ಅರ್ಥಿಕ ಹೊರೆ ನೆಪವೊಡ್ಡಿ 7 ವಿವಿಗಳ ವಿಲೀನಕ್ಕೆ ಶಿಕ್ಷಣ ಸಚಿವ ಸುಧಾಕರ್ ಚಿಂತನೆ- ವಿದ್ಯಾರ್ಥಿಗಳ ಪಾಲಿಗೆ ಕಂಟಕ

ಅರ್ಥಿಕ ಹೊರೆಯ ನೆಪವೊಡ್ಡುತ್ತಿರುವ ರಾಜ್ಯ ಸರ್ಕಾರ ಒಂದು ವೇಳೆ ಚಾಮರಾಜನಗರದ ಅಂಬೇಡ್ಕರ್ ವಿವಿಯನ್ನ ಮೈಸೂರಿನ ಮಾನಸ ಗಂಗೊತ್ರಿ ಮೂಲ ವಿವಿಗೆ ವಿಲೀನ ಮಾಡಿದ್ದೇ ಆದಲ್ಲಿ ಸಾವಿರಾರು ವಿದ್ಯಾರ್ಥಿಗಳು ಅತಂತ್ರಕ್ಕೆ ಸಿಲುಕಲಿದ್ದಾರೆ.

ಅರ್ಥಿಕ ಹೊರೆ ನೆಪವೊಡ್ಡಿ 7 ವಿವಿಗಳ ವಿಲೀನಕ್ಕೆ ಶಿಕ್ಷಣ ಸಚಿವ ಸುಧಾಕರ್ ಚಿಂತನೆ- ವಿದ್ಯಾರ್ಥಿಗಳ ಪಾಲಿಗೆ ಕಂಟಕ
ಅರ್ಥಿಕ ಹೊರೆ ನೆಪವೊಡ್ಡಿ 7 ವಿವಿಗಳ ವಿಲೀನಕ್ಕೆ ಶಿಕ್ಷಣ ಸಚಿವ ಸುಧಾಕರ್ ಚಿಂತನೆ-
Edited By: ಸಾಧು ಶ್ರೀನಾಥ್​

Updated on: Dec 12, 2023 | 2:03 PM

ಶೈಕ್ಷಣಿಕವಾಗಿ ಹಿಂದುಳಿದ ಜಿಲ್ಲೆ ಎಂಬ ಅಪಖ್ಯಾತಿ ಹೊಂದಿರುವ ಗಡಿ ನಾಡು ಚಾಮರಾಜನಗರ (chamarajanagar) ಜಿಲ್ಲೆಯಲ್ಲಿ ನೂತನ ಅಂಬೇಡ್ಕರ್ ವಿಶ್ವ ವಿದ್ಯಾನಿಲಯ ಸ್ಥಾಪಿಸುವ ಮೂಲಕ ಶೈಕ್ಷಣಿಕವಾಗಿ ಮುಂದುವರೆಯಲು ಹಿಂದಿನ ಸರ್ಕಾರ ಮುಂದಾಗಿತ್ತು. ಅದೇ ರೀತಿ ನೂತನ ವಿವಿ ಸಹ ಸ್ಥಾಪನೆಯಾಗಿ ಕಾಡಂಚಿನ ಬಡ ವಿದ್ಯಾರ್ಥಿಗಳ (students) ಪಾಲಿಗೆ ಆಶಾಕಿರಣವಾಗಿತ್ತು. ಆದ್ರೆ ಈಗ ಉನ್ನತ ಶಿಕ್ಷಣ ಸಚಿವರ ( Higher Education Minister Dr M C Sudhakar) ಆ ಒಂದು ಮಾತು ಉಪನ್ಯಾಸಕರು ಹಾಗೂ ವಿದ್ಯಾರ್ಥಿಗಳಲ್ಲಿ ಆತಂಕ ಸೃಷ್ಟಿಸಿದೆ. ಈ ಕುರಿತಾದ ಒಂದು ರಿಪೋರ್ಟ್ ನಿಮ್ಮ ಮುಂದೆ.

ಶೇಕಡ 52 ಪರ್ಸೆಂಟ್ ದಟ್ಟ ಕಾನನ ಇನ್ನುಳಿದ 48 ಶೇಕಡ ಭೂ ಪ್ರದೇಶ ಹೊಂದಿರುವ ಚಾಮರಾಜನಗರ ಜಿಲ್ಲೆಯು ಕೇರಳ ಹಾಗೂ ತಮಿಳುನಾಡಿನ ಗಡಿ ಹಂಚಿಕೊಳ್ಳುವ ಮೂಲಕ ಅಕ್ಷರಶಃ ಗಡಿನಾಡು ಎಂದು ಹೆಸರುವಾಸಿಯಾಗಿದೆ. ಇನ್ನು, ಶೈಕ್ಷಣಿಕವಾಗಿ ಹಿಂದುಳಿದ ಜಿಲ್ಲೆ, ಶಾಪಗ್ರಸ್ಥ ಜಿಲ್ಲೆ ಎಂಬ ಹಣೆಪಟ್ಟಿಗಳನ್ನೂ ಹೊಂದಿರುವ ಚಾಮರಾಜನಗರ ಜಿಲ್ಲೆಯನ್ನು ಶೈಕ್ಷಣಿಕವಾಗಿ ಮುಂದಕ್ಕೆ ತರಲು ಕಳೆದ ಬಿಜೆಪಿ ಸರ್ಕಾರವು ಮೈಸೂರು ವಿವಿಯಿಂದ (parent university) ಪ್ರತ್ಯೇಕ ಗೊಳಿಸಿ ನೂತನವಾಗಿ ಚಾಮರಾಜನಗರ ಅಂಬೇಡ್ಕರ್ ವಿವಿಯನ್ನ ಸ್ಥಾಪಿಸಿತ್ತು.

ಅಂಬೇಡ್ಕರ್ ವಿವಿ ಸ್ಥಾಪನೆಯಾದ ಬೆನ್ನಲ್ಲೆ ಮೈಸೂರಿಗೆ ತೆರಳಿ ಉನ್ನತ ಶಿಕ್ಷಣ ಪಡೆಯಲು ಸಾಧ್ಯವಾಗದ ಬಡ ವಿದ್ಯಾರ್ಥಿಗಳು ಚಾಮರಾಜನಗದ ನೂತನ ವಿವಿಗೆ ಅಡ್ಮಿಷನ್ ಆಗುವ ಮೂಲಕ ವ್ಯಾಸಾಂಗ ಮಾಡುವ ಆಸಕ್ತಿ ತೋರಿಸಿದ್ದರು. ಎಲ್ಲವೂ ಸರಿ ಹೋಯ್ತು ಅನ್ನುವಷ್ಟರಲ್ಲಿ ಈಗ ಸಾವಿರಾರು ವಿದ್ಯಾರ್ಥಿಗಳ ಪಾಲಿಗೆ ಬರ ಸಿಡಿಲು ಬಡಿತಂದಾಗಿದೆ. ಉನ್ನತ ಶಿಕ್ಷಣ ಸಚಿವ ಎಂ.ಸಿ ಸುಧಾಕರ್ ಅವರು ನೂತನ 7 ವಿವಿಯನ್ನ ಮೂಲ ವಿವಿಗೆ ವಿಲೀನ ಗೊಳಿಸುವ (merger of 7 universities with parent university) ಮಾತನ್ನಾಡಿದ್ದು, ಈಗ ಸಾವಿರಾರು ಬಡ ವಿದ್ಯಾರ್ಥಿಗಳು ಸಂಕಷ್ಟದಲ್ಲಿ ಸಿಲುಕುವಂತಾಗಿದೆ.

ಅಸಲಿಗೆ ಚಾಮರಾಜನಗರ ಅಂಬೇಡ್ಕರ್ ವಿವಿ ಸ್ಥಾಪನೆಯಾದ ಬೆನ್ನಲ್ಲೆ ಕಾಡಂಚಿನ ಬಡ ಸೋಲಿಗ ಹಾಗೂ ಬುಡಕಟ್ಟು ವಿದ್ಯಾರ್ಥಿಗಳು ಹೆಚ್ಚುಹೆಚ್ಚಾಗಿ ಅಡ್ಮಿಷನ್ ಆಗುವ ಮೂಲಕ ಉನ್ನತ ಶಿಕ್ಷಣ ವ್ಯಾಸಂಗ ಮಾಡಲು ಮುಂದಾಗಿದ್ದರು. ಬಿಳಿಗಿರಿರಂಗನ ಬೆಟ್ಟ, ಮಲೆ ಮಹದೇಶ್ವರ ಬೆಟ್ಟದ ಗೋಪಿನಾಥಂ ನಿಂದಲೂ ಸಹ ವಿದ್ಯಾರ್ಥಿಗಳು ಬಂದು ವ್ಯಾಸಾಂಗ ಮಾಡುತ್ತಿದ್ದಾರೆ. 22 ಕಾಲೇಜ್ ಗಳು ಸಹ ಈ ಅಂಬೇಡ್ಕರ್ ವಿವಿಯ ಅಡಿಯಲ್ಲಿ ಬರುತ್ತೆ. 7 ಸಾವಿರ ವಿದ್ಯಾರ್ಥಿಗಳು ಸಹ ಇಲ್ಲಿ ವ್ಯಾಸಂಗ ಮಾಡುತ್ತಿದ್ದಾರೆ. ಅಂತಹುದರಲ್ಲಿ ಈಗ ಇದ್ದಕ್ಕಿದ್ದಂತೆ ಅಂಬೇಡ್ಕರ್ ವಿವಿಯನ್ನ ಮೂಲ ವಿವಿಯಾದ ಮೈಸೂರು ವಿವಿಗೆ ವಿಲೀನಗೊಳಿಸಿದ್ರೆ ವಿದ್ಯಾರ್ಥಿಗಳ ಬದುಕು ಅಡ್ಡಕತ್ತರಿಗೆ ಸಿಲುಕುವಂತಾಗುತ್ತೆ ಎನ್ನುತ್ತಾರೆ ಇಲ್ಲಿನ ವಿದ್ಯಾರ್ಥಿನಿಯರು.

ಅರ್ಥಿಕ ಹೊರೆಯ ನೆಪವೊಡ್ಡುತ್ತಿರುವ ರಾಜ್ಯ ಸರ್ಕಾರ ಒಂದು ವೇಳೆ ಚಾಮರಾಜನಗರದ ಅಂಬೇಡ್ಕರ್ ವಿವಿಯನ್ನ ಮೈಸೂರಿನ ಮಾನಸ ಗಂಗೊತ್ರಿ ಮೂಲ ವಿವಿಗೆ ವಿಲೀನ ಮಾಡಿದ್ದೇ ಆದಲ್ಲಿ ಸಾವಿರಾರು ವಿದ್ಯಾರ್ಥಿಗಳು ಅಂತಂತ್ರಕ್ಕೆ ಸಿಲುಕುವಂತಾಗೊದ್ರಲ್ಲಿ ಎರಡು ಮಾತಿಲ್ಲ. ಉನ್ನತ ಶಿಕ್ಷಣ ಸಚಿವರ ಆ ಒಂದು ಮಾತು ವಿದ್ಯಾರ್ಥಿಗಳ ಪಾಲಿಗೆ ಮುಳುವಾಗುವುದಂತೂ ಸುಳ್ಳಲ್ಲ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Suraj Prasad SN

ಸೂರಜ್ ಪ್ರಸಾದ್ ಎಸ್.ಎನ್ ಆದ ನಾನು ಹುಟ್ಟಿದ್ದು ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿಯಲ್ಲಿ. ಬೆಳೆದಿದ್ದು ದಾವಣಗರೆ ಜಿಲ್ಲೆ ನ್ಯಾಮತಿ ತಾಲೂಕಿನಲ್ಲಿ. ಶಿವಮೊಗ್ಗದ ಸಹ್ಯಾದ್ರಿ ಕಾಲೇಜ್ ನಲ್ಲಿ ಪತ್ರಿಕೋದ್ಯಮದಲ್ಲಿ ಪದವಿಪೂರ್ವ ಶಿಕ್ಷಣ ಪಡೆದಿದ್ದು 2014ರಿಂದ ನನ್ನ ಎಲೆಕ್ಟ್ರಾನಿಕ್ ಮಾದ್ಯಮದ ವೃತ್ತಿ ಜೀವನವನ್ನ ಬೆಂಗಳೂರಿನಲ್ಲಿ ಕ್ರೈಂ ಬೀಟ್ ವರದಿಗಾರನಾಗಿ ಆರಂಭಿಸಿದ್ದು ಬೆಂಗಳೂರಿನಲ್ಲಿ 8 ವರ್ಷಗಳ ಕ್ರೈಂ ವರದಿಗಾರನಾಗಿ ಸೇವೆ ಸಲ್ಲಿಸಿ. ನಾಲ್ಕು ಸಂಸ್ಥೆಯಲ್ಲಿ ಕ್ರೈಂ ರಿಪೋರ್ಟರ್ ಹಾಗೂ ಕ್ರೈಂ ಇನ್ವೆಸ್ಟಿಗೇಟಿವ್ ವರದಿಗಾರನಾಗಿ ಹಾಗೂ ಸ್ಟಿಂಗ್ ಅಪರೇಷನ್ ಗಳನ್ನ ಮಾಡಿದ್ದೇನೆ. ಗೌರಿ ಲಂಕೇಶ್ ಕೊಲೆ ಕೇಸನ್ನ ರಾಜ್ಯದಲ್ಲೇ ಮೊದಲು ಬ್ರೇಕ್ ಮಾಡಿ ಈ ಹಿಂದಿನ ಸಂಸ್ಥೆಯಿಂದ ಪ್ರಶಂಸೆ ಪಡೆದಿರುತ್ನೇನೆ2019 ರಲ್ಲಿ ಪಿಎಸ್ಐ ಅಕ್ರಮದ ಸ್ಟಿಂಗ್ ಆಪರೇಷನ್ ಹಾಗೂ ಬೆಂಗಳೂರು ಸಿಂಥಟಿಕ್ ಡ್ರಗ್ ಮಾಫಿಯಾದ ಸ್ಟಿಂಗ್ ಆಪರೇಷನ್ ಮಾಡಿದ್ದು. ಕಳೆದ 10 ವರ್ಷಗಳಿಂದ ಸಕ್ರೀಯವಾಗಿ ಕಾರ್ಯ ನಿರ್ವಹಿಸುತ್ತಿದ್ದೇನೆ. ಟಿವಿ9 ಸಂಸ್ಥೆಗೆ ಮಂಡ್ಯ ಜಿಲ್ಲಾ ವರದಿಗಾರನಾಗಿ ಕೆಲಸ ಮಾಡಿ ಬಳಿಕ ಚಾಮರಾಜನಗರಕ್ಕೆ ವರ್ಗಾವಣೆಯಾಗಿ ಈಗ ಪ್ರಸ್ಥುತ ಚಾಮರಾಜನಗರ ಜಿಲ್ಲಾ ವರದಿಗಾರನಾಗಿ ಕೆಲಸ ಮಾಡುತ್ತಿದ್ದೇನೆ. ಹವ್ಯಾಸ ಅಡಿಗೆ ಮಾಡುವುದು, ಕ್ರಿಕೆಟ್ ಆಡುವುದು ಕ್ರೈಂ ಇನ್ವೆಷ್ಟಿಗೇಷನ್ ನಾವೆಲ್ ಗಳನ್ನ ಓದುವುದು.

Read More
Follow Us