಚರ್ಚೆ ಮಾಡಬೇಕಾದ ಅವಶ್ಯಕತೆ ಸ್ಪಷ್ಟವಾಗುತ್ತಿದೆ
ಶಿವಲಿಂಗೇಗೌಡರು ಕೋಪದಿಂದ ಕುದಿಯುತ್ತಿದ್ದರೆ ಸಭಾಧ್ಯಕ್ಷರಿಗೆ ನಗು!
ಶಿವಲಿಂಗೇಗೌಡರು ಕೋಪದಿಂದ ಕುದಿಯುತ್ತಿದ್ದರೆ ಸಭಾಧ್ಯಕ್ಷರಿಗೆ ನಗು!
ಕಂದಾಯ ಮತ್ತು ಸರ್ವೇ ಇಲಾಖೆ ಅಧಿಕಾರಿಗಳಿಂದ ಮಾರ್ಕಿಂಗ್ ಕೆಲಸ ಶುರುವಾಗಿದೆ
ಕಂದಾಯ ಮತ್ತು ಸರ್ವೇ ಇಲಾಖೆ ಅಧಿಕಾರಿಗಳಿಂದ ಮಾರ್ಕಿಂಗ್ ಕೆಲಸ ಶುರುವಾಗಿದೆ
ತೆರವು ಕಾರ್ಯಾಚರಣೆ ಆರಂಭಿಸುವ ಮೊದಲು ನೋಟೀಸ್ ನೀಡಿಲ್ಲ: ಕುಮಾರಸ್ವಾಮಿ
ತೆರವು ಕಾರ್ಯಾಚರಣೆ ಆರಂಭಿಸುವ ಮೊದಲು ನೋಟೀಸ್ ನೀಡಿಲ್ಲ: ಕುಮಾರಸ್ವಾಮಿ