Chamarajanagar News: ಚಾಮರಾಜನಗರ ಗರಗನಹಳ್ಳಿಯ ಶಾಲೆಯಲ್ಲಿ ಊಟ ಸೇವಿಸಿದ ಬಳಿಕ 7 ಮಕ್ಕಳು ಅಸ್ವಸ್ಥ

ಅಸ್ವಸ್ಥಗೊಂಡಿರುವ ಮಕ್ಕಳಿಗೆ ವರಿಯಾಲ, ಬೇಗೂರು ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಚಿಕಿತ್ಸೆ ನೀಡಲಾಗಿದ್ದು, 7 ಮಂದಿ ವಿದ್ಯಾರ್ಥಿಗಳನ್ನೂ ಡಿಸ್ಚಾರ್ಜ್‌ ಮಾಡಲಾಗಿದೆ.

Chamarajanagar News: ಚಾಮರಾಜನಗರ ಗರಗನಹಳ್ಳಿಯ ಶಾಲೆಯಲ್ಲಿ ಊಟ ಸೇವಿಸಿದ ಬಳಿಕ 7 ಮಕ್ಕಳು ಅಸ್ವಸ್ಥ
ಸಾಂದರ್ಭಿಕ ಚಿತ್ರ
Edited By:

Updated on: Jul 27, 2023 | 6:12 PM

ಚಾಮರಾಜನಗರ: ಮಧ್ಯಾಹ್ನ ಊಟ ಸೇವಿಸಿದ ಬಳಿಕ 7 ಶಾಲಾ ಮಕ್ಕಳು ಅಸ್ವಸ್ಥಗೊಂಡ ಘಟನೆ ಚಾಮರಾಜನಗರ (Chamarajanagar) ಜಿಲ್ಲೆಯ ಗುಂಡ್ಲುಪೇಟೆ ತಾಲೂಕಿನ ಗರಗನಹಳ್ಳಿಯ ಮೊರಾರ್ಜಿ ವಸತಿ ಶಾಲೆಯಲ್ಲಿ (Morarji Desai Residential School) ನಡೆದಿದೆ. ಒಟ್ಟು 210 ಶಾಲಾ ಮಕ್ಕಳು ಊಟ ಮಾಡಿದ್ದು, ಈ ಪೈಕಿ 7 ಮಕ್ಕಳು ಅಸ್ವಸ್ಥರಾಗಿದ್ದಾರೆ. ಊಟ ಮಾಡಿದ ನಂತರ ಮಕ್ಕಳಲ್ಲಿ ವಾಂತಿ ಭೇದಿ ಕಾಣಿಸಿಕೊಂಡಿದೆ. ತಕ್ಷಣವೇ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.

ಎಂದಿನಂತೆಯೇ ಮಧ್ಯಾಹ್ನಕ್ಕೆ ಮೆಂತೆ ಭಾತ್ ಮಾಡಲಾಗಿತ್ತು. ಅದನ್ನು ಸೇವಿಸಿದ ನಂತರ 7 ಮಂದಿ ವಿದ್ಯಾರ್ಥಿಗಳು ಅಸ್ವಸ್ಥಗೊಂಡರು. ಉಳಿದೆಲ್ಲ ವಿದ್ಯಾರ್ಥಿಗಳು ಸಹಜವಾಗಿಯೇ ಇದ್ದಾರೆ ಎಂದು ಶಾಲಾ ಮೂಲಗಳು ತಿಳಿಸಿವೆ.

ಅಸ್ವಸ್ಥಗೊಂಡಿರುವ ಮಕ್ಕಳಿಗೆ ವರಿಯಾಲ, ಬೇಗೂರು ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಚಿಕಿತ್ಸೆ ನೀಡಲಾಗಿದ್ದು, 7 ಮಂದಿ ವಿದ್ಯಾರ್ಥಿಗಳನ್ನೂ ಡಿಸ್ಚಾರ್ಜ್‌ ಮಾಡಲಾಗಿದೆ. ಮಕ್ಕಳಲ್ಲಿ ಗ್ಯಾಸ್ಟ್ರಿಕ್ ಸಮಸ್ಯೆ ಉಂಟಾಗಿತ್ತು. ಪರಿಣಾಮವಾಗಿ ಅವರು ಅಸ್ವಸ್ಥಗೊಂಡಿದ್ದರು ಎಂದು ವೈದ್ಯರು ಹೇಳಿದ್ದಾರೆ.

ಇದನ್ನೂ ಓದಿ: Chamarajanagar: ಕಲುಷಿತ ಆಹಾರ ಸೇವಿಸಿ ವಿದ್ಯಾರ್ಥಿಗಳು ಅಸ್ವಸ್ಥ ಪ್ರಕರಣ: ವಸತಿ ಶಾಲೆಯ ಪ್ರಿನ್ಸಿಪಾಲ್ ಸಸ್ಪೆಂಡ್

ಕೆಲವು ದಿನಗಳ ಹಿಂದೆ ಚಾಮರಾಜನಗರದ ಯಡವನಹಳ್ಳಿ ಗ್ರಾಮದ ಮೊರಾರ್ಜಿ ದೇಸಾಯಿ ವಸತಿ ಶಾಲೆಯಲ್ಲಿ ಕಲುಷಿತ ಆಹಾರ ಸೇವಿಸಿ 24 ಮಕ್ಕಳು ಅಸ್ವಸ್ಥಗೊಂಡಿದ್ದರು. ಪ್ರಕರಣಕ್ಕೆ ಸಂಬಂಧಿಸಿ ವಸತಿ ಶಾಲೆಯ ಪ್ರಾಂಶುಪಾಲ  ಕುಮಾರಸ್ವಾಮಿ ಎಂಬವರನ್ನು ಅಮಾನತುಗೊಳಿಸಲಾಗಿತ್ತು. ವಸತಿ ನಿಲಯದ ಶುಚಿತ್ವ, ಆಹಾರ ಸಾಮಾಗ್ರಿಗಳ ನಿರ್ವಹಣೆಯಲ್ಲಿ ಕರ್ತವ್ಯ ಲೋಪ ಆರೋಪ ಕೂಡ ಕೇಳಿಬಂದಿತ್ತು. ನಂತರ ಪ್ರಾಂಶುಪಾಲರ ವಿರುದ್ಧ ಕ್ರಮ ಕೈಗೊಳ್ಳಲಾಗಿತ್ತು.

ಇತ್ತೀಚೆಗೆ ರಾಜ್ಯದ ಹಲವೆಡೆ ಶಾಲೆಗಳಲ್ಲಿ ಹಾಗೂ ಇತರೆಡೆಗಳಲ್ಲಿ ಕಲುಷಿತ ನೀರು ಸೇವಿಸಿ ವಿದ್ಯಾರ್ಥಿಗಳು, ಜನರು ಅಸ್ವಸ್ಥಗೊಂಡ ವಿದ್ಯಮಾನಗಳು ವರದಿಯಾಗಿದ್ದವು.

ಇನ್ನಷ್ಟು ರಾಜಕೀಯ ಸುದ್ದಿಗಾಗಿ ಇಲ್ಲಿ ಕ್ಲಿಕ್ಕಿಸಿ

Suraj Prasad SN

ಸೂರಜ್ ಪ್ರಸಾದ್ ಎಸ್.ಎನ್ ಆದ ನಾನು ಹುಟ್ಟಿದ್ದು ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿಯಲ್ಲಿ. ಬೆಳೆದಿದ್ದು ದಾವಣಗರೆ ಜಿಲ್ಲೆ ನ್ಯಾಮತಿ ತಾಲೂಕಿನಲ್ಲಿ. ಶಿವಮೊಗ್ಗದ ಸಹ್ಯಾದ್ರಿ ಕಾಲೇಜ್ ನಲ್ಲಿ ಪತ್ರಿಕೋದ್ಯಮದಲ್ಲಿ ಪದವಿಪೂರ್ವ ಶಿಕ್ಷಣ ಪಡೆದಿದ್ದು 2014ರಿಂದ ನನ್ನ ಎಲೆಕ್ಟ್ರಾನಿಕ್ ಮಾದ್ಯಮದ ವೃತ್ತಿ ಜೀವನವನ್ನ ಬೆಂಗಳೂರಿನಲ್ಲಿ ಕ್ರೈಂ ಬೀಟ್ ವರದಿಗಾರನಾಗಿ ಆರಂಭಿಸಿದ್ದು ಬೆಂಗಳೂರಿನಲ್ಲಿ 8 ವರ್ಷಗಳ ಕ್ರೈಂ ವರದಿಗಾರನಾಗಿ ಸೇವೆ ಸಲ್ಲಿಸಿ. ನಾಲ್ಕು ಸಂಸ್ಥೆಯಲ್ಲಿ ಕ್ರೈಂ ರಿಪೋರ್ಟರ್ ಹಾಗೂ ಕ್ರೈಂ ಇನ್ವೆಸ್ಟಿಗೇಟಿವ್ ವರದಿಗಾರನಾಗಿ ಹಾಗೂ ಸ್ಟಿಂಗ್ ಅಪರೇಷನ್ ಗಳನ್ನ ಮಾಡಿದ್ದೇನೆ. ಗೌರಿ ಲಂಕೇಶ್ ಕೊಲೆ ಕೇಸನ್ನ ರಾಜ್ಯದಲ್ಲೇ ಮೊದಲು ಬ್ರೇಕ್ ಮಾಡಿ ಈ ಹಿಂದಿನ ಸಂಸ್ಥೆಯಿಂದ ಪ್ರಶಂಸೆ ಪಡೆದಿರುತ್ನೇನೆ2019 ರಲ್ಲಿ ಪಿಎಸ್ಐ ಅಕ್ರಮದ ಸ್ಟಿಂಗ್ ಆಪರೇಷನ್ ಹಾಗೂ ಬೆಂಗಳೂರು ಸಿಂಥಟಿಕ್ ಡ್ರಗ್ ಮಾಫಿಯಾದ ಸ್ಟಿಂಗ್ ಆಪರೇಷನ್ ಮಾಡಿದ್ದು. ಕಳೆದ 10 ವರ್ಷಗಳಿಂದ ಸಕ್ರೀಯವಾಗಿ ಕಾರ್ಯ ನಿರ್ವಹಿಸುತ್ತಿದ್ದೇನೆ. ಟಿವಿ9 ಸಂಸ್ಥೆಗೆ ಮಂಡ್ಯ ಜಿಲ್ಲಾ ವರದಿಗಾರನಾಗಿ ಕೆಲಸ ಮಾಡಿ ಬಳಿಕ ಚಾಮರಾಜನಗರಕ್ಕೆ ವರ್ಗಾವಣೆಯಾಗಿ ಈಗ ಪ್ರಸ್ಥುತ ಚಾಮರಾಜನಗರ ಜಿಲ್ಲಾ ವರದಿಗಾರನಾಗಿ ಕೆಲಸ ಮಾಡುತ್ತಿದ್ದೇನೆ. ಹವ್ಯಾಸ ಅಡಿಗೆ ಮಾಡುವುದು, ಕ್ರಿಕೆಟ್ ಆಡುವುದು ಕ್ರೈಂ ಇನ್ವೆಷ್ಟಿಗೇಷನ್ ನಾವೆಲ್ ಗಳನ್ನ ಓದುವುದು.

Read More
Follow Us