AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನಾಟಿ ಔಷಧ ಪಡೆದು ಎರಡು ಕಿಡ್ನಿ ಕಳೆದುಕೊಂಡ ಯುವಕ: ವಿಚಿತ್ರ ಘಟನೆಗೆ ಸಾಕ್ಷಿಯಾದ ಗಡಿ ನಾಡು ಚಾಮರಾಜನಗರ

ಚಾಮರಾಜನಗರದ ಅನೂಪ್​​ ಎಂಬ ಯುವಕ ನಾಟಿ ಮದ್ದು ಔಷಧ ಪಡೆದು ತನ್ನ ಎರಡು ಕಿಡ್ನಿಗಳನ್ನು ಕಳೆದುಕೊಂಡಂತಹ ವಿಚಿತ್ರ ಘಟನೆಗೆ ಗಡಿ ನಾಡು ಸಾಕ್ಷಿಯಾಗಿದೆ. ನಾಟಿ ಮದ್ದು ಚಿಕಿತ್ಸೆ ಪಡೆದ ಬಳಿಕ ಯುವಕನಿಗೆ ಇದ್ದಕ್ಕಿದ್ದಂತೆ ವಾಂತಿ ಶುರುವಾಗಿದ್ದು, ವೈದ್ಯರ ತಪಾಸಣೆ ವೇಳೆ ಎರೆಡು ಕಿಡ್ನಿ ವೈಫಲ್ಯವಾಗಿರುವುದು ಕಂಡುಬಂದಿದೆ.

ನಾಟಿ ಔಷಧ ಪಡೆದು ಎರಡು ಕಿಡ್ನಿ ಕಳೆದುಕೊಂಡ ಯುವಕ: ವಿಚಿತ್ರ ಘಟನೆಗೆ ಸಾಕ್ಷಿಯಾದ ಗಡಿ ನಾಡು ಚಾಮರಾಜನಗರ
ಕಿಡ್ನಿ ಕಳೆದುಕೊಂಡ ಯುವಕ ಅನೂಪ್
Follow us
ಸೂರಜ್ ಪ್ರಸಾದ್ ಎಸ್.ಎನ್
| Updated By: ಗಂಗಾಧರ​ ಬ. ಸಾಬೋಜಿ

Updated on:Sep 02, 2023 | 3:19 PM

ಚಾಮರಾಜನಗರ, ಸೆಪ್ಟೆಂಬರ್​ 2: ನಾಟಿ ಮದ್ದು (naati medicine) ಔಷಧ ಪಡೆದು ಯುವಕಯೊರ್ವ ತನ್ನ ಎರಡು ಕಿಡ್ನಿಗಳನ್ನು ಕಳೆದುಕೊಂಡಂತಹ ಘಟನೆ ಗಡಿ ನಾಡು ಚಾಮರಾಜನಗರ ಜಿಲ್ಲೆಯಲ್ಲಿ ನಡೆದಿದೆ. ಅನೂಪ್ ಕಿಡ್ನಿ ಕಳೆದುಕೊಂಡ ಯುವಕ.​ ಜಾಂಡಿಸ್ ಬಂದ ಕಾರಣ ಯುವಕ ಅನೂಪ್​ ನಾಟಿ ಮದ್ದು ಚಿಕಿತ್ಸೆ ಪಡೆದಿದ್ದ. ನಾಟಿ ಮದ್ದು ಚಿಕಿತ್ಸೆ ಪಡೆದ ಬಳಿಕ ಇದ್ದಕ್ಕಿದ್ದಂತೆ ವಾಂತಿ ಶುರುವಾಗಿತ್ತು. ತಕ್ಷಣವೇ ಸರ್ಕಾರಿ ಆಸ್ಪತ್ರೆಗೆ ತೆರಳಿ ಚಿಕಿತ್ಸೆ ಪಡೆದಿದ್ದು, ವೈದ್ಯರ ತಪಾಸಣೆ ವೇಳೆ ಎರಡು ಕಿಡ್ನಿ ವೈಫಲ್ಯವಾಗಿರುವುದು ಬೆಳಕಿಗೆ ಬಂದಿದೆ.

ಚಾಮರಾಜನಗರದಲ್ಲಿ ಯುವಕ ಅನೂಪ್​​ ಪಾನಿಪೂರಿ ಅಂಗಡಿಯನ್ನ ಹಾಕಿ ಜೀವನ ಸಾಗಿಸುತ್ತಿದ್ದು, ಜಿಲ್ಲೆಯಲ್ಲಿ ಇವರ ಭಜರಂಗಿ ಚಾಟ್ಸ್ ಸಿಕ್ಕಾಪಟ್ಟೆ ಫೇಮಸ್​. ಇತ್ತ ಕಿಡ್ನಿ ವೈಫಲ್ಯದಿಂದ ಜೀವನ ಸಾಗಿಸಲು ನರಕ ಅನುಭವಿಸುವಂತ್ತಾಗಿದೆ.

ಇದನ್ನೂ ಓದಿ: ಪ್ರಯಾಣಿಕರ ಗಮನಕ್ಕೆ: ಚಾಮರಾಜನಗರ ಜನತೆಗೆ ಎದುರಾಗಲಿದೆ KSRTC ಬಸ್ ಸಮಸ್ಯೆ, ಕಾರಣವೇನು?

ಸದ್ಯ ಡಯಾಲಿಸಿಸ್ ಮಾಡಿಸಿಕೊಳ್ಳಲು ಹಣವಿಲ್ಲದೆ ಯುವಕ ಪರದಾಡುತ್ತಿದ್ದಾರೆ. ತಾಯಿ ತನ್ನ ಕಿಡ್ನಿ ದಾನ ಮಾಡಲು ಸಿದ್ದವಿದ್ದರು ಕೂಡ ಕಿಡ್ನಿ ಟ್ರಾನ್ಸ್ ಪ್ಲಟೇಷನ್ ಮಾಡಿಸಲು ಆಗದೆ ಕುಟುಂಬ ಒದ್ದಾಡುತ್ತಿದ್ದು, ಚಿಕಿತ್ಸೆಗೆ ಹಣ ಸಹಾಯ ಮಾಡುವಂತೆ ಸಂತ್ರಸ್ಥ ಯುವಕ ಮನವಿ ಮಾಡಿದ್ದಾರೆ.

ಮೃಗಶಿರಾ ಮಳೆಯ ನಕ್ಷತ್ರ ಅಸ್ತಮಾ ರೋಗಿಗಳಿಗೆ ವರದಾನ

ವಿಜಯಪುರ: ಕೆಮ್ಮು, ದಮ್ಮು, ಅಸ್ತಮಾ ಸೇರಿದಂತೆ ಇತರೇ ಕಾಯಿಲೆಗಳಿಂದ ಬಳಲುತ್ತಿದ್ದರೂ ಸಾಕಷ್ಟು ಸಮಯದವರೆಗೆ ಗುಣವಾಗದಿರುವವರಿಗೆ ಈ ಮೃಗಶಿರಾ ಮಳೆಯ ನಕ್ಷತ್ರ ಉತ್ತಮ ಸಮಯವಾಗಿರುತ್ತದೆ. ಈ ಸಮಯದಲ್ಲಿ ಆಯುರ್ವೇದ ಔಷಧಿಯೊಂದಿಗೆ ಜೀವಂತ ಮೀನಿನ ಮರಿಗಳನ್ನು ನುಂಗಿಸುವ ಮೂಲಕ ಆಯುರ್ವೇದಿಕ ಚಿಕಿತ್ಸೆಯೊಂದನ್ನು ಕೊಡಲಾಗುತ್ತದೆ. ವರ್ಷಕ್ಕೊಮ್ಮೆ ನಡೆಯುವ ಈ ಚಿಕಿತ್ಸೆಗೆ 1500ಕ್ಕೂ ಅಧಿಕ ರೋಗಿಗಳು ಬಂದು ಚಿಕಿತ್ಸೆ ಪಡೆದಿದ್ದಾರೆ.

ಇಂತಹದ್ದೊಂದು ಚಿಕಿತ್ಸೆ ಸಿಗುವುದು ವಿಜಯಪುರ ಜಿಲ್ಲೆಯ ಸಿಂದಗಿ ಪಟ್ಟಣದ ಸ್ವಾಮಿ ವಿವೇಕಾನಂದ ಸರ್ಕಲ್ ಬಳಿ ಇರುವ ಡಾ. ಭಾವಿಕಟ್ಟಿ ಕ್ಲಿನಿಕ್​ನಲ್ಲಿ. ಅದು ಕೂಡ ವರ್ಷಕ್ಕೊಮ್ಮೆ ಬರುವ ಮೃಗಶಿರಾ ಮಳೆಯ ನಕ್ಷತ್ರದ ದಿನದಂದು ಮಾತ್ರ ಎಂಬುದು ವಿಶೇಷ. ಜೂನ್ ತಿಂಗಳಿನಲ್ಲಿ ಬರುವ ಮೃಗಶಿರ ಮಳೆ ರೈತರ ಬಿತ್ತನೆಗೆ ಅನುಕೂಲ ಮಾಡುವುದು, ಎಲ್ಲೆಡೆ ಹಸಿರು ಚಿಗುರುವತೆ ಮಾಡುವ ಮೂಲಕ ಪ್ರಕೃತಿಗೆ ಮಾತ್ರವಲ್ಲದೇ ಮನುಷ್ಯರಿಗೂ ಕೂಡ ವರದಾನ ಎಂದರೆ ತಪ್ಪಾಗಲಿಕ್ಕಿಲ್ಲ.

ಇದನ್ನೂ ಓದಿ: ನಾರ್ಮಲ್ ಡೆಲವರಿ ಆದ್ರೆ ಮಾತ್ರ ಅಡ್ಮಿಟ್ ಮಾಡಿಕೊಳ್ತೀವಿ ಅಂತಾರೆ ಗುಂಡ್ಲುಪೇಟೆ ಸರ್ಕಾರಿ ಆಸ್ಪತ್ರೆ ವೈದ್ಯರು! ಹೀಗೇಕೆ?

ಯಾಕಂದರೆ ಬೇಸಿಗೆ ಬಿಸಿಲಿನಿಂದ ಬಳಲಿದ್ದವರಿಗೆ ತಂಪು ಎರೆಯುವ ಮೊದಲ ಮಳೆಯಾಗಿರುವ ಈ ಮೃಗಶಿರಾ ಬಂದು ಕೂಡುತ್ತಿದ್ದಂತೆ ಇಲ್ಲಿ ಮೀನುಮರಿ ನುಂಗಿಸುವ ಆಯುರ್ವೇದಿಕ ಚಿಕಿತ್ಸೆ ಶುರುವಾಗುತ್ತದೆ. ಕಳೆದ 70 ವರ್ಷಗಳಿಂದಲೂ ಡಾ. ಭಾವಿಕಟ್ಟಿಯವರ ಆಸ್ಪತ್ರೆಯಲ್ಲಿ ಇಂತಹದ್ದೊಂದು ಚಿಕಿತ್ಸೆಯನ್ನು ಉಚಿತವಾಗಿ ಕೊಡಲಾಗುತ್ತದೆ. ಕಳೆದ 70 ವರ್ಷಗಳ ಹಿಂದೆ ಡಾ. ಎಂ ಎಸ್ ಭಾವಿಕಟ್ಟಿ ಎಂಬುವವರು ಶುರು ಮಾಡಿರುವ ಈ ಆಯುರ್ವೇದಿಕ ಚಿಕಿತ್ಸೆ ತಲೆತಲಾಂತರದಿಂದ ಮುಂದುವರೆದಿದ್ದು, ಇದೀಗ ಅವರ ಮೊಮ್ಮಗ ಎಂಬಿಬಿಎಸ್ ವೈದ್ಯರಾಗಿರುವ ಡಾ. ಸಂಗಮೇಶ ಪಾಟೀಲ್ ಅವರು ಮುಂದುವರೆಸಿಕೊಂಡು ಬಂದಿದ್ದಾರೆ.

ಅನಾದಿಕಾಲದಿಂದ ಬಂದಿರುವ ಈ ವಿದ್ಯೆಯನ್ನು ವರ್ಷಕ್ಕೊಮ್ಮೆ ಮೃಗಶಿರಾ ನಕ್ಷತ್ರದಿಂದ ಹಾಗೂ ಮಾರನೇ ದಿನ ಉಚಿತವಾಗಿ ಕೊಡುವ ಮೂಲಕ ಅಸ್ತಮಾ ರೋಗಿಗಳ ಪಾಲಿಗೆ ದೇವರಾಗಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Published On - 3:18 pm, Sat, 2 September 23

ಖರ್ಗೆ ಕುಟುಂಬ ನನ್ನ ವಿರುದ್ಧ ನಡೆಸುತ್ತಿರುವ ಪಿತೂರಿ ಗೊತ್ತಿದೆ: ಚಲವಾದಿ
ಖರ್ಗೆ ಕುಟುಂಬ ನನ್ನ ವಿರುದ್ಧ ನಡೆಸುತ್ತಿರುವ ಪಿತೂರಿ ಗೊತ್ತಿದೆ: ಚಲವಾದಿ
ಮದ್ವೆಯಲ್ಲಿ ಡಾನ್ಸ್ ಮಾಡುತ್ತಿರುವಾಗಲೇ ಕುಸಿದುಬಿದ್ದು ಯುವಕ ಸಾವು
ಮದ್ವೆಯಲ್ಲಿ ಡಾನ್ಸ್ ಮಾಡುತ್ತಿರುವಾಗಲೇ ಕುಸಿದುಬಿದ್ದು ಯುವಕ ಸಾವು
ಮುಡಾವನ್ನು ಎಂಡಿಎ ಆಗಿ ಪರಿವರ್ತಿಸಿದ್ದಕ್ಕೆ ಸಿಂಎಂರನ್ನು ಶ್ವಾಘಿಸಿದ ಜಿಟಿಡಿ
ಮುಡಾವನ್ನು ಎಂಡಿಎ ಆಗಿ ಪರಿವರ್ತಿಸಿದ್ದಕ್ಕೆ ಸಿಂಎಂರನ್ನು ಶ್ವಾಘಿಸಿದ ಜಿಟಿಡಿ
ಸಿಂಧೂ ಜಲ ಒಪ್ಪಂದ ರದ್ದತಿಯ ಬಗ್ಗೆ ಕಳವಳ ವ್ಯಕ್ತಪಡಿಸಿದ ಪಾಕಿಸ್ತಾನಿ ರೈತರು
ಸಿಂಧೂ ಜಲ ಒಪ್ಪಂದ ರದ್ದತಿಯ ಬಗ್ಗೆ ಕಳವಳ ವ್ಯಕ್ತಪಡಿಸಿದ ಪಾಕಿಸ್ತಾನಿ ರೈತರು
16 ವರ್ಷದ ಬಳಿಕ ವಾಡಿಕೆಗಿಂತ ಮೊದಲೇ ಮುಂಗಾರು ಮಳೆ..ಏನು ನಿನ್ನ ಲೀಲೆ...!
16 ವರ್ಷದ ಬಳಿಕ ವಾಡಿಕೆಗಿಂತ ಮೊದಲೇ ಮುಂಗಾರು ಮಳೆ..ಏನು ನಿನ್ನ ಲೀಲೆ...!
ಕರಾವಳಿ ಮತ್ತು ಮಲೆನಾಡು ಜಿಲ್ಲೆಗಳಲ್ಲಿ ರೆಡ್ ಅಲರ್ಟ್ ಘೋಷಣೆ: ಹವಾಮಾನ ಇಲಾಖೆ
ಕರಾವಳಿ ಮತ್ತು ಮಲೆನಾಡು ಜಿಲ್ಲೆಗಳಲ್ಲಿ ರೆಡ್ ಅಲರ್ಟ್ ಘೋಷಣೆ: ಹವಾಮಾನ ಇಲಾಖೆ
ಸಚಿವ ಡಾ ಎಂಸಿ ಸುಧಾಕರ್ ನನ್ನ ರಾಜಕೀಯ ಗುರು: ಪ್ರದೀಪ್ ಈಶ್ವರ್
ಸಚಿವ ಡಾ ಎಂಸಿ ಸುಧಾಕರ್ ನನ್ನ ರಾಜಕೀಯ ಗುರು: ಪ್ರದೀಪ್ ಈಶ್ವರ್
ನಾವು ಸಂಸ್ಕಾರವಂತರು, ಸಚಿವೆ ಜೊತೆ ಕೆಟ್ಟದ್ದಾಗಿ ವರ್ತಿಸಲ್ಲ: ಕಾರ್ಯಕರ್ತೆ
ನಾವು ಸಂಸ್ಕಾರವಂತರು, ಸಚಿವೆ ಜೊತೆ ಕೆಟ್ಟದ್ದಾಗಿ ವರ್ತಿಸಲ್ಲ: ಕಾರ್ಯಕರ್ತೆ
KCET Result 2025: ಕರ್ನಾಟಕ ಸಿಇಟಿ ಫಲಿತಾಂಶ ಪ್ರಕಟ, ನೇರ ಪ್ರಸಾರ
KCET Result 2025: ಕರ್ನಾಟಕ ಸಿಇಟಿ ಫಲಿತಾಂಶ ಪ್ರಕಟ, ನೇರ ಪ್ರಸಾರ
ಸಿನಿಮಾ ರಿಲೀಸ್ ಎಂದು ಕನಸು ಕಂಡಿದ್ದರು, ಆದರೆ, ಮೊದಲ ದಿನ ಅವರೇ ಇಲ್ಲ
ಸಿನಿಮಾ ರಿಲೀಸ್ ಎಂದು ಕನಸು ಕಂಡಿದ್ದರು, ಆದರೆ, ಮೊದಲ ದಿನ ಅವರೇ ಇಲ್ಲ