ಮಹಿಳೆಯರ ಒಳ ಉಡುಪು ಕದಿಯುತ್ತಿದ್ದದ್ದು ಸೈಕೋ ಪಾತ್​​ ಅಲ್ಲ, ಖಾಸಗಿ ಕಂಪನಿ ಉದ್ಯೋಗಿ

ಚಾಮರಾಜನಗರದ ಹೌಸಿಂಗ್ ಬೋರ್ಡ್​ನಲ್ಲಿ ಮಹಿಳೆಯರ ಒಳ ಉಡುಪು ಕದಿಯುತ್ತಿದ್ದ ಸೈಕೋ ಪಾತ್​ನನ್ನು ಪೊಲೀಸರು ಕೊನೆಗೂ ಅರೆಸ್ಟ್ ಮಾಡಿದ್ದಾರೆ. ಟಿವಿ9 ವರದಿ ಬೆನ್ನಲ್ಲೇ 24 ಗಂಟೆ ಒಳಗೆ ವ್ಯಕ್ತಿಯನ್ನು ಬಂಧಿಸಿದ್ದಾರೆ. ಸದ್ಯ ವ್ಯಕ್ತಿಯ ಬಂಧನದಿಂದ ಮಹಿಳೆಯರು, ಯುವತಿಯರು ಸೇರಿದಂತೆ ಸ್ಥಳೀಯರು ನಿಟ್ಟುಸಿರು ಬಿಟ್ಟಿದ್ದಾರೆ.

ಮಹಿಳೆಯರ ಒಳ ಉಡುಪು ಕದಿಯುತ್ತಿದ್ದದ್ದು ಸೈಕೋ ಪಾತ್​​ ಅಲ್ಲ, ಖಾಸಗಿ ಕಂಪನಿ ಉದ್ಯೋಗಿ
ಬಂಧಿತ ಆರೋಪಿ
Image Credit source: tv9 kannada
Edited By:

Updated on: Apr 10, 2026 | 10:47 PM

ಚಾಮರಾಜನಗರ, ಏಪ್ರಿಲ್​ 10: ಕಳೆದ ಎರಡು-ಮೂರು ತಿಂಗಳಿಂದ ಮಹಿಳೆಯರ ನಿದ್ದೆಗೆಡಿಸಿದ್ದ ಸೈಕೋ ಪಾತ್​ನನ್ನು (Psychopath) ಕೊನೆಗೂ ಪೊಲೀಸರು ಬಂಧಿಸಿದ್ದಾರೆ. ಮಹಿಳೆಯರ ಒಳ ಉಡುಪು ಕಳವು (Female Innerwear) ಮಾಡುತ್ತಿದ್ದ. ದೂರು ನೀಡಿದರೂ ಕ್ಯಾರೆ ಎನ್ನದ ಪೊಲೀಸರು ಟಿವಿ9 ನಲ್ಲಿ ಸುದ್ದಿ ಬಿತ್ತರಿಸಿದ 24 ಗಂಟೆ ಒಳಗೆ ವ್ಯಕ್ತಿಯನ್ನು ಬಂಧಿಸಿದ್ದಾರೆ. ಅಮೃತ್ ಅಲಿಯಾಸ್ ಅಮೃತ್ ಆಚಾರ್ಯ ಬಂಧಿತ ವ್ಯಕ್ತಿ.

ರಾತ್ರಿ 1 ಗಂಟೆಯ ಸಮಯ. ಎಲ್ಲರೂ ಗಾಢ ನಿದ್ದೆಗೆ ಜಾರಿರುತ್ತಾರೆ. ಊರೆಲ್ಲಾ ಮಲಗಿದ್ದರೆ ಓರ್ವ ಮಾತ್ರ ಮನೆಯಿಂದ ಆಚೆ ಬರ್ತಾಯಿದ್ದ. ಮನೆ ಮುಂದೆ ಒಗೆದು ಒಣ ಹಾಕಿದ ಮಹಿಳೆಯರ ಒಳ ಉಡುಪುಗಳನ್ನು ಕಳ್ಳತನ ಮಾಡುತ್ತಿದ್ದ. ಚಾಮರಾಜನಗರದ ಹೌಸಿಂಗ್ ಬೋರ್ಡ್​ನಲ್ಲಿ ಘಟನೆ ನಡೆದಿತ್ತು. ಸೈಕೋ ಪಾತ್​ನ ಕೃತ್ಯ ಮನೆಯ ಸಿಸಿ ಕ್ಯಾಮೆರಾದಲ್ಲಿ ಸೆರೆಯಾಗಿತ್ತು.

ಇದನ್ನೂ ಓದಿ: ಆತನಿಗೆ ಮಹಿಳೆಯರ ಒಳ ಉಡುಪು ಮಾತ್ರ ಬೇಕು: ನಮಗೆ ತುಂಬಾ ಭಯ ಆಗ್ತಿದೆ ಎಂದ ಗೃಹಿಣಿ

ಮನೆಯ ಮಾಲೀಕ ಗಣೇಶ್ ಪ್ರಸಾದ್ ಸಿಸಿ ಕ್ಯಾಮೆರಾದಲ್ಲಿ ಸೆರೆ ವಿಡಿಯೋ ಸಮೇತ ಲಿಖಿತ ದೂರು ನೀಡಿದ್ದರು. ಪಟ್ಟಣ ಠಾಣಾ ಪೊಲೀಸರು ಎಫ್​ಐಆರ್​ ಮಾಡಿ ಸುಮ್ಮನಾಗಿದ್ದಾರೆ. ಯಾವಾಗ ಟಿವಿ9 ನಲ್ಲಿ ಸುದ್ದಿ ಬಿತ್ತರವಾಯಿತೋ ಅಲರ್ಟ್ ಆದ ಪೊಲೀಸರು, ಇದೀಗ ಸೈಕೋ ಪಾತ್​ನನ್ನ ಬಂಧಿಸಿದ್ದಾರೆ.

ಬಂಧಿತ ವ್ಯಕ್ತಿ ಪ್ರತಿಷ್ಠಿತ ಖಾಸಗಿ ಕಂಪನಿಯಲ್ಲಿ ಲ್ಯಾಬ್ ಟೆಕ್ನಿಷಿಯನ್

ಇನ್ನು ಬಂಧಿತ ಅಮೃತ್​​ ಕೂಡ ಹೌಸಿಂಗ್ ಬೋರ್ಡ್ ನಿವಾಸಿ. ಬೆಂಗಳೂರಿನ ಪ್ರತಿಷ್ಠಿತ ಖಾಸಗಿ ಕಂಪನಿಯೊಂದರಲ್ಲಿ ಲ್ಯಾಬ್ ಟೆಕ್ನಿಷಿಯನ್ ಆಗಿ ಕೆಲಸ ಮಾಡುತ್ತಿದ್ದ. 10ನೇ ತರಗತಿಯಲ್ಲಿ ಓದುವಾಗ ಮಾನಸಿಕ ಖಿನ್ನತೆಗೆ ಒಳಗಾಗಿದ್ದ. ರಾತ್ರಿ ಆದರೆ ಸಾಕು ಮನೆಯ ಅಂಗಳದಲ್ಲಿ ಮಹಿಳೆಯರ ಒಳ ಉಡುಪು ಹಾಕಿಕೊಂಡು ಓಡಾಡುತ್ತಿದ್ದ. ದಿನ ಕಳೆದಂತೆ ರಾತ್ರಿ ಅಕ್ಕ-ಪಕ್ಕದ ಮನೆಗೆ ನುಗ್ಗುವುದು ಒಗೆದು ಒಣ ಹಾಕಿರುವ ಮಹಿಳೆಯರ ಒಳ ಉಡುಪುಗಳನ್ನ ಕಳ್ಳತನ ಮಾಡಿಕೊಂಡು ಬಂದು ಹಾಕಿಕೊಂಡು ವಿಕೃತಿ ಮೆರೆಯುತ್ತಿದ್ದ. ಈ ವಿಚಾರ ತಿಳಿದ ಮಹಿಳೆಯರು, ಯುವತಿಯರು ಅಕ್ಷರಶಃ ಬೆಚ್ಚಿಬಿದ್ದಿದ್ದರು.

ಇದನ್ನೂ ಓದಿ: ಚಾಮರಾಜನಗರ: ಮಹಿಳೆಯರ ಒಳ ಉಡುಪುಗಳನ್ನೇ ಕದ್ದು ಧರಿಸುವ ಸೈಕೋ! ಸಿಸಿಟಿವಿಯಲ್ಲಿ ಸೆರೆಯಾಯ್ತು ವಿಕೃತಿಯ ದೃಶ್ಯ

ಸದ್ಯ ಟಿವಿ9 ಸುದ್ದಿ ಪ್ರಸಾರವಾದ 24 ಗಂಟೆಯಲ್ಲೇ ಆರೋಪಿಯ ಕೈಗೆ ಕೋಳ ಬಿದ್ದಿದೆ. ಆರೋಪಿಯನ್ನ ಬಂಧಿಸಿ ವಿಚಾರಣೆ ನಡೆಸಿರುವ ಪೊಲೀಸರು, ಆತನನ್ನು ಮಾನಸಿಕ ಚಿಕಿತ್ಸೆಗಾಗಿ ಮೈಸೂರಿನ ಕೆ.ಆರ್ ಆಸ್ಪತ್ರೆಗೆ ರವಾನಿಸಿದ್ದಾರೆ. ಸದ್ಯ ಮಹಿಳೆಯರು ನಿಟ್ಟುಸಿರು ಬಿಟ್ಟಿದ್ದಾರೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

ಸೂರಜ್ ಪ್ರಸಾದ್ ಎಸ್.ಎನ್

ಸೂರಜ್ ಪ್ರಸಾದ್ ಎಸ್.ಎನ್ ಆದ ನಾನು ಹುಟ್ಟಿದ್ದು ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿಯಲ್ಲಿ. ಬೆಳೆದಿದ್ದು ದಾವಣಗರೆ ಜಿಲ್ಲೆ ನ್ಯಾಮತಿ ತಾಲೂಕಿನಲ್ಲಿ. ಶಿವಮೊಗ್ಗದ ಸಹ್ಯಾದ್ರಿ ಕಾಲೇಜ್ ನಲ್ಲಿ ಪತ್ರಿಕೋದ್ಯಮದಲ್ಲಿ ಪದವಿಪೂರ್ವ ಶಿಕ್ಷಣ ಪಡೆದಿದ್ದು 2014ರಿಂದ ನನ್ನ ಎಲೆಕ್ಟ್ರಾನಿಕ್ ಮಾದ್ಯಮದ ವೃತ್ತಿ ಜೀವನವನ್ನ ಬೆಂಗಳೂರಿನಲ್ಲಿ ಕ್ರೈಂ ಬೀಟ್ ವರದಿಗಾರನಾಗಿ ಆರಂಭಿಸಿದ್ದು ಬೆಂಗಳೂರಿನಲ್ಲಿ 8 ವರ್ಷಗಳ ಕ್ರೈಂ ವರದಿಗಾರನಾಗಿ ಸೇವೆ ಸಲ್ಲಿಸಿ. ನಾಲ್ಕು ಸಂಸ್ಥೆಯಲ್ಲಿ ಕ್ರೈಂ ರಿಪೋರ್ಟರ್ ಹಾಗೂ ಕ್ರೈಂ ಇನ್ವೆಸ್ಟಿಗೇಟಿವ್ ವರದಿಗಾರನಾಗಿ ಹಾಗೂ ಸ್ಟಿಂಗ್ ಅಪರೇಷನ್ ಗಳನ್ನ ಮಾಡಿದ್ದೇನೆ. ಗೌರಿ ಲಂಕೇಶ್ ಕೊಲೆ ಕೇಸನ್ನ ರಾಜ್ಯದಲ್ಲೇ ಮೊದಲು ಬ್ರೇಕ್ ಮಾಡಿ ಈ ಹಿಂದಿನ ಸಂಸ್ಥೆಯಿಂದ ಪ್ರಶಂಸೆ ಪಡೆದಿರುತ್ನೇನೆ2019 ರಲ್ಲಿ ಪಿಎಸ್ಐ ಅಕ್ರಮದ ಸ್ಟಿಂಗ್ ಆಪರೇಷನ್ ಹಾಗೂ ಬೆಂಗಳೂರು ಸಿಂಥಟಿಕ್ ಡ್ರಗ್ ಮಾಫಿಯಾದ ಸ್ಟಿಂಗ್ ಆಪರೇಷನ್ ಮಾಡಿದ್ದು. ಕಳೆದ 10 ವರ್ಷಗಳಿಂದ ಸಕ್ರೀಯವಾಗಿ ಕಾರ್ಯ ನಿರ್ವಹಿಸುತ್ತಿದ್ದೇನೆ. ಟಿವಿ9 ಸಂಸ್ಥೆಗೆ ಮಂಡ್ಯ ಜಿಲ್ಲಾ ವರದಿಗಾರನಾಗಿ ಕೆಲಸ ಮಾಡಿ ಬಳಿಕ ಚಾಮರಾಜನಗರಕ್ಕೆ ವರ್ಗಾವಣೆಯಾಗಿ ಈಗ ಪ್ರಸ್ಥುತ ಚಾಮರಾಜನಗರ ಜಿಲ್ಲಾ ವರದಿಗಾರನಾಗಿ ಕೆಲಸ ಮಾಡುತ್ತಿದ್ದೇನೆ. ಹವ್ಯಾಸ ಅಡಿಗೆ ಮಾಡುವುದು, ಕ್ರಿಕೆಟ್ ಆಡುವುದು ಕ್ರೈಂ ಇನ್ವೆಷ್ಟಿಗೇಷನ್ ನಾವೆಲ್ ಗಳನ್ನ ಓದುವುದು.

Read More
Follow Us