AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮಾದಪ್ಪನ ಸನ್ನಿಧಾನಕ್ಕೆ ಹರಿದು ಬಂದ ಲಕ್ಷಾಂತರ ಭಕ್ತಗಣ!ಮಾಯ್ಕಾರನ ಬಳಿ ಇಷ್ಟಾರ್ಥ ಸಿದ್ದಿಗಾಗಿ ವಿಶೇಷ ಪ್ರಾರ್ಥನೆ

ಎಲ್ಲಿ ನೋಡಿದರಲ್ಲಿ ಜನಸಾಗರ, ಉಘೇ ಉಘೇ ಮಾದಪ್ಪ ಎನ್ನುವ ಝೇಂಕಾರದ ನಾದ, ಕುಣಿದು ಕುಪ್ಪಳಿಸಿ ಭಕ್ತಿಯ ಪರಾಕಾಷ್ಟೆ ಮೆರದ ಮಹಿಳೆಯರು, ಇದೆಲ್ಲ ಎಲ್ಲಿ ಅಂತೀರಾ? ಹೌದು, ಇದು ಕಂಡು ಬಂದಿದ್ದು ಮಲೆಮಹದೇಶ್ವರನ ದೀಪಾವಳಿ ರಥೋತ್ಸವದಲ್ಲಿ.

ಮಾದಪ್ಪನ ಸನ್ನಿಧಾನಕ್ಕೆ ಹರಿದು ಬಂದ ಲಕ್ಷಾಂತರ ಭಕ್ತಗಣ!ಮಾಯ್ಕಾರನ ಬಳಿ ಇಷ್ಟಾರ್ಥ ಸಿದ್ದಿಗಾಗಿ ವಿಶೇಷ ಪ್ರಾರ್ಥನೆ
ಮಲೆ ಮಹದೇಶ್ವರ ಬೆಟ್ಟ
ಸೂರಜ್ ಪ್ರಸಾದ್ ಎಸ್.ಎನ್
| Edited By: |

Updated on: Nov 14, 2023 | 5:42 PM

Share

ಚಾಮರಾಜನಗರ, ನ.14: ದಕ್ಷಿಣ ಭಾರತದ ಪ್ರಸಿದ್ದ ಯಾತ್ರಾ ಸ್ಥಳ ಚಾಮರಾಜನಗರ ಜಿಲ್ಲೆಯ ಹನೂರು ತಾಲೂಕಿನಲ್ಲಿರುವ ಮಲೆ ಮಹದೇಶ್ವರ ಬೆಟ್ಟ(Male Mahadeshwara Betta). ಈ ಬೆಟ್ಟದಲ್ಲಿ ನೆಲಸಿರುವ ಮಲೆ ಮಾದಪ್ಪ ಲಕ್ಷಾಂತರ ಭಕ್ತರ ಆರಾಧ್ಯ ದೈವ. ಇಲ್ಲಿ ವರ್ಷಕ್ಕೆ ಒಂದಲ್ಲ, ಎರಡಲ್ಲ ಮೂರು ಬಾರಿ ಅಂದರೆ, ಶಿವರಾತ್ರಿ , ಯುಗಾದಿ ಹಾಗೂ ದೀಪಾವಾಳಿಯಂದು ರಥೋತ್ಸವ ನಡೆಯುತ್ತದೆ. ಇದೇ ರೀತಿ ಇಂದು(ನ.14) ಬೆಟ್ಟದಲ್ಲಿ ಮಾದಪ್ಪನ ದೀಪಾವಳಿ ರಥೋತ್ಸವ, ಲಕ್ಷಾಂತರ ಭಕ್ತರ ಜಯಘೋಷಗಳ ನಡುವೆ ಸಂಭ್ರಮ ಸಡಗರಗಳೊಂದಿಗೆ ನಡೆಯಿತು. ಲಕ್ಷಾಂತರ ಮಂದಿ ಭಕ್ತರು ಮಾದಪ್ಪನ ರಥೋತ್ಸವವನ್ನು ಕಣ್ತುಂಬಿಕೊಂಡಿದ್ದಾರೆ.

ಇನ್ನು ಉಘೇ ಉಘೇ ಮಾದಪ್ಪ ಎನ್ನುತ್ತಾ ಅಸಂಖ್ಯಾತ ಮಂದಿ ಭಕ್ತರು ಮಾದಪ್ಪನ ತೇರು ಎಳೆದು, ತಮ್ಮ ಭಕ್ತಿ ಸಮರ್ಪಿಸಿದರು. ಮಹಿಳೆಯರಂತು ಕುಣಿದು ಕುಪ್ಪಳಿಸಿ ಭಕ್ತಿಯ ಪರಾಕಾಷ್ಠೆ ಮೆರೆದರು. ಹುಲಿವಾಹನ, ಬಸವವಾಹನ, ರುದ್ರಾಕ್ಷಿ ಮಂಟಪಗಳು, ಮಾದಪ್ಪನ ರಥದೊಂದಿಗೆ ಸಾಗಿ ರಥೋತ್ಸವಕ್ಕೆ ಮೆರಗು ತಂದವು. ಮಾದಪ್ಪನ ಭಕ್ತರು ಉರುಳುಸೇವೆ, ಪಂಜಿನ ಸೇವೆ, ಮುಡಿಸೇವೆ ಮೂಲಕ ಹರಕೆ ತೀರಿಸುತ್ತಿದ್ದರು.

ಇದನ್ನೂ ಓದಿ:ಮಲೆ ಮಹದೇಶ್ವರ ಬೆಟ್ಟದಲ್ಲಿ ಇಂದು ಹಾಲರವಿ ಸೇವೆ, ಸಾವಿರಾರು ಸಂಖ್ಯೆಯಲ್ಲಿ ನೆರೆದಿರುವ ಭಕ್ತ ಸಮೂಹ

ಲಕ್ಷಾಂತರ ಸಂಖ್ಯೆಯಲ್ಲಿ ಹರಿದು ಬಂದ ಭಕ್ತಗಣ

ರಾಜ್ಯದ ಮೂಲೆ ಮೂಲೆಗಳಿಂದ ಭಕ್ತ ಸಾಗರ ಹರಿದು ಬಂದಿತ್ತು. ಕಳೆದ ಮೂರು ದಿನಗಳಿಂದ ಸಾಗರೋಪಾದಿಯಲ್ಲಿ ಹರಿದು ಬಂದ ಭಕ್ತರಿಗೆ ವಿಶೇಷ ಅನ್ನದಾಸೋಹ ಕೂಡ ಮಾಡಲಾಗಿತ್ತು. ಮೂರು ದಿನಗಳಿಂದ ಮೂರು ಲಕ್ಷಕ್ಕೂ ಅಧಿಕ ಲಾಡು ಪ್ರಸಾದ ಮಾರಾಟವಾಗಿದೆ. ಮಾದಪ್ಪನ ಸನ್ನಿಧಿಯಲ್ಲಿ ದೀಪಾವಳಿಯ ಮೊದಲನೆ ದಿನ ಎಣ್ಣೆಮಜ್ಜನ ಸೇವೆ ನಡೆದರೆ, ಎರಡನೇ ದಿನ ಹಾಲರುವೆ ಉತ್ಸವ ನಡೆದಿತ್ತು. ಮೂರನೇ ದಿನವಾದ ಇಂದು ರಥೋತ್ಸವ ನಡೆಯುವುದರೊಂದಿಗೆ ಮೂರು ದಿನಗಳ ದೀಪಾವಳಿ ಜಾತ್ರಾ ಮಹೋತ್ಸವಕ್ಕೆ ತೆರೆಬಿದ್ದಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಯಶ್​ಗೆ ಗಜಕೇಸರಿ ಯೋಗ ಇದೆ: ‘ಟಾಕ್ಸಿಕ್’ ಯಶಸ್ಸಿನ ಬಗ್ಗೆ ಕೆ. ಮಂಜು ಭವಿಷ್ಯ
ಯಶ್​ಗೆ ಗಜಕೇಸರಿ ಯೋಗ ಇದೆ: ‘ಟಾಕ್ಸಿಕ್’ ಯಶಸ್ಸಿನ ಬಗ್ಗೆ ಕೆ. ಮಂಜು ಭವಿಷ್ಯ
ರಸ್ತೆಯಲ್ಲಿ ಹೋಗುತ್ತಿದ್ದ 3 ವರ್ಷದ ಬಾಲಕನ ಮೇಲೆ ಬೀದಿ ನಾಯಿಗಳ ದಾಳಿ
ರಸ್ತೆಯಲ್ಲಿ ಹೋಗುತ್ತಿದ್ದ 3 ವರ್ಷದ ಬಾಲಕನ ಮೇಲೆ ಬೀದಿ ನಾಯಿಗಳ ದಾಳಿ
ಧ್ರುವಂತ್ ಮೇಲೆ ರಕ್ಷಿತಾ ಶೆಟ್ಟಿಗೆ ಮೂಡಿದೆ ಕರುಣೆ: ಕರಗಿತು ಮನಸ್ಸು
ಧ್ರುವಂತ್ ಮೇಲೆ ರಕ್ಷಿತಾ ಶೆಟ್ಟಿಗೆ ಮೂಡಿದೆ ಕರುಣೆ: ಕರಗಿತು ಮನಸ್ಸು
ಹುಬ್ಬಳ್ಳಿ ಕೇಸ್​: ನಾಪತ್ತೆಯಾಗಿದ್ದ ಕೈ ಸದಸ್ಯೆ ಪೊಲೀಸ್​​ ವಶಕ್ಕೆ
ಹುಬ್ಬಳ್ಳಿ ಕೇಸ್​: ನಾಪತ್ತೆಯಾಗಿದ್ದ ಕೈ ಸದಸ್ಯೆ ಪೊಲೀಸ್​​ ವಶಕ್ಕೆ
ಯಶ್ ರೇಂಜ್ ಸಾಮಾನ್ಯದ್ದಲ್ಲ: ವಿವರಿಸಿದ ನಿರ್ಮಾಪಕ ಕೆ ಮಂಜು
ಯಶ್ ರೇಂಜ್ ಸಾಮಾನ್ಯದ್ದಲ್ಲ: ವಿವರಿಸಿದ ನಿರ್ಮಾಪಕ ಕೆ ಮಂಜು
ಕಠಿಣವಾಗುತ್ತಿವೆ ಟಾಸ್ಕ್​​ಗಳು, ಗೆಲ್ಲುವರು ಯಾರು? ಬೀಳುವರು ಯಾರು?
ಕಠಿಣವಾಗುತ್ತಿವೆ ಟಾಸ್ಕ್​​ಗಳು, ಗೆಲ್ಲುವರು ಯಾರು? ಬೀಳುವರು ಯಾರು?
ಗೃಹಲಕ್ಷ್ಮಿ ಹಣದ ಬಗ್ಗೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಶಾಕಿಂಗ್ ಹೇಳಿಕೆ
ಗೃಹಲಕ್ಷ್ಮಿ ಹಣದ ಬಗ್ಗೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಶಾಕಿಂಗ್ ಹೇಳಿಕೆ
ಕರ್ನಾಟಕದ ಆಸ್ತಿ ಮಾಲೀಕರಿಗೆ ಗುಡ್​​ ನ್ಯೂಸ್: ಸಂಪುಟದಲ್ಲಿ ಮಹತ್ವದ ತೀರ್ಮಾನ
ಕರ್ನಾಟಕದ ಆಸ್ತಿ ಮಾಲೀಕರಿಗೆ ಗುಡ್​​ ನ್ಯೂಸ್: ಸಂಪುಟದಲ್ಲಿ ಮಹತ್ವದ ತೀರ್ಮಾನ
ಧುರಂಧರ್ 2 Vs ಟಾಕ್ಸಿಕ್: ಟೀಕೆ ಮಾಡಿದವರಿಗೆ ತಿರುಗೇಟು ಕೊಟ್ಟ ಕೆ. ಮಂಜು
ಧುರಂಧರ್ 2 Vs ಟಾಕ್ಸಿಕ್: ಟೀಕೆ ಮಾಡಿದವರಿಗೆ ತಿರುಗೇಟು ಕೊಟ್ಟ ಕೆ. ಮಂಜು
ಕೋಗಿಲು ಆಯ್ತು ಈಗ ಥಣಿಸಂದ್ರದಲ್ಲಿ ಆಪರೇಷನ್ ಒತ್ತುವರಿ
ಕೋಗಿಲು ಆಯ್ತು ಈಗ ಥಣಿಸಂದ್ರದಲ್ಲಿ ಆಪರೇಷನ್ ಒತ್ತುವರಿ