AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ವಿಷವಿಕ್ಕಿ ಹುಲಿಗಳ ಕೊಂದು ತುಂಡರಿಸುತ್ತಿದ್ದ ಕ್ರೂರಿ! ಅರಣ್ಯಾಧಿಕಾರಿಗಳ ನಿದ್ದೆಗೆಡಿಸಿದ್ದ ಮರಿ ವೀರಪ್ಪನ್ ಕೊನೆಗೂ ಬಂಧನ

5 ತಿಂಗಳಿಂದ ಅರಣ್ಯಾಧಿಕಾರಿಗಳಿಗೆ ಸವಾಲಾಗಿದ್ದ 'ಮರಿ ವೀರಪ್ಪನ್' ಗೋವಿಂದನನ್ನು ಕೊನೆಗೂ ಮೈಸೂರಿನಲ್ಲಿ ಬಂಧಿಸಲಾಗಿದೆ. ಚಾಮರಾಜನಗರದ ಮಲೆ ಮಹದೇಶ್ವರ ವನ್ಯಧಾಮದಲ್ಲಿ ಹುಲಿಗೆ ವಿಷವಿಟ್ಟು ಕೊಂದ ಪ್ರಕರಣದಲ್ಲಿ ಈತ ಪ್ರಮುಖ ಆರೋಪಿಯಾಗಿದ್ದ. ಕಾರ್ಬೊಫ್ಯೂರಾನ್ ಬಳಸಿ ಹುಲಿಗಳನ್ನು ಕೊಂದು ತುಂಡರಿಸುತ್ತಿದ್ದ ಈತನ ಕ್ರೂರ ಕೃತ್ಯಕ್ಕೆ ಈಗ ಅಂತ್ಯ ಹಾಡಲಾಗಿದೆ. 30 ಅರಣ್ಯ ಸಿಬ್ಬಂದಿಗಳ ಬೃಹತ್ ಕಾರ್ಯಾಚರಣೆಯಿಂದ ಈ ಬಂಧನ ಸಾಧ್ಯವಾಗಿದೆ.

ವಿಷವಿಕ್ಕಿ ಹುಲಿಗಳ ಕೊಂದು ತುಂಡರಿಸುತ್ತಿದ್ದ ಕ್ರೂರಿ! ಅರಣ್ಯಾಧಿಕಾರಿಗಳ ನಿದ್ದೆಗೆಡಿಸಿದ್ದ ಮರಿ ವೀರಪ್ಪನ್ ಕೊನೆಗೂ ಬಂಧನ
ಮರಿ ವೀರಪ್ಪನ್ ಗೋವಿಂದ ಬಂಧನ
ಸೂರಜ್ ಪ್ರಸಾದ್ ಎಸ್.ಎನ್
| Edited By: |

Updated on:Jan 08, 2026 | 9:22 AM

Share

ಚಾಮರಾಜನಗರ, ಜ.8: ಬರೋಬ್ಬರಿ 5 ತಿಂಗಳಿನಿಂದ ಅರಣ್ಯಾಧಿಕಾರಿಗಳ ನಿದ್ದೆಗೆಡಿಸಿದ್ದ ನಟೋರಿಯಸ್ ಗೋವಿಂದ (Govinda) ಅಲಿಯಾಸ್​​ ಮರಿ ವೀರಪ್ಪನ್ ಇದೀಗ ಕೊನೆಗೂ ಅರಣ್ಯಾಧಿಕಾರಿಗಳ ಕೈಯಲ್ಲಿ ಲಾಕ್ ಆಗಿದ್ದಾನೆ. ಈ ಮರಿ ವೀರಪ್ಪನ್ ಬಂಧನ ಮಲೆ ಮಹದೇಶ್ವರ ವನ್ಯ ಜೀವಿಧಾಮದ ಸಿಬ್ಬಂದಿಗೆ ದೊಡ್ಡ ಸವಾಲಾಗಿತ್ತು. ಇದೀಗ ನಿರಂತರ ಕಾರ್ಯಚರಣೆಯ ನಂತರ ಗೋವಿಂದನ್ನು ಬಂಧಿಸಲಾಗಿದೆ. ಪಚ್ಚೆದೊಡ್ಡಿ ಗ್ರಾಮದ ಬಳಿ ಹುಲಿಯನ್ನು ಕೊಂದು ಮೂರು ಭಾಗಗಳಾಗಿ ತುಂಡರಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಈ ನಟೋರಿಯಸ್ ಗೋವಿಂದ ಹುಡುಕಾಟ ನಡೆದಿತ್ತು. ಚಾಮರಾಜನಗರ ಜಿಲ್ಲೆ ಹನೂರು ತಾಲೂಕಿನ ಪಚ್ಚೆದೊಡ್ಡಿ ಕಾಡಂಚಿನ ಗ್ರಾಮದಲ್ಲಿ ಈ ನಟೋರಿಯಸ್ ಗೋವಿಂದ ತಿರುಗಾಡುತ್ತಿದ್ದ ಎಂದು ಹೇಳಲಾಗಿತ್ತು.

ಇದೀಗ ಅರಣ್ಯಾಧಿಕಾರಿಗಳು ಮೈಸೂರಿನ ರೈಲ್ವೆ ನಿಲ್ಧಾಣದಲ್ಲಿ ಆರೋಪಿಯನ್ನು ಸೆರೆ ಹಿಡಿದಿದ್ದಾರೆ. ಗೋವಿಂದ ಹುಲಿಗಳಿಗೆ ಕಾರ್ಬೊಫ್ಯೂರಾನ್ ವಿಷ ಹಾಕಿ ಸತ್ತ ಬಳಿಕ ದೇಹವನ್ನು ಮೂರು ತುಂಡಗಳಾಗಿ ಕತ್ತರಿಸುತ್ತಿದ್ದ ಎಂದು ಅಧಿಕಾರಿಗಳು ಹೇಳಿದ್ದಾರೆ. ಈ ಪ್ರಕರಣ ಅರಣ್ಯಾಧಿಕಾರಿಗಳಿಗೆ ದೊಡ್ಡ ತಲೆನೋವಾಗಿತ್ತು. ಇದೇ ಪ್ರಕರಣಕ್ಕೆ ಸಂಬಂಧಿಸಿದಂತೆ ಈ ಹಿಂದೆ ಪಚ್ಚಮಲ್ಲ, ಸಿದ್ದ, ಸಂಪು, ಚಂದು ಹಾಗೂ ಅಭಿಷೇಕ್ ಎಂಬುವವರನ್ನು ಬಂಧಿಸಲಾಗಿತ್ತು. ಆದರೆ ನ್ಯಾಯಾಂಗ ಬಂಧನದಲ್ಲಿದ್ದ ಆರೋಪಿಗಳಿಗೆ ಇತ್ತೀಚೆಗಷ್ಟೆ ಕೊಳ್ಳೇಗಾಲ ಜೆಎಂಎಫ್ ಸಿ ನ್ಯಾಯಾಲಯದಿಂದ ಜಾಮೀನು ಮಂಜೂರು ಮಾಡಲಾಗಿತ್ತು. ಆದ್ರೆ 5 ತಿಂಗಳಿಂದ ಅರಣ್ಯ ಅಧಿಕಾರಿಗಳ ಕೈಗೆ ಸಿಗದೆ ಆಟವಾಡಿಸುತ್ತಿದ್ದ ಗೋವಿಂದನ ಖಚಿತ ಮಾಹಿತಿ ಸಿಕ್ಕ ತಕ್ಷಣ ಅರಣ್ಯಾಧಿಕಾರಿಗಳು ಅವನನ್ನು ಬಂಧಿಸಿದ್ದಾರೆ. ಬರೋಬ್ಬರಿ 30 ಮಂದಿ ಅರಣ್ಯ ಸಿಬ್ಬಂದಿಗಳು ಬೃಹತ್ ಕಾರ್ಯಾಚರಣೆ ನಡೆಸಿದ್ದಾರೆ.

ಇದನ್ನೂ ಓದಿ: ಗ್ರಾಹಕರ ಮೊಗದಲ್ಲಿ ಮಂದಹಾಸ ತಂದ ‘ಕೆಂಪು ರಾಣಿ’, ಸಂಕಷ್ಟದಲ್ಲಿ ರೈತರು

ಯಾರು ಈ ‘ಮರಿ ವೀರಪ್ಪನ್’?

ಕಾಡುಗಳ್ಳ ವೀರಪ್ಪನ್ ಸತ್ತು ಹಲವು ವರ್ಷಗಳಾಗಿದ್ದರೂ, ಅವನಷ್ಟೇ ಅರಣ್ಯ ಪ್ರದೇಶದಲ್ಲಿ ಕ್ರೌರ್ಯ ಮೆರೆವ ಈ ಗೋವಿಂದನ್ನು ಮರಿ ವೀರಪ್ಪನ್​​ ಎಂದು ಕರೆಯಾಲಾಗಿತ್ತು. ಇತ್ತೀಚೆಗೆ (ನವೆಂಬರ್ 2025 ರಲ್ಲಿ) ಚಾಮರಾಜನಗರ ಜಿಲ್ಲೆಯ ಮಲೆ ಮಹದೇಶ್ವರ ವನ್ಯಧಾಮದಲ್ಲಿ ನಡೆದ ಭೀಕರ ಹುಲಿ ಬೇಟೆ ಪ್ರಕರಣಕ್ಕೆ ಸಂಬಂಧಿಸಿದಂತೆ ಈ ಹೆಸರು ಮತ್ತೆ ಚರ್ಚೆಗೆ ಬಂದಿದೆ. ಮಲೆ ಮಹದೇಶ್ವರ ವನ್ಯಧಾಮದ ಪಚ್ಚೆದೊಡ್ಡಿ ಗಸ್ತಿನಲ್ಲಿ ಚಿರತೆ ಅಥವಾ ಹುಲಿಗಳನ್ನು ಗುರಿಯಾಗಿಸಿ ಇರಿಸಿದ್ದ ವಿಷವನ್ನು ಸೇವಿಸಿ ದೊಡ್ಡ ಹುಲಿಯೊಂದು ಸಾವನ್ನಪ್ಪಿತ್ತು. ಅದನ್ನು ಮೂರು ತುಂಡುಗಳಾಗಿ ಕತ್ತರಿಸಿ ಕಾಡಿನೊಳಗೆ ಬಿಸಾಡಿದ್ದರು. ಈ ಭೀಕರ ಕೃತ್ಯ ಅರಣ್ಯ ಇಲಾಖೆ ಮತ್ತು ಪೊಲೀಸರನ್ನು ಬೆಚ್ಚಿಬೀಳಿಸಿತ್ತು. ಇದು ಕೇವಲ ಬೇಟೆಯಲ್ಲ, ಅರಣ್ಯ ಅಧಿಕಾರಿಗಳ ಮೇಲಿನ ಆಕ್ರೋಶ ಎಂದು ಹೇಳಲಾಗಿತ್ತು. ಇದೀಗ ಆತನ ಬಂಧನ ಮಾಡಲಾಗಿದೆ.

ರಾಜ್ಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 8:47 am, Thu, 8 January 26

Follow Us
ಕೇದಾರನಾಥಕ್ಕೆ ಹೊರಟಿದ್ದೀರಾ? ಮೊದಲ ದಿನವೇ ಭಕ್ತಸಾಗರದಿಂದ ಕಾಲ್ತುಳಿತ
ಕೇದಾರನಾಥಕ್ಕೆ ಹೊರಟಿದ್ದೀರಾ? ಮೊದಲ ದಿನವೇ ಭಕ್ತಸಾಗರದಿಂದ ಕಾಲ್ತುಳಿತ
20 ಎಸೆತಗಳಲ್ಲಿ ಅರ್ಧಶತಕ ಚಚ್ಚಿದ ದೇವದತ್ ಪಡಿಕ್ಕಲ್
20 ಎಸೆತಗಳಲ್ಲಿ ಅರ್ಧಶತಕ ಚಚ್ಚಿದ ದೇವದತ್ ಪಡಿಕ್ಕಲ್
ಒಳಮೀಸಲಾತಿ ಯಾರಿಗೆ ಎಷ್ಟು? ಹೇಗೆ ಜಾರಿಯಾಗುತ್ತೆ? ವಿವರಿಸಿದ ಸಚಿವ ಮಹದೇವಪ್ಪ
ಒಳಮೀಸಲಾತಿ ಯಾರಿಗೆ ಎಷ್ಟು? ಹೇಗೆ ಜಾರಿಯಾಗುತ್ತೆ? ವಿವರಿಸಿದ ಸಚಿವ ಮಹದೇವಪ್ಪ
ಸಿಮೆಂಟ್ ಟ್ಯಾಂಕರ್, ಬಸ್ ಹಾಗೂ ಆಟೋ ನಡುವೆ ಸರಣಿ ಅಪಘಾತ: 10 ಜನರಿಗೆ ಗಾಯ
ಸಿಮೆಂಟ್ ಟ್ಯಾಂಕರ್, ಬಸ್ ಹಾಗೂ ಆಟೋ ನಡುವೆ ಸರಣಿ ಅಪಘಾತ: 10 ಜನರಿಗೆ ಗಾಯ
ಬಿಜೆಪಿಗೆ ಸೇರ್ಪಡೆಯಾದ ರಾಘವ್ ಚಡ್ಡಾ, ಸಂದೀಪ್ ಪಾಠಕ್, ಅಶೋಕ್ ಮಿತ್ತಲ್
ಬಿಜೆಪಿಗೆ ಸೇರ್ಪಡೆಯಾದ ರಾಘವ್ ಚಡ್ಡಾ, ಸಂದೀಪ್ ಪಾಠಕ್, ಅಶೋಕ್ ಮಿತ್ತಲ್
ರಾಜ್​ಕುಮಾರ್ ಹುಟ್ಟುಹಬ್ಬ: ಅಣ್ಣಾವ್ರ ಸಮಾಧಿಗೆ ಪೂಜೆ ಸಲ್ಲಿಸಿದ ಅಶ್ವಿನಿ
ರಾಜ್​ಕುಮಾರ್ ಹುಟ್ಟುಹಬ್ಬ: ಅಣ್ಣಾವ್ರ ಸಮಾಧಿಗೆ ಪೂಜೆ ಸಲ್ಲಿಸಿದ ಅಶ್ವಿನಿ
ಗುಡ್​ ನ್ಯೂಸ್: 56,400 ಹುದ್ದೆಗಳ ನೇಮಕಾತಿಗೆ ಗ್ರೀನ್ ಸಿಗ್ನಲ್
ಗುಡ್​ ನ್ಯೂಸ್: 56,400 ಹುದ್ದೆಗಳ ನೇಮಕಾತಿಗೆ ಗ್ರೀನ್ ಸಿಗ್ನಲ್
ಒಳ ಮೀಸಲಾತಿ ಗೊಂದಲಕ್ಕೆ ತೆರೆ ಎಳೆದ ರಾಜ್ಯ ಸರ್ಕಾರ
ಒಳ ಮೀಸಲಾತಿ ಗೊಂದಲಕ್ಕೆ ತೆರೆ ಎಳೆದ ರಾಜ್ಯ ಸರ್ಕಾರ
ಬಾಗಲಕೋಟೆ ವಿವಿ ಘಟಿಕೋತ್ಸವ: ರೈತನ ಮಗಳಿಗೆ ಗೋಲ್ಡ್​​ ಮೆಡಲ್
ಬಾಗಲಕೋಟೆ ವಿವಿ ಘಟಿಕೋತ್ಸವ: ರೈತನ ಮಗಳಿಗೆ ಗೋಲ್ಡ್​​ ಮೆಡಲ್
BSNL ಸಿಬ್ಬಂದಿ ಸೋಗಿನಲ್ಲಿ ಕಳ್ಳತನ ಮಾಡುತ್ತಿದ್ದ ಅಂತಾರಾಜ್ಯ ಗ್ಯಾಂಗ್ ಬಂಧನ
BSNL ಸಿಬ್ಬಂದಿ ಸೋಗಿನಲ್ಲಿ ಕಳ್ಳತನ ಮಾಡುತ್ತಿದ್ದ ಅಂತಾರಾಜ್ಯ ಗ್ಯಾಂಗ್ ಬಂಧನ