AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮದ್ವೆ ಆರತಕ್ಷತೆಗೆ ತೆರಳುತ್ತಿದ್ದ ವರನಿಗೆ ಚೂರಿ ಇರಿತ: ಯುವತಿಯ ಮಾಜಿ ಲವರ್​​ ಕೃತ್ಯ ಶಂಕೆ

ಚಾಮರಾಜನಗರ ಜಿಲ್ಲೆಯಲ್ಲೊಂದು ಆಘಾತಕಾರಿ ಘಟನೆಯೊಂದು ನಡೆದಿದೆ. ಮದುವೆ ಆರತಕ್ಷತೆಗೆಂದು ತೆರಳುತ್ತಿದ್ದ ವರನ ಕಾರನ್ನು ಗ್ಯಾಂಗ್​​ವೊಂದು ಸಿನಿಮೀಯ ರೀತಿಯಲ್ಲಿ ಅಡ್ಡಿಗಟ್ಟಿ ಮನಸೋ ಇಚ್ಛೆ ಹಲ್ಲೆ ನಡೆಸಿದೆ. ಚಾಮರಾಜನಗರ ಜಿಲ್ಲೆ ಕೊಳ್ಳೇಗಾಲ ಪಟ್ಟದಲ್ಲಿ ಆಯೋಜಿಸಲಾಗಿದ್ದ ಮದುವೆ ಆರತಕ್ಷತೆ ಕಾರ್ಯಕ್ಕೆ ಹೋಗುತ್ತಿದ್ದ ವೇಳೆ ವರನ ಮೇಲೆ ದುಷ್ಕರ್ಮಿಗಳು ದಾಳಿ ಮಾಡಿದ್ದಾರೆ.

ಮದ್ವೆ ಆರತಕ್ಷತೆಗೆ ತೆರಳುತ್ತಿದ್ದ ವರನಿಗೆ ಚೂರಿ ಇರಿತ: ಯುವತಿಯ ಮಾಜಿ ಲವರ್​​ ಕೃತ್ಯ ಶಂಕೆ
Groom Raveesh
ಶಿವಪ್ರಸಾದ್​ ಬಿ.
| Edited By: |

Updated on:Jan 29, 2026 | 10:27 PM

Share

ಚಾಮರಾಜನಗರ, (ಜನವರಿ 29): ಮದುವೆಯ ಆರತಕ್ಷತೆಗೆ (marriage reception) ತೆರಳುತ್ತಿದ್ದ ವರನ (groom) ಕಾರು ಅಡ್ಡಿಗಟ್ಟಿ ಮನಸ್ಸೋ ಇಚ್ಛೆ ಹಲ್ಲೆ ನಡೆಸಿರುವ ಘಟನೆ ಚಾಮರಾಜನಗರ (Chamarajnagar) ಜಿಲ್ಲೆ ಕೊಳ್ಳೇಗಾಲದಲ್ಲಿ ನಡೆದಿದೆ. ಕೊಳ್ಳೇಗಾಲದ ವೆಂಕಟೇಶ್ವರ್ ಮಹಲ್ ನಲ್ಲಿ ಆಯೋಜಿಸಿದ್ದ ಆರತಕ್ಷತೆ  ಕಾರ್ಯಕ್ಕೆ ವರ ರವೀಶ್ ತೆರಳುತ್ತಿದ್ದ ವೇಳೆ ಅಪರಿಚಿತರು ಏಕಾಏಕಿ ದಾಳಿ ಮಾಡಿದ್ದಾರೆ. ಕುಣಗಳ್ಳಿ ಗ್ರಾಮದಿಂದ ಹೋಗುತ್ತಿದ್ದ ವೇಳೆ ವರ ರವೀಶ್ ಕಾರನ್ನು ಅಡ್ಡಗಟ್ಟಿದ್ದ ದುಷ್ಕರ್ಮಿಗಳು, ನೀನು ಮದ್ವೆ ಮನೆಗಲ್ಲ ಸ್ಮಶಾನಕ್ಕೆ ತೆರಳಬೇಕೆಂದು ಚಾಕು, ಡ್ರ್ಯಾಗರ್​​ನಿಂದ ಹಲ್ಲೆ ಮಾಡಿದ್ದಾರೆ. ಅಲ್ಲದೇ ರವೀಶ್ ಅಟ್ಟಾಡಿಸಿ ಬೆನ್ನಿಗೆ ಚೂರಿಯಿಂದ ಇರಿದು ಎಸ್ಕೇಪ್ ಆಗಿದ್ದಾರೆ.

ಕಲ್ಯಾಣ ಮಂಟಪ್ಪಕ್ಕೆ ಹೋಗುತ್ತಿದ್ದಾಗ ದಾಳಿ

6 ತಿಂಗಳ ಹಿಂದೆ ನಯನ ಎನ್ನುವ ಯುವತಿಯೊಂದಿಗೆ ರವೀಶನ ಮದುವೆ ನಿಶ್ಚಯವಾಗಿತ್ತು. ಅದರಂತೆ ಇಂದು (ಜನವರಿ 29) ಚಾಮರಾಜನಗರ ಜಿಲ್ಲೆ ಕೊಳ್ಳೇಗಾಲದ ವೆಂಕಟೇಶ್ವರ್ ಮಹಲ್ ನಲ್ಲಿ ಆಯೋಜಿಸಿದ್ದ ಆರತಕ್ಷತೆ ಆಯೋಜಿಸಲಾಗಿತ್ತು. ಹೀಗಾಗಿ ವರದ ರವೀಶ್,ಕುಣಗಳ್ಳಿ ಗ್ರಾಮದಿಂದಕಾರಿನಲ್ಲಿ ಹೋಗುವ ವೇಳೆ  ಸಿನೀಮಿಯಾ ರೀತಿಯಲ್ಲಿ ದುಷ್ಕರ್ಮಿಗಳು ಅಡ್ಡಹಾಕಿದ್ದಾರೆ. ಬಳಿಕ ನೀನು ಮದ್ವೆ ಮನೆಗಲ್ಲ ಸ್ಮಶಾನಕ್ಕೆ ತೆರಳಬೇಕೆಂದು ಚಾಕು, ಚೂರಿಯಿಂದ ಮನಸೋ ಇಚ್ಛೆ ಹಲ್ಲೆ ನಡೆಸಿ ಪರಾರಿಯಾಗಿದ್ದಾರೆ.

ಇದನ್ನೂ ಓದಿ: ರಿಶೇಲ್ ಡಿಸೋಜಾ ಆತ್ಮಹತ್ಯೆ ಕೇಸ್​: ಕೊನೆಗೂ JDS ನಾಯಕಿಯ ಪುತ್ರ ಅರೆಸ್ಟ್​​

ಘಟನೆಯಲ್ಲಿ ಎಡಗೈಗೆ ಚಾಕು ತಾಕಿದ್ದರಿಂದ ಸದ್ಯ ರವೀಶ್ ಕೊಳ್ಳೇಗಾಲ ಸರ್ಕಾರಿ ಆಸ್ಪತ್ರೆಯಲ್ಲಿ ಪಡೆದುತ್ತಿದ್ದು, ಅದೃಷ್ಟವಶಾತ್ ಪ್ರಾಣಪಾಯದಿಂದ ಪಾರಾಗಿದ್ದಾರೆ. ಇನ್ನು ವಧುವಿನ ಮಾಜಿ ಬಾಯ್ ಫ್ರೆಂಡ್ ಈ ಕೃತ್ಯ ಎಸಗಿರಬಹುದು ಎಂದು ಶಂಕಿಸಲಾಗಿದ್ದು, ಕೊಳ್ಳೇಗಾಲ ಪಟ್ಟಣ ಠಾಣಾ ಪೊಲೀಸರು, ದುಷ್ಕರ್ಮಿಗಳ ಬಂಧನಕ್ಕೆ ಶೋಧಕಾರ್ಯ ನಡೆಸಿದ್ದಾರೆ.

ಹಲ್ಲೆಗೊಳಗಾದ ಮಧುಮಗ ಹೇಳಿದ್ದೇನು?

ಈ ಬಗ್ಗೆ ರವೀಶ್ ಮಾಧ್ಯಮದವರ ಜತೆ ಮಾತನಾಡಿ, 6 ತಿಂಗಳ ಹಿಂದೆಯಷ್ಟೇ ನನಗೆ ಹೊಸಅಣಗಳ್ಳಿ ಗ್ರಾಮದ ಯುವತಿಯ ಜತೆ ಎಂಗೇಜ್ಮೇಟ್ ಆಗಿತ್ತು. ಜನವರಿ 30 ರಂದು ಮದುವೆ ನಿಶ್ಚಯವಾಗಿದ್ದರಿಂದ ಕಾರಿನಲ್ಲಿ ಕಲ್ಯಾಣ ಮಂಟಪಕ್ಕೆ ತೆರಳುವಾಗ ಹಿಂಬದಿಯಿಂದ ಮತ್ತೊಂದು ಕಾರಿನಲ್ಲಿ ಬಂದವರು ನನಗೆ ಏಕಾಏಕಿ ಚಾಕುವಿನಿಂದ ಹಲ್ಲೆ ಮಾಡಿದ್ದಾರೆ. ಹಲ್ಲೆ ನಡೆಸಿದವು ಯಾರು ಎನ್ನುವುದು ಗೊತ್ತಿಲ್ಲ ಎಂದು ಹೇಳಿದ್ದಾರೆ.

ಸದ್ಯ ಮದ್ವೆಯಾಗಬೇಕಿದ್ದ ಯುವತಿಯ ಲವರ್​​​​ ಈ ಕೃತ್ಯ ಎಸಗಿರುವ ಅನುಮಾನ ವ್ಯಕ್ತವಾಗಿದ್ದು, ಆರೋಪಿಗಳನ್ನು ಬಂಧಿಸಿ ವಿಚಾರಣೆ ನಡೆಸಿದಾಗ ಕೃತ್ಯದ ಅಸಲಿಯತ್ತು ಬಯಲಿಗೆ ಬರಲಿದೆ.

ಕರ್ನಾಟಕದ ಮತ್ತಷ್ಟು ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 10:16 pm, Thu, 29 January 26

Follow Us
TV9 ರಿಯಲ್ ಎಸ್ಟೇಟ್ ಎಕ್ಸ್​ಪೋ ಬಗ್ಗೆ ಅರುಣ್ ಯೋಗಿರಾಜ್ ಹೇಳಿದ್ದಿಷ್ಟು!
TV9 ರಿಯಲ್ ಎಸ್ಟೇಟ್ ಎಕ್ಸ್​ಪೋ ಬಗ್ಗೆ ಅರುಣ್ ಯೋಗಿರಾಜ್ ಹೇಳಿದ್ದಿಷ್ಟು!
ಕಲಬೆರಕೆ ತುಪ್ಪದ ದಂಧೆ: ಬಳ್ಳಾರಿಯಿಂದ ಚಿಕ್ಕಮಗಳೂರುವರೆಗೆ ಮಾರಾಟ ಜಾಲ ಪತ್ತೆ
ಕಲಬೆರಕೆ ತುಪ್ಪದ ದಂಧೆ: ಬಳ್ಳಾರಿಯಿಂದ ಚಿಕ್ಕಮಗಳೂರುವರೆಗೆ ಮಾರಾಟ ಜಾಲ ಪತ್ತೆ
TV9 ರಿಯಲ್ ಎಸ್ಟೇಟ್ ಎಕ್ಸ್​ಪೋಗೆ DIG ಬೋರಲಿಂಗಯ್ಯ, ಅರುಣ್ ಯೋಗಿರಾಜ್
TV9 ರಿಯಲ್ ಎಸ್ಟೇಟ್ ಎಕ್ಸ್​ಪೋಗೆ DIG ಬೋರಲಿಂಗಯ್ಯ, ಅರುಣ್ ಯೋಗಿರಾಜ್
ಹುಬ್ಬಳ್ಳಿ ಪುಷ್ಕರಣಿ ವಿವಾದ: ಪ್ರದೀಪ್ ಶೆಟ್ಟರ್ ಅನೇಕ ನಾಯಕರಿಂದ ಪ್ರತಿಭಟನೆ
ಹುಬ್ಬಳ್ಳಿ ಪುಷ್ಕರಣಿ ವಿವಾದ: ಪ್ರದೀಪ್ ಶೆಟ್ಟರ್ ಅನೇಕ ನಾಯಕರಿಂದ ಪ್ರತಿಭಟನೆ
ಬಾಂಗ್ಲಾ ಅಕ್ರಮ ವಲಸಿಗರ ಕಾಟ; ಅರೆಸ್ಟ್ ಆದವ್ರ ಹಿನ್ನೆಲೆ ಏನು?
ಬಾಂಗ್ಲಾ ಅಕ್ರಮ ವಲಸಿಗರ ಕಾಟ; ಅರೆಸ್ಟ್ ಆದವ್ರ ಹಿನ್ನೆಲೆ ಏನು?
ಪೋಷಕರು ಸೇರಿ ಹಲವರೊಂದಿಗೆ ಜೈಲಿನಿಂದಲೇ ಸಂಪರ್ಕ ಹೊಂದಿದ್ದ ಪ್ರಜ್ವಲ್ ರೇವಣ್ಣ
ಪೋಷಕರು ಸೇರಿ ಹಲವರೊಂದಿಗೆ ಜೈಲಿನಿಂದಲೇ ಸಂಪರ್ಕ ಹೊಂದಿದ್ದ ಪ್ರಜ್ವಲ್ ರೇವಣ್ಣ
ಅಂಗಾಂಗ ದಾನ ನೋಂದಣಿಯಲ್ಲಿ ಧಾರವಾಡ ಫಸ್ಟ್!
ಅಂಗಾಂಗ ದಾನ ನೋಂದಣಿಯಲ್ಲಿ ಧಾರವಾಡ ಫಸ್ಟ್!
ಹಬ್ಬದ ಸೀಸನಲ್ಲಿ ಸಕ್ಕರೆ ಮತ್ತು ಬೆಲ್ಲದ ಬೆಲೆ ಗಗನಕ್ಕೆ: ಗ್ರಾಹಕರಿಗೆ ಆಘಾತ
ಹಬ್ಬದ ಸೀಸನಲ್ಲಿ ಸಕ್ಕರೆ ಮತ್ತು ಬೆಲ್ಲದ ಬೆಲೆ ಗಗನಕ್ಕೆ: ಗ್ರಾಹಕರಿಗೆ ಆಘಾತ
ಮೈಸೂರಿನಲ್ಲಿ ರಾಜೇಂದ್ರ ಕಲಾ ಮಂದಿರದಲ್ಲಿ TV9 ಎಕ್ಸ್ ಪೋ
ಮೈಸೂರಿನಲ್ಲಿ ರಾಜೇಂದ್ರ ಕಲಾ ಮಂದಿರದಲ್ಲಿ TV9 ಎಕ್ಸ್ ಪೋ
ಮಹಿಳಾ PSI ವರ್ಗಾವಣೆ ಆಗಿದ್ದಕ್ಕೆ ಪಟಾಕಿ ಸಿಡಿಸಿ ಸಂಭ್ರಮಿಸಿದ ಯುವಕರು!
ಮಹಿಳಾ PSI ವರ್ಗಾವಣೆ ಆಗಿದ್ದಕ್ಕೆ ಪಟಾಕಿ ಸಿಡಿಸಿ ಸಂಭ್ರಮಿಸಿದ ಯುವಕರು!