Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮಹದೇಶ್ವರ ಬೆಟ್ಟ: ದಟ್ಟಾರಣ್ಯದಲ್ಲಿ ಬೆಳಗಿನ ಜಾವದವರೆಗೂ ಗರ್ಭಿಣಿಯ ಹೊತ್ತು ಆಸ್ಪತ್ರೆಗೆ ಕರೆ ತಂದ ಗ್ರಾಮಸ್ಥರು

male mahadeshwara hills: ಗ್ರಾಮದಲ್ಲಿ ಸಣ್ಣ ಸಮಸ್ಯೆಯಾದ್ರು ದೂರವಾಣಿ ಸಂಪರ್ಕ ಕೂಡ ಸಿಗಲ್ಲ. ಮಹದೇಶ್ವರಬೆಟ್ಟ ಅರಣ್ಯ ಗ್ರಾಮಸ್ಥರ ಅನುಕೂಲಕ್ಕಾಗಿ ಅರಣ್ಯ ಇಲಾಖೆಯು ಜನವನ ಸಾರಿಗೆ ವ್ಯವಸ್ಥೆ ಜಾರಿಗೆ ತಂದಿದೆ. ಆದರೆ ಚಾಲಕರು ಮತ್ತು ಅಧಿಕಾರಿಗಳು ಸಕಾಲಕ್ಕೆ ಮೊಬೈಲ್ ದೂರವಾಣಿ ಸಂಪರ್ಕಕ್ಕೆ ಸಿಗುವುದಿಲ್ಲ.

ಮಹದೇಶ್ವರ ಬೆಟ್ಟ: ದಟ್ಟಾರಣ್ಯದಲ್ಲಿ ಬೆಳಗಿನ ಜಾವದವರೆಗೂ ಗರ್ಭಿಣಿಯ ಹೊತ್ತು ಆಸ್ಪತ್ರೆಗೆ ಕರೆ ತಂದ ಗ್ರಾಮಸ್ಥರು
ಮಹದೇಶ್ವರ ಬೆಟ್ಟ: ದಟ್ಟಾರಣ್ಯದಲ್ಲಿ ಬೆಳಗಿನ ಜಾವದವರೆಗೂ ಗರ್ಭಿಣಿಯ ಹೊತ್ತು ಆಸ್ಪತ್ರೆಗೆ ಕರೆ ತಂದ ಗ್ರಾಮಸ್ಥರು
Follow us
TV9 Web
| Updated By: ಸಾಧು ಶ್ರೀನಾಥ್​

Updated on:Jun 30, 2022 | 3:30 PM

ಚಾಮರಾಜನಗರ: ಮಹದೇಶ್ವರ ಬೆಟ್ಟ ಅರಣ್ಯ ಪ್ರದೇಶದ (male mahadeshwara hills) ಗ್ರಾಮಸ್ಥರ ಗೋಳು ನಿಲ್ಲುತ್ತಿಲ್ಲ. ಇಲ್ಲಿನ ಗ್ರಾಮಸ್ಥರು ಮಹದೇಶ್ವರ ದಟ್ಟಾರಣ್ಯದಲ್ಲಿ 8 ಕಿಲೊ ಮೀಟರ್ ದೂರ ಗರ್ಭಿಣಿಯನ್ನು ಹೊತ್ತು ಆಸ್ಪತ್ರೆಗೆ ಕರೆ ತಂದಿದ್ದಾರೆ. ಡೋಲಿ ಕಟ್ಟಿ (doli) ಗರ್ಭಿಣಿಯನ್ನು (pregnant woman) ದಟ್ಟಾರಣ್ಯದಲ್ಲಿ ಹೊತ್ತು ನಾಲ್ಕು ಗಂಟೆ ಕಾಲ ನಡೆದು ಆಸ್ಪತ್ರೆಗೆ ಸಾಗಿಸಿದ್ದಾರೆ. ಅರಣ್ಯದ ಕಲ್ಲುಮುಳ್ಳುಗಳ ಹಾದಿಯಲ್ಲಿ ಕಾಡುಮೃಗಗಳ ಭಯದಲ್ಲೇ ಕಗ್ಗತ್ತಲೆಯಲ್ಲೇ ಈ ಕಾಲ್ನಡಿಗೆ ನಡೆದಿದೆ.

ತಮ್ಮ ಗ್ರಾಮದ ಗರ್ಭಿಣಿಗೆ ನೆರವಾಗಲು ಮಹದೇಶ್ವರಬೆಟ್ಟ ಅರಣ್ಯ ವ್ಯಾಪ್ತಿಯ ದೊಡ್ಡಾಣೆ ಗ್ರಾಮಸ್ಥರು ಈ ಹರಸಾಹಸ ಪಟ್ಟಿದ್ದಾರೆ. ಗ್ರಾಮದ ಶಾಂತಲಾ ಎಂಬ ಗರ್ಭಿಣಿಗೆ ಹೆರಿಗೆ ನೋವು ಕಾಣಿಸಿಕೊಂಡಿತ್ತು. ದೊಡ್ಡಾಣೆಯಿಂದ ಸುಳ್ವಾಡಿ ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ಗರ್ಭಿಣಿಯನ್ನು ಹೊತ್ತು ತಂದು, ಗ್ರಾಮಸ್ಥರು ಚಿಕಿತ್ಸೆ ಕೊಡಿಸಿದ್ದಾರೆ. ಮಧ್ಯರಾತ್ರಿ 2 ಗಂಟೆಗೆ ಹೊರಟು ಬೆಳಿಗ್ಗೆ 6 ಗಂಟೆಗೆ ಆಸ್ಪತ್ರೆಗೆ ತಲುಪಿದ್ದಾರೆ.

ಗ್ರಾಮದಲ್ಲಿ ಸಣ್ಣ ಸಮಸ್ಯೆಯಾದ್ರು ದೂರವಾಣಿ ಸಂಪರ್ಕ ಕೂಡ ಸಿಗಲ್ಲ. ಮಹದೇಶ್ವರಬೆಟ್ಟ ಅರಣ್ಯ ಗ್ರಾಮಸ್ಥರ ಅನುಕೂಲಕ್ಕಾಗಿ ಅರಣ್ಯ ಇಲಾಖೆಯು ಜನವನ ಸಾರಿಗೆ ವ್ಯವಸ್ಥೆ ಜಾರಿಗೆ ತಂದಿದೆ. ಗರ್ಭಿಣಿಯರು, ಅನಾರೋಗ್ಯಪೀಡಿತರು, ಶಾಲಾ ವಿದ್ಯಾರ್ಥಿಗಳು ಹಾಗು ಗ್ರಾಮಸ್ಥರ ತುರ್ತು ಬಳಕೆಗಾಗಿ ಜಾರಿಗೆ ತಂದಿರುವ ಜನವನ ಸಾರಿಗೆ ಸೌಲಭ್ಯ ಇದಾಗಿದೆ. ಆದರೆ ಚಾಲಕರು ಮತ್ತು ಅಧಿಕಾರಿಗಳು ಮೊಬೈಲ್ ದೂರವಾಣಿ ಸಂಪರ್ಕಕ್ಕೆ ಸಿಗದ ಕಾರಣ ಗ್ರಾಮಸ್ಥರು ಡೋಲಿ ಮೊರೆಹೋಗಿ ಪಡಿಪಾಟಲು ಅನುಭವಿಸಿದ್ದಾರೆ. ಕಾಡಿನ ಮಧ್ಯದಲ್ಲಿರುವ ಗ್ರಾಮಗಳಲ್ಲಿ ಇಂತಹ ಸಮಸ್ಯೆಗಳು ನಿರಂತರವಾಗಿವೆ. ಗ್ರಾಮಸ್ಥರ ಮೊರೆ ಯಾರ ಕಿವಿಗೂ ಬೀಳುತ್ತಿಲ್ಲ.

ಇದನ್ನೂ ಓದಿ:

Justice Alok Aradhe: ಕರ್ನಾಟಕ ಹೈಕೋರ್ಟ್ ಸಿಜೆ ರಿತುರಾಜ್ ಅವಸ್ತಿ ನಿವೃತ್ತಿ ಹಿನ್ನೆಲೆ ಹಂಗಾಮಿ ಮುಖ್ಯ ನ್ಯಾಯಮೂರ್ತಿ ನೇಮಕ

 

Published On - 3:28 pm, Thu, 30 June 22

ಉಪೇಂದ್ರ ಊಟ ಮಾಡೋದು ಬಹಳ ವಿಚಿತ್ರ; ಅಚ್ಚರಿಯ ವಿಷಯ ಹೇಳಿದ ಶಿವಣ್ಣ
ಉಪೇಂದ್ರ ಊಟ ಮಾಡೋದು ಬಹಳ ವಿಚಿತ್ರ; ಅಚ್ಚರಿಯ ವಿಷಯ ಹೇಳಿದ ಶಿವಣ್ಣ
ಕ್ಯಾಪ್ಟನ್ ಕೂಲ್ ಧೋನಿಗೆ ಬಿಸಿಸಿಐನಿಂದ ವಿಶೇಷ ಗೌರವ
ಕ್ಯಾಪ್ಟನ್ ಕೂಲ್ ಧೋನಿಗೆ ಬಿಸಿಸಿಐನಿಂದ ವಿಶೇಷ ಗೌರವ
ಸಿಎಸ್​​ಕೆ ಬೌಲರ್​ಗಳ ಎದುರು ಅಬ್ಬರಿಸಿ ಬೊಬ್ಬಿರಿದ ನಿತೀಶ್ ರಾಣಾ
ಸಿಎಸ್​​ಕೆ ಬೌಲರ್​ಗಳ ಎದುರು ಅಬ್ಬರಿಸಿ ಬೊಬ್ಬಿರಿದ ನಿತೀಶ್ ರಾಣಾ
ಲಾಲು ಯಾದವ್ ಸರ್ಕಾರ ಜಂಗಲ್ ರಾಜ್ ಎಂದೇ ನೆನಪುಳಿಯುತ್ತದೆ; ಅಮಿತ್ ಶಾ
ಲಾಲು ಯಾದವ್ ಸರ್ಕಾರ ಜಂಗಲ್ ರಾಜ್ ಎಂದೇ ನೆನಪುಳಿಯುತ್ತದೆ; ಅಮಿತ್ ಶಾ
ಉಪ್ಪಿ, ಶಿವಣ್ಣ, ರಾಜ್ ಶೆಟ್ಟಿ ನಟನೆ ‘45’ ಸಿನಿಮಾ ಟೀಸರ್ ಲಾಂಚ್ ಲೈವ್ ನೋಡಿ
ಉಪ್ಪಿ, ಶಿವಣ್ಣ, ರಾಜ್ ಶೆಟ್ಟಿ ನಟನೆ ‘45’ ಸಿನಿಮಾ ಟೀಸರ್ ಲಾಂಚ್ ಲೈವ್ ನೋಡಿ
ಬುಡಕಟ್ಟು ನೃತ್ಯದ ಮೂಲಕ ಛತ್ತೀಸ್​ಗಢದಲ್ಲಿ ಮೋದಿಗೆ ಸಾಂಪ್ರದಾಯಿಕ ಸ್ವಾಗತ
ಬುಡಕಟ್ಟು ನೃತ್ಯದ ಮೂಲಕ ಛತ್ತೀಸ್​ಗಢದಲ್ಲಿ ಮೋದಿಗೆ ಸಾಂಪ್ರದಾಯಿಕ ಸ್ವಾಗತ
ಬೌಂಡರಿ ಬಳಿ ಅತ್ಯದ್ಭುತ ಕ್ಯಾಚ್ ಹಿಡಿದ ಜ್ಯಾಕ್ ಫ್ರೇಸರ್
ಬೌಂಡರಿ ಬಳಿ ಅತ್ಯದ್ಭುತ ಕ್ಯಾಚ್ ಹಿಡಿದ ಜ್ಯಾಕ್ ಫ್ರೇಸರ್
ಚೊಚ್ಚಲ ಐಪಿಎಲ್ ಅರ್ಧಶತಕ ಸಿಡಿಸಿದ ಅನಿಕೇತ್ ವರ್ಮಾ
ಚೊಚ್ಚಲ ಐಪಿಎಲ್ ಅರ್ಧಶತಕ ಸಿಡಿಸಿದ ಅನಿಕೇತ್ ವರ್ಮಾ
ಮೋದಿ ಭೇಟಿಗೂ ಕೆಲವೇ ಗಂಟೆ ಮೊದಲು ಛತ್ತೀಸ್‌ಗಢದಲ್ಲಿ 50 ನಕ್ಸಲರ ಶರಣಾಗತಿ
ಮೋದಿ ಭೇಟಿಗೂ ಕೆಲವೇ ಗಂಟೆ ಮೊದಲು ಛತ್ತೀಸ್‌ಗಢದಲ್ಲಿ 50 ನಕ್ಸಲರ ಶರಣಾಗತಿ
ನಾಗ್ಪುರದಲ್ಲಿ ರೋಡ್ ಶೋ ನಡೆಸಿದ ಮೋದಿ; ಜೈ ಶ್ರೀರಾಮ್ ಘೋಷಣೆ ಕೂಗಿದ ಜನರು
ನಾಗ್ಪುರದಲ್ಲಿ ರೋಡ್ ಶೋ ನಡೆಸಿದ ಮೋದಿ; ಜೈ ಶ್ರೀರಾಮ್ ಘೋಷಣೆ ಕೂಗಿದ ಜನರು